ಆಡಳಿತಾಧಿಕಾರಿ ‘ಬಯಲಾಟ’ಕ್ಕೆ ಬೇಸತ್ತ ಸದಸ್ಯರು!

ಸರ್ವಾಧಿಕಾರಿ ಧೋರಣೆಗೆ ನಾಮನಿರ್ದೇಶಿತ ಸದಸ್ಯರ ಅಸಮಾಧಾನ

Team Udayavani, Apr 20, 2022, 1:14 PM IST

11

ಬಾಗಲಕೋಟೆ: ಉತ್ತರ ಕರ್ನಾಟಕದಲ್ಲಿ ಕೇಂದ್ರ ಕಚೇರಿ ಹೊಂದಿರುವ ಸರ್ಕಾರದ ಏಕೈಕ ಅಕಾಡೆಮಿ ಎಂಬ ಖ್ಯಾತಿ ಪಡೆದ ಕರ್ನಾಟಕ ಬಯಲಾಟ ಅಕಾಡೆಮಿ ಆಡಳಿತಾಧಿಕಾರಿ ಸರ್ವಾಧಿಕಾರಿ ಧೋರಣೆಗೆ ಅಕಾಡೆಮಿಯ ನಾಮನಿರ್ದೇಶಿತ ಸದಸ್ಯರು ಬೇಸರಗೊಂಡಿದ್ದು, ರಾಜ್ಯಮಟ್ಟದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ವೇದಿಕೆ ಅಲಂಕರಿಸದೆ ಮೌನ ಪ್ರತಿಭಟನೆ ನಡೆಸಿದ್ದಾರೆ.

ನವನಗರದ ಡಾ|ಅಂಬೇಡ್ಕರ್‌ ಭವನದಲ್ಲಿ ಸೋಮವಾರ ಇಡೀ ದಿನ ಬಯಲಾಟ ಅಕಾಡೆಮಿಯಿಂದ ವಿವಿಧ ಕಾರ್ಯಕ್ರಮ ನಡೆಸಲಾಯಿತು. ಸಂಜೆ 2020ನೇ ಸಾಲಿನ ಗೌರವ ಹಾಗೂ ವಾರ್ಷಿಕ ಪ್ರಶಸ್ತಿ ಸಮಾರಂಭ ನಡೆದಿದ್ದು, ಇದಕ್ಕೆ ರಾಜ್ಯದ ವಿವಿಧ ಭಾಗಗಳಿಂದ ಕಲಾವಿದರು ಕೂಡ ಆಗಮಿಸಿದ್ದರು.

ಈ ಅಕಾಡೆಮಿಗೆ ಸರ್ಕಾರ ನೇಮಕ ಮಾಡಿದ ಸುಮಾರು 9 ಜನ ನಾಮ ನಿರ್ದೇಶಿತ ಸದಸ್ಯರಿದ್ದು, ಅವರೆಲ್ಲ ಕಾರ್ಯಕ್ರಮದ ವೇದಿಕೆ ಹಂಚಿಕೊಳ್ಳದೆ ಆಡಳಿತಾಧಿಕಾರಿ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ.

ಮಂಗಳವಾರ ನಗರಕ್ಕೆ ಆಗಮಿಸಿದ್ದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವ ವಿ. ಸುನೀಲಕುಮಾರ ಅವರು ನಗರಕ್ಕೆ ಆಗಮಿಸಿದ್ದ ವೇಳೆ ಅಕಾಡೆಮಿಯ 9 ಜನ ಸದಸ್ಯರೂ ಆಡಳಿತಾಧಿಕಾರಿ ಹಾಗೂ ಅಕಾಡೆಮಿ ಕಚೇರಿಯ ಅಧಿಕಾರಿ-ಸಿಬ್ಬಂದಿ ವಿರುದ್ಧ ತೀವ್ರ ಅಸಮಾಧಾನ ಹೊರ ಹಾಕಿ ಲಿಖೀತ ದೂರು ಕೂಡ ಸಲ್ಲಿಸಿದರು.

