ಅಫ್ಘಾನಿಸ್ತಾನದ ಅಪಾಯದ ಕೂಪದಿಂದ ಪಾರಾದ ಮುಧೋಳ ಮೂಲದ ಯೋಧ ಮಂಜುನಾಥ ಮಾಳಿ


Team Udayavani, Aug 21, 2021, 7:15 PM IST

ಅಫ್ಘಾನಿಸ್ತಾನದ ಅಪಾಯದ ಕೂಪದಿಂದ ಪಾರಾದ ಮುಧೋಳ ಮೂಲದ ಯೋಧ ಮಂಜುನಾಥ ಮಾಳಿ

ಮುಧೋಳ: ತಾಲಿಬಾನಿಗಳ ಕ್ರೌರ್ಯಕ್ಕೆ ನಲುಗಿರುವ ಅಫ್ಘಾನಿಸ್ತಾನದಿಂದ ಜಿಲ್ಲೆಯ ಯೋಧರೊಬ್ಬರು ಸುರಕ್ಷಿತವಾಗಿ ತಾಯ್ನಾಡಿಗೆ ವಾಪಸ್ಸಾಗಿದ್ದಾರೆ.

ಅಫ್ಘಾನಿಸ್ತಾನದಲ್ಲಿ ಉಂಟಾಗಿರುವ ರಾಜಕೀಯ ಅರಾಜಕತೆಯಿಂದಾಗಿ ದೇಶದ ವಿದೇಶಾಂಗ ಸಚಿವಾಲಯ ಅಲ್ಲಿ ವಾಸಿಸುತ್ತಿದ್ದ ಭಾರತೀಯರನ್ನು ಮರಳಿ ಕರೆಯಿಸಿಕೊಳ್ಳವಲ್ಲಿ ನಿರತವಾಗಿದೆ. ಭಾರತ ಸರ್ಕಾರದ ಪ್ರಯತ್ನದ ಫಲವಾಗಿ ಕಾಬೂಲ್ಲಿನ ಭಾರತೀಯ ರಾಯಭಾರಿ ಕಚೇರಿಯಲ್ಲಿ ಐಟಿಬಿಪಿ ಕಮಾಂಡೋ ಆಗಿ ಸೇವೆ ಸಲ್ಲಿಸುತ್ತಿದ್ದ ಕಸಬಾ ಜಂಬಗಿ ಗ್ರಾಮದ ಯೋಧ ಮಂಜುನಾಥ ಮಾಳಿ ಸುರಕ್ಷಿತವಾಗಿ ದೇಶಕ್ಕೆ ಆಗಮಿಸಿದ್ದಾರೆ.

ಗುಜರಾತ್ ಮೂಲಕ ದೇಶಕ್ಕೆ ಆಗಮನ : ಅಗಸ್ಟ್ 16 ರಂದು ಅಫ್ಘಾನಿಸ್ತಾನದ ಕಾಬೂಲ್‌ನಿಂದ ಗುಜರಾತ್‌ನ ಜಾಮ್‌ನಗರಕ್ಕೆ ಭಾರತೀಯ ವಾಯುಸೇನೆಯ ವಿಮಾನದ ಮೂಲಕ ಆಗಮಿಸಿರುವ ಮಂಜುನಾಥ ಅವರು ಸದ್ಯ ದೆಹಲಿಯಲ್ಲಿ ವೈದ್ಯಕೀಯ ತಪಾಸಣೆ ಕಾರ್ಯದಲ್ಲಿ ಪಾಲ್ಗೊಂಡಿದ್ದಾರೆ.

ಕುಟುಂಬಸ್ಥರಲ್ಲಿ ಸಂತಸ : ದಿನಬೆಳಗಾದರೆ ಅಫ್ಘಾನಿಸ್ತಾನದಲ್ಲಿನ ಬೆಳವಣಿಗೆ ನೋಡಿ ತಳಮಳದಲ್ಲಿದ್ದ ಮಂಜುನಾಥ ಮಾಳಿ ಕುಟುಂಬಸ್ಥರು ಸದಾಕಾಲ ಮಂಜುನಾಥನ ಆರೋಗ್ಯದ ಬಗ್ಗೆಯೇ ಕಾಳಜಿ ಮಾಡುತ್ತಿದ್ದರು. ನಮ್ಮ ಮನೆಯ ಮಗ ಸುರಕ್ಷಿತವಾಗಿ ದೇಶಕ್ಕೆ ಮರಳಿದರೆ ಸಾಕು ಎಂದು ದೇವರಲ್ಲಿ ಪ್ರಾರ್ಥಿಸುತ್ತಿದ್ದರು. 16 ರಂದು ಗುಜರಾತಿನ ಜಾಮ್‌ನಗರದಲ್ಲಿ ವಾಯುಸೇನೆಯ ವಿಮಾನದ ಮೂಲಕ ದೇಶಕ್ಕೆ ಆಗಮಿಸಿದಾಗ ಮನೆ ಮಂದಿಯ ಸಂತಸ ಎಲ್ಲೆ ಮೀರಿತ್ತು.

15 ದಿನದೊಳಗೆ ಮನೆಗೆ : ಸದ್ಯ ದೆಹಲಿಯಲ್ಲಿ ಸುರಕ್ಷಿತವಾಗಿರುವ ಮಂಜುನಾಥ ಮಾಳಿ. 15  ದಿನದೊಳಗೆ ಗ್ರಾಮಕ್ಕೆ ಆಗಮಿಸುವುದಾಗಿ ತಿಳಿಸಿದ್ದಾರೆಂದು ಅವರೊಂದಿಗೆ ಸಂಪರ್ಕದಲ್ಲಿರುವ ಅವರ ಸಹೋದರ ಚನ್ನಬಸಪ್ಪ ಮಾಳಿ ಅವರು ಉದಯವಾಣಿಗೆ ತಿಳಿಸಿದರು.

