ಮುಧೋಳ: ಭವ್ಯ ಕಟ್ಟಡವಿದ್ದರೂ ತಪ್ಪಿಲ್ಲ “ಬಾಡಿಗೆ ಹೊರೆ’

ಸಾರ್ವಜನಿಕರ ತೆರಿಗೆ ಹಣ ಅನವಶ್ಯಕವಾಗಿ ವ್ಯರ್ಥವಾಗುತ್ತಿದೆ.

Team Udayavani, Jul 25, 2023, 3:17 PM IST

ಮುಧೋಳ: ಭವ್ಯ ಕಟ್ಟಡವಿದ್ದರೂ ತಪ್ಪಿಲ್ಲ “ಬಾಡಿಗೆ ಹೊರೆ’

ಮುಧೋಳ: ಉದ್ಘಾಟನೆಗೊಂಡು ನಾಲ್ಕು ತಿಂಗಳಾದರೂ ಕಾರ್ಯಾರಂಭ ಮಾಡದ ನಗರದ ತಾಲೂಕು ಆಡಳಿತ ಭವನದಿಂದ ಅನೇಕ ಇಲಾಖೆಗಳು ಇಂದಿಗೂ ಸಹ ಬಾಡಿಗೆ ಕಟ್ಟಡದಲ್ಲಿಕಾರ್ಯನಿರ್ವಹಿಸುತ್ತ ಸಾವಿರಾರು ರೂ.ಗಳನ್ನುಬಾಡಿಗೆ ನೀಡುವ ಪರಿಸ್ಥಿತಿ ಮುಂದುವರಿದಿದೆ.

ಎಲ್ಲ ಇಲಾಖೆಗಳನ್ನು ಒಂದೇ ಸೂರಿನಡಿ ತರುವ ಉದ್ದೇಶದಿಂದ ನಗರದಲ್ಲಿ ಅಂದಾಜು 15 ಕೋಟಿ ರೂ. ವೆಚ್ಚದಲ್ಲಿ ನೂತನ ತಾಲೂಕು ಆಡಳಿತ ಭವನ ನಿರ್ಮಾಣಗೊಂಡಿದೆ. ಆದರೆ ಆಡಳಿತ ಯಂತ್ರದ ಆಮೆ ನಡಿಗೆ ಕಾರ್ಯ ವೈಖರಿಯಿಂದ ಅನೇಕ ಹಲವಾರು ಇಲಾಖೆಗಳಿಗೆ ಬಾಡಿಗೆ ಹೊರೆ ಮುಂದುವರಿದಿದೆ.

ನೂತನ ಭವನ ನಿರ್ಮಾಣಕ್ಕೆ ಮೊದಲಿದ್ದ ಇಲಾಖೆಗಳನ್ನು ಕೆಡವಿ ಆ ಜಾಗದಲ್ಲಿ ನೂತನ ಭವನ ನಿರ್ಮಿಸಲಾಗಿದೆ. ಆದರೆ ನಿರ್ಮಾಣಗೊಂಡ ಕಟ್ಟಡದಲ್ಲಿ ಕಾರ್ಯಾರಂಭಕ್ಕೆ ಅವಕಾಶ ಸಿಗದೆ ಹಳೆಯ ಕಟ್ಟಡವನ್ನೂ ಕಳೆದುಕೊಂಡಿರುವ ಕೆಲ ಇಲಾಖೆ
ಕಚೇರಿಗಳು ಬಾಡಿಗೆ ಮನೆಗಳಲ್ಲಿ ಅಥವಾ ಕಾಂಪ್ಲೆಕ್ಸ್ ಗಳನ್ನು ಆಶ್ರಯಿಸುವ ಪರಿಸ್ಥಿತಿ ಮನೆ ಮಾಡಿದೆ.‌

ಸಿಡಿಪಿಒ ಕಚೇರಿ: ಪ್ರಮುಖ ಇಲಾಖೆಗಳಲ್ಲೊಂದಾದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ತಾಲೂಕು ಕಚೇರಿ ಹಲವು ವರ್ಷಗಳಿಂದ ಬಾಡಿಗೆ ಕಟ್ಟಡದಲ್ಲೇ ಕಾರ್ಯ ನಿರ್ವಹಿಸುತ್ತಿದೆ. ಮೊದಲು ತಾಪಂ ಕಚೇರಿ ಆವರಣದಲ್ಲಿ ಚಿಕ್ಕದೊಂದು ರೂಮಿನಲ್ಲಿದ್ದ ಈ ಕಚೇರಿಯನ್ನು ಕೆಲ ವರ್ಷಗಳ ಹಿಂದೆ ಜಮಖಂಡಿ ರಸ್ತೆಯಲ್ಲಿರುವ ಖಾಸಗಿ ಕಟ್ಟಡಕ್ಕೆ ಶಿಫ್ಟ್‌ ಮಾಡಲಾಯಿತು. ತಿಂಗಳಿಗೆ 30 ಸಾವಿರಕ್ಕೂ ಅಧಿಕ ಬಾಡಿಗೆಯಂತೆ ಅಲ್ಲಿ ಕಾರ್ಯ ರ್ನಿವಹಿಸುತ್ತಿರುವ ಇಲಾಖೆ ಅಧಿಕಾರಿಗಳು ನೂತನ ಆಡಳಿತ ಭವನ ಯಾವಾಗ ಕಾರ್ಯಾರಂಭ ಮಾಡುತ್ತದೆ ಎಂದು ಕಾಯುತ್ತಿದ್ದಾರೆ.

