ಮುಖ ತೋರದ ಮೃಗಶಿರ; ಮೊಳಕೆಯೊಡೆಯುತ್ತಿಲ್ಲ ಬೆಳೆ

•ಬೀಜ-ರಸಗೊಬ್ಬರ ಬೇಡಿಕೆ ಕುಸಿತ •2.65 ಲಕ್ಷ ಹೆಕ್ಟೇರ್‌ ಮುಂಗಾರು ಬಿತ್ತನೆ ಗುರಿ ಹೊಂದಿತ್ತು ಇಲಾಖೆ

Team Udayavani, Jun 20, 2019, 9:45 AM IST

bk-tdy-1..

ಬಾಗಲಕೋಟೆ: ಬಾದಾಮಿ ತಾಲೂಕು ಹಂಗರಗಿಯಲ್ಲಿ ಬಿತ್ತನೆ ಮಾಡಿದ ಹೆಸರು ಬೆಳೆ, ತೇವಾಂಶ ಕೊರತೆಯಿಂದ ಸರಿಯಾಗಿ ಮೊಳಕೆಯೊಡೆಯದಿರುವುದು.

ಬಾಗಲಕೋಟೆ: ಕಳೆದ ತಿಂಗಳು ಸುರಿದ ರೋಹಿಣಿ ಮಳೆಗೆ ಹರ್ಷಗೊಂಡಿದ್ದ ರೈತರು, ಬಿತ್ತನೆ ಮಾಡಿದ್ದು, ರೋಹಿಣಿ ಬಳಿಕ ಆರಂಭಗೊಂಡ ಮೃಗಶಿರ ಮಳೆ, ಜಿಲ್ಲೆಯಲ್ಲಿ ಮುಖ ತೋರಿಸಿಲ್ಲ. ಹೀಗಾಗಿ ಬಿತ್ತನೆ ಮಾಡಿದ ಬೆಳೆ, ತೇವಾಂಶ ಕೊರತೆಯಿಂದ ಸರಿಯಾಗಿ ಮೊಳಕೆಯೊಡುತ್ತಿಲ್ಲ ಎಂಬ ಆತಂಕ ರೈತರಲ್ಲಿ ಶುರುವಾಗಿದೆ.

ಹೌದು, ಜಿಲ್ಲೆಯಲ್ಲಿ ರೋಹಿಣಿ ಮಳೆ ಒಂದಷ್ಟು ಉತ್ತಮವಾಗಿಯೇ ಸುರಿದಿತ್ತು. ಸಾಮಾನ್ಯ ಮಳೆಗಿಂತ ಹೆಚ್ಚಿನ ಪ್ರಮಾಣದಲ್ಲಿ ಮಳೆಯಾಗಿದ್ದರಿಂದ, ರೈತರು ಮುಂದೆ ಉತ್ತಮ ಮಳೆ ಬರಬಹುದು ಎಂಬ ನಿರೀಕ್ಷೆಯಲ್ಲಿಯೇ ಹದಗೊಂಡ ಭೂಮಿಗೆ ಮುಂಗಾರು ಬಿತ್ತನೆ ಬೀಜ ಹಾಕಿದ್ದರು. ಆದರೆ, ಕಳೆದ ಒಂದು ವಾರದಿಂದ ಜಿಲ್ಲೆಯಲ್ಲಿ ಮಳೆಯ ಸುಳಿವಿಲ್ಲ. ಹೀಗಾಗಿ ಬೀಜ ಸರಿಯಾಗಿ ಮೊಳಕೆಯೊಡದಿಲ್ಲ.

ಜಿಲ್ಲೆಯ ಆರು ತಾಲೂಕು ಪೈಕಿ, 2.65 ಲಕ್ಷ ಹೆಕ್ಟೇರ್‌ ಮುಂಗಾರು ಬಿತ್ತನೆ ಗುರಿ ಹೊಂದಿದ್ದು, ಇದಕ್ಕಾಗಿ ಕೃಷಿ ಇಲಾಖೆ ಬಿತ್ತನೆ ಬೀಜ, ರಸಗೊಬ್ಬರ ವಿತರಣೆಗೆ ಎಲ್ಲ ರೀತಿಯ ಸಜ್ಜು ಮಾಡಿಕೊಂಡಿತ್ತು. ಆದರೆ, ಮಳೆಯ ಅಭಾವದಿಂದ ಸದ್ಯ ಬಿತ್ತನೆ ಬೀಜ ಹಾಗೂ ರಸಗೊಬ್ಬರಕ್ಕೆ ಅಷ್ಟೊಂದು ಬೇಡಿಕೆ ಬರುತ್ತಿಲ್ಲ. ಜಿಲ್ಲೆಯ ಕೆಲವೆಡೆ ಉತ್ತಮ ಮಳೆಯಾಗಿದ್ದರಿಂದ, ರೈತರು ತರಾತುರಿಯಿಂದ ಬಿತ್ತನೆ ಕೂಡ ಮಾಡಿದ್ದಾರೆ. ಈಗಾಗಲೇ ಬಿತ್ತನೆ ಮಾಡಿದ ರೈತರು, ಬೆಳೆ ಮೊಳಕೆಯೊಡೆಯುವುದನ್ನೇ ಕಾಯುತ್ತಿದ್ದಾರೆ.