೨೦೦೮ರಿಂದ ಐಟಿಬಿಪಿಯಲ್ಲಿ ಸೇವೆ ಸಲ್ಲಿಸುತ್ತಿರುವ ಮಂಜುನಾಥ ಅವರು 2019ರಿಂದ ಕಾಬೂಲ್‌ನಲ್ಲಿ ಕಮಾಂಡೋ ಆಗಿ ಕಾರ್ಯನಿರ್ವಹಣೆಗೆ ತೆರಳಿದ್ದರು. ಇನ್ನೆರಡು ತಿಂಗಳಲ್ಲಿ ಅಲ್ಲಿನ ಸೇವೆ ಪೂರ್ಣಗೊಳ್ಳುವುದರೊಳಗೆ ಸದ್ಯದ ಬೆಳವಣಿಗೆಯಿಂದಾಗಿ ತಾಯ್ನಾಡಿಗೆ ಮರಳಿದ್ದಾರೆ.

ಆತಂಕದ ಎರಡು ದಿನ : ಅಫ್ಘಾನಿಸ್ತಾನದಲ್ಲಿನ ಬೆಳವಣಿಗೆಯಿಂದ ಕಳವಳಗೊಂಡಿದ್ದ ಮಂಜುನಾಥ ಕುಟುಂಬಸ್ಥರು ನಿತ್ಯ ಅವರಿಗೆ ಕರೆ ಮಾಡಿ ಅಲ್ಲಿನ ಪರಿಸ್ಥಿತಿ ಬಗ್ಗೆ ಮಾಹಿತಿ ಪಡೆಯುತ್ತಿದ್ದರು. ಆದರೆ ಆಗಸ್ಟ್ 14 ರ ನಂತರ ಮಂಜುನಾಥ ಅವರ ಮೊಬೈಲ್ ಸಂಪರ್ಕಕ್ಕೆ ಸಿಗದ ಕಾರಣ ಕುಟುಂಬಸ್ಥರಲ್ಲಿ ಆತಂಕದ ಕಾರ್ಮೋಡ ಆವರಿಸಿತ್ತು. ನಿರಂತರ ಪ್ರಯತ್ನದ ನಂತರ ಮಂಜುನಾಥ ಅವರು ಭಾರತಕ್ಕೆ ಬಂದ ಅಂದರೆ ಆಗಸ್ಟ್ 16 ರಂದು ಮಂಜುನಾಥಗೆ ಕರೆ ಮಾಡಿದ ಕುಟುಂಬಸ್ಥರು ಅವರ ಆರೋಗ್ಯದ ಬಗ್ಗೆ ವಿಚಾರಿಸಿದ ಮಂಜುನಾಥನ ಹೆತ್ತವರು, ಮಡದಿ, ಇಬ್ಬರು ಮಕ್ಕಳು ಹಾಗೂ ಸಹೋದರರು ನಿಟ್ಟುಸಿರು ಬಿಟ್ಟಿದ್ದಾರೆ.

ಅಫ್ಘಾನಿಸ್ತಾನದಲ್ಲಿ ಕಷ್ಟದಲ್ಲಿರುವ ಭಾರತೀರನ್ನು ಕರೆತರುವಲ್ಲಿ ಭಾರತ ಸರ್ಕಾರ ಕಠಿಬದ್ಧವಾಗಿದೆ. ನನ್ನ ಸಹೋದರ ಮಂಜುನಾಥ ಅವರು ಸೇರಿದಂತೆ ನೂರಾರು ಭಾರತೀರನ್ನು ತಾಯ್ನಾಡಿಗೆ ಮರಳಿ ತರುವಲ್ಲಿ ವಿಶೇಷ ಕಾಳಜಿ ವಹಿಸಿದ ಭಾರತ ಸರ್ಕಾರಕ್ಕೆ ನನ್ನ ಧನ್ಯವಾದಗಳು.ಸಿದ್ದಲಿಂಗು ಮಾಳಿ ( ಮಂಜುನಾಥ ಮಾಳಿ ಸಹೋದರ)

ಟಾಪ್ ನ್ಯೂಸ್

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

ತಾಕತ್ತಿದ್ದರೆ ಯತ್ನಾಳ್‌ ನನ್ನ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಲಿ: ಪಾಟೀಲ್‌

ತಾಕತ್ತಿದ್ದರೆ ಯತ್ನಾಳ್‌ ನನ್ನ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಲಿ: ಪಾಟೀಲ್‌

ಯತ್ನಾಳ್ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿ…: ಶಿವಾನಂದ ಪಾಟೀಲ್ ಸವಾಲು

Bagalkote; ಯತ್ನಾಳ್ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿ…: ಶಿವಾನಂದ ಪಾಟೀಲ್ ಸವಾಲು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

5-congress

Udupi-ಚಿಕ್ಕಮಗಳೂರಿನಲ್ಲಿ ಬಿಜೆಪಿಗರೂ ಜೆಪಿ-ಜೆಪಿ ಎನ್ನುತ್ತಿದ್ದಾರೆ: ನಿಕೇತ್‌ರಾಜ್‌ ಮೌರ್ಯ

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.