ವಿದ್ಯುತ್‌ ತೊಂದರೆಯಾದರೆ ಗಮನಕ್ಕೆ ತನ್ನಿ : ಕಾಶಿನಾಥ


Team Udayavani, Dec 14, 2020, 6:19 PM IST

ವಿದ್ಯುತ್‌ ತೊಂದರೆಯಾದರೆ ಗಮನಕ್ಕೆ ತನ್ನಿ : ಕಾಶಿನಾಥ

ಬೀಳಗಿ: ವಿದ್ಯುತ್‌ ಗ್ರಾಹಕರಿಗೆ ತೊಂದರೆ ಆಗದಂತೆ ಹೆಸ್ಕಾಂ ಇಲಾಖೆ ಅಧಿಕಾರಿಗಳುಕಾರ್ಯನಿರ್ವಹಿಸಬೇಕು. ವಿದ್ಯುತ್‌ ಸಮಸ್ಯೆ ಬಂದಲ್ಲಿ ತ್ವರಿತವಾಗಿ ಕಾರ್ಯಪ್ರವೃತ್ತರಾಗಬೇಕು ಎಂದು ವಿದ್ಯುತ್ಛಕ್ತಿ ಜಿಲ್ಲಾ ಅಧೀಕ್ಷಕ ಅಭಿಯಂತರ ಕಾಶಿನಾಥ ಹಿರೇಮಠ ಸ್ಥಳೀಯ ಹೆಸ್ಕಾಂ ಅಧಿಕಾರಿಗಳಿಗೆ ಸೂಚಿಸಿದರು.

ನಗರದ ಜಿಎಲ್‌ಬಿಸಿ ಪ್ರವಾಸಿ ಮಂದಿರದಸಭಾ ಭವನದಲ್ಲಿ ಹುಬ್ಬಳ್ಳಿ ವಿದ್ಯುತ್‌ ಸರಬರಾಜು ಕಂಪನಿ ನಿಯಮಿತ, ಕಾರ್ಯ ಮತ್ತು ಪಾಲನೆಉಪವಿಭಾಗ ಬೀಳಗಿ ಇವರ ಆಶ್ರಯದಲ್ಲಿ ನಡೆದಗ್ರಾಹಕರ ಕುಂದು-ಕೊರತೆ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಪಟ್ಟಣದಲ್ಲಿನ ಉದ್ಯಮಿಗಳಿಗೆ ತೊಂದರೆ ಆಗದಂತೆ 24×7 ವಿದ್ಯುತ್‌ ಸಂಪರ್ಕ ಒದಗಿಸಲಾಗುವುದು. ಗ್ರಾಮೀಣ ಭಾಗದಲ್ಲಿರೈತರಿಗೆ 7 ತಾಸು ತ್ರೀ ಫೇಸ್‌ ವಿದ್ಯುತ್‌ಒದಗಿಸಲಾಗುವುದು. ರೈತರು ಸಹಕಾರನೀಡಬೇಕು. ಗ್ರಾಹಕರು ವಿದ್ಯುತ್‌ ಬಳಕೆಯಬಿಲ್ಲನ್ನು ಸಕಾಲದಲ್ಲಿ ಮರುಪಾವತಿಸಬೇಕು. ನಿಮ್ಮ ಯಾವುದೇ ಕೆಲಸಗಳು ವಿಳಂಬವಾದಲ್ಲಿ ಗಮನಕ್ಕೆ ತರಬೇಕೆಂದು ಮನವಿ ಮಾಡಿದರು.

ಉದ್ಯಮಿ ಪ್ರಕಾಶ ಅಂತರಗೊಂಡ ಮಾತನಾಡಿ, ಬೀಳಗಿ ಪಟ್ಟಣದಿಂದ ಬೀಳಗಿ ಕ್ರಾಸ್‌ವರೆಗೆ ಸಣ್ಣ-ಪುಟ್ಟ ಉದ್ಯೋಗಿಗಳು ಇದ್ದಾರೆ. ಅವರಿಗೆವಿದ್ಯುತ್‌ ಅವಶ್ಯವಿದ್ದು ಪದೆಪದೇ ವಿದ್ಯುತ್‌ವ್ಯತ್ಯಯದಿಂದಾಗಿ ತೊಂದರೆಯಾಗುತ್ತಿದೆ.ವಿದ್ಯುತ್‌ ಸರಬರಾಜಿನಲ್ಲಿ ತೊಂದರೆಯಾಗದಂತೆಪರ್ಯಾಯ ವ್ಯವಸ್ಥೆ ಕಲ್ಪಿಸಬೇಕು. ಸಮರ್ಪಕವಿದ್ಯುತ್‌ ಸರಬರಾಜಿನಿಂದ ಇಲಾಖೆಗೂಉತ್ತಮ ಆದಾಯ ಬರಲಿದೆ. ಕಾರಣ, ಕೂಡಲೆ ಅಧಿಕಾರಿಗಳು ಸಮರ್ಪಕ ವಿದ್ಯುತ್‌ ಒದಗಿಸುವ ನಿಟ್ಟಿನಲ್ಲಿ ವಿಶೇಷ ಮುತುವರ್ಜಿ ವಹಿಸಬೇಕೆಂದು ಸಭೆಗೆ ಸಲಹೆ ನೀಡಿದರು.

