ಮುಧೋಳ: ರೈತರ ಪಂಪ್‌ಸೆಟ್‌ ಮೇಲೆ ಕಳ್ಳರ ವಕ್ರದೃಷ್ಟಿ

ಬೇಸಿಗೆ ಹಾಗೂ ಮಳೆಯ ಕೊರತೆಯಿಂದ ನದಿಯಲ್ಲಿನ ನೀರು ಸಂಪೂರ್ಣವಾಗಿ ಬತ್ತಿದೆ.

Team Udayavani, Mar 13, 2024, 2:51 PM IST

ಮುಧೋಳ: ರೈತರ ಪಂಪ್‌ಸೆಟ್‌ ಮೇಲೆ ಕಳ್ಳರ ವಕ್ರದೃಷ್ಟಿ

ಉದಯವಾಣಿ ಸಮಾಚಾರ
ಮುಧೋಳ: ಒಂದೆಡೆ ಬರಗಾಲ, ಮತ್ತೂಂದೆಡೆ ಅತೀವ ನೀರಿನ ಅಭಾವ. ಇವುಗಳ ಮಧ್ಯೆ ಬದುಕು ಸಾಗಿಸಲು ಹೆಣಗುತ್ತಿರುವ ಅನ್ನದಾತನಿಗೆ ಇದೀಗ ಪಂಪ್‌ಸೆಟ್‌ ಕಳ್ಳರ ಹಾವಳಿ ನೆಮ್ಮದಿಗೆ ಕಲ್ಲುಹಾಕಿದೆ.

ಕಳೆದ 7-8 ತಿಂಗಳಿನಲ್ಲಿ ತಾಲೂಕಿನ ಜಂಬಗಿ ಕೆ.ಡಿ. ಗ್ರಾಮವೊಂದರಲ್ಲಿಯೇ ಸರಿ ಸುಮಾರು 9 ಪಂಪ್‌ಸೆಟ್‌ ಕದ್ಯೊಯ್ದಿರುವ ಕಳ್ಳರು ಅನ್ನದಾತರ ಜಂಘಾಬಲವೇ ಕುಸಿಯುವಂತೆ ಮಾಡುತ್ತಿದ್ದಾರೆ.

ಜಂಬಗಿ ಕೆ.ಡಿ. ಗ್ರಾಮದ ಅಶೋಕ ಪಾಟೀಲ-2, ತಿಮ್ಮಣ್ಣ ಮೇಟಿ-1, ಹನಮಂತ ಜಠಾಣಿ-1, ವೆಂಕಣ್ಣ ಅರೆನಾಡ-1, ಸೋಮರಡ್ಡಿ
ಅರಕೇರಿ-1, ಗೋವಿಂದ ಜಠಾಣಿ-1 ಹಾಗೂ ತಿಮ್ಮಾಪುರ ಗ್ರಾಮದಲ್ಲಿ 2 ಪಂಪ್‌ಸೆಟ್‌ ಹಾಗೂ ಮುದ್ದಾಪುರದಲ್ಲಿ ಸಾವಿರಾರು ರೂ. ಮೌಲ್ಯದ ಕೇಬಲ್‌ ಕಳ್ಳತವಾಗಿದೆ ಎಂದು ರೈತರು ಮಾಹಿತಿ ನೀಡಿದ್ದಾರೆ.

ರಾತ್ರಿವೇಳೆ ಕೈಚಳಕ: ತಾಲೂಕಿನಲ್ಲಿ ಹಾದು ಹೋಗಿರುವ ಘಟಪ್ರಭಾ ನದಿಯಲ್ಲಿ ನೀರಾವರಿ ಉದ್ದೇಶಕ್ಕೆ ನೂರಾರು ಪಂಪ್‌ಸೆಟ್‌ಗಳನ್ನು ಅಳವಡಿಸಲಾಗಿದೆ. ಇಂತಹ ಪಂಪ್‌ಸೆಟ್‌ಗಳನ್ನು ಗುರುತಿಸುವ ಕಳ್ಳರು ರಾತ್ರಿವೇಳೆ ನದಿ ದಡಕ್ಕೆ ತೆರಳಿ ಪಂಪ್‌ಸೆಟ್‌ಗಳನ್ನು ಕದ್ದೊಯ್ಯುತ್ತಾರೆ. ಇದರಿಂದ ರೈತರಿಗೆ ಕಳ್ಳರನ್ನು ಹಿಡಿಯುವುದು ಸಾಧ್ಯವಾಗುತ್ತಿಲ್ಲ.

