ಮಳೆ ನಿಂತರೂ ಮರದ ಹನಿ ನಿಲ್ಲಲ್ಲ: ಸಿದ್ದರಾಮಯ್ಯ
Team Udayavani, Jun 12, 2018, 7:00 AM IST
ಬಾಗಲಕೋಟೆ: ಮಳೆ ನಿಂತ ಮೇಲೂ ಮರದ ಹನಿ ಬೀಳುತ್ತಲೇ ಇರುತ್ತವೆ. ಅದೇ ರೀತಿ ಸರ್ಕಾರ ರಚನೆ
ಆದ ಮೇಲೆ ಸಚಿವ ಸ್ಥಾನ ಸಿಗದವರು ಅತೃಪ್ತಿ ವ್ಯಕ್ತಪಡಿಸುತ್ತಲೇ ಇರುತ್ತಾರೆ ಎಂದು ಮಾಜಿ ಸಿಎಂ, ಶಾಸಕ ಸಿದ್ದರಾಮಯ್ಯ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಸಮಾಧಾನ ಈಗ ಶಮನವಾಗಿದೆ. ಆದರೆ, ಮಳೆ ನಿಂತ ಮೇಲೂ ಮರದ ಹನಿ ಬೀಳುತ್ತಿರುತ್ತವೆ. ಹಾಗೆಯೇ ಸಣ್ಣ-ಪುಟ್ಟ ಅಸಮಾಧಾನ ಇರಬಹುದು. ಕುರುಬ ಸಮಾಜದ ನಾಯಕರಿಗೆ 3 ಸಚಿವ ಸ್ಥಾನ ನೀಡಬೇಕು. ಇಲ್ಲದಿದ್ದರೆ ಸಿದ್ದರಾಮಯ್ಯ ಮುಂದೆ ಬೆಲೆ ತೆರಬೇಕಾಗುತ್ತದೆ. ಸಿದ್ದರಾಮಯ್ಯ, ಮನೆಗೆ ಮಾರಿ, ನಾಡಿಗೆ ಉಪಕಾರಿ ಆಗಬಾರದು ಎಂದು ಕನಕ ಗುರುಪೀಠದ ಈಶ್ವರಾನಂದ ಸ್ವಾಮೀಜಿ ಹೇಳಿರುವುದ ತುಂಬಾ ಹಳೆಯ ಗಾದೆ ಮಾತು. ನಮ್ಮ ತಂದೆಯವರು ಸಹ ನನಗೆ ಅದನ್ನೇ ಹೇಳುತ್ತಿದ್ದರು. ಸ್ವಾಮೀಜಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ
Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್ ಧನಪ್ರಾಪ್ತಿ
Heavy Rain; ದುಬಾೖ ಪ್ರಯಾಣ ಬೇಡ: ಸಲಹೆ
Ban in Singapore; ಎವರೆಸ್ಟ್ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?
ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