ಯತ್ನಟ್ಟಿ ಗ್ರಾಮದ ರಾಜೇಂದ್ರ ಬಾರಕೇರ ಮಾತನಾಡಿ, ಯತ್ನಟ್ಟಿ ಪುನರ್ವಸತಿ ಕೇಂದ್ರದಲ್ಲಿ ವಿದ್ಯುತ್‌ ಕಂಬಗಳಲ್ಲಿನ ವೈರ್‌ಗಳು ಜೋತು ಬಿದ್ದಿವೆ. ಈವರೆಗೆ ಕಾಮಗಾರಿ ಪ್ರಾರಂಭವಾಗಿಲ್ಲ. ಕೂಡಲೆ ಕಾಮಗಾರಿ ಮಾಡಿ ಅಪಾಯ ತಪ್ಪಿಸಿಎಂದರು. ಈಗಾಗಲೆ ದುರಸ್ತಿ ಕಾಮಗಾರಿಗಳಿಗೆಟೆಂಡರ್‌ ಆಗಿದೆ ಎಂದು ಹೇಳಿದ ಜಿಲ್ಲಾ ಅಧೀಕಕ್ಷಕ ಅಭಿಯಂತರರು, ಶೀಘ್ರ ಕಾಮಗಾರಿ ಕೈಗೊಳ್ಳಲು ಸ್ಥಳದಲ್ಲಿದ್ದ ಸಂಬಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರಲ್ಲದೆ, ಗ್ರಾಹಕರಿಂದ ಅಹವಾಲು ಸ್ವೀಕರಿಸಿದರು.

ಗ್ರಾಹಕರಾದ ವಿ.ಜಿ.ರೇವಡಿಗಾರ, ಬಸವರಾಜಉಮಚಗಿಮಠ, ವಿರೂಪಾಕ್ಷಯ್ಯ ಹಿರೇಮಠಹಲವು ವಿಷಯಗಳ ಕುರಿತು ಸಭೆಯಗಮನಕ್ಕೆ ತಂದರು. ಮುಧೋಳ ಹೆಸ್ಕಾಂ ಇಇಗಂಗಾಧರ ಲೋಣಿ, ಬೀಳಗಿ ಹೆಸ್ಕಾಂ ಎಇಇ ವಿಜಯಕುಮಾರ ಚೌಹಾಣ್‌, ಬೀಳಗಿ ಶಾಖೆಯ ಎಸ್‌ಒ ಮಹಾಂತೇಶ ಹೊನ್ನಿಹಾಳ, ಅನಗವಾಡಿಎಸ್‌ಒ ವಿ.ಎಸ್‌.ಅಗಸಿಮುಂದಿನ, ಕಾತರಕಿಎಸ್‌ಒ ಕೃಷ್ಣಾ ನಾಯಕ, ಗಲಗಲಿ ಶಾಖೆಯ ಎಸ್‌ಒ ಡಿ.ಎ.ಕಿಲ್ಲೇದಾರ, ಎಎಒ ಬಿ.ಎನ್‌. ಮಠಪತಿ ಇದ್ದರು.

ಟಾಪ್ ನ್ಯೂಸ್

Scrutiny of complaint against Modi: Election Commission

Loksabha Election; ಮೋದಿ ವಿರುದ್ಧದ ದೂರು ಪರಿಶೀಲನೆ: ಚುನಾವಣ ಆಯೋಗ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

IPL 2024; ಫಿಟ್‌ ಆಗಿದ್ದೇ ನಿನ್ನೆ: ಸಂದೀಪ್‌ ಶರ್ಮ

Pakistan cricket team military training wasted

PCB; ಪಾಕ್‌ ಕ್ರಿಕೆಟ್‌ ತಂಡದ ಸೇನಾ ತರಬೇತಿ ವ್ಯರ್ಥ: ಹಾಸ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Scrutiny of complaint against Modi: Election Commission

Loksabha Election; ಮೋದಿ ವಿರುದ್ಧದ ದೂರು ಪರಿಶೀಲನೆ: ಚುನಾವಣ ಆಯೋಗ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.