ಐಹೊಳೆ ಮಾಯ; ನೀರಲಕೇರಿ ಉದಯ!

ಜಿಪಂ ಕ್ಷೇತ್ರಗಳ ಪುನರ್‌ವಿಂಗಡಣೆ­ಶೀಘ್ರವೇ ಹೊಸ ಕ್ಷೇತ್ರ-ಮೀಸಲಾತಿ ನಿರ್ಣಯ

Team Udayavani, Mar 12, 2021, 8:58 PM IST

Bangalkote ZP

ಬಾಗಲಕೋಟೆ: ಕೆಲವೇ ದಿನಗಳಲ್ಲಿ ಹಾಲಿ ಜಿಪಂ ಸದಸ್ಯರ ಅಧಿಕಾರವಧಿ ಪೂರ್ಣಗೊಳ್ಳಲಿದ್ದು, ಹೊಸ ಸದಸ್ಯರ ಆಯ್ಕೆಗೆ ಹೊಸ ಕ್ಷೇತ್ರಗಳ ರಚನೆ ಕಾರ್ಯವೂ ನಡೆಯುತ್ತಿದೆ. ಚುನಾವಣೆ ಆಯೋಗದ ನಿರ್ದೇಶನದಂತೆ ಜಿಲ್ಲಾಡಳಿತ ಜಿಲ್ಲೆಯಲ್ಲಿ 40 ಜಿಪಂ ಕ್ಷೇತ್ರಗಳ ರಚನೆ ಮಾಡಬೇಕಿದ್ದು, ಈ ನಿಟ್ಟಿನಲ್ಲಿ ಪ್ರಾಥಮಿಕ ಕ್ಷೇತ್ರ ಪುನರ್‌ ವಿಂಗಡಣೆ ಕಾರ್ಯ ನಡೆಯುತ್ತಿದೆ.

ಬಾಗಲಕೋಟೆ ವಿಧಾನಸಭೆ ಮತಕ್ಷೇತ್ರ ವ್ಯಾಪ್ತಿಯಲ್ಲಿ ಈ ಹಿಂದೆ ನಾಲ್ಕು ಜಿ.ಪಂ ಕ್ಷೇತ್ರಗಳು, ತಾಲೂಕಿನಲ್ಲಿ 18 ತಾಪಂ ಕ್ಷೇತ್ರಗಳಿದ್ದವು. ಆಯೋಗದ ಹೊಸ ಮಾರ್ಗಸೂಚಿ ಅನ್ವಯ ಬಾಗಲಕೋಟೆ ಕ್ಷೇತ್ರ ವ್ಯಾಪ್ತಿಯಲ್ಲಿ ಮೂರು ಜಿ.ಪಂ. ಕ್ಷೇತ್ರಗಳು, ತಾಲೂಕಿನಲ್ಲಿ 11 ತಾಪಂ ಕ್ಷೇತ್ರಗಳ ರಚನೆ ಮಾಡಬೇಕಿದೆ.

