ತಿಂಗಳಾದ್ರೂ ನಲ್ಲಿಗೆ ಬರ್ತಿಲ್ಲ ನೀರು

•ಕುಡಿವ ನೀರಿಗೆ ನಿತ್ಯವೂ ನಿವಾಸಿಗಳ ಅಲೆದಾಟ •ಕೊಳವೆ ಬಾವಿಗಳಲ್ಲಿ ಅಂತರ್ಜಲ ಕುಸಿತ

Team Udayavani, May 15, 2019, 11:36 AM IST

bagalkote-tdy-5..

ಕೆರೂರ: : ಪಟ್ಟಣದ ತರಕಾರಿ ಮಾರ್ಕೆಟ್‌ನ ಬೋರವೆಲ್ಗೆ ನೀರಿಗಾಗಿ ಸರದಿಯಲ್ಲಿರುವ ಕುಂಬಾರ ಹಾಗೂ ಚೋರಗಸ್ತಿ ಗಲ್ಲಿ ನಿವಾಸಿಗಳು.

ಕೆರೂರ: ಪಟ್ಟಣದಲ್ಲಿ ಸುಮಾರು 15- 20ದಿನಗಳಾದರೂ ನಲ್ಲಿಗಳಿಗೆ ನೀರು ಬರುತ್ತಿಲ್ಲ. ಮನೆ ಬಿಟ್ಟು ಹೊರಗೆ ಅಡಿಯಿಟ್ಟರೆ ನೆತ್ತಿ ಸುಡುವಷ್ಟು ಕೆಂಡದಂಥ ರಣ ಬಿಸಿಲು. ಕುಡಿಯಲು ನೀರು ಬೇಕಾದರೆ ಎರಡ್ಮೂರು ಕಿ.ಮೀ. ದೂರ ನೀರು ಸಿಗುವಲ್ಲಿಗೆ ತಳ್ಳುಗಾಡಿ, ಸೈಕಲ್ ಹಾಗೂ ಬೈಕ್‌ಗಳಲ್ಲಿ ನಿತ್ಯವೂ ಅಲೆಯಬೇಕಾಗಿದೆ.

ಬಿರು ಬೇಸಿಗೆಯ ವಿಷಮ ಸ್ಥಿತಿಯಲ್ಲಿ ಸಾರ್ವಜನಿಕರಿಗೆ ಸಮರ್ಪಕವಾಗಿ ನೀರಿನ ವ್ಯವಸ್ಥೆ ಕೈಗೊಳ್ಳಬೇಕಾದ ಸ್ಥಳೀಯ ಪಟ್ಟಣ ಪಂಚಾಯತ, ಎಷ್ಟು ಕೊಳವೆಬಾವಿ ಕೊರೆಯಿಸಿದರೂ ಅಂತರ್ಜಲ ಸಿಗುತ್ತಿಲ್ಲ ಎಂದು ಕೈ ಚೆಲ್ಲಿ ಕುಳಿತಿದೆ. ಎಲ್ಲ ಬಡಾವಣೆಗಳಲ್ಲಿ ನೀರಿನ ಸಮಸ್ಯೆ ಕುರಿತು ವ್ಯಾಪಕ ದೂರುಗಳೇ ಕೇಳಿ ಬರುತ್ತಿವೆ.

ಒಂದೇ ಕೊಳವೆಬಾವಿ: ಬೇಸಿಗೆ ಅವಧಿಗೆ ಮುನ್ನ ಪಟ್ಟಣಕ್ಕೆ ನೀರು ಪೂರೈಸುವ ಹಳಗೇರಿ ಬಳಿಯ ಪಂಪ್‌ಹೌಸ್‌ಗೆ ನಾಲ್ಕೈದು ಬೋರವೆಲ್ಗಳಿಂದ ನೀರು ಪೂರೈಸಲಾಗುತ್ತಿತ್ತು. ಆದರೆ, ಸತತ ಭೀಕರ ಬರಗಾಲದಿಂದ ಈ ಕಡು ಬೇಸಿಗೆಯಲ್ಲಿ ಅಂತರ್ಜಲ ಪಾತಾಳಕ್ಕೆ ಇಳಿದಿದೆ. ಸದ್ಯ ಒಂದು ಬೋರವೆಲ್ ಮಾತ್ರ ದಿನಕ್ಕೆ ಕನಿಷ್ಠ ಪ್ರಮಾಣದಲ್ಲಿ ಕೆಂಪುಮಣ್ಣು ಮಿಶ್ರಿತ ನೀರು ಪೂರೈಸುತ್ತಿದ್ದು, ಸ್ಥಳೀಯ ಜನತೆಯ ಬೇಡಿಕೆಗೆ ತಕ್ಕಂತೆ ನೀರು ಸರಬರಾಜು ಆಗುತ್ತಿಲ್ಲ.