ಅಬಕಾರಿ ಇಲಾಖೆ: ಅಬಕಾರಿ ಇಲಾಖೆ ಸಚಿವರ ತವರಲ್ಲೇ ಅಬಕಾರಿ ಇಲಾಖೆಗೆ ಸ್ವಂತ ಕಟ್ಟಡವಿಲ್ಲ ಎಂದರೆ ನೀವು ನಂಬಲೇಬೇಕು. ಇಲಾಖೆಗೆ ಮೊದಲು ಈಗಿರುವ ನೂತನ ಕಟ್ಟಡದ ಸ್ಥಳದಲ್ಲಿದ್ದ ಒಂದು ಕಟ್ಟಡದಲ್ಲಿ ಕಾರ್ಯ ನಿರ್ವಹಿಸುತ್ತಿತ್ತು. ಆದರೆ ಆಡಳಿತ ಭವನ ನಿರ್ಮಾಣಕ್ಕಾಗಿ ಆ ಕಟ್ಟಡವನ್ನು ಕೆಡವಲಾಯಿತು. ಅಂದು ಬಾಡಿಗೆ ಕಟ್ಟಡಕ್ಕೆ ಶಿಫ್ಟ್‌ ಆಗಿರುವ ಅಬಕಾರಿ ಇಲಾಖೆ ಇಂದಿಗೂ ಸಾವಿರಾರು ರೂ. ಬಾಡಿಗೆ ನೀಡಿ ಖಾಸಗಿ ಕಟ್ಟಡದಲ್ಲಿ ಕಾರ್ಯ ನಿರ್ವಹಿಸುತ್ತಿದೆ. ನಗರದ ದಾಕ್ಷಾಯಣಿ ಆಸ್ಪತ್ರೆ
ಹತ್ತಿರದಲ್ಲಿನ ಖಾಸಗಿ ಮನೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಇಲಾಖೆ ತಿಂಗಳಿಗೆ 15ರಿಂದ 20 ಸಾವಿರ ಬಾಡಿಗೆ ನೀಡುತ್ತಿರುವುದರಿಂದ ಸಾರ್ವಜನಿಕರ ತೆರಿಗೆ ಹಣ ಅನವಶ್ಯಕವಾಗಿ ವ್ಯರ್ಥವಾಗುತ್ತಿದೆ.

ತಾಲೂಕು ಆಡಳಿತ ನೂತನ ಭವನ ಶೀಘ್ರವೇ ಕಾರ್ಯಾರಂಭ ಮಾಡಿದರೆ ಇಲಾಖೆಯಿಂದ ಪೋಲಾಗುತ್ತಿರುವ ಹಣ ಉಳಿಸಬಹುದು ಎನ್ನುತ್ತಾರೆ ಹೆಸರು ಹೇಳಲಿಚ್ಚಿಸದ ಅಧಿಕಾರಿಗಳು. ಕಾರ್ಮಿಕ ಇಲಾಖೆ: ನಗರದ ಶಿವಾಜಿ ವೃತ್ತದ ಬಳಿ ಸಣ್ಣದೊಂದು ಕೊಠಡಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕಾರ್ಮಿಕ ಇಲಾಖೆ ತಿಂಗಳಿಗೆ 1600 ಬಾಡಿಗೆ ಪಾವತಿಸುತ್ತಿದೆ.
ಅದೆಷ್ಟೋ ಜನರಿಗೆ ಇದೂವರೆಗೆ ಕಾರ್ಮಿಕ ಇಲಾಖೆ ಕಚೇರಿ ವಿಳಾಸವೇ ತಿಳಿದಿಲ್ಲ. ಸಣ್ಣ ಕೊಠಡಿಯಲ್ಲಿ ಹಲವಾರು ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿರುವ ಇಲಾಖೆಯೂ ಸಹ ನೂತನ ಆಡಳಿತ ಭವನದಲ್ಲಿ ಕಾರ್ಯಾರಂಭದ ದಿನ ಎದುರು ನೋಡುತ್ತಿದೆ.