ನದಿನೀರು ಬತ್ತಿರುವುದು ವರದಾನ:
ಬೇಸಿಗೆ ಹಾಗೂ ಮಳೆಯ ಕೊರತೆಯಿಂದ ನದಿಯಲ್ಲಿನ ನೀರು ಸಂಪೂರ್ಣವಾಗಿ ಬತ್ತಿದೆ. ಇದು ಕಳ್ಳತನಕ್ಕೆ ವರದಾನವಾಗಿದೆ. ನೀರು ಇರದ ಕಾರಣ ನದಿ ತೀರಕ್ಕೆ ಬೈಕ್‌ ಮೇಲೆ ತೆರಳಲು ಅನುಕೂಲವಾಗುತ್ತದೆ. ಅದೇ ಕಾರಣಕ್ಕೆ ಕಳ್ಳರು ಮಿಂಚಿನ ವೇಗದಲ್ಲಿ ಪಂಪ್‌ಸೆಟ್‌ ಗಳನ್ನು ಕಳ್ಳತನ ಮಾಡುತ್ತಿದ್ದಾರೆ ಎಂದು ರೈತರು ಮಾಹಿತಿ ನೀಡುತ್ತಾರೆ. ತಾಲೂಕಿನ ಜಂಬಗಿ ಕೆ.ಡಿ., ಮುದ್ದಾಪುರ, ತಿಮ್ಮಾಪುರ ಸೇರಿದಂತೆ ಹಲವಾರು ಭಾಗದಲ್ಲಿ ಪಂಪ್‌ಸೆಟ್‌ಗಳು ಹೆಚ್ಚು ಕಳ್ಳತನವಾಗುತ್ತಿವೆ. ಆದರೆ ಕಳ್ಳರು ಮಾತ್ರ ಕೈಗೆ ಸಿಗುತ್ತಿಲ್ಲ. ಆದಷ್ಟು ಶೀಘ್ರ ಕಳ್ಳರನ್ನು ಪತ್ತೆಹಚ್ಚಿ ಹೆಡೆಮುರಿ ಕಟ್ಟಬೇಕು ಎಂಬುದು ನದಿತೀರದ ಗ್ರಾಮದ ರೈತರ ಆಗ್ರಹವಾಗಿದೆ.

ಅರ್ಧ ಬೆಲೆಗೆ ಮಾರಾಟ: ಕಳ್ಳರ ರೈತರ ಪಂಪ್‌ಸೆಟ್‌ ಗಳನ್ನು ಕದ್ದು ದೂರದ ಊರಿನಲ್ಲಿ ಅರ್ಧಬೆಲೆಗೆ ಮಾರಾಟ ಮಾಡುತ್ತಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಹೀಗೆ ಮಾರಾಟವಾಗುವ ಮೋಟಾರ್‌ ಗಳು ಮತ್ತೆ ರೈತರ ಕೈ ಸೇರುವುದು ಕನಸಿನ ಮಾತೇ ಸರಿ.

ಪಂಪ್‌ಸೆಟ್‌ ಜೊತೆಗೆ ಕೇಬಲ್‌ಗೂ ಕನ್ನ:
ಇನ್ನೂ ಪಂಪ್‌ಸೆಟ್‌ ಕಳ್ಳತನಕ್ಕೆ ಮುಂದಾಗುವ ಕಳ್ಳರು ಪಂಪ್‌ಸೆಟ್‌ನೊಂದಿಗೆ ನದಿ ದಂಡೆಯಲ್ಲಿರುವ ಕೇಬಲ್‌ನ್ನು ಕದಿಯುತ್ತಿದ್ದಾರೆ. ಸಾವಿರಾರು ಮೌಲ್ಯದ ಕೇಬಲ್‌ನ್ನು ಕದಿಯುವ ಖದೀಮರು ರೈತರ ಆರ್ಥಿಕ ಜೀವನದೊಂದಿಗೆ
ಚೆಲ್ಲಾಟವಾಡುತ್ತಿದ್ದಾರೆ.

ಪ್ರಯೋಜನವಾಗದ ದೂರು: ಸಾವಿರಾರು ರೂ. ವ್ಯಯಿಸಿ ಮೋಟಾರ್‌ ಅಳವಡಿಸಿರುವ ರೈತರು ಅವುಗಳು ಕಳ್ಳತನವಾದಾಗ ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕುತ್ತಿದ್ದಾರೆ. ಮೋಟಾರ್‌ ಕಳ್ಳತನವಾದಗೆಲ್ಲ ಪೊಲೀಸ್‌ ಠಾಣೆಗೆ ದೂರು ನೀಡಿದರೂ ಯಾವುದೇ ರೀತಿಯ ಪ್ರಯೋಜನವಾಗುತ್ತಿಲ್ಲ. ದೂರು ನೀಡಿದಾಗ ಸ್ಥಳ ಮಹಜರು ಮಾಡುವ ಪೊಲೀಸರು ಕಳ್ಳರ ಹೆಡೆಮುರಿಕಟ್ಟಲು ಮಾತ್ರ ಮುಂದಾಗುತ್ತಿಲ್ಲ ಎಂಬುದು ರೈತರ ಅಳಲಾಗಿದೆ. ಇನ್ನಾದರೂ ಖದೀಮರನ್ನು ಸೆರೆಹಿಡಿದು ರೈತರಿಗೆ ಅನುಕೂಲ ಕಲ್ಪಿಸಿಕೊಡಬೇಕು ಎಂಬುದು ಪ್ರಜ್ಞಾವಂತ ರೈತರ ಒತ್ತಾಯವಾಗಿದೆ. ನದಿತೀರದ ಗ್ರಾಮದಲ್ಲಿ ಪಂಪ್‌ಸೆಟ್‌ಗಳು ಕಳ್ಳತನವಾಗಿರುವುದು ನಮ್ಮ ಗಮನಕ್ಕೆ ಬಂದಿದೆ. ಈ ಬಗ್ಗೆ ಯಾವುದೇ ದೂರು ದಾಖಲಾಗಿಲ್ಲ. ಈ ಬಗ್ಗೆ ಮುಂದಿನ ದಿನಗಳಲ್ಲಿ
ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

