ನಾಲ್ಕು ತಿಂಗಳಲ್ಲಿ ತಾಯಿ-ಮಕ್ಕಳ ಆಸ್ಪತ್ರೆ ಉದ್ಘಾಟನೆ

ಹುಟ್ಟಿದ ಮಗುವಿಗೆ ನಂಜು, ಕಾಮಾಲೆ ಇರುವ ಶಿಶುವಿಗೆ ಇನ್ನು ಮುಂದೆ ಚಿಕಿತ್ಸೆ ಲಭಿಸಲಿದೆ.

Team Udayavani, Jan 19, 2022, 2:05 PM IST

ನಾಲ್ಕು ತಿಂಗಳಲ್ಲಿ ತಾಯಿ-ಮಕ್ಕಳ ಆಸ್ಪತ್ರೆ ಉದ್ಘಾಟನೆ

ಜಮಖಂಡಿ: ತಾಲೂಕಿಗೆ 24 ಗಂಟೆ ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಸೇವೆ ಸಲ್ಲಿಸುವ ಜಮಖಂಡಿ ಸರಕಾರಿ ಆಸ್ಪತ್ರೆಗೆ ಹೊಸದಾಗಿ ಇನ್ನೊಂದು ಆಂಬ್ಯುಲೆನ್ಸ್‌ ನೀಡಲಾಗಿದ್ದು, ಇಂದಿನಿಂದ ಆರೋಗ್ಯ ಸೇವೆ ಆರಂಭಿಸಲಿದೆ ಎಂದು ಶಾಸಕ ಆನಂದ ನ್ಯಾಮಗೌಡ ಹೇಳಿದರು.

ನಗರದ ಉಪವಿಭಾಗ ಸರ್ಕಾರಿ ಆಸ್ಪತ್ರೆಯಲ್ಲಿ ಸಾರ್ವಜನಿಕ ಸೇವೆಗೆ ನೂತನ ಆಂಬ್ಯುಲೆನ್ಸ್‌ಗೆ ಪೂಜೆ ಸಲ್ಲಿಸಿ ಲೋಕಾರ್ಪಣೆಗೊಳಿಸಿ ಮಾತನಾಡಿದ ಅವರು, ನಾಲ್ಕು ತಿಂಗಳಲ್ಲಿ ಹೊಸದಾಗಿ 100 ಹಾಸಿಗೆಗಳ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಉದ್ಘಾಟನೆಗೊಳ್ಳಲಿದೆ. ಇದರಿಂದ ಈ ಭಾಗದ ಜನತೆಗೆ ಎಲ್ಲ ತರಹದ ಸರಕಾರಿ ಸೌಲಭ್ಯಗಳು ಲಭಿಸಿದಂತಾಗುತ್ತದೆ ಎಂದರು.

ತಾಲೂಕಿನ ಯಾವುದೇ ಭಾಗದಿಂದ ರೋಗಿಗಳು ಆರೋಗ್ಯ ತಪಾಸಣೆಗೆ ಬಂದರೆ ಅಂತಹವರಿಗೆ ಈ ಆಸ್ಪತ್ರೆಯಲ್ಲಿ ಎಲ್ಲ ಸೌಲಭ್ಯ ಸಿಗುವಂತೆ ಮಾಡಲಾಗಿದೆ. ರಕ್ತ ಭಂಡಾರ, ಡಯಾಲಾಸಿಸ್‌ ಮತ್ತು ನವಜಾತ ಶಿಶುಸ್ಥಿರಿಕರಣ ಘಟಕ ಕೂಡಾ ನಾಗರಿಕರಿಗೆ ಅನುಕೂಲವಾಗಲಿದ್ದು, ಹುಟ್ಟಿದ ಮಗುವಿಗೆ ನಂಜು, ಕಾಮಾಲೆ ಇರುವ ಶಿಶುವಿಗೆ ಇನ್ನು ಮುಂದೆ ಚಿಕಿತ್ಸೆ ಲಭಿಸಲಿದೆ. ಸುಸಜ್ಜಿತ ಶಸ್ತ್ರಚಿಕಿತ್ಸೆಗೆ ಬಿಪಿ, ಇಸಿಜಿ, ಸ್ತ್ರೀರೋಗಕ್ಕೆ ಸಂಬಂಧಿಸಿದ ಎಲ್ಲ ಉಪಕರಣಗಳು ಲಭ್ಯತೆ ಇರುವ ಮೂರು ಆಂಬ್ಯುಲೆನ್ಸ್‌ಗಳ ವ್ಯವಸ್ಥೆ ಮಾಡಿದೆ. ಇದರಿಂದ ಕ್ಷೇತ್ರದ ಜನರಿಗೆ ಹೆಚ್ಚಿನ ಅನುಕೂಲವಾಗಲಿದ್ದು, ಸಾರ್ವಜನಿಕರು ಸದುಪಯೋಗ ಪಡಿಸಿಕೊಳ್ಳಬೇಕು ಎಂದರು.

