ಮುಂಡರಗಿ: ಸರ್ಕಾರಿ ಶಾಲಾ ಕೊಠಡಿಗಳಿಗೆ ಬೇಕು ಕಾಯಕಲ್ಪ!


Team Udayavani, May 31, 2023, 2:54 PM IST

ಮುಂಡರಗಿ: ಸರ್ಕಾರಿ ಶಾಲಾ ಕೊಠಡಿಗಳಿಗೆ ಬೇಕು ಕಾಯಕಲ್ಪ!

ಮುಂಡರಗಿ: ಪಟ್ಟಣದ ಹೃದಯ ಭಾಗದಲ್ಲಿರುವ ತಾಲೂಕು ಶಾಸಕರ ಸರಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಮೇಲ್ಛಾವಣಿ
ಹೆಂಚುಗಳು ಕಿತ್ತು ಹೋಗಿವೆ. ಶಾಸಕರ ಸರಕಾರಿ ಮಾದರಿ ಪ್ರಾಥಮಿಕ ಶಾಲೆ ಶಿಕ್ಷಣ ಇಲಾಖೆಯ ದಾಖಲೆ ಪ್ರಕಾರ 1861ರಲ್ಲಿ ಸ್ಥಾಪನೆಯಾಗಿದೆ. ಒಂದೂವರೇ ಶತಮಾನಕ್ಕಿಂತಲೂ ಹೆಚ್ಚು ಅವ ಧಿಯ ಈ ಶಾಲೆಗೆ ದುರಸ್ತಿ ಭಾಗ್ಯ ದೊರೆಯದಿರುವುದೇ ದುರಂತದ ಸಂಗತಿ. ಕಳೆದ ಒಂದು ವರ್ಷದಿಂದಲೇ ಈ ಕಿತ್ತುಹೋದ ಹೆಂಚುಗಳನ್ನು ಹಾಕಿಸಿ ದುರಸ್ತಿ ಮಾಡಿಸಲು ಶಿಕ್ಷಣ ಇಲಾಖೆಯಿಂದ ಅನುದಾನವೇ ಬಂದಿಲ್ಲ ಎನ್ನಲಾಗುತ್ತಿದೆ.

ಪಟ್ಟಣದ ಶಾಸಕರ ಸರಕಾರಿ ಮಾದರಿ ಶಾಲೆಯ ಮುಂಭಾಗದ ಹೆಂಚುಗಳು ಕಿತ್ತು ಹೋಗಿವೆ. ಕೆಲ ಕೊಠಡಿಗಳ ಹೆಂಚುಗಳು
ಒಡೆದು ಹೋಗಿರುವ ಕಾರಣ ಸೋರುತ್ತಿದೆ. ಮಳೆ ಬಂದರೆ ಕೊಠಡಿಗಳ ತುಂಬೆಲ್ಲಾ ನೀರು ಜಮಾವಣೆಯಾದರೆ ವಿದ್ಯಾರ್ಥಿಗಳು ತಂಪಾದ ನೆಲದ ಮೇಲೆಯೇ ಕುಳಿತುಕೊಳ್ಳುವಂತಹ ಸ್ಥಿತಿ ಇದೆ. ಶಾಸಕರ ಮಾದರಿ ಶಾಲೆಯ ಸ್ಥಿತಿಯೇ ಈ ರೀತಿಯಾದರೆ, ತಾಲೂಕಿನ ಉಳಿದ ಶಾಲೆಗಳ ದುಃಸ್ಥಿತಿ ಊಹಿಸಲಸಾಧ್ಯ ಎಂಬ ಮಾತುಗಳು ಕೇಳಿಬರುತ್ತಿದೆ. ಸೋರುವ ಕೊಠಡಿಗಳು,
ಶೌಚಾಲಯದ ಕೊರತೆ, ಕುಡಿಯುವ ನೀರು ಇಲ್ಲದಿರುವುದು. ಮಾತ್ರವಲ್ಲ ಶೌಚಾಲಯಗಳು ದುರ್ವಾಸನೆ ಬೀರುತ್ತಿವೆ. ಶೌಚಾಲಯಕ್ಕೆ ಹೋದರೆ ನೀರು ಇಲ್ಲದಂತಹ ಸ್ಥಿತಿ ಎಲ್ಲೆಡೆ ಸಾಮಾನ್ಯ ಸಂಗತಿಯಾಗಿದೆ.