ಮುಖ್ಯಾಂಶಗಳು:

•ಬಿಂದಿಗೆ ನೀರಿಗೆ ತಾಸುಗಟ್ಟಲೆ ಅಲೆದಾಟ

•ನಲ್ಲಿ ನೀರು ಬಿಟ್ಟರೆ ಬೇರೆ ವ್ಯವಸ್ಥೆ ಇಲ್ಲದ ನಿವಾಸಿಗಳ ಗೋಳಾಟ

•ಬೇಸಿಗೆಯಲ್ಲಿ ಒಂದೇ ಬೋರವೆಲ್ನಿಂದ ಮಾತ್ರ ನೀರು ಪೂರೈಕೆ

•ದಿನವಿಡಿ ನೀರು ತರುವುದೇ ಕೆಲಸ

•ಪಟ್ಟಣ ಪಂಚಾಯತ ನಿರ್ಲಕ್ಷ್ಯ ಧೋರಣೆ

ಬೇಸಿಗೆ ಹೆಚ್ಚಿದ ಬವಣೆ: ಸ್ಥಳೀಯ ಕುಂಬಾರ, ಚೋರಗಸ್ತಿ ಗಲ್ಲಿಗಳು, ಚಿನಗುಂಡಿ ಫ್ಲಾಟ್ ಹಾಗೂ ನೆಹರುನಗರ, ನವನಗರ, ಆಶ್ರಯ ಬಡಾವಣೆ, ಕೆಎಚ್‌ಡಿಸಿ ಫ್ಲಾಟ್, ಹೊಸಪೇಟೆ ಸೇರಿದಂತೆ ಇತರೆ ಬಡಾವಣೆಗಳಲ್ಲಿ ನೀರು ಪೂರೈಕೆ ವ್ಯವಸ್ಥೆ ತೀವ್ರವಾಗಿ ಹದಗೆಟ್ಟಿದೆ. ಅಲ್ಲಿನ ನಿವಾಸಿಗಳ ಗೋಳು ಹೇಳತೀರದಂತಾಗಿದೆ. ತಮ್ಮ ನಿತ್ಯದ ಕೆಲಸ ಬದಿಗೊತ್ತಿ ನೀರು ಹಿಡಿದು ತರುವುದೇ ನಿತ್ಯವೂ ಕೆಲಸವಾಗಿದೆ ಎನ್ನುತ್ತಾರೆ ಚಿನಗುಂಡಿ ಫ್ಲಾಟ್‌ನ ಬಸು ಬಡಿಗೇರ. ಸ್ಥಳೀಯ ಆಶ್ರಯ ಫ್ಲಾಟ್ ಬಡಾವಣೆ, ನೆಹರುನಗರ, ನವನಗರ, ಕೆಎಚ್‌ಡಿಸಿ ಕಾಲೋನಿ, ಚಿನಗುಂಡಿಫ್ಲಾಟ್, ಕುಂಬಾರ ಗಲ್ಲಿ ಸೇರಿದಂತೆ ಬಹುತೇಕ ಬಡಾವಣೆಗಳಲ್ಲಿ ಪಟ್ಟ ಣ ಪಂಚಾಯತ ಅಳವಡಿಸಿರುವ ನೀರು ಪೂರೈಕೆ ಕೊಳವೆ ಬಾವಿ ಬಿಟ್ಟರೆ ಬೇರೆ ಯಾವುದೇ ಬಗೆಯ ತೆರೆದ ಬಾವಿ, ಕೊಳವೆಬಾವಿ ಸೌಲಭ್ಯಗಳಿಲ್ಲ.