ಅಕಾಡೆಮಿ ಸದಸ್ಯರು ಒಟ್ಟು ಆರು ಪ್ರಮುಖ ಅಂಶಗಳ ದೂರು ಸಲ್ಲಿಸಿದ್ದು, ಸೋಮವಾರ ನಡೆದ ಅಕಾಡೆಮಿಯ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ನಾಮ ನಿರ್ದೇಶಿತ ಸರ್ವ ಸದಸ್ಯರನ್ನು ನಿರ್ಲಕ್ಷ್ಯ ಮಾಡಲಾಗಿದೆ. ಅತಿಥಿಗಳು, ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಸದಸ್ಯರ ಗಮನಕ್ಕೆ ತರದೆ ಸಿದ್ಧತೆ ಮಾಡಿಕೊಂಡಿದ್ದಾರೆ. ವಾರ್ಷಿಕ ಪ್ರಶಸ್ತಿಗೆ ಸರ್ವ ಸದಸ್ಯರ ಸಭೆಯಲ್ಲಿ ಆಯ್ಕೆಯಾದ ಡಾ|ಗೋವಿಂದರಾಜು ಅವರನ್ನು ಸದಸ್ಯರ ಗಮನಕ್ಕೆ ತರದೆ, ಸಮಾರಂಭಕ್ಕೆ ಆಹ್ವಾನಿಸದೆ ಏಕಪಕ್ಷೀಯ ನಿರ್ಣಯ ಕೈಗೊಳ್ಳಲಾಗಿದೆ. ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ಸ್ಥಳೀಯ ಸದಸ್ಯರನ್ನು ಸದಸ್ಯ ಸಂಚಾಲಕರನ್ನಾಗಿ ಮಾಡದೆ ನಿರ್ಲಕ್ಷ್ಯ ಮಾಡಲಾಗಿದೆ ಎಂದು ದೂರಲಾಗಿದೆ.

ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ಸದಸ್ಯರನ್ನು ವೈಯಕ್ತಿಕವಾಗಿ ಆಹ್ವಾನಿಸದೆ, ಆಮಂತ್ರಿಸದೆ (ಕನಿಷ್ಟ ಫೋನ್‌ ಮೂಲಕ) ನಿರ್ಲಕ್ಷ್ಯ ಮಾಡಲಾಗಿದೆ. ಬಯಲಾಟ ಅಕಾಡೆಮಿ ಕಚೇರಿಯ ಸಿಬ್ಬಂದಿಗಳು, ಕಲಾವಿದರು-ಸದಸ್ಯರಿಗೆ ಗೌರವ ಕೊಡುತ್ತಿಲ್ಲ. ಅಕಾಡೆಮಿಯ ಆಡಳಿತಾಧಿಕಾರಿಗಳು ಎಲ್ಲ ಹಂತದಲ್ಲಿ ಏಕಪಕ್ಷೀಯ ಹಾಗೂ ಸರ್ವಾಧಿಕಾರಿ ತೋರುತ್ತಿದ್ದಾರೆ. ಇದು ಸದಸ್ಯರ ಗೌರವಕ್ಕೆ ಧಕ್ಕೆ ತಂದಿದ್ದಾರೆ ಎಂದು ಸಚಿವರಿಗೆ ಸಲ್ಲಿಸಿದ ಮನವಿಯಲ್ಲಿ ತಿಳಿಸಿದ್ದಾರೆ.

