ಹೆಲ್ಮೆಟ್‌ ಕೇಳಲ್ಲ: ಮಾಸ್ಕ್ ಇಲ್ಲಾಂದ್ರೆ ಬಿಡಲ್ಲ!

ನಗರದಲ್ಲಿ ಈವರೆಗೆ 198 ಜನರಿಂದ ದಂಡ ವಸೂಲಿ ; ಒಂದೇ ದಿನ 3600 ರೂ. ದಂಡ

Team Udayavani, May 24, 2020, 7:56 AM IST

ಹೆಲ್ಮೆಟ್‌ ಕೇಳಲ್ಲ: ಮಾಸ್ಕ್ ಇಲ್ಲಾಂದ್ರೆ ಬಿಡಲ್ಲ!

ಸಾಂದರ್ಭಿಕ ಚಿತ್ರ ಬಳಸಲಾಗಿದೆ

ಬಾಗಲಕೋಟೆ: ಕೋವಿಡ್ ಮಹಾಮಾರಿ ನಿಯಂತ್ರಣಕ್ಕಾಗಿ ಪ್ರತಿಯೊಬ್ಬರೂ ಮಾಸ್ಕ್ ಧರಿಸುವುದು ಸರ್ಕಾರ ಕಡ್ಡಾಯಗೊಳಿಸಿದ್ದು, ಶನಿವಾರ ಒಂದೇ ದಿನ ನಗರಸಭೆ ಅಧಿಕಾರಿಗಳು ನಗರದಲ್ಲಿ 3600 ರೂ. ದಂಡ ವಸೂಲಿ ಮಾಡಿದ್ದಾರೆ. ಹೌದು, ಜನರಿಗಾಗಿ ಎಷ್ಟೇ ಕಾನೂನು-ನಿಯಮ ಜಾರಿಗೊಳಿಸಿದರೂ ಅದರಿಂದ ತಪ್ಪಿಸಿಕೊಳ್ಳುವ ತಂತ್ರಗಾರಿಕೆ ಜನರು ಮಾಡುತ್ತಲೇ ಇರುತ್ತಾರೆ. ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದರಿಂದ ಕೋವಿಡ್ ಎಂಬ ವೈರಸ್‌ ದೂರ ಇಡಬಹುದು ಎಂಬ ಸರ್ಕಾರದ ಕಾಳಜಿಗೆ ಬಹುತೇಕರು ಕೈಜೋಡಿಸಿದ್ದಾರೆ. ಆದರೂ ಕೆಲವರು, ಕೋವಿಡ್ ನಮಗೆಲ್ಲಿ ಬರುತ್ತದೆ ಎಂಬ ಅಸಡ್ಡೆಯಲ್ಲೇ ತಿರುಗುತ್ತಿದ್ದು, ಅಂತಹವರಿಗೆ ನಗರಸಭೆ ದಂಡ ಪ್ರಯೋಗ ಶುರು ಮಾಡಿದೆ.

ನಗರದಲ್ಲಿ 198 ಜನರಿಗೆ ದಂಡ: ಮಾಸ್ಕ್ ಧರಿಸದವರಿಗೆ ದಂಡ ವಿಧಿಸಲು ನಗರ, ಪೊಲೀಸರಿಗೆ ಅಧಿಕಾರವಿದ್ದು, ನಗರಸಭೆಯಿಂದ ಹಳೆಯ ಬಾಗಲಕೋಟೆ, ನವನಗರ ಹಾಗೂ ವಿದ್ಯಾಗಿರಿ ಸೇರಿದಂತೆ ಈ ವರೆಗೆ ಒಟ್ಟು 198 ಜನರಿಗೆ ದಂಡ ವಿಧಿಸಿ, ಒಟ್ಟು 19,800 ರೂ. ವಸೂಲಿ ಮಾಡಲಾಗಿದೆ. ರವಿವಾರ ಒಂದೇ ದಿನ ವಿದ್ಯಾಗಿರಿ ಹಾಗೂ ನವನಗರದಲ್ಲಿ ಒಟ್ಟು 36 ಜನರಿಗೆ ದಂಡ ವಿಧಿಸಿ, 3600 ದಂಡದ ಶುಲ್ಕ ವಸೂಲಿ ಮಾಡಲಾಗಿದೆ. ನಗರಸಭೆಯ ಪೌರಾಯುಕ್ತ ಮುನಿಶಾಮಪ್ಪ, ಪರಿಸರ ಅಭಿಯಂತರ ಹನಮಂತ ಕಲಾದಗಿ ಸೇರಿದಂತೆ ನಗರಸಭೆಯ ಇತರ ಸಿಬ್ಬಂದಿ, ವಿದ್ಯಾಗಿರಿ ಸೇರಿದಂತೆ ನಗರದ ಹಲವೆಡೆ ತಪಾಸಣೆ ನಡೆಸುತ್ತಿದ್ದಾರೆ.