ಐಹೊಳೆ ಮಾಯ: ಕಳೆದ 2015ರಲ್ಲಿ ನಡೆದ ಜಿ.ಪಂ. ಕ್ಷೇತ್ರಗಳ ಪುನರ್‌ವಿಂಗಡಣೆಯಲ್ಲಿ ಹೊಸ ಕ್ಷೇತ್ರವಾಗಿ ರಚನೆಗೊಂಡಿದ್ದ ಐಹೊಳೆ ಈ ಬಾರಿ ಮಾಯವಾಗಿದೆ. ಈ ಕ್ಷೇತ್ರ ವ್ಯಾಪ್ತಿಯಡಿ ಬರುತ್ತಿದ್ದ ಹಳ್ಳಿಗಳನ್ನು, ಹುನಗುಂದ ವಿಧಾನಸಭೆ ಕ್ಷೇತ್ರ ವ್ಯಾಪ್ತಿಯ ಹೊಸ ಜಿ.ಪಂ. ಕ್ಷೇತ್ರವಾಗಲಿರುವ ಸೂಳಿಭಾವಿ ಕ್ಷೇತ್ರಕ್ಕೆ ಸೇರಿಸಲಾಗಿದೆ. ಐಹೊಳೆ ಮಾಯಗೊಳಿಸಿ, ಈ ಕ್ಷೇತ್ರದ ಹಳ್ಳಿಗಳನ್ನು ಹುನಗುಂದ ಕ್ಷೇತ್ರದಡಿ ಬರುವ ಸೂಳಿಭಾವಿಗೆ ಸೇರಿಸಲು ಹಲವು ರಾಜಕೀಯ ತಂತ್ರಗಾರಿಕೆಗಳೂ ಒಳಗೊಂಡಿದೆ ಎಂಬ ಮಾತು ಕೇಳಿ ಬರುತ್ತಿದೆ.

ಐಹೊಳೆ ಜಿ.‌ಪಂ. ಕ್ಷೇತ್ರ ಹುಟ್ಟಿಕೊಳ್ಳುವ ಮೊದಲು, ಕಮತಗಿ ಜಿ.ಪಂ. ಕ್ಷೇತ್ರವಿತ್ತು. ಕಮತಗಿ ಪಟ್ಟಣ ಪಂಚಾಯಿತಿಯಾಗಿ ಮೇಲ್ದರ್ಜೆಗೇರಿದ್ದರಿಂದ, ಐಹೊಳೆ ಹೊಸ ಕ್ಷೇತ್ರ ಹುಟ್ಟಿಕೊಂಡಿತ್ತು.

ನೀರಲಕೇರಿ ಉದಯ: ಈ ವರೆಗೆ ಜಿಪಂ ಕ್ಷೇತ್ರದ ಕೇಂದ್ರ ಸ್ಥಾನ ಹೊಂದಿದ್ದ ಶಿರೂರ, ಈಗ ಪಟ್ಟಣ ಪಂಚಾಯಿತಿ ಆಗಿದೆ. ಹೀಗಾಗಿ ಶಿರೂರ ಬದಲಾಗಿ, ನೀರಲಕೇರಿ ಹೊಸ ಕ್ಷೇತ್ರ ರಚನೆ ಮಾಡಲು ಎಲ್ಲ ರೀತಿಯ ತಯಾರಿ ನಡೆದಿದೆ.

ಬಾಗಲಕೋಟೆ ವಿಧಾನಸಭೆ ಕ್ಷೇತ್ರ ವ್ಯಾಪ್ತಿಯಲ್ಲಿ ಒಟ್ಟು ಮೂರು ಜಿ.ಪಂ. ಕ್ಷೇತ್ರಗಳು ಈ ಬಾರಿ ಬರಲಿವೆ. ರಾಂಪುರ, ಬೇವೂರ ಹಾಗೂ ನೀರಲಕೇರಿ ಮಾತ್ರ ಜಿ.ಪಂ. ಕ್ಷೇತ್ರಗಳ ಮಾನ್ಯತೆ ಪಡೆಯಲಿವೆ ಎಂದು ಮೂಲಗಳು ಖಚಿತಪಡಿಸಿವೆ. ಮೀಸಲಾತಿ ತಂತ್ರಗಾರಿಕೆ: ಕಳೆದ 2015ರಲ್ಲಿ ಜಿ.ಪಂ, ತಾ.ಪಂ. ಕ್ಷೇತ್ರಗಳ ಪುನರ್‌ ವಿಂಗಡಣೆ ವೇಳೆ ಕಾಂಗ್ರೆಸ್‌ ಸರ್ಕಾರ ಅಧಿಕಾರದಲ್ಲಿತ್ತು. ಆಗ ಶಾಸಕರಾಗಿದ್ದ ಎಚ್‌.ವೈ. ಮೇಟಿ ಅವರು ರಾಂಪುರ, ಐಹೊಳೆ ಹೊಸ ಕ್ಷೇತ್ರ ರಚನೆ ಆಗುವಲ್ಲಿ ವಿಶೇಷ ಪಾತ್ರ ವಹಿಸಿದ್ದರು. ಜತೆಗೆ ಆಯಾ ಕ್ಷೇತ್ರಗಳ ಮೀಸಲಾತಿ ನಿಗದಿಯಲ್ಲೂ ಚಾಣಾಕ್ಷéತನ ಮೆರೆದಿದ್ದರು. ಅಂತಹದ್ದೇ ತಂತ್ರಗಾರಿಕೆಯನ್ನು ಈಗ ಬಿಜೆಪಿ ಸರ್ಕಾರ ಹಾಗೂ ಪ್ರಸ್ತುತ ಈ ಕ್ಷೇತ್ರದ ಶಾಸಕರಾಗಿರುವ ಡಾ|ಚರಂತಿಮಠ ಅವರೂ ಅನುಸರಿಸಲಿರುವುದು ರಾಜಕೀಯ ನಡೆ ಎನ್ನಲಾಗುತ್ತಿದೆ.