ಅಧ್ಯಕ್ಷರ ನೇಮಕ ಮಾಡಿ: ಉತ್ತರ ಕರ್ನಾಟಕದಲ್ಲಿ ಕರ್ನಾಟಕ ಬಯಲಾಟ ಅಕಾಡೆಮಿ ಮಾತ್ರ ಇದ್ದು, ಸಾಂಸ್ಕೃತಿಕ-ಪ್ರವಾಸಿ ತಾಣಗಳ ಮೂಲಕ ಗಮನ ಸೆಳೆಯುವ ಬಾಗಲಕೋಟೆಯಲ್ಲಿ ಕೇಂದ್ರ ಕಚೇರಿ ಹೊಂದಿದೆ. ಆದರೆ, ಈ ಅಕಾಡೆಮಿಗೆ ಮುಖ್ಯವಾಗಿ ಅಧ್ಯಕ್ಷರ ನೇಮಕ, ಕಾಯಂ ಅಧಿಕಾರಿ-ಸಿಬ್ಬಂದಿ ನೇಮಕ ಮಾಡಿಲ್ಲ. ಡಾ| ಸೊಲಕಣ್ಣನವರ ನಿಧನದ ಬಳಿಕ ಹೊಸ ಅಧ್ಯಕ್ಷರ ನೇಮಕ ಮಾಡಿಲ್ಲ. ಕೂಡಲೇ ಅಕಾಡೆಮಿಗೆ ಅಧ್ಯಕ್ಷರನ್ನು ನೇಮಿಸಿ, ರಾಜ್ಯಾ ದ್ಯಂತ ಅಕಾಡೆಮಿಯ ಕಾರ್ಯ ಚಟುವಟಿಕೆ ಕ್ರಿಯಾಶೀಲಗೊಳಿಸಬೇಕು ಎಂದೂ ಸದಸ್ಯರು ಒತ್ತಾಯಿಸಿದ್ದಾರೆ.

ಕಾರ್ಯಕ್ರಮದಲ್ಲೂ ಎಡವಟ್ಟು: ಸೋಮವಾರ ನಡೆದ ಪ್ರಶಸ್ತಿ ಪ್ರದಾನ ಸಮಾರಂಭದ ಹಿನ್ನೆಲೆಯಲ್ಲಿ ವಿವಿಧ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಬಯಲಾಟದಲ್ಲಿ ಐದು ಪ್ರಕಾರಗಳಿದ್ದು, ಕನಿಷ್ಟ ಒಂದೆರಡು ಪ್ರಕಾರದ ಕಲೆಗಾದರೂ ಅವಕಾಶ ಕೊಡಬೇಕಿತ್ತು. ಅದರ ಬದಲಾಗಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ನಡೆಸುವ, ಬಯಲಾಟ ಅಕಾಡೆಮಿಗೆ ಸಂಬಂಧಿಸದ ಕೆಲ ಸಾಂಸ್ಕೃತಿಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು ಎಂಬ ಅಸಮಾಧಾನ ವ್ಯಕ್ತವಾಗಿದೆ.

ಕರ್ನಾಟಕ ಬಯಲಾಟ ಅಕಾಡೆಮಿಗೆ ಅಧ್ಯಕ್ಷರ ಹಾಗೂ ಸಿಬ್ಬಂದಿ ನೇಮಕ ಕುರಿತು ಶೀಘ್ರವೇ ಕ್ರಮ ಕೈಗೊಳ್ಳಲಾಗುವುದು. ಆಡಳಿತಾಧಿಕಾರಿಗಳ ಕುರಿತು ಸದಸ್ಯರು ಸಲ್ಲಿಸಿದ ದೂರಿನ ಕುರಿತು ಮಾಹಿತಿ ಪಡೆದು, ಸೂಕ್ತ ನಿರ್ದೇಶನ ನೀಡಲಾಗುವುದು.

ವಿ. ಸುನೀಲಕುಮಾರ, ಸಚಿವರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ                    

„ವಿಶೇಷ ವರದಿ

ಟಾಪ್ ನ್ಯೂಸ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

ತಾಕತ್ತಿದ್ದರೆ ಯತ್ನಾಳ್‌ ನನ್ನ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಲಿ: ಪಾಟೀಲ್‌

ತಾಕತ್ತಿದ್ದರೆ ಯತ್ನಾಳ್‌ ನನ್ನ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಲಿ: ಪಾಟೀಲ್‌

ಯತ್ನಾಳ್ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿ…: ಶಿವಾನಂದ ಪಾಟೀಲ್ ಸವಾಲು

Bagalkote; ಯತ್ನಾಳ್ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿ…: ಶಿವಾನಂದ ಪಾಟೀಲ್ ಸವಾಲು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

11-

Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ  

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

10-fusion

UV Fusion: ಭಕ್ತಿಯ ಜಾತ್ರೆ ನೋಡುವುದೇ ಚೆಂದ

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.