ಹೊಸ ಕಾಮಗಾರಿ ಅವ್ಯವಸ್ಥೆ: ಪ್ರಯಾಣಿಕರ ಪರದಾಟ
Team Udayavani, May 13, 2019, 1:58 PM IST
ಬನಹಟ್ಟಿ: ನಿತ್ಯ ಸಾವಿರಾರು ಪ್ರಯಾಣಿಕರನ್ನು ಅವಲಂಬಿಸಿರುವ ಬನಹಟ್ಟಿ ಬಸ್ ನಿಲ್ದಾಣದೊಳಗೆ ಹೊಸ ಕಾಮಗಾರಿ ಎಂಬುದು ಪ್ರಯಾಣಿಕರಿಗೆ ಕಂಟಕವಾಗಿ ಕಾಡುತ್ತಿದೆ.
ಸುಮಾರು 50 ಲಕ್ಷ ರೂ.ಗಳ ಟೆಂಡರ್ನೊಂದಿಗೆ ಸಿಮೆಂಟ್ ರಸ್ತೆ ಕಾಮಗಾರಿಯು ಬಸ್ ನಿಲ್ದಾಣದೊಳಗೆ ಈಗಾಗಲೇ ನಡೆಯಬೇಕಿತ್ತು. ಗುತ್ತಿಗೆದಾರನ ನಿರ್ಲಕ್ಷ್ಯದಿಂದಾಗಿ ದಿನಂಪ್ರತಿ ಸಂಚರಿಸುವ ಸಾವಿರಾರು ಪ್ರಯಾಣಿಕರು ಪರದಾಡುವ ಸ್ಥಿತಿ ಬಂದೊದಗಿದೆ.
ರಸ್ತೆ ನಿರ್ಮಾಣ ಮಾಡುವುದಾಗಿ ಹೇಳಿದ ಗುತ್ತಿಗೆದಾರ, ಬಸ್ ನಿಲ್ದಾಣದಲ್ಲಿ ಕಡಿ ಹಾಕಿ ತಿಂಗಳೇ ಗತಿಸಿದರೂ ಇನ್ನೂ ಕಾಮಗಾರಿ ಪ್ರಾರಂಭಿಸಿಲ್ಲ. ಕಡಿ ಹಾಕಿದ್ದರಿಂದ ಮೋಟಾರ್ ಸೈಕಲ್ ಸವಾರರು ಅಪಘಾತಕ್ಕೀಡಾಗುತ್ತಿದ್ದರೆ, ಜನರು ಬಸ್ ಹತ್ತಲು ಅವಸರದಲ್ಲಿ ಓಡುವ ಸಂದರ್ಭ ಬಿದ್ದು ಗಾಯಗೊಂಡಿರುವ ಉದಾಹರಣೆಗಳಿವೆ. ಯಾವುದೇ ಕಾಮಗಾರಿ ನಡೆಯದೆ ತೀವ್ರ ನಿರ್ಲಕ್ಷ್ಯ ತೋರಿರುವುದು ಸ್ಥಳೀಯ ನಾಗರಿಕರ ಕೆಂಗಣ್ಣಿಗೆ ಗುರಿಯಾಗಿದೆ.
ಶೌಚಾಲಯ ಬಂದ್: ಕಳೆದ 15 ದಿನಗಳಿಂದ ಟೈಲ್ಸ್ ಹಾಕುವುದಾಗಿ ನೆಪ ಹೇಳುವ ಮೂಲಕ ಶೌಚಾಲಯ ಸಂಪೂರ್ಣ ಬಂದ್ ಮಾಡಿರುವ ಹಿನ್ನೆಲೆ ಪ್ರಯಾಣಿಕರು ಶೌಚಕ್ಕೆ ತೀವ್ರ ಪರದಾಡುವ ಸ್ಥಿತಿ ಎದುರಾಗಿದೆ. ಗುತ್ತಿಗೆ ಪಡೆದು 2 ತಿಂಗಳು ಗತಿಸಿದರೂ ಗುತ್ತಿಗೆದಾರ ಮಾತ್ರ ಒಂದು ದಿನವೂ ಬಸ್ ನಿಲ್ದಾಣದತ್ತ ಸುಳಿಯದೆ ಪ್ರಯಾಣಿಕರು ಗೋಳಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಕೂಡಲೇ ಕಾಮಗಾರಿ ಆರಂಭಿಸುವ ಮೂಲಕ ಸಂಚಾರ ಮಾಡುವಲ್ಲಿ ಅವಕಾಶ ಕಲ್ಪಿಸಬೇಕು ಇಲ್ಲದಿದ್ದಲ್ಲಿ ಹೋರಾಟ ನಡೆಸಲಾಗುವುದು ಎಂದು ಸ್ಥಳೀಯ ಸಂಘಟನೆಗಳು ಎಚ್ಚರಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ
Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್ ಈಗ “ಸಂಯುಕ್ತ’
Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್
Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ
Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು
MUST WATCH
ಹೊಸ ಸೇರ್ಪಡೆ
Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!
DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?
Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ
Dakshina Kannada: 5 ಸಿಎಪಿಎಫ್/ಕೆಎಸ್ಆರ್ಪಿ ತುಕಡಿ, 3,100 ಸಿಬಂದಿ ನಿಯೋಜನೆ
Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು