ಮುಧೋಳ: ನಾಳೆ ಸಂಸ್ಕೃತಿ ಸಂಭ್ರಮ


Team Udayavani, Oct 20, 2018, 4:59 PM IST

19-october-21.gif

ಮುಧೋಳ: ಅಳಿಸಿ ಹೋಗುತ್ತಿರುವ ಸಂಪ್ರದಾಯಗಳನ್ನು ಉಳಿಸಿ-ಬೆಳೆಸುವ ನಿಟ್ಟಿನಲ್ಲಿ ಇಡೀ ವರ್ಷದಲ್ಲಿ ಆಚರಣೆಯಾಗುವ ಎಲ್ಲ ಹಬ್ಬಗಳನ್ನು ಒಂದೇ ವೇದಿಕೆಯಲ್ಲಿ ಆಚರಣೆ ಮಾಡುವ ಸಂಸ್ಕೃತಿ ಸಂಭ್ರಮ-2018 ಕಾರ್ಯಕ್ರಮವನ್ನು ಅ.21ರಂದು ದಾನಮ್ಮದೇವಿ ದೇವಾಲಯದ ವೀರಶೈವ ಕಲ್ಯಾಣ ಮಂಟಪದಲ್ಲಿ ಆಯೋಜಿಸಲಾಗಿದೆ ಎಂದು ಸಪ್ತಸ್ವರ, ಸಂಗೀತ, ನೃತ್ಯ ಸಾಂಸ್ಕೃತಿಕ ಸಂಸ್ಥೆಯ ಅಧ್ಯಕ್ಷೆ ಜ್ಯೋತಿ ಪಾಟೀಲ ಹೇಳಿದರು.

ಕಾನಿಪ ಕಾರ್ಯಾಲಯದಲ್ಲಿ ಸಂಸ್ಕೃತಿ ಸಂಭ್ರಮ ಕಾರ್ಯಕ್ರಮದ ಪ್ರಚಾರ ಸಾಮಗ್ರಿ ಬಿಡುಗಡೆ ಮಾಡಿ ಅವರು ಮಾತನಾಡಿದರು. ಮುಧೋಳ ಹಾಗೂ ಸುತ್ತಲಿನ ಗ್ರಾಮೀಣ ಪ್ರದೇಶದಿಂದ ಒಟ್ಟು 19 ಸಮುದಾಯದ ಎಲ್ಲ ದೇವರ ಪೂಜೆಯೊಂದಿಗೆ ಪ್ರಾರಂಭವಾಗುವ ಈ ಕಾರ್ಯಕ್ರಮದಲ್ಲಿ ಶ್ರಾವಣ, ಗುಳ್ಳವ್ವ, ಗಣೇಶ ಚತುರ್ಥಿ, ರಕ್ಷಾಬಂಧನ, ಸರಸ್ವತಿ ಪೂಜೆ, ನಾಗರ ಪಂಚಮಿ, ಶುಕ್ರಗೌರಿ ಪೂಜೆ, ಗೌರವ್ವ-ಶಿಗವ್ವ ಆಚರಣೆ, ನವರಾತ್ರಿ, ಆಯುಧ ಪೂಜೆ, ವಿಜಯದಶಮಿ, ದೀಪಾವಳಿ, ಬಲಿಪಾಡ್ಯ, ಯುಗಾದಿ, ಸಂಕ್ರಾಂತಿ ಹೀಗೆ ವರ್ಷದಲ್ಲಿ ಬರುವ ಎಲ್ಲ ಸಂಪ್ರದಾಯಗಳ ಆಚರಣೆಯನ್ನು ಒಂದೇ ವೇದಿಕೆಯಲ್ಲಿ ಎಲ್ಲ ಸಮುದಾಯದ ಮಹಿಳೆಯರಿಂದ ಆಚರಣೆ ಮಾಡಲಾಗುವುದು. ಗ್ರಾಮೀಣ ಕ್ರೀಡೆಗಳಾದ ಜೋಕಾಲಿ, ಬುಗುರಿ, ಕೊಬ್ಬರಿ ಚಕ್ರ, ಸಕ್ಕ-ಸರಗಿ ಸೇರಿದಂತೆ ಇತರೆ ಗ್ರಾಮೀಣ ಆಟಗಳು ಹಾಗೂ ಗೀಗಿ ಪದ, ಶೋಭಾನೆ ಪದ, ಜೋಗುಳ ಪದ, ಚೌಡಕಿ ಪದ, ಹಂತಿ ಪದ, ಕರ್ಬಲ್‌ ಸೇರಿದಂತೆ ವಿವಿಧ ಗ್ರಾಮೀಣ ಜಾನಪದ ಕಲೆಗಳ ಪ್ರದರ್ಶನ ನಡೆಯುತ್ತದೆ ಎಂದು ಹೇಳಿದರು.

