ಮುಧೋಳ: ಅಂಗನವಾಡಿ ಮಕ್ಕಳಿಗೆ ಪಂಚಾಯಿತಿಯಲ್ಲಿ ಪಾಠ!

ಮಳಲಿ ಅಂಗನವಾಡಿ ಕೇಂದ್ರದಲ್ಲಿ ನೀರು ನಿಲ್ಲುತ್ತಿರುವುದು ಸ್ಥಳೀಯರಿಂದ ನನಗೆ ತಿಳಿದುಬಂದಿದೆ

Team Udayavani, Mar 30, 2023, 6:07 PM IST

ಮುಧೋಳ: ಅಂಗನವಾಡಿ ಮಕ್ಕಳಿಗೆ ಪಂಚಾಯಿತಿಯಲ್ಲಿ ಪಾಠ!

ಮುಧೋಳ: ಅಧಿಕಾರಿಗಳ ದಿವ್ಯ ನಿರ್ಲಕ್ಷ್ಯದಿಂದ ಅಪೂರ್ಣವಾಗಿರುವ ಅಂಗನವಾಡಿ ಕೇಂದ್ರದಲ್ಲಿ ನೀರು ಸಂಗ್ರಹಗೊಳ್ಳುತ್ತಿದ್ದು, ಮಕ್ಕಳೆಲ್ಲ ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ಪಾಠ ಆಲಿಸುವಂಥ ಪರಿಸ್ಥಿತಿ ನಿರ್ಮಾಣವಾಗಿದೆ.

ಮಳಲಿ ಗ್ರಾಮದಲ್ಲಿನ ಮೂರನೇ ವಾರ್ಡ್ ನಲ್ಲಿನ ಅಂಗನವಾಡಿಯಲ್ಲಿ ನೀರು ನುಗ್ಗುತ್ತಿದ್ದು, ಮಕ್ಕಳಿಗೆ ಇನ್ನಿಲ್ಲದ ಕಿರಿಕಿರಿಯುಂಟಾಗುತ್ತಿದೆ. ಅ ಧಿಕಾರಿಗಳು ಅಂಗನವಾಡಿ ಕಟ್ಟಡ ಕಾಮಗಾರಿ ಪೂರ್ಣಗೊಳಿಸದ ಕಾರಣ ವಿಧಿ ಯಿಲ್ಲದೆ ಪಾಲಕರು ಬುಧವಾರ ತಮ್ಮ ಮಕ್ಕಳನ್ನು ಗ್ರಾಮ ಪಂಚಾಯಿತಿ ಕಚೇರಿಗೆ ಕರೆದುಕೊಂಡು ಹೋಗಿದ್ದಾರೆ. ಅಂಗನವಾಡಿ ಕಾರ್ಯಕರ್ತೆಯರು ಮಕ್ಕಳಿಗೆ ಪಂಚಾಯಿತಿ ಕಚೇರಿಯಲ್ಲಿಯೇ ಪಾಠ ಮಾಡಿ ಅಡುಗೆ ತಯಾರಿಸಿ ಊಟ ಮಾಡಿಸಿದ್ದಾರೆ.

