ಬಹಿರಂಗ ಪ್ರಚಾರಕ್ಕೆ ತೆರೆ: ಜನತೆ ನಿರಾಳ


Team Udayavani, Apr 22, 2019, 11:53 AM IST

bag-
ಬಾಗಲಕೋಟೆ: 17ನೇ ಲೋಕಸಭೆ ಚುನಾವಣೆಯ ಬಹಿರಂಗ ಪ್ರಚಾರಕ್ಕೆ ರವಿವಾರ ಸಂಜೆ ತೆರೆ ಬಿದ್ದಿದೆ. ಹದಿನೈದು ದಿನಗಳಿಂದ ರಾಜಕೀಯ ನಾಯಕರ, ಜಾತಿ-ಧರ್ಮ ಹಾಗೂ ವ್ಯಕ್ತಿಗತ ಟೀಕೆ-ನಿಂದನೆಯ ಮಾತು ಕೇಳಿ ಬೇಸರಿಸಿದ್ದ ಬಹುತೇಕರು, ನಿರಾಳರಾಗಿದ್ದಾರೆ ಎಂಬ ಮಾತು ಕೇಳಿ ಬರುತ್ತಿದೆ. ನಿಜ, ಕಳೆದ ಮಾರ್ಚ್‌ 28ರಿಂದ ಜಿಲ್ಲೆಯಲ್ಲಿ ಬಹುತೇಕ ಪ್ರಚಾರ ನಡೆದಿತ್ತು. ಮೊದಲ ವಾರ ಆಯಾ ತಾಲೂಕು ಕೇಂದ್ರಗಳಲ್ಲಿ ವಿವಿಧ ಪಕ್ಷಗಳ ಕಾರ್ಯಕರ್ತರ, ಪ್ರಮುಖರ ಸಭೆ ನಡೆಸುತ್ತಿದ್ದ ಪಕ್ಷದ ನಾಯಕರು, ನಾಮಪತ್ರ ಸಲ್ಲಿಸುವ ಕೊನೆ ದಿನ ಮುಗಿದ ಬಳಿಕ ಬಹಿರಂಗ ಪ್ರಚಾರಕ್ಕೆ ಅತಿಹೆಚ್ಚು ಆದ್ಯತೆ ಕೊಟ್ಟರು.
ಪ್ರಚಾರಕ್ಕೆ ತಮ್ಮ ತಮ್ಮ ಪಕ್ಷಗಳ ಹಲವು ನಾಯಕರು ಬಂದು ಹೋದರೂ,ಯಾರೂ ಸ್ಥಳೀಯ ಗಂಭೀರ ಸಮಸ್ಯೆಗಳ ಬಗ್ಗೆ ಚಕಾರವೆತ್ತಲಿಲ್ಲ. ಕಾಂಗ್ರೆಸ್‌ನವರು ಮೋದಿ, ಶಾ, ಯಡಿಯೂರಪ್ಪ, ಅಭ್ಯರ್ಥಿ ಗದ್ದಿಗೌಡರ ವಿರುದ್ಧ ಮಾತನಾಡಿದರೆ, ಬಿಜೆಪಿಯವರು, ಸಿದ್ದರಾಮಯ್ಯ, ಸಿಎಂ ಕುಮಾರಸ್ವಾಮಿ, ರಾಹುಲ್‌ ಗಾಂಧಿ ಬಗ್ಗೆ ಮಾತನಾಡಿದರು. ಯಾವ ನಾಯಕರ ಬಾಯಲ್ಲೂ, ಬಾಗಲಕೋಟೆ ಕ್ಷೇತ್ರದಲ್ಲಿ ಸಮಸ್ಯೆಗಳೇನು, ಅದಕ್ಕೆ ನಾವು ಪರಿಹಾರ ಹೇಗೆ ಕಂಡುಕೊಳ್ಳುತ್ತೇವೆ, ಗೆದ್ದರೆ ಮುಂದಿನ ಐದು ವರ್ಷ ನಮ್ಮ ಆಡಳಿತ ಹೇಗಿರುತ್ತದೆ ಎಂದು ಹೇಳಲಿಲ್ಲ. ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ 14 ಜನ ಅಭ್ಯರ್ಥಿಗಳು ಕಣದಲ್ಲಿದ್ದರೂ ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿ ಅಭ್ಯರ್ಥಿ ಹಾಗೂ ಬಿಜೆಪಿ ಅಭ್ಯರ್ಥಿ ನಡುವೆ ನೇರ ಪೈಪೋಟಿ ನಡೆದಿದೆ.
ಈ ಅಭ್ಯರ್ಥಿಗಳು ತಮ್ಮ ಸಾಧನೆ, ಮುಂದಿನ ಕಾರ್ಯವೈಖ್ಯರಿ ಬಗ್ಗೆ ಜನರಿಗೆ ನೇರವಾಗಿ ಹೇಳುವ ಪ್ರಯತ್ನ ಮಾಡಲಿಲ್ಲ. ಕಾಂಗ್ರೆಸ್‌ ಅಭ್ಯರ್ಥಿ ವೀಣಾ, ಜಿಪಂ ಅಧ್ಯಕ್ಷೆಯಾಗಿದ್ದ ಅವಧಿಯಲ್ಲಿ ಮಾಡಿದ ಕಾರ್ಯಗಳು ಹೇಳಿಕೊಂಡರೆ, ಬಿಜೆಪಿ ಅಭ್ಯರ್ಥಿ ಗದ್ದಿಗೌಡರ, 15 ವರ್ಷ ಜಿಲ್ಲೆಯಲ್ಲಿ ಏನು ಮಾಡಿದೆ ಎಂದು ಕೆಲವೊಮ್ಮೆ ಹೇಳಿಕೊಂಡರು. ವಿಶೇಷ ಅಂದರೆ, ಕಾಂಗ್ರೆಸ್‌ನವರು ಮಾಧ್ಯಮಗಳ ಬಳಕೆಯಲ್ಲಿ ಹೆಚ್ಚು ಮುಂದಿದ್ದರೆ, ಬಿಜೆಪಿಯ ಅಭ್ಯರ್ಥಿ ಗದ್ದಿಗೌಡರ, ಒಂದೇ ಒಂದು ಸುದ್ದಿಗೋಷ್ಠಿಯನ್ನೂ ನಡೆಸದೇ, ಇಡೀ ಬಹಿರಂಗ ಪ್ರಚಾರ ಮುಗಿಸಿದರು ಎಂಬ ಮಾತು ಕೇಳಿಬಂತು.
ಈ ಬಾರಿ, ನೇರಾನೇರ ಪೈಪೋಟಿ ಎದುರಿಸುತ್ತಿರುವ ಅಭ್ಯರ್ಥಿಗಳು ಲಿಂಗಾಯತ ಸಮುದಾಯಕ್ಕೆ ಸೇರಿದ್ದರಿಂದ, ಇಬ್ಬರೂ ಅಭ್ಯರ್ಥಿಗಳ ಉಪ ಪಂಗಡಗಳ ಹೆಸರಿನಲ್ಲಿ ಜಾತಿ ರಾಜಕೀಯ ಜೋರಾಗಿ ನಡೆದಿದೆ. ಒಟ್ಟಾರೆ, ಪ್ರಸ್ತುತ ಲೋಕಸಭೆ ಚುನಾವಣೆಯ ಬಹಿರಂಗ ಪ್ರಚಾರ ಮುಗಿದರೆ ಸಾಕಪ್ಪಾ ಎಂಬ ಮನಸ್ಥಿತಿಗೆ ಅಭ್ಯರ್ಥಿಗಳೂ ಬಂದಂತಿತ್ತು. ಕಾರಣ, ಬಿಸಿಲಿನ ಝಳಕ್ಕೆ ಬೆಂಡಾಗಿದ್ದರು. ಕಾರ್ಯಕರ್ತರೂ, ನಿತ್ಯ ಪ್ರಚಾರ, ಓಡಾಟ, ಜನ ಸೇರಿಸಲು ಹೈರಾಣಾಗಿದ್ದಾರೆ.