ತಾಲೂಕಿನಲ್ಲಿ 23 ಸರಕಾರಿ ಪ್ರಾಥಮಿಕ ಶಾಲೆಗಳು, 76 ಹಿರಿಯ ಪ್ರಾಥಮಿಕ ಶಾಲೆಗಳು, 17 ಪ್ರೌಢಶಾಲೆಗಳು ಇವೆ. ಅದರಲ್ಲಿ ತಾಲೂಕಿನಲ್ಲಿ 1857ರಲ್ಲಿ ಮೊದಲು ಪ್ರಾರಂಭವಾದ ಕಲಕೇರಿಯ ಎಂಸಿಎಸ್‌ ಶಾಲೆಯಿಂದ ಹಿಡಿದು 21 ಶಾಲೆಗಳು ಶತಮಾನದ ಶಾಲೆಗಳು ಇವೆ.

ಇದರಲ್ಲಿ ಸರಕಾರಿ ಪ್ರಾಥಮಿಕ ಶಾಲೆಗಳಲ್ಲಿ ಶಿಕ್ಷಕರ 609 ಹುದ್ದೆಗಳು ಮಂಜೂರಾರಾಗಿದ್ದು, ಆ ಪೈಕಿ 192 ಶಿಕ್ಷಕರ ಹುದ್ದೆಗಳ ಕೊರತೆಯಿದೆ. 231 ಶಿಕ್ಷಕಿಯರು ಕಾರ್ಯನಿರ್ವಹಿಸುತ್ತಿದ್ದಾರೆ. ಈ ಎಲ್ಲಾ ಹುದ್ದೆಗಳನ್ನು ತುಂಬಿದರೆ ಮಕ್ಕಳ ಶಿಕ್ಷಣಕ್ಕೆ ಅನುಕೂಲ ಕಲ್ಪಿಸದಂತಾಗಲಿದೆ.

ತಾಲೂಕಿನಲ್ಲಿ 2023-24 ನೇ ಸಾಲಿನಲ್ಲಿ ಮಳೆಯಿಂದ 83 ಶಾಲಾ ಕೊಠಡಿಗಳು ಶಿಥಿಲಗೊಂಡಿದ್ದು, ಈ 83 ಕೊಠಡಿಗಳಲ್ಲಿ
ವಿದ್ಯಾರ್ಥಿಗಳಿಗೆ ಕುಳಿತುಕೊಳ್ಳಲು ಪರ್ಯಾಯ ವ್ಯವಸ್ಥೆಯನ್ನು ಶಿಕ್ಷಣ ಇಲಾಖೆ ಮಾಡಿದೆ. ಮಕ್ಕಳ ಶಿಕ್ಷಣಕ್ಕೆ ಯಾವುದೇ ತೊಂದರೆಯಾಗದಂತೆ ಬೇರೆ ಬೇರೆ ಕಡೆಗೆ ಕೊಠಡಿಗಳ ವ್ಯವಸ್ಥೆ ಮಾಡಲಾಗಿದೆ. ಆದರೆ, ಮಕ್ಕಳ ಶಿಕ್ಷಣಕ್ಕಾಗಿ ಶಾಶ್ವತ ಕೊಠಡಿಗಳ ವ್ಯವಸ್ಥೆಗೆ ಮಾಡಲು ಶಿಕ್ಷಣ ಇಲಾಖೆ ಮುಂದಾಗಬೇಕಿದೆ. ಅಲ್ಲದೇ, ಶಾಲೆಗಳಲ್ಲಿ ಮೂಲಭೂತ ಸೌಲಭ್ಯಗಳಾದ
ಕುಡಿಯುವ ನೀರು, ಶೌಚಾಲಯದ ವ್ಯವಸ್ಥೆ, ವಿದ್ಯುತ್‌ ವ್ಯವಸ್ಥೆಯ ಕೊರತೆ ಎದ್ದು ಕಾಣುತ್ತದೆ.

