ದೊಡ್ಡಲಾಲಸಾಬವಲಿ ದರ್ಗಾದಲ್ಲಿ ಅಜ್ಜನವರ ಮೊಹರಂ: ನೀರಿನಿಂದ ದೀಪ ಹಚ್ಚುವುದು ಇಲ್ಲಿನ ವಿಶೇಷ


Team Udayavani, Aug 9, 2022, 5:15 PM IST

tdy-18

ಕುಳಗೇರಿ ಕ್ರಾಸ್: ಪ್ರಸಿದ್ಧ ಕ್ಷೇತ್ರ ಚಿಮ್ಮನಕಟ್ಟಿ ಗ್ರಾಮದ ದೊಡ್ಡ ಲಾಲಸಾಬವಲಿ ದರ್ಗಾದಲ್ಲಿ ಮೂರು ದಿನಗಳ ಕಾಲ  ಹಿಂದು-ಮುಸ್ಲಿಂ ಭಾವೈಕ್ಯದ ಮೊಹರಂ ಆಚರಣೆ ಸಂಭ್ರಮ ಸಡಗರದಿಂದ ನಡೆಯಿತು.

ನೀರಿನಿಂದ ಪ್ರಜ್ವಲಿಸುವ ದೀಪ: ಗ್ರಾಮದ ಸಂಗಮೇಶ್ವರ ದೇವಸ್ಥಾನದ ಬಾವಿಯಲ್ಲಿನ ನೀರು ಬಿಂದಿಗೆಯಲ್ಲಿ ತಂದು ದರ್ಗಾದಲ್ಲಿನ ದೀಪಗಳಿಗೆ ನೀರು ಹಾಕಿ ದೀಪ ಬೆಳಗಿಸುತ್ತಾರೆ. ದೇಸಾಯಿಯವರ ಮನೆಯಿಂದ ಗಂಧ ತಂದು ದೇವರಿಗೆ ಅರ್ಪಣೆ ಮಾಡಿ ಪ್ರಾರಂಭವಾಗುವ ಈ ಹಬ್ಬದಲ್ಲಿ ಸಾಕಷ್ಟು ವಿಶೇಷ ಆಚರಣೆಗಳು ನಡೆಯುತ್ತವೆ.

ಅಗ್ನಿ ಹಾಯುವುದು: ಸುಮಾರು 10ಕ್ಕೂ ಹೆಚ್ಚು ಟ್ರ್ಯಾಕ್ಟರ್ ಕಟ್ಟಿಗೆ ಸಂಗ್ರಹಿಸಿ ಅಗ್ನಿ ಕುಂಡ ತಯಾರಿಸುವ ಭಕ್ತರು, ಇಡೀ ರಾತ್ರಿ ಕಟ್ಟಿಗೆ ಸುಟ್ಟು ಕೆಂಡ ಮಾಡುತ್ತಾರೆ. ಬೆಳಿಗ್ಗೆ ದರ್ಗಾಕ್ಕೆ ಆಗಮಿಸುವ ಲಾಲಸಾಬ ಅಜ್ಜ ಅಗ್ನಿ ಕುಂಡದಲ್ಲಿ ಎರೆಡು ಬಾರಿ ಹಾದು ಚಾಲನೆ ನೀಡುತ್ತಾರೆ. ನಂತರ ಡೋಲಿ ಹೊತ್ತವರು ಸೇರಿದಂತೆ ಬೇಡಿಕೊಂಡವರೆಲ್ಲ ಅಗ್ನಿಯಲ್ಲಿ ಹಾಯುತ್ತಾರೆ. ನಂತರ ಹೇಳಿಕೆ ಹೇಳುವ ಅಜ್ಜನವರು ಮುಂಬರುವ ರಾಜ್ಯ ಹಾಗೂ ದೇಶದ ರಾಜಕೀಯ ವಿಷಯಗಳನ್ನು ನುಡಿಯುವರು.

