ರಸ್ತೆಗಿಲ್ಲ ರಕ್ಷಣಾ ಬ್ಯಾರಿಕೇಡ್‌: ಸಂಚಾರ ದುಸ್ತರ


Team Udayavani, Sep 7, 2020, 3:21 PM IST

ರಸ್ತೆಗಿಲ್ಲ ರಕ್ಷಣಾ ಬ್ಯಾರಿಕೇಡ್‌: ಸಂಚಾರ ದುಸ್ತರ

ಕಲಾದಗಿ: ಮೂರು ತಾಲೂಕಿನ ಮೂವತ್ತು ಹಳ್ಳಿಗಳಿಗೆ ಸಂಪರ್ಕ ಕಲ್ಪಿಸುವ ಕಲಾದಗಿ ಕಾತರಕಿ ಬ್ರಿಜ್‌ ಕಂ ಬ್ಯಾರೇಜ್‌ ರಸ್ತೆಗೆ ರಕ್ಷಣಾ ಬ್ಯಾರಿಕೇಡ್‌ ಅಳವಡಿಸದೇ ಇರುವುದರಿಂದ ವಾಹನ ಸವಾರರು ನಿತ್ಯವೂ ಪ್ರಾಣ ಭಯದಲ್ಲೇ ಸಂಚರಿಸುವಂತಾಗಿದೆ.

ಬಾಗಲಕೋಟೆ, ಬೀಳಗಿ, ಮುಧೋಳ ತಾಲೂಕಿನ ಹಲವು ಹಳ್ಳಿಗಳಿಗೆ ಸನಿಹ ಸಂಪರ್ಕ ರಸ್ತೆ ಕಲಾದಗಿ ಕಾತರಕಿ ಬ್ರಿಜ್‌ ಕಂ ಬ್ಯಾರೇಜ್‌ ರಸ್ತೆ ರೈತರಿಗೆ ವ್ಯಾಪಾರಸ್ಥರಿಗೆ ಉಪಯೋಗಿ ಸಂಚಾರ ರಸ್ತೆಯಾಗಿದೆ. ನಿತ್ಯ ನೂರಾರು ವಾಹನಗಳು ಸಂಚರಿಸುತ್ತಿವೆ. ಬ್ಯಾರೇಜ್‌ ಬಳಿಯ ಬಾಗಲಕೋಟೆ ತಾಲೂಕಿನ ಭಾಗದ ಮಣ್ಣು ಏರು ರಸ್ತೆಗೆ ಎರಡೂ ಕಡೆ ರಕ್ಷಣಾ ಬ್ಯಾರಿಕೇಡ್‌ ಇಲ್ಲ.

ಸವಾರರ ಆಕ್ರೋಶ: ಕಳೆದ ಆಗಸ್ಟ್‌ ಮೊದಲ ವಾರದಲ್ಲಿ ಉಂಟಾದ ನದಿಯ ಮಹಾಪ್ರವಾಹಕ್ಕೆ ಬ್ಯಾರೇಜ್‌ ಬಳಿಯ 200 ಮೀಟರ್‌ ರಸ್ತೆ ಸಮೇತ ಹಿಂದೆ ಅಳವಡಿಸಿದ್ದ ಕ್ರಾಸ್‌ ಬೇರಿಯರ್‌ ಕಿತ್ತು ಹೋಗಿದ್ದವು. ಪ್ರವಾಹ ಅಬ್ಬರ ಕಡಿಮೆಯಾದ ನಂತರ ತುರ್ತು ಕಾಮಗಾರಿಯಲ್ಲಿ ರಸ್ತೆಯನ್ನು ದುರಸ್ತಿ ಮಾಡಿಸಿ ಸಂಚಾರಕ್ಕೆ ಅನುಕೂಲ ಮಾಡಿಕೊಡಲಾಗಿತ್ತು, ಸಂಚಾರ ರಸ್ತೆ ನಿರ್ಮಿಸಿ ವರ್ಷ ಕಳೆದರೂ ಇನ್ನೂ ಏರು ರಸ್ತೆಗೆ ಡಾಂಬರೀಕರಣ ಮಾಡಿಲ್ಲ,ಜೊತೆಗೆ ಸುರಕ್ಷತಾ ದೃಷ್ಟಿಯಿಂದ ಕ್ರಾಸ್‌ ಬ್ಯಾರಿಯರ್‌ ಜೋಡಣೆ ಮಾಡದಿರುವುದಕ್ಕೆ ಆಕ್ರೋಶ ವ್ಯಕ್ತವಾಗಿದೆ.

