ಬೇಸಿಗೆ ಬಾಯಾರಿಕೆ ನೀಗಿಸುವ ಭರವಸೆ


Team Udayavani, Mar 22, 2020, 5:28 PM IST

ಬೇಸಿಗೆ ಬಾಯಾರಿಕೆ ನೀಗಿಸುವ ಭರವಸೆ

ಬೀಳಗಿ: ತಾಲೂಕಿನ ಜೀವನದಿಗಳಾಗಿರುವ ಕೃಷ್ಣೆ-ಘಟಪ್ರಭೆಯ ಒಡಲು ಈ ಬಾರಿ ತುಂಬಿಕೊಂಡಿರುವುದು ಬೇಸಿಗೆಯ ಬಾಯಾರಿಕೆ ನೀಗಿಸುವ ಭರವಸೆ ಮೂಡಿಸಿದೆ.

ಪಟ್ಟಣ ಸೇರಿದಂತೆ ತಾಲೂಕಿನಾದ್ಯಂತ ನೀರಿನ ಕೊರತೆ ಎಲ್ಲೂ ಎದ್ದು ಕಾಣುತ್ತಿಲ್ಲ. ತಾಲೂಕಿನ ಸೊನ್ನ ಗ್ರಾಮದ ಕಂದಗಲ್ಲ ಅವರ ತೋಟದ ವಸತಿ ಪ್ರದೇಶ ಹಾಗೂ ಚಿಕ್ಕಸಂಗಮದ ಹತ್ತಿರ (ಎಸ್ಸಿ ಕಾಲೋನಿ) ಮಡ್ಡಿಮನಿ ವಸತಿ ಪ್ರದೇಶದಲ್ಲಿ ಕುಡಿಯುವ ನೀರಿಗೆ ತೀವ್ರ ತೊಂದರೆಯಿರುವುದು ಕಂಡು ಬಂದಿದೆ. ಈ ಸ್ಥಳಗಳಲ್ಲಿ ಕೂಡಲೇ ಕೊಳವೆ ಬಾವಿ ಕೊರೆಸುವ ಮೂಲಕ ಕುಡಿಯುವ ನೀರಿನ ತೊಂದರೆ ನೀಗಿಸುವುದು ಅಗತ್ಯವಿದೆ.

ನಿತ್ಯ 2.54 ಎಂಎಲ್‌ಡಿ ನೀರು: 20 ಸಾವಿರ ಜನಸಂಖ್ಯೆಯಿರುವ ಪಟ್ಟಣದಲ್ಲಿ, 4106 ವಾಸದ ಮನೆಗಳಿವೆ. 480 ವಾಣಿಜ್ಯ ಮಳಿಗೆಗಳಿವೆ. 2663 ವಾಸದ ಮನೆಗಳಿಗೆ ಹಾಗೂ 84 ವಾಣಿಜ್ಯ ಮಳಿಗೆಗಳಿಗೆ ನಳದ ಸಂಪರ್ಕ ಕಲ್ಪಿಸಲಾಗಿದೆ. ಇನ್ನು 46 ಕೊಳವೆ ಬಾವಿ ಮತ್ತು 2 ಕೈ ಪಂಪ್‌ಗ್ಳು ಸುಸ್ಥಿತಿಯಲ್ಲಿವೆ. 7 ಶುದ್ಧ ಕುಡಿವ ನೀರಿನ ಘಟಕಗಳಲ್ಲಿ 5 ಸುಸ್ಥಿತಿಯಲ್ಲಿದ್ದು, 2 ರಿಪೇರಿ ಕಾಣಬೇಕಿವೆ. ನಗರ ನಿವಾಸಿಗಳಿಗೆ ನಿತ್ಯ 2.54 ಎಂಎಲ್‌ಡಿ (ಮಿಲಿಯನ್‌ ಲೀ,) ನೀರು ಅಗತ್ಯವಿದೆ. ಆಲಮಟ್ಟಿ ಹಿನ್ನೀರಿನ ಕೃಷ್ಣಾ ನದಿಯ ಗುಳಬಾಳ ಜಾಕ್‌ವೆಲ್‌ನಿಂದ ನಿತ್ಯ 1.33 ಎಂಎಲ್‌ಡಿ ನೀರು ಲಭ್ಯವಾಗುತ್ತಿದೆ. ದಿನನಿತ್ಯ ಒಟ್ಟು 1.21 ಎಂಎಲ್‌ಡಿ ಕೊರತೆಯಿರುವ ನೀರನ್ನು ಕೊಳವೆ ಬಾವಿ ಮೂಲಕ ಭರಿಸಲಾಗುತ್ತಿದೆ.