ಅಂಗನವಾಡಿ ಎದುರಿಗಿರುವ ಟ್ಯಾಂಕ್‌ನಲ್ಲಿನ ನೀರು ಕೇಂದ್ರದೊಳಗೆ ಸಂಗ್ರಹಗೊಳ್ಳುತ್ತಿರುವ ಪರಿಣಾಮ ಮಕ್ಕಳಿಗೆ ಇನ್ನಿಲ್ಲದ ಕಿರಿಕಿರಿಯುಂಟಾಗುತ್ತಿದೆ. ಕುಳಿತುಕೊಳ್ಳಲು ಕಷ್ಟವಾಗುತ್ತದೆ. ಚಿಕ್ಕಚಿಕ್ಕ ಮಕ್ಕಳ ಸಮಸ್ಯೆ ಅರಿಯದ ಅಧಿ ಕಾರಿಗಳು ಕಣ್ಣಿದ್ದು ಕುರುಡರಂತೆ ವರ್ತಿಸುತ್ತಿರುವುದಕ್ಕೆ ಗ್ರಾಮಸ್ಥರು ಹಾಗೂ ಮಕ್ಕಳ ಪಾಲಕರು ವ್ಯಾಪಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಅಪೂರ್ಣಗೊಂಡ ದುರಸ್ತಿ ಕಾರ್ಯ: ಮೂರನೇ ವಾರ್ಡ್‌ನಲ್ಲಿನ ಅಂಗನವಾಡಿಯನ್ನು ಪಂಚಾಯತ್‌ ರಾಜ್‌ ಇಲಾಖೆಯಿಂದ ದುರಸ್ತಿ ಮಾಡಿಸಲಾಗಿತ್ತು. ಆದರೆ ಕಾಮಗಾರಿ ಪೂರ್ಣಗೊಳಿಸದ ಕಟ್ಟಡದಲ್ಲಿ ಮಕ್ಕಳಿಗೆ ಹೇಗೆ ಪಾಠ ಮಾಡುತ್ತಿದ್ದರೂ ಎನ್ನುವುದೇ ಯಕ್ಷಪ್ರಶ್ನೆಯಾಗಿದೆ. ಸ್ಥಳೀಯ ಗ್ರಾಮ ಪಂಚಾಯಿತಿ ಅಧಿಕಾರಿಗಳು ದುರಸ್ತಿ ಮೇಲ್ವಿಚಾರಣೆಯನ್ನು ಸೂಕ್ತ ರೀತಿಯಲ್ಲಿ ನಿರ್ವಹಿಸದ ಕಾರಣ ಇಂದು ಅಂಗನವಾಡಿ ಕೇಂದ್ರದಲ್ಲಿ ಮಕ್ಕಳಿಗೆ ಕುಳಿತುಕೊಳ್ಳಲು ಸಹ ಸಾಧ್ಯವಾಗುತ್ತಿಲ್ಲ. ಅದನ್ನು ಅರಿಯದೆ ಅಂಗನವಾಡಿ ನಡೆಸುವುದಕ್ಕೆ ಅನುಮತಿ ನೀಡಿದ್ದರಿಂದ ಇದೀಗ ಅಲ್ಲಿನ ಮುಗ್ಧ ಮಕ್ಕಳು ತೊಂದರೆಪಡುವಂತಾಗಿದೆ. ಕೂಡಲೇ ಅಂಗನವಾಡಿ ಕೇಂದ್ರವನ್ನು ಸಂಪೂರ್ಣವಾಗಿ ದುರಸ್ತಿಗೊಳಿಸಿ ಮಕ್ಕಳ ಕಲಿಕೆಗೆ ಅನುಕೂಲ ಕಲ್ಪಿಸಬೇಕು ಎಂಬುದ ಗ್ರಾಮಸ್ಥರ ಒತ್ತಾಯವಾಗಿದೆ.

ನನಗೇನೂ ಗೊತ್ತಿಲ್ಲ
ಗ್ರಾಮದ ಅಂಗನವಾಡಿ ಸಮಸ್ಯೆ ಬಗ್ಗೆ ಗ್ರಾಮ ಪಂಚಾಯಿತಿ ಅಧಿಕಾರಿ ಓಲೇಕಾರ ಅವರನ್ನು ಸಂಪರ್ಕಿಸಿದರೆ ನಾನು ಮಳಲಿ ಪಂಚಾಯಿತಿಗೆ ಬಂದು ಅಧಿಕಾರ
ವಹಿಸಿಕೊಂಡು ಕೆಲವೇ ದಿನಗಳಾಗಿವೆ. ಅಂಗನವಾಡಿ ಸಮಸ್ಯೆ ಬಗ್ಗೆ ನನಗೆ ಮಾಹಿತಿ ಇಲ್ಲ ಎಂದು ಹಾರಿಕೆ ಉತ್ತರ ನೀಡಿದರು.