ಭಾರತಿ ಕತ್ತಿ ಮಾತನಾಡಿ, ಕಾರ್ಯಕ್ರಮಕ್ಕೆ ವಿಜಯಪುರದ ಆಶಾ.ಎಂ. ಪಾಟೀಲ, ಬೆಳಗಾವಿ ಗ್ರಾಮೀಣ ಶಾಸಕಿ ಲಕ್ಷ್ಮೀ ಹೆಬ್ಟಾಳಕರ, ಚಂದನ ಟಿವಿಯ ನಿರ್ಮಲಾ ಎಲಿಗಾರ, ಊರ್ಮಿಳಾ ಕಳಸದ, ಚಿತ್ರನಟಿ ಮಾಳವಿಕಾ, ದಾಕ್ಷಾಯಣಿ ನಿರಾಣಿ, ಶಾಂತಾಬಾಯಿ ಕಾರಜೋಳ, ಶಶಿಕಲಾ ಹುಡೇದ, ಶಶಿಕಲಾ ತಿಮ್ಮಾಪುರ, ವೀಣಾ ಕಾಶಪ್ಪನವರ, ಗಂಗೂಬಾಯಿ ಮಾನಕರ ಸೇರಿದಂತೆ ವಿವಿಧ ಗಣ್ಯರು ಆಗಮಿಸುವರು ಎಂದು ತಿಳಿಸಿದರು.

ಸಂಸ್ಥೆಯ ನಿರ್ದೇಶಕಿ ನಿರ್ಮಲಾ ಮಲಘಾಣ ಮಾತನಾಡಿ, ಗ್ರಾಮೀಣ ಪ್ರದೇಶದ ಕುಟ್ಟುವ, ಬೀಸುವ, ಜೋಗುಳು ಹಾಡುವ ಪದ್ಧತಿಯಲ್ಲಿ ಉತ್ತರ ಕರ್ನಾಟಕದ ದೇಶಿಯ ಉಡುಗೆಯಲ್ಲಿ ಬರುವ ಮಹಿಳೆಯರಿಗೆ ಮಾತ್ರವಾಗಿದ್ದು, ನಮ್ಮ ಉದ್ದೇಶ ನಗರದಲ್ಲಿ ಕ್ರಮೇಣ ನಶಿಸಿ ಹೋಗುತ್ತಿರುವ ಸಂಪ್ರದಾಯ ಪದ್ಧತಿ, ಆಚರಣೆಗಳನ್ನು ಉಳಿಸಿ-ಬೆಳೆಸುವುದಾಗಿದೆ. ಈ ನಿಟ್ಟಿನಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಗ್ರಾಮದ ಸುತ್ತಲಿನ ಮಹಿಳೆಯರು ಇಳಕಲ್‌ ಸೀರೆಯ ಉಡುಗೆಯಲ್ಲಿ ಕಾರ್ಯಕ್ರಮಕ್ಕೆ ಆಗಮಿಸಬೇಕು. ಇದಕ್ಕೂ ಮುಂಚೆ ರನ್ನ ಸರ್ಕಲ್‌ದಿಂದ ದಾನಮ್ಮದೇವಿ ದೇವಾಲಯದವರೆಗೆ ಮಹಿಳೆಯರ ಕುಂಭಾರತಿ ಮೆರವಣಿಗೆ ನಡೆಯುವುದು ಎಂದು ಹೇಳಿದರು. ಸಪ್ತಸ್ವರ ಸಂಗೀತ, ನೃತ್ಯ ಸಂಸ್ಥೆಯ ಭಾರತಿ ಮಲಘಾಣ, ಶ್ರೀದೇವಿ ಅಂಗಡಿ, ಸವಿತಾ ಅಂಗಡಿ, ಭಾರತಿ ಕತ್ತಿ ಪತ್ರಿಕಾಗೋಷ್ಠಿಯಲ್ಲಿದ್ದರು.

ಟಾಪ್ ನ್ಯೂಸ್

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

12

ʼಭಜರಂಗಿ ಭಾಯಿಜಾನ್‌ʼ, ʼರೌಡಿ ರಾಥೋರ್ʼ ಸೀಕ್ವೆಲ್‌ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ನಿರ್ಮಾಪಕ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

1-wewqewqe

Revealed; ನೇಹಾ ಹಿರೇಮಠ ಹಂತಕ ಫಯಾಜ್‌ನ ಮತ್ತೊಂದು ಕರಾಳ ಮುಖ ಅನಾವರಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

ತಾಕತ್ತಿದ್ದರೆ ಯತ್ನಾಳ್‌ ನನ್ನ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಲಿ: ಪಾಟೀಲ್‌

ತಾಕತ್ತಿದ್ದರೆ ಯತ್ನಾಳ್‌ ನನ್ನ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಲಿ: ಪಾಟೀಲ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

15

Ramnagar: ಜಿಲ್ಲೆಯಲ್ಲಿ 25 ಕೋಟಿ ರೂ. ಅಕ್ರಮ ವಸ್ತು ಪತ್ತೆ

Department of Health: ಜನರಿಗೆ ಅರಿವಿನ ಟಾನಿಕ್‌ ನೀಡುತ್ತಿರುವ ಆರೋಗ್ಯ ಇಲಾಖೆ

Department of Health: ಜನರಿಗೆ ಅರಿವಿನ ಟಾನಿಕ್‌ ನೀಡುತ್ತಿರುವ ಆರೋಗ್ಯ ಇಲಾಖೆ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.