ಬೇಸಿಗೆ ಬವಣೆ ನೀಗಿಸಲು ಕೆರೆಯಲ್ಲಿ ಸಂಗ್ರಹಿಸಿದ್ದ ಘಟಪ್ರಭೆ ನೀರು ಖಾಲಿಯಾಗಿದೆ. ನಾಗರಿಕರಿಗೆ ನೀರು ಪೂರೈಸುವ ಬೋರವೆಲ್ಗಳಲ್ಲಿ ಅಂತರ್ಜಲ ಮಟ್ಟ ತೀವ್ರ ಕುಸಿತ ಕಂಡಿದೆ. ನೀರು ಸರಬರಾಜಿನಲ್ಲಿ ವ್ಯತ್ಯಯ ಉಂಟಾಗುತ್ತಿದೆ. ತೀವ್ರತೆ ಮನಗಂಡು ಟ್ಯಾಂಕರ್‌ ಮೂಲಕ ಪೂರೈಸುತ್ತಿದ್ದೇವೆ. ತೆರೆದ ಬಾವಿಗಳ ನೀರು ಪೂರೈಕೆಗೆ ಆದ್ಯತೆ ನೀಡುತ್ತಿದ್ದು, ಶೀಘ್ರ ಶುದ್ಧ ಕುಡಿವ ನೀರಿನ ಘಟಕ ಹೆಚ್ಚಿಸಿ ಸಮಸ್ಯೆ ನಿವಾರಣೆಗೆ ಕ್ರಮ ಕೈಗೊಳ್ಳುತ್ತೇವೆ.-ಎಂ.ಜಿ. ಕಿತ್ತಲಿ, ಸಹಾಯಕ ಕಾರ್ಯ ನಿರ್ವಾಹಕ ಇಂಜನೀಯರ್‌, ಗ್ರಾಮೀಣ ಕುಡಿಯುವ ನೀರು ಪೂರೈಕೆ ವಿಭಾಗ

ನೀರು ಪೂರೈಕೆ ಸಮಸ್ಯೆ ಉಲ್ಬಣಿಸದಂತೆ ಎಲ್ಲ ಬಗೆಯಲ್ಲೂ ನಿಗಾ ವಹಿಸಿದ್ದೇವೆ. ಸತತ ಬರದಿಂದ ಅಂತರ್ಜಲ ಕ್ಷೀಣಿಸಿರುವ ಪರಿಣಾಮ ಸರಬರಾಜಿನಲ್ಲಿ ವ್ಯತ್ಯಯ ಆಗುತ್ತಿದ್ದು, ಜಿಲ್ಲಾಡಳಿತದಿಂದ ಅಗತ್ಯ ನೆರವು ಪಡೆದು ಸ್ಥಳೀಯರ ನೀರಿನ ಬವಣೆ ಪರಿಹರಿಸುತ್ತೇವೆ. ಬೇಸಿಗೆ ಅವಧಿ ಕಾರಣ ನಾಗರಿಕರು ಸಹ ಸ್ಥಳೀಯ ಆಡಳಿತದೊಂದಿಗೆ ಸಹಕರಿಸಬೇಕು.

•ಜೆ.ವಿ. ಕೆರೂರ

 

ಟಾಪ್ ನ್ಯೂಸ್

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

Baragala (2)

IMD; ಕರ್ನಾಟಕ ಸೇರಿ 23 ರಾಜ್ಯಗಳ 125 ಜಿಲ್ಲೆಗಳಿಗೆ ‘ಬರ’ಸಿಡಿಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

ತಾಕತ್ತಿದ್ದರೆ ಯತ್ನಾಳ್‌ ನನ್ನ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಲಿ: ಪಾಟೀಲ್‌

ತಾಕತ್ತಿದ್ದರೆ ಯತ್ನಾಳ್‌ ನನ್ನ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಲಿ: ಪಾಟೀಲ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.