ಮೂಲಭೂತ ಸೌಲಭ್ಯಗಳಿಗೆ ಆಗ್ರಹಿಸಿ ಪುರಸಭೆಗೆ ಮುತ್ತಿಗೆ


Team Udayavani, May 20, 2019, 11:49 AM IST

bag-3

ತೇರದಾಳ: ಅನೇಕ ವಾರ್ಡ್‌ಗಳಲ್ಲಿ ಕೊಳವೆಬಾವಿ ಕೊರೆಸುವುದು, ಬೀದಿದೀಪ ಅಳವಡಿಕೆ, ಪಟ್ಟಣ ಶುಚಿತ್ವಕ್ಕೆ ಆದ್ಯತೆ ನೀಡುವಂತೆ ಆಗ್ರಹಿಸಿ ತೇರದಾಳ ತಾಲೂಕು ಹೋರಾಟ ಸಮಿತಿ, ಕಾಂಗ್ರೆಸ್‌ ಮತ್ತು ಜೆಡಿಎಸ್‌ ಪಕ್ಷಗಳ ಮುಖಂಡರು ಪುರಸಭೆಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.

ಪುರಸಭೆ ಮಾಜಿ ಅಧ್ಯಕ್ಷ, ಹೋರಾಟ ಸಮಿತಿ ಕಾರ್ಯದರ್ಶಿ ಬಸವರಾಜ ಬಾಳಿಕಾಯಿ ಮಾತನಾಡಿ, ಮೂಲಭೂತ ಸೌಲಭ್ಯಗಳ ಪೂರೈಕೆಗೆ ಪುರಸಭೆ ಕ್ರಮ ಕೈಗೊಳ್ಳಬೇಕೆಂದು ಹೋರಾಟ ಸಮಿತಿ ಪರವಾಗಿ ಲಿಖೀತವಾಗಿ ಮನವರಿಕೆ ಮಾಡಲಾಗಿತ್ತು. ಆದರೆ, ಪುರಸಭೆ ಗಮನ ಹರಿಸಿಲ್ಲ. ಪ್ರಾಥಮಿಕ ಆರೋಗ್ಯ ಕೇಂದ್ರ ಸೇರಿದಂತೆ ದೇವರಾಜ ನಗರದ ಬಹುತೇಕ ಭಾಗಗಳಲ್ಲಿ ನೀರಿನ ಸಮಸ್ಯೆ ತೀವ್ರತರವಾಗಿದೆ. ಕೊಳವೆ ಬಾವಿ ಕೊರೆಯಿಸಿ ನೀರಿನ ಸಮಸ್ಯೆ ದೂರ ಮಾಡಬೇಕು. ಗಾಂಧಿ ಕ್ರೀಡಾಂಗಣ, ಸರಕಾರಿ ಆಸ್ಪತ್ರೆಯ ಹಳೆ ಕಟ್ಟಡದಲ್ಲಿ ಬಾಟಲಿ ಒಡೆಯುವುದು ಸೇರಿದಂತೆ ಅನೈತಿಕ ಚಟುವಟಿಕೆ ನಡೆಯುತ್ತಿವೆ. ಪೊಲೀಸ್‌ ಇಲಾಖೆಯ ಸಹಯೋಗದೊಂದಿಗೆ ಕ್ರಮ ಜರುಗಿಸಬೇಕಾಗಿದೆ. ಬೀದಿ ದೀಪಗಳಿಲ್ಲದೆ ಅನೇಕ ಕಡೆಗಳಲ್ಲಿ ತೊಂದರೆಯಾಗುತ್ತಿದೆ. ನೀರು, ಬೀದಿ ದೀಪ, ಚರಂಡಿ ಸೇರಿದಂತೆ ಶುಚಿತ್ವಕ್ಕೆ ಮಹತ್ವ ನೀಡಬೇಕೆಂದು ಆಗ್ರಹಿಸಿದರು.

ಬಳಿಕ ಮುಖ್ಯಾಧಿಕಾರಿ ಮಹಾವೀರ ಬೋರನ್ನವರ ಮಾತನಾಡಿ, ಅನೇಕ ಕೊಳವೆ ಬಾವಿ ದುರಸ್ತಿ ಮಾಡಿ, ಅಲ್ಲಲ್ಲಿ ನೀರು ಪೂರೈಕೆ ಮಾಡಲಾಗುತ್ತಿದೆ. ಜಿಲ್ಲಾಧಿಕಾರಿಗಳ ಅನುಮತಿ ಪಡೆದು ಹೊಸ ಕೊಳವೆ ಬಾವಿ ಕೊರೆಸುವ ಕುರಿತು ಕ್ರಮ ಕೈಗೊಳ್ಳಲಾಗುವುದು. ಬೀದಿದೀಪಗಳ ಕುರಿತು ಕೂಡಲೆ ವ್ಯವಸ್ಥೆ ಮಾಡಲಾಗುವುದು. ಕಡಿಮೆ ಸಿಬ್ಬಂದಿ ಇದ್ದರೂ ಸಹ ನಗರದ ಸ್ವಚ್ಛತೆಗೆ ಆದ್ಯತೆ ಕೊಡಲಾಗುತ್ತಿದೆ ಎಂದು ಹೇಳಿದರು.