ಮಳಲಿ ಗ್ರಾಮದ ಮೂರನೇ ವಾರ್ಡ್‌ನ ಅಂಗನವಾಡಿ ದುರಸ್ತಿ ಕಾರ್ಯ ಬಾಕಿಯಿದ್ದು ಕೂಡಲೇ ಕಾಮಗಾರಿ ಪೂರ್ಣಗೊಳಿಸಲು ಕ್ರಮಕೈಗೊಳ್ಳಲಾಗುವುದು.
ತಮ್ಮಣ್ಣ ಮೀಸಿ, ಪಂಚಾಯತ್‌ ರಾಜ್‌ ಇಲಾಖೆ
ಇಂಜಿನಿಯರ್‌ ಮುಧೋಳ

ಮಳಲಿ ಅಂಗನವಾಡಿ ಕೇಂದ್ರದಲ್ಲಿ ನೀರು ನಿಲ್ಲುತ್ತಿರುವುದು ಸ್ಥಳೀಯರಿಂದ ನನಗೆ ತಿಳಿದುಬಂದಿದೆ. ನಾನು ಅಂಗನವಾಡಿ ಕೇಂದ್ರಕ್ಕೆ ಭೇಟಿ ಕೊಟ್ಟು ಪರಿಶೀಲಿಸುತ್ತೇನೆ. ಕಟ್ಟಡ ಕಾಮಗಾರಿ ಪೂರ್ಣಗೊಳ್ಳುವವರೆಗೂ ಮಕ್ಕಳಿಗೆ ಪ್ರಾಥಮಿಕ ಶಾಲೆಯ ಒಂದು ಕೊಠಡಿಯಲ್ಲಿ ಮಕ್ಕಳಿಗೆ ವಿದ್ಯಾಭ್ಯಾಸ ಹೇಳಿಕೊಡಲಾಗುವುದು.
ಎ.ಬಿ. ಕುಬಕಡ್ಡಿ,
ಸಿಡಿಪಿಒ ಮುಧೋಳ

ನಮ್ಮ ಊರಿನಲ್ಲಿ 7-8 ಅಂಗನವಾಡಿ ಕೇಂದ್ರಗಳಿರುವುದರಿಂದ ಮೂರನೇ ವಾರ್ಡ್ ನ ಅಂಗನವಾಡಿ ಸಮಸ್ಯೆ ಬಗ್ಗೆ ನನಗೆ ತಿಳಿದಿಲ್ಲ. ಅಲ್ಲಿನ ಪಾಲಕರು ಏಕಾಏಕಿ ಮಕ್ಕಳನ್ನು ಕರೆದುಕೊಂಡು ಪಂಚಾಯಿತಿಗೆ ಬಂದಿದ್ದಾರೆ. ಕೂಡಲೇ ಉಳಿದಿರುವ ಕೆಲಸವನ್ನು ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ತಿಳಿಸುತ್ತೇವೆ ಅಂಗನವಾಡಿ ಮಕ್ಕಳಿಗೆ ತಾತ್ಕಾಲಿಕ ಪರಿಹಾರವಾಗುವವರೆಗೂ ರಜೆ ನೀಡುತ್ತೇವೆ.
ರಾಮಪ್ಪ ಪರಸಪ್ಪಗೋಳ
ಗ್ರಾಮ ಪಂಚಾಯಿತಿ ಅಧ್ಯಕ್ಷ ಮಳಲಿ

ಗೋವಿಂದಪ್ಪ ತಳವಾರ

ಟಾಪ್ ನ್ಯೂಸ್

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

ತಾಕತ್ತಿದ್ದರೆ ಯತ್ನಾಳ್‌ ನನ್ನ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಲಿ: ಪಾಟೀಲ್‌

ತಾಕತ್ತಿದ್ದರೆ ಯತ್ನಾಳ್‌ ನನ್ನ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಲಿ: ಪಾಟೀಲ್‌

ಯತ್ನಾಳ್ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿ…: ಶಿವಾನಂದ ಪಾಟೀಲ್ ಸವಾಲು

Bagalkote; ಯತ್ನಾಳ್ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿ…: ಶಿವಾನಂದ ಪಾಟೀಲ್ ಸವಾಲು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.