ಅನ್ನದಾತರ ಅಲೆದಾಟ ತಪ್ಪಿಸಲು ಅಧಿಕಾರಿಗಳಿಗೆ ಸೂಚನೆ
ನನ್ನ ಅಧಿಕಾರವಧಿಯಲ್ಲಿ ರೈತರ ಸಮಸ್ಯೆ ಪರಿಹಾರಕ್ಕೆ ಹೆಚ್ಚು ಸಮಯ ಮೀಸಲು: ಬಾಯಕ್ಕ
Team Udayavani, Jun 12, 2019, 9:47 AM IST
ಬಾಗಲಕೋಟೆ: ನಗರದಲ್ಲಿ ನಡೆದ ಸಮಗ್ರ ಕೃಷಿ ಅಭಿಯಾನ ಕಾರ್ಯಕ್ರಮವನ್ನು ಜಿಪಂ ಅಧ್ಯಕ್ಷೆ ಬಾಯಕ್ಕ ಮೇಟಿ ಉದ್ಘಾಟಿಸಿದರು.
ಬಾಗಲಕೋಟೆ: ಸರಕಾರ ರೈತರಿಗಾಗಿ ಹಲವಾರು ಯೋಜನೆ ಜಾರಿಗೆ ತಂದಿದ್ದು, ರೈತರು ಸದುಪಯೋಗ ಪಡೆದುಕೊಳ್ಳಬೇಕು ಎಂದು ಜಿಪಂ ಅಧ್ಯಕ್ಷೆ ಬಾಯಕ್ಕ ಮೇಟಿ ಹೇಳಿದರು.
ನಗರದ ಕೃಷಿ ವಿಜ್ಞಾನ ಕೇಂದ್ರದಲ್ಲಿ ಸಮಗ್ರ ಕೃಷಿ ಅಭಿಯಾನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಅನ್ನದಾತನ ಸಮಸ್ಯೆ ಈಡೇರಿಸುವುದರ ಜೊತೆಗೆ ಸರಕಾರ ತಂದಿರುವ ಯೋಜನೆಗಳ ಲಾಭ ತಲುಪಿಸುವ ಕಾರ್ಯ ಮಾಡುವುದಾಗಿ ತಿಳಿಸಿದರು.
ರೈತರು ತಮಗೆ ಉಂಟಾಗುವ ಸಮಸ್ಯೆಗಳಿಗೆ ಸ್ಪಂದಿಸುವ ಕಾರ್ಯ ಮಾಡುವುದರ ಜೊತೆಗೆ ರೈತರನ್ನು ಅಲೆದಾಟ ತಪ್ಪಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ. ತಮ್ಮ ಯಾವುದೇ ಕೆಲಸಗಳು ತ್ವರಿತಗತಿಯಲ್ಲಿ ಮಾಡುವುದಾಗಿ ತಿಳಿಸಿದರು.
ವಸ್ತು ಪ್ರದರ್ಶನ ಮಳಿಗೆ ಉದ್ಘಾಟಿಸಿ ಮಾತನಾಡಿದ ಶಾಸಕ ಡಾ|ವೀರಣ್ಣ ಚರಂತಿಮಠ, ಕಳೆದ ಕೆಲ ದಿನಗಳಿಂದ ಜಿಲ್ಲೆಯಲ್ಲಿ ಉತ್ತಮ ಮಳೆಯಾಗಿದ್ದು, ರೈತರ ಮುಖದಲ್ಲಿ ಸಂತಸ ಮೂಡಿದೆ ಎಂದರು.
ತಾಪಂ ಅಧ್ಯಕ್ಷ ಚನ್ನನಗೌಡ ಪರನಗೌಡರ ಮಾತನಾಡಿ, ಸರಕಾರವು ಮಣ್ಣಿನ ಹಾಗೂ ನೀರು ಸಂರಕ್ಷಣೆಗಾಗಿ ಹಲವಾರು ಯೋಜನೆ ಜಾರಿಗೆ ತಂದಿದ್ದು, ಅವುಗಳ ಅಳವಡಿಕೆಯಿಂದಾಗುವ ಲಾಭಗಳನ್ನು ರೈತರು ಪಡೆಯಬೇಕು. ಅವೈಜ್ಞಾನಿಕ ಕೃಷಿ ಪದ್ದತಿಯಿಂದ ರೈತರು ದೂರವಿದ್ದು, ತಜ್ಞರ ಸಲಹೆ ಮಾರ್ಗದರ್ಶನದಂತೆ ಉಳಿಮೆ ಬಿತ್ತನೆ ಮಾಡಬೇಕು ಎಂದರು.
ಜಿಲ್ಲಾ ಜಂಟಿ ಕೃಷಿ ನಿರ್ದೇಶಕ ರಾಜಶೇಖರ ವಿಜಾಪುರ ಪ್ರಾಸ್ತಾವಿಕವಾಗಿ ಮಾತನಾಡಿದರು. ಜಿಪಂ ಸದಸ್ಯರಾದ ಹನಮವ್ವ ಕರಿಹೋಳಿ, ಹೂವಪ್ಪ ರಾಠೊಡ, ರಂಗಪ್ಪ ಗೌಡರ, ಶೋಭಾ ಬಿರಾದಾರಪಾಟೀಲ, ಕೃಷಿಕ ಸಮಾಜದ ಅಧ್ಯಕ್ಷ ಮುತ್ತನಗೌಡ ಗೌಡರ, ಉಪಾಧ್ಯಕ್ಷ ದುರುಗಪ್ಪ ಸಿದ್ದಾಪುರ, ತೋವಿವಿಯ ವಿಸ್ತರಣಾ ನಿರ್ದೇಶಕ ಡಾ|ವೈ.ಕೆ.ಕೋಟೆಕಲ್ಲ, ಪ್ರಾದೇಶಿಕ ಕೃಷಿ ಸಂಶೋದನಾ ಕೇಂದ್ರದ ಸಹ ವಿಸ್ತರಣಾ ನಿರ್ದೇಶಕ ಡಾ|ಎಸ್.ಡಿ.ಕಲಘಟಗಿ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’
Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್ ಹೆಗ್ಡೆ
Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ
Subramanya ಏನೆಕಲ್ಲು: ಕಾರಿಗೆ ಗೂಡ್ಸ್ ಆಟೋ ಢಿಕ್ಕಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