ವಿದ್ಯಾಗಿರಿ ವೃತ್ತದಲ್ಲಿ ನಗರಸಭೆ ಅಧಿಕಾರಿಗಳು, ಮಾಸ್ಕ್ ಹಾಕದವರಿಗೆ ದಂಡ ವಿಧಿಸುವ ಕಾರ್ಯ ನಡೆಸಿದರು. ಈ ವೇಳೆ ಜನರು, ತಪ್ಪಿಸಿಕೊಂಡು ಹೋಗುವ ಪ್ರಯತ್ನಗಳೂ ನಡೆದಿದ್ದವು. ಮಾಸ್ಕ್ ಹಾಕದವರನ್ನು ತಡೆದು, ಕೋವಿಡ್ ಬಂದ್ರೆ ಸಾಯುತ್ತೀರಿ. ನೀವಲ್ಲದೇ, ನಿಮ್ಮ ಮನೆಯವರನ್ನು, ನಿಮ್ಮೊಂದಿಗೆ ತಿರುಗಾಡು ಜನರಿಗೂ ತೊಂದರೆ ಆಗುತ್ತದೆ. ಈಗ ಕೇವಲ 100 ರೂ. ದಂಡ ಹಾಕುತ್ತೇವೆ. ಮತ್ತೆ ಮಾಸ್ಕ್ ಹಾಕದೇ ರಸ್ತೆಗೆ ಬಂದರೆ ಹೆಚ್ಚಿನ ದಂಡ ಹಾಕಬೇಕಾಗುತ್ತದೆ ಎಂದು ಎಚ್ಚರಿಕೆ ನೀಡುತ್ತಿದ್ದರು.

ಕಾಲ್ಕಿತ್ತ ಜನ !: ವಿದ್ಯಾಗಿರಿ ವೃತ್ತದಲ್ಲಿ ನಗರಸಭೆ ಅಧಿಕಾರಿಗಳು ಮಾಸ್ಕ್ ಹಾಕದವರಿಗೆ ದಂಡ ಹಾಕುತ್ತಿದ್ದಾರೆ ಎಂದು ತಿಳಿದ ಜನರು, 22ನೇ ಕ್ರಾಸ್‌ನಲ್ಲೇ ಹೊರಳಿ, ಕಲಾದಗಿ ಮುಖ್ಯ ರಸ್ತೆಯ ಮೂಲಕ ಪುನಃ 17ನೇ ಕ್ರಾಸ್‌ ಮೂಲಕ ಹಾಯ್ದು ಕಾಲೇಜು ರಸ್ತೆಗೆ ಸೇರುತ್ತಿದ್ದರು. ಇನ್ನು ಕೆಲವರು, ಸರ್ಕಲ್‌ ನಲ್ಲಿ ಬೈಕ್‌, ಪಾದಚಾರಿ ವ್ಯಕ್ತಿಗಳನ್ನು ಪೌರ ಕಾರ್ಮಿಕರು ತಡೆಯಲು ಮುಂದಾದಾಗ ಓಡಿ ಹೋಗುತ್ತಿದ್ದರು. ಜೀವಕ್ಕಾಗಿ ಮಾಸ್ಕ್ ಧರಿಸಿ ಎಂದು ಹೇಳಿದರೆ, ಇನ್ನೂ ಕೆಲವರು ಸರ್‌ ವಾಕಿಂಗ್‌ ಬಂದಿದ್ದೇನೆ. ನಮ್ಮ ಮನೆ ಇಲ್ಲೇ ಇದೆ. ಹೋಗುತ್ತೇನೆ ಬಿಡಿ, ಮಾಸ್ಕ್ ಮರೆತು ಬಂದೆ ಎಂದೆಲ್ಲ ಸಬೂಬು ಹೇಳಿ ದಂಡದಿಂದ
ತಪ್ಪಿಸಿಕೊಳ್ಳಲು ಪ್ರಯತ್ನಿಸುತ್ತಿದ್ದರು.

