ತಾಪಂ ಸದಸ್ಯರಿಂದ ಅಧಿಕಾರಿಗಳ ತರಾಟೆ 


Team Udayavani, Dec 9, 2018, 4:57 PM IST

9-december-17.gif

ಮುಧೋಳ: ಸರ್ಕಾರದ ವಿವಿಧ ಯೋಜನೆಗಳನ್ನು ಫಲಾನುಭವಿಗಳಿಗೆ ವಿತರಿಸುವ ಸಂದರ್ಭದಲ್ಲಿ ನಮ್ಮ ಗಮನಕ್ಕೆ ತರುತ್ತಿಲ್ಲ ಹಾಗೂ ಸಭೆಯ ಮಾಹಿತಿ, ಅಭಿವೃದ್ಧಿ ಕಾರ್ಯಗಳ ಮಾಹಿತಿಯನ್ನು ಅಧಿಕಾರಿಗಳು ಸಮರ್ಪಕವಾಗಿ ನೀಡುತ್ತಿಲ್ಲ ಎಂದು ತಾಪಂ ಸದಸ್ಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ತಾಪಂ ಸಾಮಾನ್ಯ ಸಭೆಯಲ್ಲಿ ಮಾತನಾಡಿದ ಸದಸ್ಯರು, ಸಭೆಗೆ ಬರಲು ನಮಗೆ ನೋಟಿಸ್‌ ಹಾಗೂ ತಾಪಂ ಇಲಾಖೆವಾರು ಅಭಿವೃದ್ಧಿಪರ ಕಾರ್ಯಗಳ ಮಾಹಿತಿ ತಲುಪಿಲ್ಲ ಎಂದರು.

ಭಂಟನೂರ ಮತ್ತು ಚಿಕ್ಕೂರ ಶಾಲೆಯಲ್ಲಿ ಸೈಕಲ್‌ ವಿತರಣೆ ವೇಳೆ ನಮಗೆ ಆಹ್ವಾನಿಸದ ಮುಖ್ಯೋಪಾಧ್ಯಾಯರನ್ನು ಅಮಾನತು ಮಾಡಬೇಕು ಎಂದು ಸದಸ್ಯರು ಒತ್ತಾಯಿಸಿದರು. ಈ ಸಂಬಂಧ ಬಿಇಒ ಪರಿಶೀಲನೆ ಮಾಡಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ ಎಂದು ತಾಪಂ ಇಒ ಹೇಳಿದರು.

ತಾಪಂಗೆ ಒಳಪಡುವ ತಾಲೂಕಿನ ಆಸ್ತಿ ಬಗ್ಗೆ ಮಾಹಿತಿ ಕೇಳಿದ್ದರೂ ಮಾಹಿತಿ ಏಕೆ ಕೊಟ್ಟಿಲ್ಲ ಎಂದು ಸದಸ್ಯರು ಪ್ರಶ್ನಿಸಿದರು. ಈ ಕುರಿತು ಈಗಾಗಲೇ ಮಾಹಿತಿ ರವಾನಿಸಲಾಗಿದೆ, ಅದನ್ನು ಪರಿಶೀಲಿಸಿ ತಿಳಿಸಲಾಗುವುದು ಎಂದು ಇಒ ಉತ್ತರಿಸಿದರು. ವರ್ಷದಿಂದ ಖಾಲಿ ಬಿದ್ದ ಮಳಿಗೆಗೆ ಬಾಡಿಗೆ ಏಕೆ ನೀಡಿಲ್ಲ ಎಂದು ಪ್ರಶ್ನಿಸಿದರು.

ಕೃಷಿ ಇಲಾಖೆ ಅಧಿಕಾರಿಗಳು ಅನುಕೂಲಸ್ಥರಿಗೆ ಸರ್ಕಾರಿ ಯೋಜನೆಗಳ ಸವಲತ್ತು ನೀಡುತ್ತಾರೆ, ಉಳಿದವರಿಗೆ ಕ್ಯಾರೆ ಎನ್ನುತ್ತಿಲ್ಲ ಎಂದು ಸದಸ್ಯ ಶ್ರೀಶೈಲ ಆರೋಪಿಸಿದರು. ಈ ವಿಷಯವನ್ನು ಅಧ್ಯಕ್ಷರ ಸಮ್ಮುಖದಲ್ಲಿ ಬಗೆಹರಿಸಲಾಗಿದೆ ಎಂದಾಗ ಮತ್ತೆ ವಿಷಯ ವಿಕೋಪಗೊಂಡಿತು. ಸದಸ್ಯರು ಏಕವಚನದಲ್ಲಿ ಮಾತನಾಡಬೇಡಿ ಎಂದು ಅಧಿಕಾರಿ ಹೇಳಿದಾಗ ವಿಷಯ ಅಧ್ಯಕ್ಷರಿಗೂ ಮೀರಿದಾಗ ಸಭೆಯಲ್ಲಿ ಚರ್ಚೆಯಾದ ಕೆಲಸಗಳು ಅನುಷ್ಠಾನಕ್ಕೆ ಬಾರದಿದ್ದರೆ ಸಭೆ ಏಕೆ ಎಂದು ಕೋಪಗೊಂಡ ಸದಸ್ಯ ಸಭಾತ್ಯಾಗ ಮಾಡಿದರು.

ತಾಲೂಕಿನಲ್ಲಿರುವ ಬ್ಯಾರೇಜುಗಳನ್ನು ಪಡಸಲಗಿ ಬ್ಯಾರೇಜ್‌ ಮಾದರಿಯಲ್ಲಿ ದುರಸ್ತಿ ಕಾಮಗಾರಿ ಕೈಗೊಳ್ಳಲು ಸಣ್ಣ ನೀರಾವರಿ ಇಲಾಖೆ ಅಧಿಕಾರಿಗಳ ಗಮನಕ್ಕೆ ಸದಸ್ಯರು ಈ ಕಾರ್ಯ ನಡೆದಿದೆ. ಸರ್ಕಾರವು ಸಮಾನಾಂತರ ಬ್ಯಾರೇಜ್‌ ಆರಂಭಿಸಲು ಚಿಂತನೆ ನಡೆಸಿದೆ ಎಂದರು. ತಾಪಂ ಅಧ್ಯಕ್ಷ ಟಿ.ಆರ್‌. ಬಟಕುರ್ಕಿ ಅಧ್ಯಕ್ಷತೆವಹಿಸಿದ್ದರು. ತಾಪಂ ಇಒ ಬಿ.ವಿ. ಅಡವಿಮಠ, ಸಾಮಾಜಿಕ ನ್ಯಾಯ ಸಮಿತಿ ರುಕ್ಮವ್ವ ಪಾಟೀಲ, ಸದಸ್ಯರಾದ ಸಂಗಪ್ಪ ಇಮ್ಮನವರ, ಯಶವಂತ ಹರಿಜನ, ಪರಪ್ಪ ಜನವಾಡ ಇತರರಿದ್ದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.