ನೀರಿಗೆ ಬರವಿಲ್ಲ: ತಾಲೂಕಿನಾದ್ಯಂತ ಜನವಸತಿಪ್ರದೇಶ ಸೇರಿ ಒಟ್ಟು 85 ಗ್ರಾಮಗಳಿವೆ. ಇದರಲ್ಲಿ ಜನವಸತಿ ಪ್ರದೇಶ ಸೇರಿ ಒಟ್ಟು 23 ಗ್ರಾಮಗಳು ಕೊಳವೆ ಬಾವಿ ನೀರನ್ನು ಅವಲಂಬಿಸಿವೆ. ತಾಲೂಕಿನಾದ್ಯಂತ 83 ಶುದ್ಧ ಕುಡಿವ ನೀರು ಘಟಕಗಳಲ್ಲಿ ತಾಲೂಕಿನ ತೆಗ್ಗಿ ತಾಂಡಾ, ಮುಂಡಗನೂರ ಆರ್‌ಸಿ ಹೊರತುಪಡಿಸಿ ಇನ್ನುಳಿದ 81 ಶುದ್ಧ ಕುಡಿವ ನೀರಿನ ಘಟಕಗಳು ಸುಸ್ಥಿಯಲ್ಲಿವೆ. 263 ಕೊಳವೆ ಬಾವಿ ಹಾಗೂ 96 ಕೈ ಪಂಪ್‌ಗ್ಳು ನೀರಿನ ದಾಹ ನೀಗಿಸಲು ನೆರವಾಗುತ್ತಿವೆ. ಕೃಷ್ಣಾ-ಘಟಪ್ರಭೆ

ನದಿ ಅವಲಂಬಿತ ಒಟ್ಟು 6 ಬಹುಗ್ರಾಮ ಕುಡಿವ ನೀರು ಯೋಜನೆಯಿಂದ ಒಟ್ಟು 62 ಗ್ರಾಮಗಳಿಗೆ ನೀರು ಸರಬರಾಜು ಆಗುತ್ತಿದೆ. ಸದ್ಯ, ಬೇಸಿಗೆ ಎದುರಿಸಲು ನೀರಿಗೇನು ಬರವಿಲ್ಲ. ಆದರೂ ಅಧಿಕಾರಿಗಳು ತೀವ್ರ ಎಚ್ಚರಿಕೆ ವಹಿಸುವುದು ಅಗತ್ಯ ತಾಲೂಕಿನ ಸೊನ್ನ ಗ್ರಾಮದ ಕಂದಗಲ್ಲ ಅವರ ತೋಟದ ವಸತಿ ಪ್ರದೇಶಕ್ಕೆ ನೀರಿನ ತೀವ್ರ ತೊಂದರೆಯಿದೆ. ಈ ಭಾಗದಲ್ಲಿ ಅಧಿಕಾರಿಗಳು ಕೂಡಲೇ ಶಾಶ್ವತವಾಗಿ ಕುಡಿವ ನೀರಿನ ಯೋಜನೆ ಕಲ್ಪಿಸುವುದು ಅಗತ್ಯವಿದೆ.  –ಡೋಂಗ್ರಿಸಾಬ್‌ ಕುದರಿ, ತಾಪಂ ಸದಸ್ಯರು, ಬೀಳಗಿ

 

-ರವೀಂದ್ರ ಕಣವಿ

ಟಾಪ್ ನ್ಯೂಸ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

12

ʼಭಜರಂಗಿ ಭಾಯಿಜಾನ್‌ʼ, ʼರೌಡಿ ರಾಥೋರ್ʼ ಸೀಕ್ವೆಲ್‌ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ನಿರ್ಮಾಪಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

ತಾಕತ್ತಿದ್ದರೆ ಯತ್ನಾಳ್‌ ನನ್ನ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಲಿ: ಪಾಟೀಲ್‌

ತಾಕತ್ತಿದ್ದರೆ ಯತ್ನಾಳ್‌ ನನ್ನ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಲಿ: ಪಾಟೀಲ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

15

Ramnagar: ಜಿಲ್ಲೆಯಲ್ಲಿ 25 ಕೋಟಿ ರೂ. ಅಕ್ರಮ ವಸ್ತು ಪತ್ತೆ

Department of Health: ಜನರಿಗೆ ಅರಿವಿನ ಟಾನಿಕ್‌ ನೀಡುತ್ತಿರುವ ಆರೋಗ್ಯ ಇಲಾಖೆ

Department of Health: ಜನರಿಗೆ ಅರಿವಿನ ಟಾನಿಕ್‌ ನೀಡುತ್ತಿರುವ ಆರೋಗ್ಯ ಇಲಾಖೆ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.