ಮುಧೋಳ-ಯಾದವಾಡ ಸೇತುವೆ ಜಲಾವೃತ: 15 ರಸ್ತೆ ಸಂಪರ್ಕ ಕಡಿತ
Team Udayavani, Sep 10, 2019, 12:55 PM IST
ಬಾಗಲಕೋಟೆ : ಪಕ್ಕದ ಬೆಳಗಾವಿ ಹಾಗೂ ಮಹಾರಾಷ್ಟ್ರದಲ್ಲಿ ಮಳೆಯಾಟ ನಿರಂತರವಾಗಿದ್ದು, ಇತ್ತ ಮುಳುಗಡೆ ಜಿಲ್ಲೆ ಬಾಗಲಕೋಟೆಯಲ್ಲಿ ಪ್ರವಾಹದ ಆತಂಕ ಹೆಚ್ಚುತ್ತಲೇ ಇದೆ. ಬೆಳಗಾವಿ-ಮುಧೋಳಕ್ಕೆ ಸಂಪರ್ಕ ಕಲ್ಪಿಸುವ ಮುಧೋಳ-ಯಾದವಾಡ ಸೇತುವೆ ಮಂಗಳವಾರ ಜಲಾವೃತಗೊಂಡಿದೆ.
ಮುಧೋಳ- ಯಾದವಾಡ ರಾಜ್ಯ ಹೆದ್ದಾರಿ ಸೇತುವೆ ಮೇಲೆ ಸುಮಾರು ಮೂರು ಅಡಿಯಷ್ಟು ನೀರು ಹರಿಯುತ್ತಿದ್ದು, ಸಂಚಾರ ಸ್ಥಗಿತಗೊಂಡಿದೆ. ಅಲ್ಲದೇ ಕೂಡಲ ಸಂಗಮದ ಸಂಗಮನಾಥ ದೇವಾಲಯದೊಳಗೆ ನಿನ್ನೆ ಎರಡಡಿಯಷ್ಟಿದ್ದ ನೀರು, ಮಂಗಳವಾರ ಮತ್ತಷ್ಟು ಹೆಚ್ಚಾಗಿದೆ.
ಕೂಡಲಸಂಗಮಕ್ಕೆ ಕೃಷ್ಣಾ, ಮಲಪ್ರಭಾ ನದಿಗಳ ನೀರಿನ ಹರಿಯುವ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ, ಕೂಡಲಸಂಗಮಕ್ಕೆ ಪ್ರವಾಸಿಗರು ಹಾಗೂ ಭಕ್ತರ ಪ್ರವೇಶವನ್ನು ತಾತ್ಕಾಲಿಕ ಸ್ಥಗಿತಗೊಳಿಸಲಾಗಿದೆ. ಪ್ರವಾಸಿಗರು, ಭಕ್ತರು ಪ್ರವಾಹ ಇಳಿಯುವವರೆಗೂ ಇತ್ತಕಡೆ ಬರಬೇಡಿ ಎಂದು ಕೂಡಲಸಂಗಮ ಅಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳು ಮನವಿ ಮಾಡಿದ್ದಾರೆ.
ಕೃಷ್ಣಾ ನದಿಗೆ ಇಳಿಕೆ ಕೃಷ್ಣಾ ನದಿಗೆ ಸೋಮವಾರ 2.30 ಲಕ್ಷ ಕ್ಕೂಸೆಕ್ ಇದ್ದ ನೀರಿನ ಹರಿವು, ಮಂಗಳವಾರ 1,75,378 ಕ್ಯೂಸೆಕ್ಗೆ ಇಳಿದಿದೆ. ಆದರೂ, ಕೃಷ್ಣಾ ನದಿ ಪಾತ್ರದ ಜಮಖಂಡಿ ತಾಲೂಕಿನಲ್ಲಿ ಪ್ರವಾಹ ಆತಂಕ ದೂರಾಗಿಲ್ಲ. ಕಂಕಣವಾಡಿ, ಮುತ್ತೂರ, ಮೈಗೂರ, ಶೂರ್ಪಾಲಿ ಗ್ರಾಮಗಳ ಜನರು, ತಾತ್ಕಾಲಿಕ ಪರಿಹಾರ ಕೇಂದ್ರಗಳಲ್ಲೇ ಆಶ್ರಯ ಪಡೆದಿದ್ದಾರೆ.
ಇನ್ನು 2ನೇ ಬಾರಿ ಮೂರು ದಿನಗಳ ನದಿ ಪಾತ್ರ ತುಂಬಿ ಹರಿಯುತ್ತಿದ್ದ ಮಲಪ್ರಭಾ ನದಿಯಲ್ಲೂ ಮಂಗಳವಾರ ಕೊಂಚ ನೀರು ಕಡಿಮೆಯಾಗಿದೆ. ಆದರೆ, ಮಲಪ್ರಭಾ ನದಿ ಉಗಮ ಸ್ಥಾನ ಹಾಗೂ ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಮಳೆಯಿಂದ ಯಾವುದೇ ಸಂದರ್ಭದಲ್ಲಿ ನದಿ ಪಾತ್ರದಲ್ಲಿ ನೀರಿನ ಹರಿವು ಹೆಚ್ಚಾಗುವ ಸಾಧ್ಯತೆ ಇದೆ ಎನ್ನಲಾಗಿದೆ.
ಒಟ್ಟಾರೆ, ಜಿಲ್ಲೆಯ ಮೂರು ನದಿಗಳು ಈ ವರ್ಷ ಪಂಚಮಿ, ಶ್ರಾವಣ, ಗಣೇಶ ಉತ್ಸವ ಹಾಗೂ ಮೋಹರಂ ಯಾವ ಸಂಭ್ರಮಕ್ಕೂ ಬಿಟ್ಟಿಲ್ಲ. ನದಿ ಪಾತ್ರದ ಜನರು ನಿತ್ಯವೂ ಆತಂಕದಲ್ಲೇ ಜೀವನ ನಡೆಸುವಂತೆ ಮಾಡಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ
Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್
ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ
ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ
ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ
MUST WATCH
ಹೊಸ ಸೇರ್ಪಡೆ
Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ
ʼAadujeevithamʼ Twitter review: ಪೃಥ್ವಿರಾಜ್ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?
Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ
ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ
Delhi: ದುಬಾರಿ ಮರ್ಸಿಡೆಸ್ ಕಾರಿನಲ್ಲಿ ಡ್ರಗ್ಸ್ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!