ಗುಣಮಟ್ಟದಲ್ಲಿ ಯಾವುದೇ ರಾಜಿ ಇಲ್ಲ
Team Udayavani, Jun 5, 2020, 6:11 AM IST
ಗುಳೇದಗುಡ್ಡ: ವರ್ಷದ ಹಿಂದೆಯೇ ಕಾಮಗಾರಿ ಆರಂಭವಾಗಬೇಕಿತ್ತು. ಕೆಲವು ತೊಡಕುಗಳು ಇದ್ದ ಕಾರಣ ಹಾಗೂ ಕೋವಿಡ್ ಬಂದಿದ್ದರಿಂದ ಕಾಮಗಾರಿ ವಿಳಂಬವಾಗಿದೆ. ಆರು ತಿಂಗಳಲ್ಲಿ ಈ ರಸ್ತೆ ಕಾಮಗಾರಿ ಪೂರ್ಣಗೊಳ್ಳಬೇಕು. ಇಲ್ಲದಿದ್ದರೆ ದಂಡ ವಿಧಿ ಸಲಾಗುವುದು ಎಂದು ಗುತ್ತಿಗೆದಾರರಿಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಪಟ್ಟಣದ ಹಾದಿಬಸವೇಶ್ವರ ದೇವಸ್ಥಾನದ ಮುಂಭಾಗದಲ್ಲಿ 35 ಕೋಟಿ ವೆಚ್ಚದ ಸಂಕೇಶ್ವರ ಸಂಗಮ ಹೆದ್ದಾರಿ ರಸ್ತೆ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಅವರು, ಈ ರಸ್ತೆ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕು. ಇದರಲ್ಲಿ ಯಾವುದೇ ರಾಜಿ ಇಲ್ಲ. ಗುಳೇದಗುಡ್ಡದ ಸೌಂದರೀಕರಣಕ್ಕೆ ಆದ್ಯತೆ ನೀಡಲಾಗುವುದು ಎಂದರು.
ಸುಮಾರು 14 ಕಿ.ಮೀ. ರಸ್ತೆ ನಿರ್ಮಿಸಲಾಗುವುದು. ಇದು ಸುಮಾರು 14 ಮೀ. ಅಗಲವಿದ್ದು, ಮಧ್ಯದಲ್ಲಿ ಡಿವೈಡರ್ ಹಾಕಿ ಲೈಟ್ ಅಳವಡಿಸಲಾಗುವುದು. ಗುಳೇದಗುಡ್ಡ ವ್ಯಾಪ್ತಿಯಲ್ಲಿ 3 ಕಿ.ಮೀ. ಕಾಂಕ್ರೀಟ್ ರಸ್ತೆ ಮಾಡಲಾಗುವುದು ಎಂದರು.
ಈ ಸಂದರ್ಭದಲ್ಲಿ ಮಾಜಿ ಸಚಿವರಾದ ಎಚ್.ವೈ. ಮೇಟಿ, ಬಿ.ಬಿ. ಚಿಮ್ಮನಕಟ್ಟಿ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಎಸ್.ಜಿ. ನಂಜಯ್ಯನಮಠ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಾಜು ಜವಳಿ, ಹೊಳಬಸು ಶೆಟ್ಟರ, ಸಂಜಯ ಬರಗುಂಡಿ, ಮಹೇಶ ಹೊಸಗೌಡರ, ಭೀಮಸೇನ್ ಚಿಮ್ಮನಕಟ್ಟಿ, ಡಾ| ಬಸವರಾಜ ಕೋಲಾರ, ಗೋಪಾಲ ಭಟ್ಟಡ, ಚಿದಾನಂದಸಾ ಕಾಟವಾ, ಪುರಸಭೆ ಮುಖ್ಯಾಧಿಕಾರಿ ರವೀಂದ್ರ ಅಂಗಡಿ, ಸಿ.ಎಸ್. ಮಠಪತಿ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ
Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್ ಈಗ “ಸಂಯುಕ್ತ’
Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್
Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ
Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು
MUST WATCH
ಹೊಸ ಸೇರ್ಪಡೆ
Bengalur: ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿ ಸಾವು; ಠಾಣೆ ಬಳಿ ಶವ ಇರಿಸಿ ಪ್ರತಿಭಟನೆ
Udupi-Chikmagalur Poll: ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಸಮಿತಿ- ಇಂದು ಸಾರ್ವಜನಿಕ ಸಭೆ
Police Raid: 346 ರೌಡಿಶೀಟರ್ಗಳ ಮನೆಗಳ ಮೇಲೆ ದಾಳಿ
Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್ ದಾಖಲು
Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು