ಬೃಹತ್‌ ಡೋಲೋಮೈಟ್‌ ಗಣಿಗಾರಿಕೆಗೆ ಪರವಾನಗಿ ಬೇಡ

­ಯುವ ಮುಖಂಡ ಪ್ರವೀಣ ಆರೋಪ ­ಖೊಟ್ಟಿ!  ಸಾರ್ವಜನಿಕ ಸಭೆ ರದ್ದು ಪಡಿಸಿ ­ಗ್ರಾಮಸ್ಥರು-ರೈತರೊಂದಿಗೆ ಸಭೆ ನಡೆಸಲು ಒತ್ತಾಯ­ ! ಹೈಕೋರ್ಟ್‌ ಮೊರೆಗೆ ನಿರ್ಧಾರ

Team Udayavani, Feb 11, 2021, 1:10 PM IST

minig

ಬಾಗಲಕೋಟೆ: ತಾಲೂಕಿನ ಶಿರೂರ ಮತ್ತು ನೀಲಾನಗರ ಗ್ರಾಪಂ ವ್ಯಾಪ್ತಿಯಲ್ಲಿ ಬಾಗಲಕೋಟೆಯ ಸೋನಾ ಮೈನ್ಸ ಕಂಪನಿಯಿಂದ ಸುಮಾರು 35 ಎಕರೆ ಭೂಮಿಯಲ್ಲಿ ಡೋಲೋಮೈಟ್‌ ಗಣಿಗಾರಿಕೆ  ನಡೆಸಲು ಮುಂದಾಗಿದ್ದು, ಈ ಕುರಿತು ಸಾಕಷ್ಟು ವಿರೋಧ ವ್ಯಕ್ತವಾಗಿದ್ದು, ಗ್ರಾಮಕ್ಕೆ ಸಂಬಂಧವೇ ಇಲ್ಲದ ವ್ಯಕ್ತಿಗಳಿಂದ ನಕಲಿ ಸಭೆ ನಡೆಸಲಾಗಿದೆ. ಕೂಡಲೇ ಈ ಸಭೆಯ ಮಾನ್ಯತೆ ರದ್ದುಗೊಳಿಸಿ, ಸಾರ್ವಜನಿಕರ, ರೈತರ ಹಾಗೂ ಪರಿಸರವಾದಿಗಳ ಸಭೆ ನಡೆಸಬೇಕು ಎಂದು ಗುಂಡನಪಲ್ಲೆ ಗ್ರಾಮದ ಯುವ ಮುಖಂಡ ಪ್ರವೀಣ ಪಾಟೀಲ ಒತ್ತಾಯಿಸಿದರು.

ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶಿರೂರ ಗ್ರಾಮದ ಸರ್ವೇ ನಂ. 283, 277 ಹಾಗೂ 276 ಅಡಿ ಬರುವ 13.69 ಹೆಕ್ಟೇರ್‌ ಭೂಮಿಯಲ್ಲಿ ಸೋನಾ ಮಿನರಲ್ಸನಿಂದ ಡೋಲೋಮೈಟ್‌ ಗಣಿಗಾರಿಕೆ ನಡೆಸಲು ಉದ್ದೇಶಿಸಲಾಗಿದೆ. ಇದಕ್ಕಾಗಿ ಬಾಧಿತ ಪ್ರದೇಶದ ರೈತರು, ಸಾರ್ವಜನಿಕರು ಹಾಗೂ ಗ್ರಾಮಸ್ಥರ ಸಭೆ ನಡೆಸಬೇಕು ಎಂಬ ನಿಯಮವಿದ್ದು, ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಹಾಗೂ ಬಾಗಲಕೋಟೆಯ ಅಪರ ಜಿಲ್ಲಾಧಿಕಾರಿಗಳು ಕರೆದ ಸಭೆಯಲ್ಲಿ ಈ ಕಂಪನಿಯ ಉದ್ಯೋಗಿಗಳು, ಬೇರೆ ಊರಿನ ಜನರನ್ನು ಕರೆಸಿ ಸಭೆ ನಡೆಸಿದ್ದಾರೆ. ಅಲ್ಲದೇ ಬೇರೊಬ್ಬರ ಹೊಲದಲ್ಲಿ ದುಡಿಯಲು ಹೋದವರಿಗೆ ಕಾರ್ಯಕ್ರಮವಿದೆ ಬನ್ನಿ ಎಂದು ಮಹಿಳೆಯರನ್ನು ಕರೆದುಕೊಂಡು ಹೋಗಿ, ಅವರಿಗೆ ಉಪಹಾರ ಮಾಡಿಸಿ, ಬಳಿಕ 100 ಹಣ ಕೊಟ್ಟು ಕಳುಹಿಸಿದ್ದಾರೆ ಎಂದು ಆರೋಪಿಸಿದರು.

ಅಂದಿನ ಸಭೆಯಲ್ಲಿ ಮುಗ್ದ ಮಹಿಳೆಯರಿಂದ ಸಹಿ ಪಡೆದಿದ್ದು, ಅವರಿಗೆ ಡೋಲೋಮೈಟ್‌ ಗಣಿಗಾರಿಕೆ  ಕುರಿತ ಸಭೆಗೆ ಸಹಿ ಪಡೆದಿದ್ದಾರೆ ಎಂದೂ ಗೊತ್ತಿಲ್ಲ. ಅಲ್ಲದೇ ಸೋನಾ ಮಿನರಲ್ಸನಲ್ಲಿ ಕೆಲಸ ಮಾಡುವ ಕಂಪ್ಯೂಟರ್‌ ಆಪರೇಟರ್‌, ಸೂಪರ್‌ವೈಜರ್‌ ಗಳು, ವಿವಿಧ ಕಾರ್ಮಿಕರು, ಗುಳೇದಗುಡ್ಡ, ಕಲಾದಗಿಯ ಕೆಲವರ ಸಹಿ ಮಾಡಿಸಿದ್ದಾರೆ.

