ಮುಧೋಳ: ಯುಪಿಐ ಪೇಮೆಂಟ್‌ನಲ್ಲಿ ಮುಧೋಳ ಮಹತ್ತರ ಸಾಧನೆ


Team Udayavani, Mar 16, 2024, 6:18 PM IST

ಮುಧೋಳ: ಯುಪಿಐ ಪೇಮೆಂಟ್‌ನಲ್ಲಿ ಮುಧೋಳ ಮಹತ್ತರ ಸಾಧನೆ

ಉದಯವಾಣಿ ಸಮಾಚಾರ
ಮುಧೋಳ: ಕಳೆದ ತಿಂಗಳು ವಾಯವ್ಯ ರಸ್ತೆ ಸಾರಿಗೆ ನಿಮಗದಲ್ಲಿ ಕಾರ್ಯಾರಂಭ ಮಾಡಿದ್ದ ಯುಪಿಐ ವಹಿವಾಟಿನಲ್ಲಿ ಮುಧೋಳ ಘಟಕದ ಸಿಬ್ಬಂದಿ ಅದ್ವಿತೀಯ ಸಾಧನೆಗೈಯುವ ಮೂಲಕ ಸಾರ್ವಜನಿಕರಲ್ಲಿ ಯುಪಿಐ ವಹಿವಾಟಿಗೆ ಪ್ರೇರೇಪಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ. ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮದಲ್ಲಿನ ಒಟ್ಟು 50 ಘಟಕಗಳಲ್ಲಿ ಯುಪಿಐ ವಹಿವಾಟು ಕಾರ್ಯಾರಂಭ ಮಾಡಿದ್ದು, ಇದೀಗ ಎಲ್ಲ ಘಟಕಗಳ ವಹಿವಾಟಿನ ಮೊದಲ 10 ಸ್ಥಾನದಲ್ಲಿ ಮುಧೋಳ ಘಟಕವು ನಾಲ್ಕನೇ ಸ್ಥಾನ ಪಡೆಯುವ ಮೂಲಕ ಉತ್ತಮ ಸಾಧನೆಗೈದಿದೆ.

ಫೆ.13ರಂದು ಯುಪಿಐಯನ್ನು ಆಯ್ದ ಘಟಕಗಳಲ್ಲಿ ಕಾರ್ಯಗತಗೊಳಿಸಲಾಗಿತ್ತು. ಡಿಜಿಟಲ್‌ ಇಂಡಿಯಾ ಯೋಜನೆ ಹಾಗೂ
ನಿರ್ವಾಹಕ ಮತ್ತು ಪ್ರಯಾಣಿಕರ ಮಧ್ಯದಲ್ಲಿ ಚಿಲ್ಲರೆ ವ್ಯವಹಾರದ ಕಿರಿಕಿರಿ ತಪ್ಪಿಸುವುದು, ಕ್ಯಾಶ್‌ಲೆಸ್‌ ವ್ಯವಹಾರ ವೃದ್ಧಿಯ ಉದ್ದೇಶದಿಂದ ಆರಂಭಗೊಂಡ ಯುಪಿಐ ವಹಿವಾಟಿಗೆ ಸಾರ್ವಜನಿಕರಿಂದ ಆರಂಭದಲ್ಲಿಯೇ ಉತ್ತಮ ಸ್ಪಂದನೆ ದೊರೆಯಿತು. ಇದೀಗ ಸಾರಿಗೆ ಬಸ್‌ ಗಳಲ್ಲಿ ಒಂದು ತಿಂಗಳಿನ ಅಂತರದಲ್ಲಿ ಲಕ್ಷಾಂತರ ರೂ. ಯುಪಿಐ ವಹಿವಾಟು ನಡೆಯುತ್ತಿದೆ. ಹೀಗೆ ಆರಂಭಗೊಂಡಿರುವ ಯುಪಿಐನಿಂದ ಇದೀಗ ಮುಧೋಳ ಘಟಕ ಮಹತ್ತರ ಸಾಧನೆ ಮಾಡಿದೆ.

ಟಾಪ್‌ ಹತ್ತರಲ್ಲಿ ಜಿಲ್ಲೆಯ ಮೂರು ಘಟಕಗಳು:
ಅಧಿಕಾರಿಗಳು ನೀಡುವ ಮಾಹಿತಿ ಪ್ರಕಾರ  ಮಾ. 3ರಿಂದ ಮಾ.13ರವರೆಗಿನ ಯುಪಿಐ ವಹಿವಾಟಿನಲ್ಲಿ ವಾಯವ್ಯ ಕರ್ನಾಟಕ ರಸ್ತೆ
ಸಾರಿಗೆ ನಿಗಮದಲ್ಲಿ ಗುರುತಿಸಿರುವ ಟಾಪ್‌ 10ರಲ್ಲಿ ಜಿಲ್ಲೆಯ ಮುಧೋಳ, ಬಾಗಲಕೋಟೆ ಹಾಗೂ ಗುಳೇದಗುಡ್ಡ ಘಟಕಗಳು ಸ್ಥಾನ ಪಡೆದುಕೊಂಡಿವೆ. ಮೊದಲ ಹತ್ತರ ಸ್ಥಾನದಲ್ಲಿ ಕ್ರಮವಾಗಿ ಗೋಕಾಕ, ಹುಬ್ಬಳ್ಳಿ-1, ಬೆಳಗಾವಿ, ಮುಧೋಳ, ಹುಬ್ಬಳ್ಳಿ-2, ಬಾಗಲಕೋಟೆ, ಬೆಟಗೇರಿ, ಗುಳೇದಗುಡ್ಡ, ಅಥಣಿ, ಸಂಕೇಶ್ವರ ಘಟಕಗಳು ಸ್ಥಾನ ಪಡೆದುಕೊಂಡಿವೆ.

