18ರಂದು ಪ್ರಚಾರಕ್ಕೆ ಬರ್ತಾರೆ ಮೋದಿ


Team Udayavani, Apr 11, 2019, 2:54 PM IST

bag-3
ಬಾಗಲಕೋಟೆ: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ, ವಿಜಯಪುರ ಹಾಗೂ ಬಾಗಲಕೋಟೆ ಕ್ಷೇತ್ರ ವ್ಯಾಪ್ತಿಯ ಸಾರ್ವಜನಿಕ ಸಭೆಗಾಗಿ ಏ. 18 ರಂದು ಬಾಗಲಕೋಟೆಗೆ ಆಗಮಿಸಲಿದ್ದಾರೆ ಎಂದು ಶಾಸಕ, ಬಾಗಲಕೋಟೆ ಲೋಕಸಭೆ ಕ್ಷೇತ್ರದ ಚುನಾವಣೆ ಸಂಚಾಲಕ ಡಾ| ವೀರಣ್ಣ ಚರಂತಿಮಠ ತಿಳಿಸಿದರು.
ನಗರದ ರೋಟರಿ ಸರ್ಕಲ್‌ ಬಳಿ ಇರುವ ರೈತ ದೊಡ್ಡಮನಿ ಅವರ 20 ಎಕರೆ ಹೊಲದಲ್ಲಿ ಮೋದಿ ಕಾರ್ಯಕ್ರಮಕ್ಕಾಗಿ ವೇದಿಕೆ, 3 ಹೆಲಿಪ್ಯಾಡ್‌ ಹಾಗೂ ಸುಮಾರು 15 ಎಕರೆ ಪ್ರದೇಶದಲ್ಲಿ ಪೆಂಡಾಲ್‌ (ಸಾರ್ವಜನಿಕರು ಕುಳಿತುಕೊಳ್ಳಲು) ಹಾಕಲಾಗುತ್ತಿದೆ ಎಂದರು.
ಪ್ರಧಾನಿ ಮೋದಿ ಅವರು ಏ. 18ರಂದು ಮಧ್ಯಾಹ್ನ 1ಕ್ಕೆ ಬಾಗಲಕೋಟೆಗೆ ಬರಲಿದ್ದಾರೆ. ಅಂದು ಒಟ್ಟು ಮೂರು ಕಾರ್ಯಕ್ರಮದಲ್ಲಿ ಅವರು ಭಾಗವಹಿಸಲಿದ್ದು, ಬೆಳಗ್ಗೆ ಮಹಾರಾಷ್ಟ್ರದಲ್ಲಿ ಕಾರ್ಯಕ್ರಮ ಮುಗಿಸಿಕೊಂಡು, ಬಾಗಲಕೋಟೆಗೆ ಮಧ್ಯಾಹ್ನ ಬರಲಿದ್ದಾರೆ. ಇಲ್ಲಿನ ಕಾರ್ಯಕ್ರಮದ ಬಳಿಕ ಚಿಕ್ಕೋಡಿಗೆ ತೆರಳುವರು ಎಂದು ತಿಳಿಸಿದರು.
ಒಟ್ಟು 20 ಎಕರೆ ಭೂಮಿಯಲ್ಲಿ ಜಿಲ್ಲಾ ಪೊಲೀಸ್‌ ಇಲಾಖೆ ನಿರ್ದೇಶನದಂತೆ ಪ್ರತ್ಯೇಕ ವೇದಿಕೆ ನಿರ್ಮಿಸಲಾಗುತ್ತಿದೆ. ಮೂರು ಪ್ರತ್ಯೇಕ ಹೆಲಿಪ್ಯಾಡ್‌ ಕೂಡ ಮಾಡಲಾಗುತ್ತಿದೆ. ಬಿಸಿಲು ಹೆಚ್ಚಿರುವುದರಿಂದ ಸಾರ್ವಜನಿಕರು, ಕಾರ್ಯಕರ್ತರು ಕುಳಿತುಕೊಳ್ಳಲು ಪೆಂಡಾಲ್‌ ವ್ಯವಸ್ಥೆ ಮಾಡಲಾಗುತ್ತಿದೆ. ಇದಕ್ಕಾಗಿ ಹುಬ್ಬಳ್ಳಿಯ ಶ್ರೀನಿವಾಸ ಪೆಂಡಾಲ್‌ದವರಿಗೆ ವಹಿಸಲಾಗಿದೆ ಎಂದರು.
ವಿಜಯಪುರ ಲೋಕಸಭೆ ಕ್ಷೇತ್ರ ವ್ಯಾಪ್ತಿಯ 8 ಹಾಗೂ ಬಾಗಲಕೋಟೆ ಕ್ಷೇತ್ರ ವ್ಯಾಪ್ತಿಯ 8 (ನರಗುಂದ ಕ್ಷೇತ್ರ ಸೇರಿ) ವಿಧಾನಸಭೆ ಮತಕ್ಷೇತ್ರ ವ್ಯಾಪ್ತಿಯ ಒಟ್ಟು 2 ಲಕ್ಷ ಕಾರ್ಯಕರ್ತರು, ಸಾರ್ವಜನಿಕರು ಭಾಗವಹಿಸುವ ನಿರೀಕ್ಷೆ ಇದೆ ಎಂದು ತಿಳಿಸಿದರು.
