ಮುಧೋಳ : ಕೋವಿಡ್ ಮಾರಿಗೆ ನಗರಸಭೆ ಅಧ್ಯಕ್ಷ ಬಲಿ
Team Udayavani, May 23, 2021, 5:21 PM IST
ಮುಧೋಳ : ನಗರ ಸಭೆ ಅಧ್ಯಕ್ಷ ಸಿದ್ದನಾಥ (ಸಂಜು) ದಾದಾಸಾಬೇಬ ಮಾನೆ (34) ಅವರು ಭಾನುವಾರ ಕೋವಿಡ್ ಸೋಂಕಿಗೆ ಬಲಿಯಾಗಿದ್ದಾರೆ.
ಸಿದ್ದನಾಥ(ಸಂಜು) ದಾದಾಸಾಹೇಬ ಮಾನೆ ಅವರ ನಿಧನಕ್ಕೆ ಉಪಮುಖ್ಯಮಂತ್ರಿ ಗೋವಿಂದ ಎಂ ಕಾರಜೋಳ ಅವರು ತೀವ್ರ ಸಂತಾಪ ಸೂಚಿಸಿದ್ದಾರೆ.
ಮಾನೆ ಅವರು ಅತ್ಯುತ್ತಮ ಕುಸ್ತಿಪಟುವಾಗಿದ್ದು, ಕರ್ನಾಟಕ ಕೇಸರಿ, ಕರ್ನಾಟಕ ಕಂಠೀರವ ಪ್ರಶಸ್ತಿ ಸೇರಿದಂತೆ ವಿವಿಧ ಪ್ರಶಸ್ತಿ ಗಳಿಗೆ ಬಾಜನರಾಗಿದ್ದರು. ಯುವಕರನ್ನು ಕ್ರೀಡಾ ಚಟುವಟಿಗಳಿಗೆ ಉತ್ತೇಜಿಸುತ್ತಿದ್ದ ಮಾನೆ ಅವರುಜನರ ಆಶಯಗಳಿಗೆ ಸಕ್ರಿಯವಾಗಿ ಸ್ಪಂದಿಸುತ್ತಿದ್ದರು.ಅವರ ನಿಧನದಿಂದ ಪಕ್ಷಕ್ಕೆ ಭರ್ತಿಸಲಾರದ ನಷ್ಟ ಉಂಟಾಗಿದೆ. ಭಗವಂತನು ಅವರ ಆತ್ಮಕ್ಕೆ ಚಿರಶಾಂತಿ ನೀಡಿ, ಅವರ ಕುಟುಂಬವರ್ಗದವರಿಗೆ ದು:ಖ ಭರಿಸುವ ಶಕ್ತಿ ನೀಡಲಿ ಎಂದು ಡಿಸಿಎಂ ಪ್ರಾರ್ಥಿಸಿದ್ದಾರೆ.
ಕಳೆದ ಏಳೆಂಟು ದಿನದಿಂದ ಕೋವಿಡ್ ನಿಂದ ಬಳಲುತ್ತಿದ್ದ ಅವರನ್ನು ಬೆಳಗಾವಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಇದನ್ನೂ ಓದಿ : ಆಶಾ ಕಾರ್ಯಕರ್ತೆಯರ ಬಾಕಿ ಇರುವ ಗೌರವಧನ ಬಿಡುಗಡೆ ಮಾಡಿ: ಕುಮಾರಸ್ವಾಮಿ ಆಗ್ರಹ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ
Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್ ಈಗ “ಸಂಯುಕ್ತ’
Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್
Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ
Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು