ಅಧಿಕಾರಿಗಳಿಗೆ ಅನುದಾನದ ಚಿಂತೆ!


Team Udayavani, Mar 18, 2020, 11:28 AM IST

ಅಧಿಕಾರಿಗಳಿಗೆ ಅನುದಾನದ ಚಿಂತೆ!

ಬಾಗಲಕೋಟೆ: ಮಹಾಮಾರಿ ಕೊರೊನಾ ವೈರಸ್‌ ಜನರನ್ನು ತೀವ್ರ ಭೀತಿಗೆ ಒಳಪಡಿಸಿದ್ದರೆ, ಅಧಿಕಾರಿಗಳು ಈ ವರ್ಷದ ಅನುದಾನ ಬಳಕೆಯ ಚಿಂತೆಯಲ್ಲಿದ್ದಾರೆ.

ಹೌದು, ಕೇಂದ್ರ ಮತ್ತು ರಾಜ್ಯ ಪುರಸ್ಕೃತ ವಿವಿಧ ಯೋಜನೆಗಳಡಿ ಜಿಲ್ಲೆಗೆ ಹಂಚಿಕೆಯಾದ ಅನುದಾನ, ಮಾ. 31ರೊಳಗಾಗಿ ಸಂಪೂರ್ಣ ಬಳಸಬೇಕು. ಇಲ್ಲದಿದ್ದರೆ ಅನುದಾನ ಲ್ಯಾಪ್ಸ್‌ ಆಗಲಿದ್ದು, ಆ ಸಂಬಂಧ ಅಧಿಕಾರಿಗಳು, ಕ್ರಮಕ್ಕೆ ಗುರಿಯಾಗುತ್ತಾರೆ. ಹೀಗಾಗಿ, ಹೇಗಾದರೂ ಮಾಡಿ, ಪೂರ್ಣ ಅನುದಾನ ಬಳಸಲು ಅಧಿಕಾರಿಗಳು ತಲೆಕೆಡಿಸಿಕೊಂಡು ಕಡತಗಳ ವಿಲೇವಾರಿಯಲ್ಲಿ ತೊಡಗಿದ್ದಾರೆ ಎಂಬ ಮಾತು ಜಿಲ್ಲಾಡಳಿತ ಭವನದ ಪಡಸಾಲೆಯಿಂದ ಕೇಳಿ ಬರುತ್ತಿದೆ.

ಟೆಂಡರ್‌ ಕರೆಯುವ ತಿಂಗಳು: ಪ್ರತಿ ವರ್ಷವೂ ಬಹುತೇಕ ಇಲಾಖೆಗಳ ಅಧಿಕಾರಿಗಳು, ಫೆಬ್ರವರಿವರೆಗೂ ಅನುದಾನ ಬಳಕೆ ಕುರಿತು ಗಂಭೀರತೆತೋರಿಸಲ್ಲ. ಫೆಬ್ರವರಿ ಬಂದ ಕೂಡಲೇ ಟೆಂಡರ್‌ ಕರೆದು, ಅನುದಾನ ಬಳಕೆಗೆ ಮುಂದಾಗುತ್ತಾರೆ. ಕಳೆದ ಫೆಬ್ರವರಿ ಮೊದಲ ವಾರದಿಂದ ಮಾರ್ಚ್‌ 2ನೇ ವಾರದವರೆಗೂ ಹಲವು ಇಲಾಖೆಗಳ, ಹಲವು ಟೆಂಡರ್‌ ಕರೆಯಲಾಗಿತ್ತು. ಈಗ ಟೆಂಡರ್‌ ಕರೆದು, ಕಾಮಗಾರಿ ಪೂರ್ಣಗೊಳ್ಳುವುದು ಸಾಧ್ಯವೇ ಇಲ್ಲ.ಹೀಗಾಗಿ ಟೆಂಡರ್‌ ಓಪನ್‌ ಮಾಡಿ, ಗುತ್ತಿಗೆದಾರರಿಗೆ ಕಾಮಗಾರಿಯ ಆದೇಶ ಪ್ರತಿ ಕೊಡುವ ಜತೆಗೆ ಅನುದಾನದ ಚೆಕ್‌ ಕೂಡ ಕೊಡಲಾಗುತ್ತದೆ. ಇದು ಹಲವು ವರ್ಷಗಳಿಂದ ಜಿಲ್ಲೆಯಲ್ಲಿ ಒಂದು ಪರಂಪರೆಯಾಗಿ ರೂಢಿಯಾಗುತ್ತಿದೆ ಎಂಬ ಆರೋಪ ಕೇಳಿ ಬಂದಿದೆ.

ಜಿಪಂ ಅನುದಾನದ್ದೆ ಚಿಂತೆ: ಜಿಪಂ ವ್ಯಾಪ್ತಿಯ ಸುಮಾರು 28 ಇಲಾಖೆಗಳಿಗೆ ಅನುದಾನ ಹಂಚಿಕೆ ಮಾಡಿದ್ದು, ಅದಕ್ಕೆ ಜಿಪಂ ಸಾಮಾನ್ಯ ಸಭೆಯಲ್ಲಿ ಅನುಮೋದನೆ ಕೊಡುವುದು ವಿಳಂಬವಾಗಿದೆ. ಕಳೆದ ಅಕ್ಟೋಬರ್‌ನಲ್ಲಿ ಅನುದಾನಕ್ಕೆ ಅನುಮೋದನೆ ಸಿಕ್ಕಿದ್ದು, ಅಧಿಕಾರಿಗಳು ಅನುದಾನ ಬಳಕೆಗೆ ಪ್ರಯಾಸಪಡುತ್ತಿದ್ದಾರೆ. ಅದರಲ್ಲೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆಯಿಂದ ಗ್ರಾಮೀಣ ರಸ್ತೆಗಳಿಗಾಗಿ ಪ್ರತಿವರ್ಷ ಅನುದಾನ ಬರುತ್ತಿದ್ದು, ರಸ್ತೆಗಳ ಡಾಂಬರೀಕರಣ ಬದಲು, ಪ್ಯಾಚ್‌ವರ್ಕ್‌ ಮಾತ್ರ ನಡೆಯುತ್ತವೆ ಎಂಬ ಆರೋಪವಿದೆ. ಅಲ್ಲದೇ ಜಿಪಂನ ಎಲ್ಲ ಇಲಾಖೆಗಳ ಅನುದಾನ ಸಂಪೂರ್ಣ ಬಳಕೆಗೆ ಜಿಪಂ ಸಿಇಒ ಸಹಿತ ಜಿಲ್ಲೆಯ ಜನಪ್ರತಿನಿಧಿಗಳು ಸೂಚನೆ ನೀಡಿದ್ದು, ಈ ತಿಂಗಳ ಅಂತ್ಯಕ್ಕೆ ಅನುದಾನ ಲ್ಯಾಪ್ಸ್‌ ಆಗದಂತೆ ಓಡಾಡಿ ಕಾರ್ಯ ನಿರ್ವಹಿಸುತ್ತಿದ್ದಾರೆ ಎನ್ನಲಾಗಿದೆ.

ಲೋಕೋಪಯೋಗಿ ಇಲಾಖೆಯ ಅನುದಾನ ಬಳಕೆಗೆ ನಿರ್ದಿಷ್ಟ ಕ್ರಿಯಾ ಯೋಜನೆ ಬದಲು,ಅಂದಾದುಂದಿಯಾಗಿ ಅನುದಾನ ಬಳಕೆ ಮಾಡಲಾಗುತ್ತಿದೆ ಎಂಬ ಆರೋಪ ಕೇಳಿ ಬಂದಿದೆ. ಇಲಾಖೆಯ ಗ್ರಾಮೀಣ ರಸ್ತೆಗಳು ಹಾಳಾಗಿದ್ದು ಅವುಗಳ ದುರಸ್ತಿ, ಡಾಂಬರೀಕರಣ ಬದಲು, ಅಧಿಕಾರಿಗಳ ಸರ್ಕಾರಿ ನಿವಾಸ, ಹೆಲಿಪ್ಯಾಡ್‌ ನಿರ್ಮಾಣ, ಪ್ರವಾಸಿ ಮಂದಿರಗಳ ರಸ್ತೆ ಹೀಗೆ ವಿವಿಧ ಕಾರ್ಯಕ್ಕೆ ಬಳಸಲಾಗುತ್ತಿದೆ ಎನ್ನಲಾಗಿದೆ. ಹೆದ್ದಾರಿ, ಜಿಲ್ಲಾ ಮತ್ತು ಗ್ರಾಮೀಣ ರಸ್ತೆಗಳಿಗೆ ಅನುದಾನ ಖರ್ಚು ಮಾಡದೇ, ಅಧಿಕಾರಿಗಳ ನಿವಾಸಗಳಿಗೆ ಅನುದಾನ ಹೆಚ್ಚು ಖರ್ಚು ಮಾಡುತ್ತಿರುವುದು ಚರ್ಚೆಗೂ ಗ್ರಾಸವಾಗಿದೆ. ಅದರಲ್ಲೂ ಜಿಲ್ಲಾಡಳಿತ ಭವನದಿಂದ ಜಿಲ್ಲಾ ಮಟ್ಟದ ಅಧಿಕಾರಿಗಳ ನಿವಾಸಕ್ಕೆ ತೆರಳುವ ರಸ್ತೆಗಳನ್ನು ಸುಂದರಗೊಳಿಸಿದ್ದು, ಜನರಿಗೆ ವಾರ್ಡ್‌ವಾರು ರಸ್ತೆ ಅಭಿವೃದ್ಧಿಪಡಿಸಿ ಎಂಬ ಒತ್ತಾಯ ಕೇಳಿ ಬಂದಿದೆ.