ಮಾಜಿ ಶಾಸಕ ನಾರಾಯಣಸಾ ಬಾಂಡಗೆ, ಬಸವೇಶ್ವರ ಸಹಕಾರಿ ಬ್ಯಾಂಕ್‌ ಅಧ್ಯಕ್ಷ ಪ್ರಕಾಶ ತಪಶೆಟ್ಟಿ, ಬಿಜೆಪಿ ನಗರ ಘಟಕದ ಅಧ್ಯಕ್ಷ ರಾಜು ನಾಯ್ಕರ, ಯುವ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಬಸವರಾಜ ಯಂಕಂಚಿ, ಮುಖಂಡರಾದ ಅಶೋಕ ಲಿಂಬಾವಳಿ, ಅಶೋಕ ಲಾಗಲೋಟಿ, ರಾಜು ರೇವಣಕರ, ಕೇಶವ ಭಜಂತ್ರಿ, ಜಿ.ಎನ್‌. ಪಾಟೀಲ, ಪ್ರಭುಸ್ವಾಮಿ ಸರಗಣಾಚಾರಿ, ಸವಿತಾ ಲೆಂಕೆನ್ನವರ, ಅನಿತಾ ಸರೋದೆ, ರೇವತಿ ಅಳಗವಾಡಿ ಮುಂತಾದವರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

ತಾಕತ್ತಿದ್ದರೆ ಯತ್ನಾಳ್‌ ನನ್ನ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಲಿ: ಪಾಟೀಲ್‌

ತಾಕತ್ತಿದ್ದರೆ ಯತ್ನಾಳ್‌ ನನ್ನ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಲಿ: ಪಾಟೀಲ್‌

ಯತ್ನಾಳ್ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿ…: ಶಿವಾನಂದ ಪಾಟೀಲ್ ಸವಾಲು

Bagalkote; ಯತ್ನಾಳ್ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿ…: ಶಿವಾನಂದ ಪಾಟೀಲ್ ಸವಾಲು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Lok Sabha election: ಗುರುವಾರ 21.48 ಕೋ.ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ

Lok Sabha election: ಗುರುವಾರ 21.48 ಕೋ.ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ

18

Bombay High Court: ಆರತಕ್ಷತೆ ಮದುವೆಯ ಭಾಗ ಎಂದು ಪರಿಗಣಿಸಲಾಗದು: ಬಾಂಬೆ ಹೈಕೋರ್ಟ್‌

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.