ನವರಾತ್ರಿ ಸಡಗರಕ್ಕೆ ಸಕಲ ಸಜ್ಜು; 9 ದಿನಗಳ ಕಾಲ ದೇವಿ ಆರಾಧನೆ

ದೇವಿ ಮೂರ್ತಿ ಪ್ರತಿಷ್ಠಾಪನೆ; ಬೊಂಬೆಗಳ ಪ್ರದರ್ಶನ

Team Udayavani, Sep 25, 2022, 12:02 PM IST

7

ರಬಕವಿ-ಬನಹಟ್ಟಿ: ಸೆ.26ರಿಂದ ಆರಂಭವಾಗುವ ನವರಾತ್ರಿ ಉತ್ಸವವನ್ನು ಈ ಬಾರಿ ಪ್ರತಿಯೊಂದು ಪಟ್ಟಣ ಮತ್ತು ಗ್ರಾಮದ ದೇವಸ್ಥಾನಗಳಲ್ಲಿ ಸಂಭ್ರಮದಿಂದ ಆಚರಿಸಲಾಗುತ್ತಿದೆ. 26ರಂದು ಅಂದು ಬೆಳಿಗ್ಗೆ ನಗರದ ಪ್ರಮುಖ ಬೀದಿಗಳಲ್ಲಿ ದುರ್ಗೆಯ ಮೂರ್ತಿ ಮೆರವಣಿಗೆ ನಡೆಯಲಿದ್ದು, ಮಹಿಳೆಯರು, ಮಕ್ಕಳು ಪಾಲ್ಗೊಳ್ಳುತ್ತಾರೆ.

ನಗರದ ಪ್ರಮುಖ ಬೀದಿಗಳಲ್ಲಿ ಮೂರ್ತಿ ಪ್ರತಿಷ್ಠಾಪಿಸಿ 9 ದಿನಗಳ ಕಾಲ ಪೂಜೆ ಮಾಡಿ ದೇವಿಯನ್ನು ಆರಾಧಿಸಲಾಗುತ್ತದೆ. 9 ದಿನಗಳ ಕಾಲ ದೇವತೆಯ ವಿವಿಧ ರೂಪಗಳ ಹೆಸರಿನಲ್ಲಿ ದೇವಿಯನ್ನು ಆರಾಧಿಸಿ ಪೂಜಿಸುವ ಕಾರ್ಯಕ್ರಮ ನಡೆಸಲಾಗುತ್ತದೆ.

ಅಲ್ಲದೇ ಮೈಸೂರಿನಲ್ಲಿರುವಂತೆ ಇಲ್ಲಿಯೂ ಕೂಡಾ ಕೆಲವು ಮನೆಗಳಲ್ಲಿ ಬೊಂಬೆ ಪ್ರದರ್ಶನ ನಡೆಯುತ್ತದೆ. ಅಲ್ಲಿ ಸುಮಾರು 100ಕ್ಕೂ ಹೆಚ್ಚು ವಿವಿಧ ಕಲೆಗಳನ್ನು ಬಿಂಬಿಸುವ ಬೊಂಬೆಗಳ ಪ್ರದರ್ಶನ ಇರುತ್ತದೆ. ಜನರು ಅವರ ಮನೆಗಳಿಗೆ ತೆರಳಿ ಸಂಭ್ರಮಿಸುತ್ತಾರೆ. ನವರಾತ್ರಿಯಲ್ಲಿ ಆಯುಧ ಪೂಜೆಗೆ ವಿಶಿಷ್ಟ ಸ್ಥಾನವಿದೆ. ಆಯುಧ ಪೂಜೆ ನಡೆಸಿ ಸಂಜೆ ನಗರದ ಹಾಗೂ ಸಮಾಜದ ಹಿರಿಯರು ಸೇರಿಕೊಂಡು ಹೊಸ ಧರಿಸಿ ನಿಗದಿತ ಸ್ಥಳದಲ್ಲಿ ಬನ್ನಿ ಬಂಗಾರ ಮುಡಿಯುವುದರ ಮೂಲಕ ದಸರಾ ಹಬ್ಬ ಸಂಭ್ರಮದಿಂದ ಆಚರಿಸುತ್ತಾರೆ. ಅಲ್ಲಿ ಪರಸ್ಪರ ಬನ್ನಿ-ಬಂಗಾರ ಕೊಟ್ಟು ಶುಭಾಶಯ ವಿನಿಮಯ ಮಾಡಿಕೊಂಡು ಕಿರಿಯರು ಹಿರಿಯರ ಆಶೀರ್ವಾದ ಪಡೆಯುವ ಸಂಪ್ರದಾಯ ಇಲ್ಲಿಯ ಪಟ್ಟಣ ಮತ್ತು ಗ್ರಾಮಗಳಲ್ಲಿದೆ.