ತಾಲೂಕಿನ ಶಾಲೆಗಳಲ್ಲಿ ಕುಡಿಯುವ ನೀರು ಮತ್ತು ಶೌಚಾಲಯದ ವ್ಯವಸ್ಥೆ ಇದ್ದರೂ ಕೂಡಾ ನೀರಿನ ಕೊರತೆಯಿಂದ
ಮಕ್ಕಳು, ಶಿಕ್ಷಕ-ಶಿಕ್ಷಕಿಯರಿಗೆ ಶೌಚಾಲಯದ ಅನಾನುಕೂಲವಾಗುತ್ತಿದೆ. ಶಾಲಾ ಆವರಣದಲ್ಲಿ ಸರಿಯಾದ ಶೌಚಾಲಯ ವ್ಯವಸ್ಥೆ ಮಾಡಲು ಶಿಕ್ಷಣ ಇಲಾಖೆ ಮುಂದಾಗಬೇಕಿದೆ.

ಏಕೆಂದರೆ, ಬಹುತೇಕ ಶಾಲೆಗಳಲ್ಲಿ ಶೌಚಾಲಯ ವ್ಯವಸ್ಥೆ ಹದಗೆಟ್ಟಿದ್ದು, ಮಹಿಳಾ ಶಿಕ್ಷಕಿಯರು ಇರುವ ಶಾಲೆಗಳಲ್ಲಿ ಶೌಚಾಲಯ
ವ್ಯವಸ್ಥೆಯ ತೊಂದರೆಯಿಂದ ನರಕಯಾತನೆ ಅನುಭವಿಸುವಂತಾಗುತ್ತಿರುವುದು ತುಂಬಾ ಖೇದಕರ ಸಂಗತಿಯಾಗಿದೆ. ಶೌಚಾಲಯಕ್ಕೆ ಅಗತ್ಯ ನೀರು ಮತ್ತು ಮಕ್ಕಳಿಗೆ ಕುಡಿಯುವ ನೀರಿನ ವ್ಯವಸ್ಥೆ ಮಾಡಲು ಶಿಕ್ಷಣ ಇಲಾಖೆ ಮುಂದಾಗಬೇಕಿದೆ.

ತಾಲೂಕಿನ ಸರಕಾರಿ ಶಾಲೆಗಳ ಕೊಠಡಿಗಳ ದುರಸ್ತಿ ಕಾರ್ಯಕ್ಕಾಗಿ ನಾಲ್ಕೈದು ಯೋಜನೆಗಳಲ್ಲಿ ಅನುದಾನಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಕೊಠಡಿಗಳ ದುರಸ್ತಿ ಕಾರ್ಯಕ್ಕಾಗಿ ಅನುದಾನ ಬಂದ ತಕ್ಷಣವೇ ದುರಸ್ತಿ ಕಾರ್ಯ ನಡೆಯಲಿದೆ. ಪಟ್ಟಣದ ಶಾಸಕರ ಸರಕಾರಿ ಮಾದರಿ ಪ್ರಾಥಮಿಕ ಶಾಲೆ ದುರಸ್ತಿ ಮಾಡಲು ಪ್ರಸ್ತಾವನೆ ಸಲ್ಲಿಸಲಾಗಿದೆ.
∙ ಎಂ.ಎಫ್‌.ಬಾರ್ಕಿ, ಬಿಇಒ

