ಜಲಾವೃತಗೊಂಡ ಗೋವನಕೊಪ್ಪ ಹಳೆ ಸೇತುವೆ: ನದಿ ಪಾತ್ರದ ಜನರಲ್ಲಿ ಹೆಚ್ಚಿದ ಪ್ರವಾಹ ಭೀತಿ


Team Udayavani, Aug 13, 2022, 6:57 PM IST

ಜಲಾವೃತಗೊಂಡ ಗೋವನಕೊಪ್ಪ ಹಳೆ ಸೇತುವೆ: ನದಿ ಪಾತ್ರದ ಜನರಲ್ಲಿ ಹೆಚ್ಚಿದ ಪ್ರವಾಹ ಭೀತಿ

ಕುಳಗೇರಿ ಕ್ರಾಸ್ (ಬಾಗಲಕೋಟೆ) :  ನವಿಲುತಿರ್ಥ ಜಲಾಶಯದ ಮೇಲ್ಬಾಗದಲ್ಲಿ ಸುರಿಯುತ್ತಿರುವ ಮಳೆಗೆ ಜಲಾಶಯ ಸಂಪೂರ್ಣ ಭರ್ತಿಯಾಗಿದೆ. ಸದ್ಯ ಹೆಚ್ಚುವರಿ ನೀರನ್ನು ಮಲಪ್ರಭಾ ನದಿಗೆ ಬಿಟ್ಟಿದ್ದರಿಂದ ಜಿಲ್ಲೆಯ ಗಡಿ ಭಾಗದ ಹುಬ್ಬಳ್ಳಿ ಸೊಲ್ಲಾಪೂರ ರಾಷ್ಟ್ರೀಯ ಹೆದ್ದಾರಿ 218 ಸಂಪರ್ಕ ಕಲ್ಪಿಸುವ ಹಳೆ ಸೇತುವೆ ಜಲಾವೃತಗೊಂಡಿದೆ.

ನವಿಲುತಿರ್ಥ ಜಲಾಶಯದಿಂದ 5594 ಕ್ಯೊಸೆಕ್ ನೀರು ಹರಿಬಿಡಲಾಗಿದ್ದು ನದಿ ಪಾತ್ರದ ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ಹಲವು ಸೇತುವೆಗಳು ಜಲಾವೃತಗೊಂಡಿವೆ.

ಬಾಗಲಕೋಟೆ-ಗದಗ ಸಂಪರ್ಕ ರಸ್ತೆ ಕಡಿತಗೊಂಡಿದ್ದರಿಂದ ಹಲವು ಗ್ರಾಮದ ಜನರಿಗೆ ಸುತ್ತುವರೆದು ನದಿ ದಾಟುವ ಪರಿಸ್ಥಿತಿ ಎದುರಾಗಿದೆ.

ರೈತರ ಜಮಿನುಗಳಿಗೆ ಪ್ರವಾಹದ ನೀರು ನುಗ್ಗಿದ್ದು ಸದ್ಯ ಗೋವಿನಜೋಳ, ಈರುಳ್ಳಿ, ಕಬ್ಬು, ಸೂರ್ಯಕಾಂತಿ, ಹೆಸರು ಸೇರಿದಂತೆ ತೋಟಗಾರಿಕೆ ಬೆಳೆಗಳಾದ ಪೇರಲ ಮುಂತಾದ ಬೆಳೆಗಳಿಗೆ ನೀರು ನುಗ್ಗಿದ್ದು ನದಿ ಪಾತ್ರದ ರೈತರಲ್ಲಿ ಆತಂಕ ಮನೆಮಾಡಿದೆ.