ನಗರದಲ್ಲಿ ಪ್ರತಿಷ್ಟಾಪಿಸಿರುವ ದುರ್ಗಾದೇವಿ ಮೂರ್ತಿ ಎದುರು ಪ್ರತಿದಿನ ಸಂಜೆ ಪೂಜೆ,ನಂತರ ಎಲ್ಲ ಸ್ತ್ರೀ-ಪುರುಷರು, ಮಕ್ಕಳು ಕೋಲಾಟ ಆಡುವ ಸಂಪ್ರದಾಯ ಇದೆ. ನವರಾತ್ರಿ ನಿಮಿತ್ತ ವಿವಿಧ ಮಠಗಳಲ್ಲಿ ಪ್ರವಚನ ಕಾರ್ಯಕ್ರಮಗಳು ನಡೆಯುತ್ತವೆ.

ಬಾದಾಮಿ ವೆಂಕಟೇಶ್ವರ ದೇವಸ್ಥಾನ

ಬಾದಾಮಿ: ನಗರದ ಪುರಾತನ ಶ್ರೀ ವೆಂಕಟೇಶ್ವರ ದೇವರ ನವರಾತ್ರಿ ಉತ್ಸವ ಸೆ.26ರಿಂದ ಆರಂಭವಾಗಿ ಅ.6 ರವರೆಗೆ ನಡೆಯಲಿವೆ. ಸೆ.26ರಂದು ಸೋಮವಾರ ಬೆಳಿಗ್ಗೆ ಸುಪ್ರಭಾತದೊಂದಿಗೆ ನವರಾತ್ರಿ ಉತ್ಸವ ಆರಂಭವಾಗಲಿದೆ. ಬೆಳಿಗ್ಗೆ 11 ಗಂಟೆಗೆ ಘಟಸ್ಥಾಪನೆ, ಪ್ರತಿದಿನ ಹೋಮ ಹವನ, ಶ್ರೀ ವೆಂಕಟೇಶ್ವರ ಪುರಾಣ, ರಾತ್ರಿ 7 ಗಂಟೆಗೆ ಪಲ್ಲಕ್ಕಿ ಸೇವೆ ರಾತ್ರಿ 7.30 ಗಂಟೆಗೆ ವಾಹನೋತ್ಸವ ನಡೆಯಲಿದೆ.

ಸೆ.28 ರಂದು ಬುಧವಾರ ಸಪ್ತ ರಾತ್ರೋತ್ಸವ 7 ದಿನಗಳ ಕಾಲ ದೀಪ ಹಾಕುವುದು. ಸೆ.30 ರಂದು ಶುಕ್ರವಾರ ಗರುಡ ಪಂಚಮಿ, 5 ದಿನಗಳ ಕಾಲ ದೀಪ ಹಾಕುವುದು. ಅ.2 ರಂದು ರವಿವಾರ ತ್ರಿರಾತ್ರೋತ್ಸವ/ಸರಸ್ವತಿ ಆಹ್ವಾನ-3 ದಿವಸ ದೀಪ ಹಾಕುವುದು.