ಈ ಗಣಿಗಾರಿಕೆಯಿಂದ ಬಾಧಿತಗೊಳ್ಳುವ ಗುಂಡನಪಲ್ಲೆ, ಬೇವಿನಮಟ್ಟಿ ಗ್ರಾಮಸ್ಥರ ಅಹವಾಲು ಪಡೆದಿಲ್ಲ. ಈ ಕುರಿತು ಹೋರಾಟ ನಡೆಸಿದರೆ, ನಮ್ಮ ಮೇಲೆಯೇ ಪೊಲೀಸ್‌ ಪ್ರಕರಣ ದಾಖಲಿಸಲಾಗುತ್ತಿದೆ ಎಂದು ದೂರಿದರು.

ಗಣಿಗಾರಿಕೆ ಕನಿಷ್ಠ 4ರಿಂದ ಐದು ಎಕರೆ ಪ್ರದೇಶದಲ್ಲಿ ನಡೆಯುತ್ತವೆ. ಆದರೆ, ಸೋನಾ ಮಿನರಲ್ಸನವರು 38 ಎಕರೆ ಬೃಹತ್‌ ಪ್ರದೇಶದಲ್ಲಿ ಈ ಗಣಿಗಾರಿಕೆ ನಡೆಸಲು ಮುಂದಾಗಿದ್ದಾರೆ. ಅಲ್ಲದೇ ಈ ಭಾಗದಲ್ಲಿ ಗರಿಷ್ಠ 15 ಟನ್‌ ಭಾರವಾದ ವಾಹನ ಸಂಚಾರಕ್ಕೆ ಅನುಮತಿ ಇದ್ದರೂ, 40 ಟನ್‌ ಭಾರದ ವಾಹನ ಓಡಿಸುತ್ತಿದ್ದಾರೆ. ಇದರಿಂದ ರಸ್ತೆಗಳೂ ಹಾಳಾಗಿವೆ. ಸಧ್ಯ ಗಣಿಗಾರಿಕೆ ನಡೆಸಲು ಉದ್ದೇಶಿಸಿರುವ ಸರ್ವೆ ನಂಬರ್‌ಗಳ ಪಕ್ಕದ ಭೂಮಿಯ ರೈತರ ಅಹವಾಲು ಅಥವಾ ಅಭಿಪ್ರಾಯ ಪಡೆದಿಲ್ಲ. ಈಗಾಗಲೇ ಖೊಟ್ಟಿ ಸಭೆ ನಡೆಸಿ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಗೆ ಕಳುಹಿಸಿದ್ದು, ಇದನ್ನು ರದ್ದುಪಡಿಸಬೇಕು. ಇಲ್ಲದಿದ್ದರೆ ಹೈಕೋರ್ಟ್ ನಲ್ಲಿ ಸಾರ್ವಜನಿಕ ಹಿತಾಸಕ್ತಿ ಪ್ರಕರಣ ದಾಖಲಿಸುವುದಾಗಿ ಎಚ್ಚರಿಕೆ ನೀಡಿದರು.

ಇದನ್ನೂ ಓದಿ :ಸಮಯಕ್ಕೆ ಬಾರದ ಬಸ್‌: ವಿದ್ಯಾರ್ಥಿಗಳ ಪರದಾಟ

ಸೋನಾ ಮಿನಲರನವರು, ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ನಡೆದ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿಗಳು, ಮಂಡಳಿಯ ಹಿರಿಯ ಅಧಿಕಾರಿಗಳಿಗೂ ಮೋಸ ಮಾಡಿದ್ದಾರೆ. ಅಧಿಕಾರಿಗಳೂ, ಸಭೆಯಲ್ಲಿ ಭಾಗವಹಿಸಿದವರು ಬಾಧಿತ ಪ್ರದೇಶದವರಾ ಇಲ್ಲವೇ ಬೇರೆ ಭಾಗದವರಾ ಎಂಬುದನ್ನೂ ವಿಚಾರಣೆ ಮಾಡಿಲ್ಲ. ಹೀಗಾಗಿ ಕಂಪನಿ ಮತ್ತು ಸಭೆ ನಡೆಸಿದ ಅಧಿಕಾರಿಗಳ ವಿರುದ್ಧವೂ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಪ್ರಮುಖರಾದ ದ್ಯಾಮಣ್ಣ ಗಾಳಿ, ಕರಿಯಪ್ಪ ಪಾದನಕಟ್ಟಿ, ಮಹಾಂತೇಶ ಕೋಟಿಕಲ್‌, ಸಿದ್ದಪ್ಪ ದೊಡಮನಿ, ಮಹಾದೇವ ಸನ್ನಗೋಳ, ಸಿದ್ದಪ್ಪ ಜುಮನಾಳ,   ಸಂಗಮೇಶ ದೊಡಮನಿ ಮುಂತಾದವರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

ತಾಕತ್ತಿದ್ದರೆ ಯತ್ನಾಳ್‌ ನನ್ನ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಲಿ: ಪಾಟೀಲ್‌

ತಾಕತ್ತಿದ್ದರೆ ಯತ್ನಾಳ್‌ ನನ್ನ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಲಿ: ಪಾಟೀಲ್‌

ಯತ್ನಾಳ್ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿ…: ಶಿವಾನಂದ ಪಾಟೀಲ್ ಸವಾಲು

Bagalkote; ಯತ್ನಾಳ್ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿ…: ಶಿವಾನಂದ ಪಾಟೀಲ್ ಸವಾಲು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.