ಮೋಡಕೇರರಿಗೆ ಸ್ವಂತಕ್ಕೊಂದು ಸೂರಿಲ್ಲ


Team Udayavani, Oct 7, 2019, 12:50 PM IST

bk-tdy-1

ಅಮೀನಗಡ: ಸುಮಾರು 60ಕ್ಕೂ ಹೆಚ್ಚು ಕಾಲ ಇಲ್ಲಿಯೇ ಇರುವ 12ಕ್ಕೂ ಹೆಚ್ಚು ಕುಟುಂಬಗಳಿಗೆ ಸ್ವಂತಕ್ಕೊಂದು ಸೂರಿಲ್ಲ..ಮತದಾನ ಹಕ್ಕು ಪಡೆದರೂ ಬದುಕುವ ಹಕ್ಕಿಲ್ಲ…

ಇದು ಪಟ್ಟಣದ ಕೆರೆಯ ಪಕ್ಕದಲ್ಲಿ ಜೋಪಡಿ ಹಾಕಿಕೊಂಡು ಬದುಕು ನಡೆಸುತ್ತಿರುವ ಮೋದಿಕಾರ (ಮೋಡಕೇರ) ಜನಾಂಗದ 12ಕ್ಕೂ ಹೆಚ್ಚು ಕುಟುಂಬಗಳ ಪರಿಸ್ಥಿತಿ.

ಇವರು ಸುಮಾರು 60 ವರ್ಷಕ್ಕೂ ಹೆಚ್ಚು ಕಾಲ ಇಲ್ಲಿ ನೆಲೆಸಿದ್ದು, ಅವರಿಗೆ ಸ್ವಂತದ್ದು ಎಂದು ಹೇಳಿಕೊಳ್ಳಲು ಮನೆ ಇಲ್ಲ. ನಮ್ಮದು ಅಂತ ಹೇಳಿಕೊಳ್ಳಲು ಗಟ್ಟಿ ನೆಲ ಇಲ್ಲ. ಇಷ್ಟು ವರ್ಷಗಳು ಕಳೆದರೂ ಅಧಿಕಾರಿಗಳಾಗಲಿ, ಜನಪ್ರತಿನಿಧಿಗಳಾಗಲಿ ಇವರಿಗೆ ವಾಸಿಸಲು ಸ್ಥಳ ನೀಡಿಲ್ಲ. ಇವರ ಸಮಸ್ಯೆ ಬಗೆಹರಿಸುವ ಪ್ರಯತ್ನವೂ ನಡೆದಿಲ್ಲ .

ಇವರು ಜಿಲ್ಲಾಧಿಕಾರಿ ಕಚೇರಿಗೆ ಹೋಗಿ ಅಳಲು ತೋಡಿಕೊಂಡಿದ್ದರು. ಆಗ ಗ್ರಾಪಂನಿಂದ 12 ಕುಟುಂಬಗಳಿಗೆ ಹಕ್ಕು ಪತ್ರ ಕೊಟ್ಟು, ಅಲ್ಲಿಯೇ ವಾಸಿಸಿ ಎಂದು ಹೇಳಿತ್ತು. ಇವರೆಲ್ಲ ಖುಷಿಯಿಂದ ಗ್ರಾಪಂ ನೀಡಿದ ಜಾಗೆಯಲ್ಲೇ ಜೋಪಡಿ ಹಾಕಿಕೊಳ್ಳಲು ಹೋಗಿದ್ದೇ ತಡ, ಅರಣ್ಯ ಇಲಾಖೆಯವರು ಬಂದು ಇಲ್ಲಿ ವಾಸಿಸಬೇಡಿ ಎಂದು ಮರಳಿ ಕಳುಹಿಸಿದ್ದರು. ಆ ಜಾಗೆ ಅರಣ್ಯ ಇಲಾಖೆಗೆ ಸೇರಿತ್ತು. ಆ ಪ್ರಯತ್ನ ವಿಫಲವಾದ ಬಳಿಕ ಜೋಪಡಿಯೇ ಗತಿಯೆಂದು ಇಂದಿಗೂ ಕೆರೆಯ ಪಕ್ಕದ ಖಾಲಿ ಜಾಗೆಯಲ್ಲೇ ವಾಸಿಸುತ್ತಿದ್ದಾರೆ.