ಅ.3ರಂದು ಸೋಮವಾರ ಏಕರಾತ್ರೋತ್ಸವ, ದುರ್ಗಾಷ್ಟಮಿ, ಸರಸ್ವತಿ ಪೂಜೆ ನಡೆಯಲಿದೆ. ಅ.4ರಂದು ಮಂಗಳವಾರ ಮಹಾನವಮಿ, ಆಯುಧಪೂಜೆ, ಅ.5ರಂದು ಬುಧವಾರ ವಿಜಯದಶಮಿ, ಬೆಳಿಗ್ಗೆ 8 ಗಂಟೆಗೆ ಶ್ರೀ ವೆಂಕಟೇಶ್ವರ ಪುರಾಣ ಮಂಗಲ, ಬೆಳಿಗ್ಗೆ 9 ಗಂಟೆಗೆ ರಥಾಂಗ ಹೋಮ, ಮಧ್ಯಾಹ್ನ 12 ಗಂಟೆಗೆ ರಥೋತ್ಸವ ಜರುಗಲಿದೆ. ಸಂಜೆ 6.30 ಗಂಟೆಗೆ ಶ್ರೀ ದತ್ತಾತ್ರೇಯ ದೇವಸ್ಥಾನದಲ್ಲಿ ಶಮೀಪೂಜೆ ಬನ್ನಿ ಮುಡಿಯುವ ಕಾರ್ಯಕ್ರಮ, ಅ.6ರಂದು ಗುರುವಾರ ಬೆಳಿಗ್ಗೆ 9 ಗಂಟೆಗೆ ಅವಭೃತ ಸ್ನಾನ(ಚಕ್ರಸ್ನಾನ) ನಡೆಯಲಿದೆ. ಅ.9ರಂದು ರವಿವಾರ ಕಳಸ ಇಳಿಯುವುದು ಕಾರಣ ಎಲ್ಲ ಭಕ್ತಾದಿಗಳು ಎಲ್ಲ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಕೋರಲಾಗಿದೆ.

ಲೋಕಾಪುರ

ಲೋಕಾಪುರ: ಪಟ್ಟಣದ ವೆಂಕಟೇಶ್ವರ ದೇವಸ್ಥಾನದಲ್ಲಿ ಸೆ.26ರಂದು ಘಟಸ್ಥಾಪನೆಯೊಂದಿಗೆ ನವರಾತ್ರಿ ಉತ್ಸವ ಆರಂಭವಾಗಲಿದೆ. ನವರಾತ್ರಿ ಉತ್ಸವ ಅಂಗವಾಗಿ ಪ್ರತಿದಿವಸ ಕಾಕಡಾರತಿ, ಚಿಂತನ, ಪಂಚಾಮೃತ ಅಭಿಷೇಕ, ಮಹಾಪೂಜೆ, ಅಲಂಕಾರ, ಮಹಾಮಂಗಳಾರತಿ, ಮಂತ್ರಪುಷ್ಟ ಹಾಗೂ ಸಂಜೆ 5 ಗಂಟೆಗೆ ಬಾಗಲಕೋಟೆಯ ಸಂದರ್ಶ ಆಚಾರ್ಯ ಕಂಚಿ ಇವರಿಂದ ವೆಂಕಟೇಶ್ವರ ಮಹಾತ್ಮೆ ಪುರಾಣ, ನಂತರ ವಾಹನೋತ್ಸವ, ಸರ್ವಸೇವಾ, ಸ್ವಸ್ತಿವಾಚನ, ತಾರತಮ್ಯ ಭಜನೆ, ಸಂಗೀತ ಕಾರ್ಯಕ್ರಮಗಳು ಸಾಂಗವಾಗಿ ಜರುಗಲಿವೆ. 30ರಂದು ಗರುಡ ಪಂಚಮಿ, 3ರಂದು ದುರ್ಗಾಷ್ಟಮಿ, ರಂಗವಲ್ಲಿ ಸ್ಪರ್ಧೆ, 4ರಂದು ಖಂಡೆ ನವಮಿ, ಆಯುಧ ಪೂಜೆ, 5ರಂದು ರಥೋತ್ಸವ ಜರುಗಲಿದೆ ಎಂದು ಅರ್ಚಕ ಬಿ.ಎಲ್‌.ಬಬಲಾದಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.