ಕಳೆದ ಏಪ್ರಿಲ್ 14ರಿಂದ ಮುಂಗಾರು ಮಳೆಗಳು ಆರಂಭಗೊಂಡರೂ ಅಶ್ವಿ‌ನಿ, ಭರಣಿ, ಕೃತ್ತಿಕ ಮಳೆ ಬರಲೇ ಇಲ್ಲ. ಮೇ 29ರಂದು ಆರಂಭಗೊಂಡ ರೋಹಿಣಿ ಮಳೆ, ಜಿಲ್ಲೆಯ ಹಲವೆಡೆ ಉತ್ತಮವಾಗಿ ಸುರಿದಿತ್ತು. ಜೂ.8ರಿಂದ ಮೃಗಶಿರ ಮಳೆ ಆರಂಭಗೊಂಡಿದ್ದು, ಬುಧವಾರ ಸಂಜೆ ನಾಲ್ಕು ಹನಿ ಸುರಿದಿದ್ದು ಬಿಟ್ಟರೆ ಈ ವರೆಗೆ ಮೃಗಶಿರ ಮುಖ ತೋರಿಸಿಲ್ಲ. ಹೀಗಾಗಿ ರೋಹಿಣಿ ಮತ್ತು ಮೃಗಶಿರ ನಂಬಿಯೇ ಬಿತ್ತನೆ ಮಾಡಿದ ರೈತರು, ಸದ್ಯ ಆತಂಕ ಎದುರಿಸುತ್ತಿದ್ದಾರೆ.

ಮುಂಗಾರು ಹಂಗಾಮಿಗೆ ಏಕ ದಳಧಾನ್ಯ, ದ್ವಿ ದಳಧಾನ್ಯ, ಎಣ್ಣೆಕಾಳು, ಕಬ್ಬು ಸೇರಿದಂತೆ ಒಟ್ಟು 2,65,000 ಹೆಕ್ಟೇರ್‌ ಪ್ರದೇಶದಲ್ಲಿ ಬಿತ್ತನೆ ಗುರಿ ಇದ್ದು, ಈ ವರೆಗೆ ಒಟ್ಟು 99,647 (ಶೇ.37.60) ಹೆಕ್ಟೇರ್‌ ಪ್ರದೇಶದಲ್ಲಿ ಬಿತ್ತನೆಯಾಗಿದೆ.

ಟಾಪ್ ನ್ಯೂಸ್

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

Supreme Court

Supreme Courtನಲ್ಲಿ ಪಿವಿಎನ್‌, ಮನಮೋಹನ್‌ ಸಿಂಗ್‌ಗೆ ಕೇಂದ್ರ ಸರಕಾರ ಶ್ಲಾಘನೆ

Rajeev Chandrashekhar

Corrupt ಡಿಕೆಶಿ ಸರ್ಟಿಫಿಕೆಟ್‌ ಬೇಕಾಗಿಲ್ಲ: ಕೇಂದ್ರ ಸಚಿವ ರಾಜೀವ್‌ ತಿರುಗೇಟು

1-wqewqe

2014 ಭರವಸೆ, 2019 ನಂಬಿಕೆ, 2024ರಲ್ಲಿ ಗ್ಯಾರಂಟಿ: ಮೋದಿ

mamata

CAA, NRC ರದ್ದು: ದೀದಿ ಶಪಥ ಪ್ರಣಾಳಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

ತಾಕತ್ತಿದ್ದರೆ ಯತ್ನಾಳ್‌ ನನ್ನ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಲಿ: ಪಾಟೀಲ್‌

ತಾಕತ್ತಿದ್ದರೆ ಯತ್ನಾಳ್‌ ನನ್ನ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಲಿ: ಪಾಟೀಲ್‌

ಯತ್ನಾಳ್ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿ…: ಶಿವಾನಂದ ಪಾಟೀಲ್ ಸವಾಲು

Bagalkote; ಯತ್ನಾಳ್ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿ…: ಶಿವಾನಂದ ಪಾಟೀಲ್ ಸವಾಲು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

Supreme Court

Supreme Courtನಲ್ಲಿ ಪಿವಿಎನ್‌, ಮನಮೋಹನ್‌ ಸಿಂಗ್‌ಗೆ ಕೇಂದ್ರ ಸರಕಾರ ಶ್ಲಾಘನೆ

suicide

ಕಾಶ್ಮೀರದಲ್ಲಿ ಗುಂಡು ಹಾರಿಸಿ ಬಿಹಾರ ಕಾರ್ಮಿಕನ ಹತ್ಯೆ  

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.