ಹು.ಬಾ.ವಡ್ಡಟ್ಟಿ

ಟಾಪ್ ನ್ಯೂಸ್

Tiger Nageswara Rao: ಕುಖ್ಯಾತ ಕಳ್ಳನ ರಿಯಲ್‌ ಲೈಫ್‌ ಕಹಾನಿಯಲ್ಲಿ ಮಿಂಚಿದ ಮಾಸ್‌ ಮಹಾರಾಜ

Tiger Nageswara Rao: ಕುಖ್ಯಾತ ಕಳ್ಳನ ರಿಯಲ್‌ ಲೈಫ್‌ ಕಹಾನಿಯಲ್ಲಿ ಮಿಂಚಿದ ಮಾಸ್‌ ಮಹಾರಾಜ

JK Cement ಕಂಪನಿಯ ಬ್ಯುಸಿನೆಸ್‌ ಮುಖ್ಯಸ್ಥರಾಗಿ ಅನುಜ್ ಖಾಂಡೆಲ್‌ ವಾಲ್‌ ನೇಮಕ

JK Cement ಕಂಪನಿಯ ಬ್ಯುಸಿನೆಸ್‌ ಮುಖ್ಯಸ್ಥರಾಗಿ ಅನುಜ್ ಖಾಂಡೆಲ್‌ ವಾಲ್‌ ನೇಮಕ

ICC World Cup 2023; ವರ್ಣರಂಜಿತ ಉದ್ಘಾಟನಾ ಸಮಾರಂಭ ರದ್ದು? ಯಾಕೆ ಈ ನಿರ್ಧಾರ

ICC World Cup 2023; ವರ್ಣರಂಜಿತ ಉದ್ಘಾಟನಾ ಸಮಾರಂಭ ರದ್ದು? ಯಾಕೆ ಈ ನಿರ್ಧಾರ

Earthquake: ರಾಷ್ಟ್ರ ರಾಜಧಾನಿಯಲ್ಲಿ ಭೂಕಂಪನ: ರಿಕ್ಟರ್ ಮಾಪನದಲ್ಲಿ 6.2 ತೀವ್ರತೆ ದಾಖಲು

Earthquake: ನೇಪಾಳದಲ್ಲಿ ಪ್ರಬಲ ಭೂಕಂಪನ: ರಾಷ್ಟ್ರ ರಾಜಧಾನಿಯಲ್ಲೂ ಕಂಪಿಸಿದ ಭೂಮಿ

Eid Procession: ಈದ್ ಮೆರವಣಿಗೆ ವೇಳೆ ಘೋಷಣೆ ಕೂಗಿದವರ ವಿರುದ್ಧ ಸೂಕ್ತ ಕ್ರಮಕ್ಕೆ ಮನವಿ

Eid Procession: ಈದ್ ಮೆರವಣಿಗೆ ವೇಳೆ ಘೋಷಣೆ ಕೂಗಿದವರ ವಿರುದ್ಧ ಸೂಕ್ತ ಕ್ರಮಕ್ಕೆ ಆಗ್ರಹ

10–hunsur

Hunsur: ಅಕ್ರಮ ವಿದ್ಯುತ್ ತಂತಿಗೆ ಸಿಲುಕಿ ಆನೆ ಬಲಿ

ವಾರದೊಳಗೆ ರಾಜ್ಯಕ್ಕೆ ಕೇಂದ್ರ ಬರ ಅಧ್ಯಯನ ತಂಡ: ಸಚಿವ ಚಲುವರಾಯಸ್ವಾಮಿ

Kalaburagi; ವಾರದೊಳಗೆ ರಾಜ್ಯಕ್ಕೆ ಕೇಂದ್ರ ಬರ ಅಧ್ಯಯನ ತಂಡ: ಸಚಿವ ಚಲುವರಾಯಸ್ವಾಮಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sasdasd

Actor; ‘ದೇಸಾಯಿ’ ಚಿತ್ರಕ್ಕಾಗಿ ಬಣ್ಣ ಹಚ್ಚಿದ ಅಥಣಿ ಶಾಸಕ ಲಕ್ಷ್ಮಣ ಸವದಿ

5-banahatti

Special Story: ಬನಹಟ್ಟಿ ಕಾಡಸಿದ್ಧೇಶ್ವರ ರಥಕ್ಕೆ 154 ವರ್ಷದ ಇತಿಹಾಸ …!