ಒಂದು ಖಚಿತ ಮೂಲದ ಪ್ರಕಾರ ರಾಂಪುರ ಜಿ.ಪಂ. ಕ್ಷೇತ್ರವನ್ನು ಹಿಂದುಳಿದ ಬ ವರ್ಗ, ಬೇವೂರ ಕ್ಷೇತ್ರವನ್ನು ಪರಿಶಿಷ್ಟ ಜಾತಿ ಹಾಗೂ ಹೊಸದಾಗಿ ಉದಯವಾಗಲಿರುವ ನೀರಲಕೇರಿ ಕ್ಷೇತ್ರವನ್ನು ಸಾಮಾನ್ಯ ವರ್ಗಕ್ಕೆ ಮೀಸಲಾತಿ ನಿಗದಿ ಮಾಡುವ ನಿಟ್ಟಿನಲ್ಲಿ ಪ್ರಕ್ರಿಯೆ ನಡೆದಿವೆ ಎನ್ನಲಾಗಿದೆ. ಸದ್ಯ ತಾತ್ಕಾಲಿಕವಾಗಿ ಚುನಾವಣೆ ಆಯೋಗಕ್ಕೆ ಜಿಲ್ಲೆಯಿಂದ ಕಳುಹಿಸಿದ ಹೊಸ ಕ್ಷೇತ್ರಗಳು ಹಾಗೂ ಅವುಗಳ ವ್ಯಾಪ್ತಿಗೆ ಸೇರಿದ ಹಳ್ಳಿಗಳ ವಿವರ ಇಲ್ಲಿವೆ. ಈ ಪ್ರಸ್ತಾವನೆಯನ್ನು ಚುನಾವಣೆ ಆಯೋಗ ಪರಿಶೀಲಿಸಿ, ಅಂತಿಮಗೊಳಿಸಿ, ಅಧಿಸೂಚನೆ ಹೊರಡಿಸಬೇಕಿದೆ. ಸದ್ಯ ನಿಗದಿಯಾದ ಕ್ಷೇತ್ರಗಳು, ಆ ವ್ಯಾಪ್ತಿಗೆ ಸೇರಿದ ಹಳ್ಳಿಗಳ ವಿವರ ತಾತ್ಕಾಲಿಕವಾಗಿವೆ. ಚುನಾವಣೆ ಆಯೋಗ ಇದರಲ್ಲಿ ಬದಲಾವಣೆ ಮಾಡುವ ಸಾಧ್ಯತೆಗಳೂ ಇವೆ.
ಶ್ರೀಶೈಲ ಕೆ. ಬಿರಾದಾರ 

ಟಾಪ್ ನ್ಯೂಸ್

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Food ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.