ಕೋವಿಡ್ ವೈರಸ್‌ನಿಂದ ತಪ್ಪಿಸಿಕೊಳ್ಳಲು ಮಾಸ್ಕ್ ಧರಿಸುವ ಜತೆಗೆ ಸಾಮಾಜಿಕ ಅಂತರ ಕಾಯ್ದು ಕೊಳ್ಳಬೇಕು. ಇದು ಜನರ ಆರೋಗ್ಯದ ದೃಷ್ಟಿಯಿಂದ ಮಾಡಿರುವುದೇ ಹೊರತು, ಅಧಿಕಾರಿಗಳಿಗಾಗಿ ಅಲ್ಲ. ನಾವೂ ಸಹಿತ ನಿತ್ಯ ಮಾಸ್ಕ್ ಹಾಕಿಕೊಂಡೇ ಕೆಲಸ ಕಾರ್ಯ ನಿರ್ವಹಿಸುತ್ತಿದ್ದೇವೆ. ನಗರದ ಎಲ್ಲ ಜನರು, ಕಡ್ಡಾಯವಾಗಿ ಮಾಸ್ಕ್ ಧರಿಸಿ, ಸಂಚರಿಸಬೇಕು. ಇಲ್ಲದಿದ್ದರೆ ದಂಡ ವಿಧಿಸುವುದು ಶತಸಿದ್ಧ.
ಮುನಿಶಾಮಪ್ಪ. ನಗರಸಭೆ ಪೌರಾಯಕ

ನಗರಸಭೆಯಿಂದ ಪೌರಾಯುಕ್ತರು ಸಹಿತ ಎಲ್ಲ ಅಧಿಕಾರಿ-ಸಿಬ್ಬಂದಿ ಗಳು ನಗರದಲ್ಲಿ ರೌಂಡ್ಸ್‌ ಹಾಕುತ್ತಿದ್ದೇವೆ. ಮಾಸ್ಕ್ ಹಾಕದವರಿಗೆ ದಂಡ ವಿಧಿಸುತ್ತಿದ್ದು, ರವಿವಾರ ಒಂದೇ ದಿನ 36 ಜನರಿಗೆ ದಂಡ ಹಾಕಿ, 3600 ವಸೂಲಿ ಮಾಡಲಾಗಿದೆ. ಈ ಪ್ರಕ್ರಿಯೆ ನಿರಂತರವಾಗಿ ನಡೆಯುತ್ತದೆ.
ಹನಮಂತ ಕಲಾದಗಿ, ನಗರಸಭೆ ಪರಿಸರ ಅಭಿಯಂತರ

ಶ್ರೀಶೈಲ ಕೆ. ಬಿರಾದಾರ

ಟಾಪ್ ನ್ಯೂಸ್

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಖಾನಾಪುರ ಬಳಿ ಭೀಕರ ಅಪಘಾತ: ವಕೀಲ ದೇಶಪಾಂಡೆ ಸಾವು

ಖಾನಾಪುರ ಬಳಿ ಭೀಕರ ಅಪಘಾತ: ವಕೀಲ ಕೆ.ಎಸ್‌. ದೇಶಪಾಂಡೆ ಸಾವು

ಶ್ರೀಶೈಲ ಪಾದಯಾತ್ರೆಯಲ್ಲಿ ಮತದಾನ ಜಾಗೃತಿ: ಮಲ್ಲಯ್ಯನ ಧ್ವಜ ಅನಾವರಣ

ಶ್ರೀಶೈಲ ಪಾದಯಾತ್ರೆಯಲ್ಲಿ ಮತದಾನ ಜಾಗೃತಿ: ಮಲ್ಲಯ್ಯನ ಧ್ವಜ ಅನಾವರಣ

4-bgl

Theft: ಅಮೀನಗಡದ ದೇವಸ್ಥಾನದಲ್ಲಿ ಕಳ್ಳತನ

ಬಾಗಲಕೋಟೆ: ಐತಿಹಾಸಿಕ ಹೋಳಿ ಬಣ್ಣದಾಟಕ್ಕೆ ಚಾಲನೆ

ಬಾಗಲಕೋಟೆ: ಐತಿಹಾಸಿಕ ಹೋಳಿ ಬಣ್ಣದಾಟಕ್ಕೆ ಚಾಲನೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.