ಅವೈಜ್ಞಾನಿಕ ಕಟ್ಟಡಕ್ಕೆ ವಿರೋಧ
Team Udayavani, Jan 25, 2020, 12:01 PM IST
ಜಮಖಂಡಿ: ನೂತನ ಕೇಂದ್ರ ಬಸ್ ನಿಲ್ದಾಣದಲ್ಲಿ ಅವೈಜ್ಞಾನಿಕ ಕಟ್ಟಡ ನಿರ್ಮಿಸುವುದನ್ನು ವಿರೋಧಿಸಿ ಸಾರ್ವಜನಿಕರು ಶುಕ್ರವಾರ ಪ್ರತಿಭಟನೆ ನಡೆಸಿದರು. ದಿ| ಸಿದ್ದು ನ್ಯಾಮಗೌಡರು ಸಿಂಗಾಪೂರ ಮಾದರಿಯಲ್ಲಿ ಬಸ್ ನಿರ್ಮಾಣಗೊಳಿಸಲು ಸಾಕಷ್ಟು ಶ್ರಮಪಟ್ಟಿದ್ದು, ಬಸ್ ನಿಲ್ದಾಣದ ಪ್ರಮುಖ ಸ್ಥಳದಲ್ಲಿ ನೀರಿನ ಟ್ಯಾಂಕ್ ಕಟ್ಟಲು ಮುಂದಾಗಿದೆ.
ಈ ಬಗ್ಗೆ ಸ್ಥಳೀಯ ಘಟಕದ ಅಧಿಕಾರಿಗಳಿಗೆ ಹಾಗೂ ನಗರದ ಪ್ರಮುಖರ ಗಮನಕ್ಕೂ ಬಾರದೇ ಬೇಕಾಬಿಟ್ಟಿ ಕಾಂಕ್ರೀಟ್ ರಸ್ತೆಯನ್ನು ಹಡ್ಡಿ ಹಾಳು ಮಾಡಲಾಗುತ್ತಿದೆ. ನಿಲ್ದಾಣದ ಮಧ್ಯಭಾಗದಲ್ಲೇ ನೀರಿನ ಟ್ಯಾಂಕ್ ನಿರ್ಮಿಸುವುದರಿಂದ ಹೊಸದಾಗಿ ಕಟ್ಟಿದ ಕಟ್ಟಡಕ್ಕೆ ಧಕ್ಕೆ ಆಗಲಿದೆ. ರಸ್ತೆಯಲ್ಲಿ ನೀರು ಹರಿದಾಡುವುದರಿಂದ ವಾಹನ ಹಾಗೂ ಪ್ರಯಾಣಿಕರಿಗೆ ತುಂಬಾ ತೊಂದರೆ ಆಗುತ್ತದೆ ಎಂದು ಆರೋಪಿಸಲಾಗಿದೆ.
ಮಳೆ ಬಂದರೆ ಕೆರೆ: ಭಾರಿ ಮಳೆ ಬಂದರೆ ಬಸ್ ನಿಲ್ದಾಣದಲ್ಲಿ ಸಣ್ಣದೊಂದು ಕೆರೆ ನಿರ್ಮಾಣವಾಗುತ್ತದೆ. ಪ್ರಯಾಣಿಕರಿಗೆ ಶುದ್ಧ ಕುಡಿಯುವ ನೀರು ಪೂರೈಕೆ ಮಾಡುವ ಈ ಟ್ಯಾಂಕ್ದಲ್ಲಿ ಮಳೆನೀರು, ಗಟಾರ ನೀರು ಸೇರಿ ರೋಗ-ರುಜಿಣಿ ಹರಡುವ ಸಾಧ್ಯತೆ ಇದೆ. ಬಸ್ ನಿಲ್ದಾಣದಲ್ಲಿ ಈಗಾಗಲೇ ಸಾಕಷ್ಟು ಗಲೀಜು ನೀರು ನಿಂತು ಸಂಚಾರಕ್ಕೆ ಅಡಚಣೆ ಆಗಲಿದೆ. ಕಾಮಗಾರಿ ಕೂಡಲೇ ನಿಲ್ಲಿಸದಿದ್ದರೆ ಬಸ್ ನಿಲ್ದಾಣದಲ್ಲಿ ಉಗ್ರ ಹೋರಾಟ ನಡೆಸಿ, ರಸ್ತಾ ರೋಕೋ ಚಳವಳಿ ನಡೆಸುವುದಾಗಿ ನಗರಸಭೆ ಸದಸ್ಯರಾದ ದಾನೇಶ ಘಾಟಗೆ, ಪರಮಾನಂದ ಗೌರೋಜಿ, ಮಹಾದೇವ ಕಲೂತಿ, ಅಬುಬಕರ ಕುಡಚಿ, ಪುಟ್ಟು ಪಾನಿ ಎಚ್ಚರಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ
Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್ ಈಗ “ಸಂಯುಕ್ತ’
Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್
Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ
Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು
MUST WATCH
ಹೊಸ ಸೇರ್ಪಡೆ
ಕಾಂಗ್ರೆಸ್ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ
ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?
Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ
Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ
Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