ಮದ್ಯ ಮಾರಾಟ ನಿಲ್ಲಿಸಿ: ಮಾತೆ ಗಂಗಾದೇವಿ ಆಗ್ರಹ
Team Udayavani, May 5, 2020, 1:43 PM IST
ಕೂಡಲಸಂಗಮ: ರಾಜ್ಯ ಸರ್ಕಾರ ಮದ್ಯ ಮಾರಾಟ ಕೂಡಲೇ ನಿಲ್ಲಿಸಬೇಕು ಎಂದು ಕೂಡಲಸಂಗಮ ಬಸವ ಧರ್ಮ ಪೀಠದ ಪೀಠಾಧ್ಯಕ್ಷೆ ಜಗದ್ಗುರು ಮಾತೆ ಗಂಗಾದೇವಿ ಆಗ್ರಹಿಸಿದ್ದಾರೆ.
ಅನೇಕ ಕುಟುಂಬಗಳ ನೆಮ್ಮದಿ ಹಾಳು ಮಾಡಿರುವ ಮದ್ಯಪಾನವನ್ನು ಸರ್ಕಾರ ಸಂಪೂರ್ಣ ನಿಷೇಧ ಮಾಡುವ ಮೂಲಕ ನೆಮ್ಮದಿಯಿಂದ ಬದುಕಲು ಅವಕಾಶ ಮಾಡಿಕೊಡಬೇಕು. ಆದಾಯ ದೊರೆಯುತ್ತದೆ ಎಂದು ಜನರ ಆರೋಗ್ಯ ಕೆಡಿಸುವುದು ಸರಿಯಲ್ಲ. ಸರ್ಕಾರ ಪ್ರಜೆಗಳ ಆರೋಗ್ಯ, ಸಂತೋಷ ಬಯಸಬೇಕು ಹೊರತು ಹಣವನ್ನಲ್ಲ. ಲಾಕ್ಡೌನ್ ಅವಧಿಯಲ್ಲಿ ಮದ್ಯಪಾನ ನಿಷೇಧ ಮಾಡಿದ್ದರಿಂದ ಅನೇಕ ಕುಟುಂಬಗಳು ನೆಮ್ಮದಿಯಿಂದ ಇದ್ದವು. ಮತ್ತೆ ಮದ್ಯ ಮಾರಾಟಕ್ಕೆ ಅವಕಾಶ ಕೊಟ್ಟ ಪರಿಣಾಮ ಕುಡಿತ ಬಿಟ್ಟ ಜನರು ಇಂದು ಮತ್ತೆ ಕುಡಿಯಲು ಆರಂಭಿಸಿದ್ದಾರೆ. ಮದ್ಯಪಾನ ನಿಷೇಧಕ್ಕೆ ಸೂಕ್ತ ಕಾಲ ಇದಾಗಿದೆ. ಮದ್ಯ ನಿಷೇಧ ಮಾಡುವ ಮೂಲಕ ಜನರು ನೆಮ್ಮದಿಯಿಂದ ಬದುಕಲು ಅವಕಾಶ ಮಾಡಿಕೊಡಬೇಕು ಎಂದು ಆಗ್ರಹಿಸಿದ್ದಾರೆ.
ಆದಾಯ ಗಳಿಕೆಯ ದೃಷ್ಟಿಯಿಂದ ಮದ್ಯ ಮಾರಾಟಕ್ಕೆ ಅವಕಾಶ ಕೊಡುವುದು ಸರಿಯಲ್ಲ. ಆದಾಯಕ್ಕಿಂತ ಮದ್ಯವ್ಯಸನಿಗಳ ಆರೋಗ್ಯಕ್ಕಾಗಿ ಸರಕಾರ ಅಧಿಕ ವೆಚ್ಚ ಮಾಡುತ್ತಿದೆ ಎಂದು ಹಲವು ಸಮೀಕ್ಷಾ ವರದಿಗಳು ತಿಳಿಸಿವೆ. ಮುಖ್ಯಮಂತ್ರಿಗಳು ವರದಿಗಳ ಪರಿಶೀಲನೆ ಮಾಡಿ ಸಮಾಜದಲ್ಲಿ ನಿತ್ಯ ನಡೆಯುವ ಅಪರಾಧ, ಅಪಘಾತ ಕಡಿಮೆ ಮಾಡಿ ಸಾಮಾನ್ಯ ಜನರ ಆರೋಗ್ಯ ಕಾಪಾಡುವ ಕೆಲಸ ಮಾಡಬೇಕು ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ
Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್ ಈಗ “ಸಂಯುಕ್ತ’
Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್
Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ
Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು
MUST WATCH
ಹೊಸ ಸೇರ್ಪಡೆ
Editorial: ಗುಕೇಶ್ ಗೆಲುವು- ಭಾರತದ ಯುವಶಕ್ತಿಯ ಸಂಕೇತ
AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ
Bengaluru: ಕದಂಬ ಹೋಟೆಲ್ ಸ್ಫೋಟ ಮಾಡುವುದಾಗಿ ಬೆದರಿಕೆ
Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ
Rameshwaram Cafe Case: ರಾಮೇಶ್ವರಂ ಕೆಫೆ ಸ್ಫೋಟ ಶಂಕಿತರು ಮತ್ತೆ 7 ದಿನ ಎನ್ಐಎ ವಶಕ್ಕೆ