ರಬಕವಿ-ಬನಹಟ್ಟಿ : ಕಾಣೆಯಾದ ವ್ಯಕ್ತಿಯ ಕೊಳೆತ ಶವ ಪತ್ತೆ
Team Udayavani, Jun 17, 2022, 7:22 PM IST
ರಬಕವಿ-ಬನಹಟ್ಟಿ : ಕಳೆದ ಶನಿವಾರ ಕಾಣೆಯಾದ ವ್ಯಕ್ತಿಯೋರ್ವ ಸಾವಿಗೀಡಾದ ಘಟನೆ ಬನಹಟ್ಟಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ತಾಲೂಕಿನ ಮಲ್ಲಪ್ಪ ಸಗರಿ(60) ಎಂಬ ಮಾನಸಿಕ ಸಮಸ್ಯೆ ಎದುರಿಸುತ್ತಿದ್ದ ವ್ಯಕ್ತಿಯೇ ಸಾವಿಗೀಡಾದ ವ್ಯಕ್ತಿಯಾಗಿದ್ದಾನೆ. 11 ರಂದು ಮನೆಯಿಂದ ಹೊರಹೋಗಿದ್ದು ಎಲ್ಲಿಯೂ ಸಿಕ್ಕಿಲ್ಲವೆಂದು ಬನಹಟ್ಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಶುಕ್ರವಾರ ಬೆಳಗ್ಗೆ ಅವರ ತೋಟದ ಮುಂದಿನ ಭಾಗದ ಕಬ್ಬಿನ ಪಡದಲ್ಲಿ ಕೊಳೆತ ವಾಸನೆ ಬರುತ್ತಿದ್ದ ಹಿನ್ನಲೆ ಪರಿಶೀಲಿಸಿದಾಗ ಬೆತ್ತಲೆ ಮೃತದೇಹ ಪತ್ತೆಯಾಗಿದೆ. ಮೃತ ಮಾನಸಿಕ ವ್ಯಕ್ತಿ ಮಲ್ಲಪ್ಪನು ಬಹಿರ್ದೆಸೆಗೆಂದು ತೆರಳಿದಾಗ ಅಲ್ಲಿಯೇ ಮೂರ್ಛೆ ರೋಗದಿಂದ ಬಳಲಿ ಸಾವಿಗೀಡಾಗಿರಬಹುದೆಂಬ ಸಂಶಯ ಪೊಲೀಸ್ ಮೂಲಗಳದ್ದಾಗಿದೆ.
ಈ ಕುರಿತು ಬನಹಟ್ಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪಿಎಸ್ಐ ಸುರೇಶ ಮಂಟೂರ, ಕ್ರೈಮ್ ಪಿಎಸ್ಐ ಪುರಂದರ ಪೂಜಾರಿ ತನಿಖೆ ಮುಂದುವರೆಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್
Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ
Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು
ತಾಕತ್ತಿದ್ದರೆ ಯತ್ನಾಳ್ ನನ್ನ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಲಿ: ಪಾಟೀಲ್
Bagalkote; ಯತ್ನಾಳ್ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿ…: ಶಿವಾನಂದ ಪಾಟೀಲ್ ಸವಾಲು
MUST WATCH
ಹೊಸ ಸೇರ್ಪಡೆ
Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮನೆ ರತ್ನಾಕರ್
BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ
Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!
Bidar; ಬಿರುಗಾಳಿ ಸಹಿತ ಭಾರಿ ಮಳೆ :ಸಿಡಿಲು ಬಡಿದು ರೈತ ಸಾವು
Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್