ಈಗಾಗಲೇ ಬಾಗಲಕೋಟೆಯಲ್ಲಿ ಪ್ರತಿ ನಿಮಿಷಕ್ಕೆ ಒಂದು ಸಾವಿರ ಲೀಟರ್‌ ಆಕ್ಸಿಜನ್‌ ತಯಾರಿಸುವ ಪ್ಲಾಂಟೇಶನ್‌ ಇದ್ದು, ಜಮಖಂಡಿ ಕ್ಷೇತ್ರದಲ್ಲಿ ಪ್ರತಿ ನಿಮಿಷಕ್ಕೆ 500 ಲೀಟರ್‌ ಆಕ್ಸಿಜನ್‌ ಪ್ಲಾಂಟೇಶನ್‌ ಸಿದ್ಧವಾಗಿದೆ. ಕೊರೊನಾ ಮೂರನೇ ಅಲೆ ಅಬ್ಬರಿಸುತ್ತಿದ್ದು, ಅದನ್ನು ತಡೆಗಟ್ಟಲು ಎಲ್ಲ ರೀತಿಯ ಸಿದ್ಧತೆ ಮಾಡಿಕೊಳ್ಳಲಾಗಿದೆ. ರಕ್ತ ಭಂಡಾರ ಮತ್ತೆ ಪ್ರಾರಂಭಿಸಿ ಸೋಮವಾರದಿಂದ ಸಾರ್ವಜನಿಕರಿಗೆ ರಕ್ತ ಸಿಗುವ ಹಾಗೆ ವ್ಯವಸ್ಥೆ ಮಾಡಿದೆ. ಸರ್ಕಾರಿ ಆಸ್ಪತ್ರೆಯಲ್ಲಿ ಡಯಾಲಿಸಿಸ್‌, ಐಸಿಯು ಹೀಗೆ ಎಲ್ಲ ರೀತಿಯ ಸೌಲಭ್ಯಗಳಿವೆ. ಜಮಖಂಡಿ ಸರ್ಕಾರಿ ಆಸ್ಪತ್ರೆಯಲ್ಲಿ ಎಲ್ಲ ತರಹದ ವ್ಯವಸ್ಥೆಗಳಿದ್ದು, ಉತ್ತಮ ಚಿಕಿತ್ಸೆ ನೀಡಿ ಶ್ರೇಷ್ಠ ಗುಣಮಟ್ಟದ ಆಸ್ಪತ್ರೆಯನ್ನಾಗಿಸಬೇಕೆಂದು ಸಲಹೆ ನೀಡಿದರು.

ತಾಲೂಕು ವೈದ್ಯಾಧಿ ಕಾರಿ ಡಾ| ಜಿ.ಎಸ್‌.ಗಲಗಲಿ, ಸರಕಾರಿ ಆಸ್ಪತ್ರೆ ಮುಖ್ಯವೈದ್ಯಾಧಿ ಕಾರಿ ಡಾ| ಟಿ.ಎಂ. ವೆಂಕಟರಾಜು, ಸ್ತ್ರೀ ರೋಗತಜ್ಞ ಡಾ| ಎಸ್‌.ಜಿ. ಜಮಖಂಡಿ ಇದ್ದರು.

ಟಾಪ್ ನ್ಯೂಸ್

crime (2)

Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Billionaire Priyanka; Here is the property details of Satish Jarakiholi’s daughter

Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

ತಾಕತ್ತಿದ್ದರೆ ಯತ್ನಾಳ್‌ ನನ್ನ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಲಿ: ಪಾಟೀಲ್‌

ತಾಕತ್ತಿದ್ದರೆ ಯತ್ನಾಳ್‌ ನನ್ನ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಲಿ: ಪಾಟೀಲ್‌

ಯತ್ನಾಳ್ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿ…: ಶಿವಾನಂದ ಪಾಟೀಲ್ ಸವಾಲು

Bagalkote; ಯತ್ನಾಳ್ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿ…: ಶಿವಾನಂದ ಪಾಟೀಲ್ ಸವಾಲು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

crime (2)

Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Billionaire Priyanka; Here is the property details of Satish Jarakiholi’s daughter

Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.