ಮಳೆ ತಂದ ಅವಾಂತರ: ಕಳೆದ ಒಂದು ವಾರದಿಂದ ಸುರಿಯುತ್ತಿರುವ ಮಳೆಯಿಂದ ಈ ಕುಟುಂಬದವರು ತತ್ತರಿಸಿ ಹೋಗಿದ್ದಾರೆ. ರಕ್ಷಣೆ ಇಲ್ಲದೆ ಪರದಾಡುತ್ತಿದ್ದಾರೆ. ಪ್ರತಿ ಬಾರಿ ಮಳೆ ಬಂದಾಗ ಗುಡಿಸಲುಗಳಿಗೆ ನೀರು ನುಗ್ಗುತ್ತಲೇ ಇದೆ. ಮಳೆ ಜತೆಗೆ ಕೆರೆಯ ನೀರು ಬರುತ್ತಿದೆ. ಇದರಿಂದ ವಿಷಜಂತುಗಳು ಮನೆಯೊಳಗೆ ಸೇರುತ್ತಿದ್ದು, ಅವುಗಳನ್ನು ಹೊರ ಹಾಕುವಲ್ಲಿಯೇ ದಿನರಾತ್ರಿ ಕಳೆಯುವಂತಾಗಿದೆ. ಗುಡಿಸಲುಗಳಲ್ಲಿದ್ದ ದವಸ ಧಾನ್ಯಗಳು ಹಾಳಾಗಿವೆ. ಮಳೆ ಬಂದಾಗೊಮ್ಮೆ ಸಮಸ್ಯೆ ಅನುಭವಿಸುವ ಈ ಕುಟುಂಬಗಳನ್ನು ಮೂರ್‍ನಾಲ್ಕು ಕಡೆ ಸ್ಥಳಾಂತರ ಮಾಡಿದ್ದಾರೆ. ಈಗ ಇದ್ದ ಜಾಗದಲ್ಲಿ ಮಳೆಯಿಂದ ಬದುಕು ಮೂರಾಬಟ್ಟೆಯಾಗಿದೆ. ದುರ್ವಾಸನೆಯೊಂದಿಗೆ ಜೀವನ ಬಂಡಿ ಸಾಗುತ್ತಿದೆ.

ಅಧಿಕಾರಿಗಳಿಗೆ ಹಲವಾರು ಬಾರಿ ಮನವಿ ನೀಡಿದರೂ ನಮಗೆ ನೆಲೆ ಮಾತ್ರ ಸಿಕಿಲ್ಲ. ಮನವಿ ನೀಡಿ ಸಾಕಾಗಿದೆ. ಪ್ರತಿಸಲ ಬರುವ ಮಳೆಯಿಂದ ಬದುಕು ಕಷ್ಟವಾಗಿದೆ. ದಯಮಾಡಿ ನಮಗೆ ಇರಲು ಮನೆ ಕಟ್ಟಿಸಿಕೊಡಿ.- ಕರಿಯಪ್ಪ ಮೋಡಕೇರ, ಪರಶುರಾಮ ಮೋಡಕೇರ, ಜೋಪಡಿ ನಿವಾಸಿಗಳು

 ಪಟ್ಟಣದ ಕೆರೆ ಪಕ್ಕ ಬದುಕು ಕಟ್ಟಿಕೊಂಡ 12ಕ್ಕೂ ಹೆಚ್ಚು ಮೋಡಕೇರ ಕುಟುಂಬಗಳಿಗೆ ಮನೆಯಿಲ್ಲ. ಗಾಂವಠಾಣ ಜಾಗೆಯಲ್ಲಿ ಈ ಕುಟುಂಬಗಳಿಗೆ ಶಾಶ್ವತ ನೆಲೆ ಒದಗಿಸಬೇಕು. ರಮೇಶ ಮುರಾಳ, ಗ್ರಾಪಂ ಮಾಜಿ ಅಧ್ಯಕ್ಷ

 

-ಎಚ್‌.ಎಚ್‌. ಬೇಪಾರಿ

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.