ಮುಧೋಳ 4, ಬಾಗಲಕೋಟೆ 6 ಹಾಗೂ ಗುಳೇದಗುಡ್ಡ ಘಟಕ 8ನೇ ಸ್ಥಾನ ಪಡೆದುಕೊಂಡಿವೆ. ನಾಲ್ಕನೇ ಸ್ಥಾನದಲ್ಲಿರುವ
ಮುಧೋಳ ಘಟಕದ ವತಿಯಿಂದ ಒಟ್ಟು 11534 ಯುಪಿಐ ವಹಿವಾಟು ನಡೆದಿದೆ. ಒಟ್ಟು 7,67,431 ರೂ. ಸಂಗ್ರಹವಾಗಿದೆ.

ನಿರ್ವಾಹಕನ ಸಾಧನೆ: ಇನ್ನು ಯುಪಿಐ ವಹಿವಾಟಿನಲ್ಲಿ ವಾಯವ್ಯ ರಸ್ತೆ ಸಾರಿಗೆ ನಿಗಮದಲ್ಲಿಯೇ ಅತಿ ಹೆಚ್ಚು ವಹಿವಾಟು
ನಡೆಸುವ ಮೂಲಕ ಮುಧೋಳ ಘಟಕದ ಡಿ.ಆರ್‌. ಬಾಗೇವಾಡಿ ವಿಶೇಷ ಸನ್ಮಾನಕ್ಕೆ ಪಾತ್ರರಾಗಿದ್ದಾರೆ. ಬಾಗೇವಾಡಿ ಮಾ. 6ರಂದು ಒಟ್ಟು 157 ಪ್ರಯಾಣಿಕರಿಂದ ಯುಪಿಐ ವಹಿವಾಟು ನಡೆಸುವ ಮೂಲಕ ಉತ್ತಮ ಕಾರ್ಯನಿರ್ವಹಿಸಿದ್ದಾರೆ.

ನಿರ್ವಾಹಕನ ಕಾರ್ಯವೈಖರಿ ಮೆಚ್ಚಿರುವ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ವ್ಯವಸ್ಥಾಪಕ ನಿರ್ದೇಶಕ ಭರತ್‌ ಎಸ್‌.
ಪ್ರಶಂಸನಾ ಪತ್ರ ನೀಡುವ ಮೂಲಕ ನಿರ್ವಾಹಕನ ಬೆನ್ನುತಟ್ಟುವ ಕೆಲಸ ಮಾಡಿದ್ದಾರೆ.

ಚಿಲ್ಲರೆ ಸಮಸ್ಯೆ ಹಾಗೂ ಕ್ಯಾಶ್‌ಲೆಸ್‌ ವ್ಯವಹಾರದ ಉದ್ದೇಶದಿಂದ ಜಾರಿಗೆ ತಂದಿರುವ ಯುಪಿಐ ವ್ಯವಸ್ಥೆ ಇಂದು ಹೆಚ್ಚು ಜನಪ್ರಿಯವಾಗಿದೆ. ಈ ವಿಭಾಗದಲ್ಲಿ ಮುಧೋಳ ಘಟಕ ಸಲ್ಲಿಸುತ್ತಿರುವ ಸೇವೆ ನಮಗೆ ತೃಪ್ತಿ ತಂದಿದ್ದು, ಮುಂದಿನ ದಿನಗಳಲ್ಲಿ ಸಾರ್ವಜನಿಕರು ಯುಪಿಐ ವಹಿವಾಟಿನಲ್ಲಿ ಹೆಚ್ಚಿನ ಪ್ರಮಾಣದಲ್ಲಿ ತೊಡಗಿಕೊಳ್ಳುವ ಮೂಲಕ ವ್ಯವಹಾರ ಸರಳೀಕರಣ
ಮಾಡಿಕೊಳ್ಳಬೇಕು.
ಸಂಗಮೇಶ ಮಾಟೊಳ್ಳಿ, ಮುಧೋಳ ಘಟಕ ವ್ಯವಸ್ಥಾಪಕ 

ಯುಪಿಐನಿಂದ ಚಿಲ್ಲರೆ ಸಮಸ್ಯೆಗೆ ಮುಕ್ತಿ ದೊರೆತಿದೆ. ಸಾರಿಗೆ ಬಸ್‌ನಲ್ಲಿ ಆನ್‌ಲೈನ್‌ ಪೇಮೆಂಟ್‌ ಮಾಡುವ ಮೂಲಕ ಕ್ಯಾಶ್‌ಲೆಸ್‌
ವ್ಯವಹಾರವೂ ಸರಳವಾಗಿದೆ. ಬಸ್‌ನಲ್ಲಿ ಮೊದಲಿಗಿಂತ ಈಗಿನ ಪ್ರಯಾಣ ಹೆಚ್ಚು ಅನುಕೂಲವಾಗಿದೆ.
ಬಸವರಾಜ ಕೋಲೂರ,ಪ್ರಯಾಣಿಕ

*ಗೋವಿಂದಪ್ಪ ತಳವಾರ

ಟಾಪ್ ನ್ಯೂಸ್

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.