ಇದನ್ನೂ ಓದಿ: ಚಿಕ್ಕಮಗಳೂರು: ಬಾರ್‌ ಮುಂದೆ ಹೆಚ್ಚಾದ ಅಪಘಾತ; ಬಾರ್‌ ಸ್ಥಳಾಂತರಕ್ಕೆ ಆಗ್ರಹಿಸಿ ಪ್ರತಿಭಟನೆ

ಸದ್ಯ ಮಲಪ್ರಭಾ ಪ್ರವಾಹದ ನೀರು ಹೆಚ್ಚುತ್ತಿದ್ದು ನದಿ ಪಾತ್ರದಲ್ಲಿನ ರೈತರು ಪಂಪ್‌ಸೆಟ್ ಜಾನುವಾರು ಸೇರಿದಂತೆ ತಮ್ಮ ಸಲಕರಣೆಗಳನ್ನು ಬೇರೆ ಕಡೆ ಸಾಗಿಸುತ್ತಿದ್ದಾರೆ. ತಾವು ಬೆಳೆದ ಪೇರಳೆ ಹಣ್ಣುಗಳನ್ನು ಬಿಡಿಸಿ ಅಗ್ಗದ ಬೆಲೆಗೆ ಮಾರುತ್ತಿದ್ದಾರೆ. ಹಣ್ಣುಗಳನ್ನು ಮೊದಲು ತೆಗೆದುಕೊಂಡು ಹೋಗುವಂತೆ ರೈತರು ವ್ಯಾಪಾರಸ್ಥರಲ್ಲಿ ಅಂಗಲಾಚುತ್ತಿದ್ದಾರೆ.

ಕಳೆದ ಬಾರಿ ಬೆಳೆದಿದ್ದ ಉತ್ತಮ ಬೆಳೆಗಳು ರೈತರ ಕೈ ಸೇರುವ ಸಂದರ್ಭದಲ್ಲಿ ಪ್ರವಾಹಕ್ಕೆ ತುತ್ತಾಗಿದ್ದವು. ಸದ್ಯ ಮತ್ತೆ ಸಾಲ ಮಾಡಿ ಬಿತ್ತನೆ ಮಾಡಿದ ರೈತರ ಜಮಿನುಗಳಿಗೆ ಪ್ರವಾಹದ ನೀರು ನುಗ್ಗಿದ್ದು ಗಾಯದ ಮೇಲೆ ಬರೆ ಎಳೆದಂತಾಗಿದೆ.

ಬಾದಾಮಿ ತಹಸಿಲ್ದಾರ ಜೆ ಬಿ ಮಜ್ಜಗಿ ನದಿ ಪಾತ್ರದ ಗ್ರಾಮಗಳಿಗೆ ಭೇಟಿ ನೀಡಿದ್ದು ಮಲಪ್ರಭಾ ನದಿಯ ಪ್ರವಾಹವನ್ನು ವೀಕ್ಷಿಸಿದ ಅವರು, ನೀರಿನ ಮಟ್ಟ ಪರಿಶೀಲಿಸಿದರು. ನಂತರ ಗ್ರಾಮಗಳಲ್ಲಿ ಸಂಚರಿಸಿ ಜನರಲ್ಲಿ ಜಾಗ್ರತಿ ಮೂಡಿಸಿ ನದಿ ಪಾತ್ರದಲ್ಲಿ ಬಟ್ಟೆ ತೊಳೆಯುವುದು, ಸ್ನಾನ ಮಾಡುವುದು, ವಾಹನ ಹಾಗೂ ಜಾನುವಾರುಗಳ ಮೈ ತೊಳೆಯುವುದು ಮಾಡಬಾರದು, ಸೆಲ್ಪಿ ಸೇರಿದಂತೆ ಪ್ರವಾಹದಲ್ಲಿ ಹುಚ್ಚು ಸಾಹಸ ಮಾಡುವ ಗೋಜಿಗೆ ಹೋಗಬಾರದು ಎಂದು ಎಚ್ಚರಿಸಿದರು. ಪ್ರವಾಹ ಪ್ರದೇಶದಲ್ಲಿ ಕಟ್ಟುನಿಟ್ಟಾಗಿ ಕಾರ್ಯನಿರ್ವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಟಾಪ್ ನ್ಯೂಸ್

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.