1-sadasd-a

Mahalingpur ಮಹಾಲಿಂಗೇಶ್ವರ ಅದ್ದೂರಿ ರಥೋತ್ಸವ: ಲಕ್ಷಾಂತರ ಭಕ್ತರು ಭಾಗಿ

Bagalkote; ಸ್ವಚ್ಛ ವಾಹಿನಿಗೆ ಬಂತು ಗಾಂಧಿ ಪುರಸ್ಕಾರ

Bagalkote; ಸ್ವಚ್ಛ ವಾಹಿನಿಗೆ ಬಂತು ಗಾಂಧಿ ಪುರಸ್ಕಾರ

Rabkavi Banhatti ಕೆರೆ ರಸ್ತೆಯಲ್ಲಿ 20 ಕೆಜಿ ಗಾಂಜಾ ಗಿಡ ವಶ

Rabkavi Banhatti ಕೆರೆ ರಸ್ತೆಯಲ್ಲಿ 20 ಕೆಜಿ ಗಾಂಜಾ ಗಿಡ ವಶ

MUST WATCH

udayavani youtube

ಉಡುಪಿಯ ಕೃಷ್ಣಮಠದ ರಾಜಾಂಗಣದಲ್ಲೊಂದು ಹೋಟೆಲ್ ಬಿಸಿ ಬಿಸಿ ಇಡ್ಲಿ ಚಟ್ನಿಗೆ ಬಾರಿ ಫೇಮಸ್

udayavani youtube

ಸಾಗರದಾಳದಲ್ಲಿ ಕಣ್ಮರೆಯಾಗಿದ್ದ 8 ನೇ ಖಂಡ ಪತ್ತೆ

udayavani youtube

ಕುದುಕುಳ್ಳಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ

udayavani youtube

ಕ್ಷಮೆ ಕೇಳಿದ ಶಿವಣ್ಣ

udayavani youtube

ಅಕ್ವಾಟಿಕ್ಸ್ ಗ್ಯಾಲರಿ ನೋಡಿ ಕಣ್ತುಂಬಿಕೊಂಡ ಪ್ರಧಾನಿ ಮೋದಿ

ಹೊಸ ಸೇರ್ಪಡೆ

Sandalwood; ‘ಅಥರ್ವ’ನಾಗಿ ಕನ್ನಡ ಚಿತ್ರರಂಗಕ್ಕೆ ಕಾರ್ತಿಕ್ ರಾಜು ಎಂಟ್ರಿ

Sandalwood; ‘ಅಥರ್ವ’ನಾಗಿ ಕನ್ನಡ ಚಿತ್ರರಂಗಕ್ಕೆ ಕಾರ್ತಿಕ್ ರಾಜು ಎಂಟ್ರಿ

Tiger Nageswara Rao: ಕುಖ್ಯಾತ ಕಳ್ಳನ ರಿಯಲ್‌ ಲೈಫ್‌ ಕಹಾನಿಯಲ್ಲಿ ಮಿಂಚಿದ ಮಾಸ್‌ ಮಹಾರಾಜ

Tiger Nageswara Rao: ಕುಖ್ಯಾತ ಕಳ್ಳನ ರಿಯಲ್‌ ಲೈಫ್‌ ಕಹಾನಿಯಲ್ಲಿ ಮಿಂಚಿದ ಮಾಸ್‌ ಮಹಾರಾಜ

JK Cement ಕಂಪನಿಯ ಬ್ಯುಸಿನೆಸ್‌ ಮುಖ್ಯಸ್ಥರಾಗಿ ಅನುಜ್ ಖಾಂಡೆಲ್‌ ವಾಲ್‌ ನೇಮಕ

JK Cement ಕಂಪನಿಯ ಬ್ಯುಸಿನೆಸ್‌ ಮುಖ್ಯಸ್ಥರಾಗಿ ಅನುಜ್ ಖಾಂಡೆಲ್‌ ವಾಲ್‌ ನೇಮಕ

ICC World Cup 2023; ವರ್ಣರಂಜಿತ ಉದ್ಘಾಟನಾ ಸಮಾರಂಭ ರದ್ದು? ಯಾಕೆ ಈ ನಿರ್ಧಾರ

ICC World Cup 2023; ವರ್ಣರಂಜಿತ ಉದ್ಘಾಟನಾ ಸಮಾರಂಭ ರದ್ದು? ಯಾಕೆ ಈ ನಿರ್ಧಾರ

Earthquake: ರಾಷ್ಟ್ರ ರಾಜಧಾನಿಯಲ್ಲಿ ಭೂಕಂಪನ: ರಿಕ್ಟರ್ ಮಾಪನದಲ್ಲಿ 6.2 ತೀವ್ರತೆ ದಾಖಲು

Earthquake: ನೇಪಾಳದಲ್ಲಿ ಪ್ರಬಲ ಭೂಕಂಪನ: ರಾಷ್ಟ್ರ ರಾಜಧಾನಿಯಲ್ಲೂ ಕಂಪಿಸಿದ ಭೂಮಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.