ಹೋರಾಟ ಸಮಿತಿ ಅಧ್ಯಕ್ಷ ಭುಜಬಲಿ ಕೆಂಗಾಲಿ, ಪುರಸಭೆ ಸದಸ್ಯರಾದ ಸುರೇಶ ಕಬಾಡಗಿ, ಫಜಲ್ ಅತಾರಾವುತ್‌, ರುಸ್ತುಂ ನಿಪ್ಪಾಣಿ, ಮುಖಂಡರಾದ ಪ್ರಭು ಗಸ್ತಿ, ರಾಜೇಸಾಬ ನಗಾರ್ಜಿ, ಕಲ್ಲಪ್ಪ ಕಬಾಡಗಿ, ಮುರಿಗೆಪ್ಪ ಹನಗಂಡಿ, ಸುಲೇಮಾನ್‌ ಮುಕ್ಕೇರಿ, ಪ್ರಭು ಹೂಗಾರ, ಸಿದ್ಧಪ್ಪ ಉಳಗೊಂಡ, ಚಿಕ್ಕಪ್ಪ ಲೋಹಾರ್‌, ಇಕ್ಬಾಲ್ ಥರಥರಿ ಇದ್ದರು.

ಟಾಪ್ ನ್ಯೂಸ್

rape

Sullia;ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ: ರಾಜಸ್ಥಾನಿ ಮಹಿಳೆ !

1-kkr

Kolkata Raiders ಕೋಚ್‌ ಬಗ್ಗೆ ಆಟಗಾರ ಡೇವಿಡ್‌ ವೀಸ್‌ ಆರೋಪ

1ewewwewqqewqeqe

India ಆರ್ಥಿಕ ಬೆಳವಣಿಗೆಗೆ ಅನವಶ್ಯಕ ಪ್ರಚಾರ: ರಾಜನ್‌ ಹೇಳಿಕೆಗೆ ಆಕ್ರೋಶ

IMD

North Karnataka; ಹಲವು ಜಿಲ್ಲೆಗಳಲ್ಲಿ ಎರಡು ದಿನ ಉಷ್ಣ ಅಲೆ ಸಾಧ್ಯತೆ

Ashwin Vaishnav

Bullet train ಮೊದಲ ಬಾರಿಗೆ ಬ್ಯಾಲೆಸ್ಟ್‌ಲೆಸ್‌ ಟ್ರ್ಯಾಕ್‌: ರೈಲ್ವೇ ಸಚಿವ ವೈಷ್ಣವ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಖಾನಾಪುರ ಬಳಿ ಭೀಕರ ಅಪಘಾತ: ವಕೀಲ ದೇಶಪಾಂಡೆ ಸಾವು

ಖಾನಾಪುರ ಬಳಿ ಭೀಕರ ಅಪಘಾತ: ವಕೀಲ ಕೆ.ಎಸ್‌. ದೇಶಪಾಂಡೆ ಸಾವು

ಶ್ರೀಶೈಲ ಪಾದಯಾತ್ರೆಯಲ್ಲಿ ಮತದಾನ ಜಾಗೃತಿ: ಮಲ್ಲಯ್ಯನ ಧ್ವಜ ಅನಾವರಣ

ಶ್ರೀಶೈಲ ಪಾದಯಾತ್ರೆಯಲ್ಲಿ ಮತದಾನ ಜಾಗೃತಿ: ಮಲ್ಲಯ್ಯನ ಧ್ವಜ ಅನಾವರಣ

4-bgl

Theft: ಅಮೀನಗಡದ ದೇವಸ್ಥಾನದಲ್ಲಿ ಕಳ್ಳತನ

ಬಾಗಲಕೋಟೆ: ಐತಿಹಾಸಿಕ ಹೋಳಿ ಬಣ್ಣದಾಟಕ್ಕೆ ಚಾಲನೆ

ಬಾಗಲಕೋಟೆ: ಐತಿಹಾಸಿಕ ಹೋಳಿ ಬಣ್ಣದಾಟಕ್ಕೆ ಚಾಲನೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

32

Politics: ಟಿಕೆಟ್‌ ಹಂಚಿಕೆ ಮರುಪರಿಶೀಲಿಸಿ ಎಂದ ವೀಣಾ ಬೆಂಬಲಿಗರಿಗೆ ಸಿಎಂ ತಿರುಗೇಟು

rape

Sullia;ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ: ರಾಜಸ್ಥಾನಿ ಮಹಿಳೆ !

1-kkr

Kolkata Raiders ಕೋಚ್‌ ಬಗ್ಗೆ ಆಟಗಾರ ಡೇವಿಡ್‌ ವೀಸ್‌ ಆರೋಪ

1ewewwewqqewqeqe

India ಆರ್ಥಿಕ ಬೆಳವಣಿಗೆಗೆ ಅನವಶ್ಯಕ ಪ್ರಚಾರ: ರಾಜನ್‌ ಹೇಳಿಕೆಗೆ ಆಕ್ರೋಶ

IMD

North Karnataka; ಹಲವು ಜಿಲ್ಲೆಗಳಲ್ಲಿ ಎರಡು ದಿನ ಉಷ್ಣ ಅಲೆ ಸಾಧ್ಯತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.