ಕೋವಿಡ್ ವೈರಸ್ ತಡೆಗೆ ಜಾಗೃತಿ ವಹಿಸಿ
Team Udayavani, May 4, 2020, 5:39 PM IST
ಮುಧೋಳ: ಗ್ರಾಮೀಣ ಭಾಗದಲ್ಲಿ ಕೋವಿಡ್ ವೈರಸ್ ಇಲ್ಲ. ಇದೇ ಸುಂದರ ವಾತಾವರಣ ಮುಂದುವರಿಯಲು ಪ್ರತಿಯೊಬ್ಬರೂ ಎಚ್ಚರಿಕೆ ವಹಿಸಬೇಕು ಎಂದು ಡಿಸಿಸಿ ಬ್ಯಾಂಕ್ನ ಮಾಜಿ ಅಧ್ಯಕ್ಷ- ಹಾಲಿ ನಿರ್ದೇಶಕ ರಾಮಣ್ಣ ತಳೇವಾಡ ಹೇಳಿದರು.
ತಾಲೂಕಿನ ಜಂಬಗಿ ಕೆ.ಡಿ ಗ್ರಾಮದಲ್ಲಿ ತಾಲೂಕಿನ 46 ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಗಳಿಗೆ 5 ಲೀಟರ್ ಉಚಿತ ಸ್ಯಾನಿಟೈಜರ್ ಹಾಗೂ ತಲಾ 20 ಮಾಸ್ಕ್ಗಳನ್ನು ಉಚಿತವಾಗಿ ವಿತರಿಸಿ ಮಾತನಾಡಿದರು. ತಾಲೂಕಿನ ಎಲ್ಲ ಪಿಕೆಪಿಎಸ್ಗಳಿಗೆ ಡಿಸಿಸಿ ಬ್ಯಾಂಕ್ನಿಂದ ಉಚಿತ ಸ್ಯಾನಿಟೈಜರ್ ಮತ್ತು ಮಾಸ್ಕ್ ನೀಡಲಾಗುತ್ತಿದೆ. ಸಂಘಗಳಿಗೆ ನೂರಾರು ಗ್ರಾಹಕರು, ರೈತರು ಬರುತ್ತಿದ್ದು, ಅವರಿಗೆ ಕೊರೊನಾ ಕುರಿತು ತಿಳಿವಳಿಕೆ ಹೇಳುವ ಜತೆಗೆ ಸಿಬ್ಬಂದಿ ಕೂಡ ಎಚ್ಚರಿಕೆ ವಹಿಸಬೇಕು ಎಂದು ತಿಳಿಸಿದರು.
ಬಿಡಿಸಿಸಿ ಬ್ಯಾಂಕ್ ಅಧಿ ಕಾರಿಗಳಾದ ಆರ್.ಎಂ. ಕೋಮಾರ ಹಾಗೂ ಟಿ.ವಿ. ಅರಳಿಕಟ್ಟಿ ಮಾತನಾಡಿ, ತಾಲೂಕಿನ 46 ಪಿಕೆಪಿಎಸ್ ಸಿಬ್ಬಂದಿಯಿಂದ ಕೊರೊನಾ ತಡೆಗಟ್ಟಲು ವ್ಯಾಪಕ ಜನಜಾಗೃತಿ ಮೂಡಿಸಲಾಗುತ್ತಿದೆ ಎಂದರು. ಪಿಕೆಪಿಎಸ್ ಅಧ್ಯಕ್ಷ ಚಿದಾನಂದ ಪಂಚಗಟ್ಟಿಮಠ, ಶಿವನಗೌಡ ನಾಡಗೌಡ, ರೈತರ ಸಹಕಾರಿ ಸಕ್ಕರೆ ಕಾರ್ಖಾನೆ ನಿರ್ದೇಶಕ ಶಿವನಗೌಡ ನಾಡಗೌಡ ಮುಂತಾದವರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ
Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್ ಈಗ “ಸಂಯುಕ್ತ’
Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್
Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ
Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು
MUST WATCH
ಹೊಸ ಸೇರ್ಪಡೆ
ಕಾಂಗ್ರೆಸ್ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ
ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?
Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ
Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ
Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