ಜಿಲ್ಲಾಡಳಿತ ಭವನದ ಪಕ್ಕ ಇರುವ ಹೆಲಿಪ್ಯಾಡ್‌ ಅಭಿವೃದ್ಧಿ ಪಡಿಸಲಾಗುತ್ತಿದೆ. ಅಲ್ಲದೇ ಅಧಿಕಾರಿಗಳ ನಿವಾಸಕ್ಕೆ ತೆರಳುವ ಎಲ್ಲ ರಸ್ತೆಗಳೂ ಹೈಟೆಕ್‌ ಮಾದರಿಯಲ್ಲಿ ಅಭಿವೃದ್ಧಿಗೊಂಡಿವೆ. ಆದರೆ, ಸಾರ್ವಜನಿಕರ ಓಡಾಡಕ್ಕಿರುವ ರಸ್ತೆ ದುರಸ್ತಿ ಮಾಡಬೇಕು. ಅಧಿಕಾರಿಗಳು ತಮಗೆ ಬೇಕಾದ ಸೌಲಭ್ಯ ಪಡೆಯುವಂತೆ, ಜನರಿಗೂ ಜವಾಬ್ದಾರಿಯಿಂದ ಮೂಲಸೌಲಭ್ಯ ಕಲ್ಪಿಸಬೇಕು.- ವೆಂಕಟಾಚಲಪತಿ ಬಳ್ಳಾರಿ, ಪ್ರಧಾನ ಕಾರ್ಯದರ್ಶಿ, ಬಾಗಲಕೋಟೆ ಪಟ್ಟಣ ಅಭಿವೃದ್ಧಿ ಹೋರಾಟ ಸಮಿತಿ

 

ಶ್ರೀಶೈಲ ಕೆ. ಬಿರಾದಾರ

ಟಾಪ್ ನ್ಯೂಸ್

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!

Exam

NEET ಟಾಪರ್‌ಗಳ ಸಂಖ್ಯೆ 67ರಿಂದ ಈಗ 17ಕ್ಕೆ ಇಳಿಕೆ!

1-assam

UNESCO ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ‘ದಿಬ್ಬ ಸಮಾಧಿಗಳು’: ಏನಿದು ಮೊಯಿಡಮ್ಸ್‌?

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rain: ಬಾಗಲಕೋಟೆಯ ಜಿಲ್ಲೆಯ ನಾಲ್ಕು ತಾಲೂಕಿನ ಶಾಲೆಗಳಿಗೆ ಇಂದು (ಜುಲೈ 26) ರಜೆ

Heavy Rain: ಬಾಗಲಕೋಟೆ ಜಿಲ್ಲೆಯ ನಾಲ್ಕು ತಾಲೂಕಿನ ಶಾಲೆಗಳಿಗೆ ಇಂದು (ಜುಲೈ 26) ರಜೆ

ರಬಕವಿ-ಬನಹಟ್ಟಿ: ಭೋರ್ಗರೆಯುತ್ತಿರುವ ಕೃಷ್ಣೆ… ಪ್ರವಾಹ ಭೀತಿಯಲ್ಲಿ ಜನತೆ

ರಬಕವಿ-ಬನಹಟ್ಟಿ: ಭೋರ್ಗರೆಯುತ್ತಿರುವ ಕೃಷ್ಣೆ… ಪ್ರವಾಹ ಭೀತಿಯಲ್ಲಿ ಜನತೆ

Fetoside

Bagalakote: ಸರಕಾರಿ ವೈದ್ಯೆಯಿಂದಲೇ ಭ್ರೂಣಹತ್ಯೆ!

Mudhol ಸಾವಿರ ಶ್ರೀಗಂಧ ಸಸಿಗಳ ಸರದಾರ; ಅರಣ್ಯ ಕೃಷಿಯಲ್ಲಿ ಖುಷಿ ಜೀವನ ಕಂಡ‌‌ ನಾಗಪ್ಪ

Mudhol ಸಾವಿರ ಶ್ರೀಗಂಧ ಸಸಿಗಳ ಸರದಾರ; ಅರಣ್ಯ ಕೃಷಿಯಲ್ಲಿ ಖುಷಿ ಜೀವನ ಕಂಡ‌‌ ನಾಗಪ್ಪ

4-

Mahalingpur: ಘಟಪ್ರಭಾ ನದಿಗೆ ಹೆಚ್ಚಿದ ನೀರು: ಮೂರು ಸೇತುವೆಗಳು ಜಲಾವೃತ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!

Exam

NEET ಟಾಪರ್‌ಗಳ ಸಂಖ್ಯೆ 67ರಿಂದ ಈಗ 17ಕ್ಕೆ ಇಳಿಕೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.