ಇಕ್ಕಟ್ಟಾದ ಸ್ಥಳದಲ್ಲಿ ಕಾರ್ಯ ನಿರ್ವಹಣೆ: ಬಾಡಿಗೆ ಕಟ್ಟಡದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಇಲಾಖೆಗಳ ಕಥೆ ಒಂದೆಡೆಯಾದರೆ ಹಲವಾರು ಇಲಾಖೆಗಳು ಸ್ವಂತ ಕಟ್ಟಡವಿದ್ದರೂ ಸಹ ಇಕ್ಕಟ್ಟಿನ ಜಾಗದಿಂದ ಕಾರ್ಯ ನಿರ್ವಹಣೆ ತೊಂದರೆಯುಂಟಾಗುತ್ತಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಮುಖ್ಯವಾಗಿ ಉಪನೋಂದಣಾಧಿಕಾರಿಗಳ ಕಚೇರಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಕಚೇರಿ, ಕೈಗಾರಿಕೆ ಇಲಾಖೆ ಸೇರಿದಂತೆ ಹಲವಾರು ಇಲಾಖೆಗಳ ಕಚೇರಿಗಳು ಇಕ್ಕಟ್ಟಾದ ಜಾಗದಲ್ಲಿ ಕಾರ್ಯ ನಿರ್ವಹಿಸುತ್ತಿವೆ.

ಆಡಳಿತ ಭವನ ಶೀಘ್ರ ಕಾರ್ಯಾರಂಭ ಮಾಡಿದರೆ ಎಲ್ಲ ಕಚೇರಿಗಳು ಅಲ್ಲಿಗೆ ಸ್ಥಳಾಂತರಗೊಳ್ಳುವುದರಿಂದ ಅಧಿಕಾರಿಗಳ ಕಾರ್ಯಕ್ಕೂ ಅನುಕೂಲ ಹಾಗೂ ಸಾರ್ವಜನಿಕರಿಗೂ ಅನುಕೂಲವಾಗುತ್ತದೆ ಎಂಬುದು ಪ್ರಜ್ಞಾವಂತರ ಅಭಿಪ್ರಾಯ.
ಒಟ್ಟಿನಲ್ಲಿ ಇದ್ದೂ ಇಲ್ಲದಂತಾಗಿರುವ ನೂತನ ಆಡಳಿತ ಭವನದಿಂದ ಹಲವಾರು ಇಲಾಖೆಗಳ ಸಾವಿರಾರು ರೂಪಾಯಿ ಬಾಡಿಗೆ ಹಣ ಪೋಲಾಗುತ್ತಿರುವುದಂತೂ ಸತ್ಯ. ಸಣ್ಣಪುಟ್ಟ ಕಾಮಗಾರಿ ಬಾಕಿ ಉಳಿಸಿಕೊಂಡು ಉದ್ಘಾಟನೆಯಾಗಿ ನಿಂತಿರುವ
ಕಟ್ಟಡದಲ್ಲಿ ಯಾವಾಗ ಕಾರ್ಯಾರಂಭವಾಗುತ್ತದೆ ಎಂಬುದು ಮಾತ್ರ ಯಕ್ಷಪ್ರಶ್ನೆಯಾಗಿದೆ.

ಉದ್ಘಾಟನೆಗೊಂಡು ಹಲವು ತಿಂಗಳು ಕಳೆದರೂ ಕಟ್ಟಡದಲ್ಲಿ ಇಲಾಖೆಗಳು ಕಾರ್ಯಾರಂಭ ಮಾಡಿಲ್ಲ. ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಆದಷ್ಟು ಬೇಗ ಕಟ್ಟಡದಲ್ಲಿ ಕಾರ್ಯಾರಂಭ ಮಾಡುವ ಮೂಲಕ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಿಕೊಡಬೇಕು.
ಚಂದು ಅಮ್ಮಿನಭಾವಿ, ಸಾರ್ವಜನಿಕರು

ತಾಲೂಕು ಆಡಳಿತ ನೂತನ ಕಟ್ಟಡ ಲೋಕೋಪಯೋಗಿ ಇಲಾಖೆಯಿಂದ ಇನ್ನು ನಮ್ಮ ಸುಪರ್ದಿಗೆ ಬಂದಿಲ್ಲ. ಅವರು
ಅಧಿಕೃತವಾಗಿ ನಮಗೆ ವರ್ಗಾಯಿಸಿದ ಮೇಲೆ ಇಲಾಖೆಗಳಿಗೆ ಕೊಠಡಿಗಳನ್ನು ಹಂಚಿಕೆ ಮಾಡಲಾಗುವುದು.
ವಿನೋದ ಹತ್ತಳ್ಳಿ, ತಹಶೀಲ್ದಾರ್‌, ಮುಧೋಳ

*ಗೋವಿಂದಪ್ಪ ತಳವಾರ

ಟಾಪ್ ನ್ಯೂಸ್

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.