ಟಾಪ್ ನ್ಯೂಸ್

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಖಾನಾಪುರ ಬಳಿ ಭೀಕರ ಅಪಘಾತ: ವಕೀಲ ದೇಶಪಾಂಡೆ ಸಾವು

ಖಾನಾಪುರ ಬಳಿ ಭೀಕರ ಅಪಘಾತ: ವಕೀಲ ಕೆ.ಎಸ್‌. ದೇಶಪಾಂಡೆ ಸಾವು

ಶ್ರೀಶೈಲ ಪಾದಯಾತ್ರೆಯಲ್ಲಿ ಮತದಾನ ಜಾಗೃತಿ: ಮಲ್ಲಯ್ಯನ ಧ್ವಜ ಅನಾವರಣ

ಶ್ರೀಶೈಲ ಪಾದಯಾತ್ರೆಯಲ್ಲಿ ಮತದಾನ ಜಾಗೃತಿ: ಮಲ್ಲಯ್ಯನ ಧ್ವಜ ಅನಾವರಣ

4-bgl

Theft: ಅಮೀನಗಡದ ದೇವಸ್ಥಾನದಲ್ಲಿ ಕಳ್ಳತನ

ಬಾಗಲಕೋಟೆ: ಐತಿಹಾಸಿಕ ಹೋಳಿ ಬಣ್ಣದಾಟಕ್ಕೆ ಚಾಲನೆ

ಬಾಗಲಕೋಟೆ: ಐತಿಹಾಸಿಕ ಹೋಳಿ ಬಣ್ಣದಾಟಕ್ಕೆ ಚಾಲನೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.