15 ಅಡಿ ಆಳ: ಬ್ಯಾರೇಜ್‌ ಬಳಿ ಮಣ್ಣು ಏರು ರಸ್ತೆಯಲ್ಲಿ ನಿರ್ಮಿಸಲಾಗಿದೆ, ಎರಡೂ ಕಡೆ ಹದಿನೈದು ಅಡಿಯಿಂದ ಇಪ್ಪತ್ತು ಅಡಿ ಆಳ ಹೊಂದಿದೆ. ವಾಹನ ಸವಾರರು ಎಚ್ಚರ ತಪ್ಪಿದರೆ ಅನಾಹುತ ಖಚಿತ ಎಂಬಂತಾಗಿದೆ. ಹಳ್ಳಿಗಳ ಸನಿಹ ಸಂಪರ್ಕಕ್ಕೆ ಪ್ರಮುಖ ರಸ್ತೆಯಾಗಿರುವ ಈ ರಸ್ತೆ ಕೂಡಲೇ ಡಾಂಬರೀಕರಣ ಮತ್ತು ರಸ್ತೆ ಎರಡು ಬದಿ ಕ್ರಾಸ್‌ ಬ್ಯಾರಿಯರ್‌ ಜೋಡಣೆ ಮಾಡಬೇಕೆಂದು ವಾಹನ ಸವಾರರು, ಸಾರ್ವಜನಿಕರು ಆಗ್ರಹಿಸಿದ್ದಾರೆ.

ಬ್ಯಾರೇಜ್‌ ಬಳಿ ರಸ್ತೆಯ ಎರಡೂ ಬದಿ 20 ಅಡಿ ಆಳದ ತೆಗ್ಗುಗಳಿವೆ. ಸುರಕ್ಷತಾ ದೃಷ್ಟಿಯಿಂದ ಕ್ರಾಸ್‌ ಬ್ಯಾರಿಯರ್‌ ಅಳವಡಿಸಲಿ ಹಾಗೂ ರಸ್ತೆಗೆ ಡಾಂಬರೀಕರಣ ಮಾಡಬೇಕು. – ಬಸವರಾಜ ಬಿಲಕೇರಿ, ಅಂಕಲಗಿ ಗ್ರಾಮಸ್ಥ

ಕಲಾದಗಿ ಕಾತರಕಿ ಬ್ರಿಜ್‌ ಕಂ ಬ್ಯಾರೇಜ್‌ ಬಳಿಯ ರಸ್ತೆಗೆ ಸೈಡ್‌ ಕ್ರಾಸ್‌ ಬೇರಿಯರ್‌, ಪಿಚ್ಚಂಗಿ ಹಚ್ಚಿಕೊಳ್ಳುವಿಕೆ, ಡಾಂಬರೀಕರಣ ಕಾಮಗಾರಿಗೆ ಹಣಕಾಸು ಇಲಾಖೆಯ ಅನುಮೋದನೆ ದೊರೆಯದೆ ಇರುವುದರಿಂದ ಕಾಮಗಾರಿ ವಿಳಂಬವಾಗುತ್ತಿದೆ. – ರವೀಂದ ಕುಂಬಾರ, ಎಇಇ, ಸಣ್ಣ ನೀರಾವರಿ ಇಲಾಖೆ ಬಾಗಲಕೋಟೆ.

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.