ಪ್ರತಿ ವರ್ಷ ಹಿಂದು-ಮುಸ್ಲಿಂ ಸೇರಿ ಭಾವೈಕ್ಯದಿಂದ ಗಂಧರಾತ್ರಿ, ಕತ್ತಲರಾತ್ರಿ, ದೇವರು ಹೊಳೆಗೆ ಹೋಗುವ ಕಾರ್ಯಕ್ರಮ ಸೇರಿದಂತೆ ಸುಮಾರು ಮೂರು ದಿನಗಳ ಕಾಲ ಮೊಹರಂ ಆಚರಣೆ ಮಾಡುತ್ತಾರೆ. ಚಿಮ್ಮನಕಟ್ಟಿ ಮೊಹರಂ ವಿಶಿಷ್ಟ ಆಚರಣೆಯೊಂದಿಗೆ ಈ ಭಾಗದಲ್ಲಿ ಪ್ರಸಿದ್ಧಿ ಪಡೆದ ಹಿಂದು ಮುಸ್ಲಿಂ ಹಬ್ಬವಾಗಿದೆ.

ಈ ಗ್ರಾಮದ ಮೊಹರಂ ಆಚರಣೆ ನೊಡಲು ರಾಜ್ಯ ಹಾಗೂ ಅಂತರಾಜ್ಯಗಳಿಂದ ಸಹಸ್ರಾರು ಸಂಖ್ಯೆಯಲ್ಲಿ ಭಕ್ತರು ಪ್ರತಿ ವರ್ಷ ಸೇರುತ್ತಾರೆ.

ಇದನ್ನೂ ಓದಿ: ರಾಜ್ಯಪಾಲರಿಗೆ ರಾಜೀನಾಮೆ ಸಲ್ಲಿಸಿದ ಬಿಹಾರ ಸಿಎಂ ನಿತೀಶ್; ಆರ್ ಜೆಡಿ, ಜೆಡಿಯು ಸರ್ಕಾರ ರಚನೆ

ಆದರೆ ಕಳೆದ ಎರೆಡು ವರ್ಷಗಳಿಂದ ಕೊರೊನಾ ಸೋಂಕು ಹರಡುವ ಭೀತಿಯಲ್ಲಿ ಸರ್ಕಾರದ ನಿಯಮ ಪಾಲನೆ ಮಾಡುವ ಉದ್ದೇಶದಿಂದ ಕಮಿಟಿಯವರು ಮೊಹರಂ ಆಚರಣೆ ರದ್ದು ಮಾಡಿದ್ದರು. ಸರ್ಕಾರದ ಆದೇಶದಂತೆ ಸರಳ ರೀತಿಯಲ್ಲಿ ಮೊಹರಂ ಆಚರಣೆ ಮಾಡಿದ ಭಕ್ತರು, ಈ ಬಾರಿ ಸಂಭ್ರಮದಿಂದ ಹಬ್ಬ ಆಚರಣೆ ಮಾಡಿದರು.

ಕಮಿಟಿಯ ಸಂಚಾಲಕರಾದ ಲಾಲಸಾಬ ಜಾಲಿಹಾಳ ಅಜ್ಜನವರು, ಮೈಬುಸಾಬ ಚಿಕ್ಕೊಪ್ಪ, ರಂಜಾನ್‌ಸಾಬ ನರಗುಂದ, ಸೈಪುದ್ದಿನ್ ನರಗುಂದ, ಡಿ ಎನ್ ಪಾಟೀಲ, ವಿಠಲಗೌಡ್ರ ಪಾಟೀಲ, ದ್ಯಾಮನಗೌಡ ಪಾಟೀಲ್, ಸಿದ್ದಪ್ಪ ಗಂಜೆಪ್ಪನವರ, ಖಾಜಾಅಮೀನ್ ಬಹದ್ದೂರಖಾನ್, ಲಾಲಸಾಬ ನರಗುಂದ, ತಾಸಿಮ್‌ಸಾಬ ಚಿಕ್ಕೊಪ್ಪ ಸೇರಿದಂತೆ ಗ್ರಾಮದ ಪ್ರಮುಖರು ಇದ್ದರು. ಗೋವಾ, ಪುಣೆ, ಮಹಾರಾಷ್ಟ ಸೇರಿದಂತೆ ಹೊರ ರಾಜ್ಯದಿಂದಲೂ ಭಕ್ತರು ಆಗಮಿಸಿದ್ದರು.

ಟಾಪ್ ನ್ಯೂಸ್

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

18-uv-fusion

Clay Pot: ಬಡವರ ಫ್ರಿಡ್ಜ್ ಮಣ್ಣಿನ ಮಡಕೆ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

17-uv-fusion

UV Fusion: ನಿನ್ನೊಳಗೆ ನೀ ಇರುವಾಗ…

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.