ಪಂಪ್‌ಸೆಟ್‌ ಗಳು ಕಳ್ಳತನವಾಗುವುದರ ಬಗ್ಗೆ ಅಧಿಕೃತವಾಗಿ ದೂರು ದಾಖಲಾಗಿಲ್ಲ. ಆದರೂ ಈ ಬಗ್ಗೆ ಸೂಕ್ತ ತನಿಖೆ ಕೈಗೊಂಡು ಕಳ್ಳರನ್ನು ಹೆಡೆಮುರಿ ಕಟ್ಟಿ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು.
ಶಾಂತವೀರ ಈ., ಡಿವೈಎಸ್‌ಪಿ ಜಮಖಂಡಿ

ನಮ್ಮ ಹಳ್ಳಿಯೊಂದರಲ್ಲೇ ಸರಿಸುಮಾರು 9 ಪಂಪ್‌ಸೆಟ್‌ಗಳು ಕಳ್ಳತನವಾಗಿವೆ. ಸಾಲ ಮಾಡಿ ಪಂಪ್‌ಸೆಟ್‌ ಅಳವಡಿಸಿದ್ದು ಕಳ್ಳರ
ಪಾಲಾಗುತ್ತಿವೆ. ಈ ಬಗ್ಗೆ ದೂರು ನೀಡಿದರೂ ಯಾವುದೇ ಪ್ರಯೋಜನವಾಗುತ್ತಿಲ್ಲ.  ಅಧಿಕಾರಿಗಳು ಕಳ್ಳರ ಹೆಡೆಮುರಿ ಕಟ್ಟಿ
ರೈತರಿಗೆ ಅನುಕೂಲ ಮಾಡಿಕೊಡಬೇಕು.
*ಗೋವಿಂದ ಜಠಾಣಿ,
ಪ್ರಗತಿಪರ ರೈತರು ಜಂಬಗಿ

*ಗೋವಿಂದಪ್ಪ ತಳವಾರ

ಟಾಪ್ ನ್ಯೂಸ್

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rain: ಬಾಗಲಕೋಟೆಯ ಜಿಲ್ಲೆಯ ನಾಲ್ಕು ತಾಲೂಕಿನ ಶಾಲೆಗಳಿಗೆ ಇಂದು (ಜುಲೈ 26) ರಜೆ

Heavy Rain: ಬಾಗಲಕೋಟೆ ಜಿಲ್ಲೆಯ ನಾಲ್ಕು ತಾಲೂಕಿನ ಶಾಲೆಗಳಿಗೆ ಇಂದು (ಜುಲೈ 26) ರಜೆ

ರಬಕವಿ-ಬನಹಟ್ಟಿ: ಭೋರ್ಗರೆಯುತ್ತಿರುವ ಕೃಷ್ಣೆ… ಪ್ರವಾಹ ಭೀತಿಯಲ್ಲಿ ಜನತೆ

ರಬಕವಿ-ಬನಹಟ್ಟಿ: ಭೋರ್ಗರೆಯುತ್ತಿರುವ ಕೃಷ್ಣೆ… ಪ್ರವಾಹ ಭೀತಿಯಲ್ಲಿ ಜನತೆ

Fetoside

Bagalakote: ಸರಕಾರಿ ವೈದ್ಯೆಯಿಂದಲೇ ಭ್ರೂಣಹತ್ಯೆ!

Mudhol ಸಾವಿರ ಶ್ರೀಗಂಧ ಸಸಿಗಳ ಸರದಾರ; ಅರಣ್ಯ ಕೃಷಿಯಲ್ಲಿ ಖುಷಿ ಜೀವನ ಕಂಡ‌‌ ನಾಗಪ್ಪ

Mudhol ಸಾವಿರ ಶ್ರೀಗಂಧ ಸಸಿಗಳ ಸರದಾರ; ಅರಣ್ಯ ಕೃಷಿಯಲ್ಲಿ ಖುಷಿ ಜೀವನ ಕಂಡ‌‌ ನಾಗಪ್ಪ

4-

Mahalingpur: ಘಟಪ್ರಭಾ ನದಿಗೆ ಹೆಚ್ಚಿದ ನೀರು: ಮೂರು ಸೇತುವೆಗಳು ಜಲಾವೃತ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

2-chithapura

Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.