Water; ಹಿಡಕಲ್ ಜಲಾಶಯದಿಂದ ಘಟಪ್ರಭಾ ನದಿಗೆ 2 ಟಿಎಂಸಿ ನೀರು ಹರಿಸಲು ಆದೇಶ
ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಸೂಚನೆ
Team Udayavani, Feb 21, 2024, 10:13 PM IST
ಬೆಳಗಾವಿ: ಬಾಗಲಕೋಟೆ ಜಿಲ್ಲೆಯಲ್ಲಿ ಬರ ಪರಿಸ್ಥಿತಿ ಇರುವುದರಿಂದ ಹಾಗೂ ಮಳೆಯ ಕೊರತೆಯಿಂದಾಗಿ ಜನ- ಜಾನುವಾರುಗಳಿಗೆ ನೀರಿನ ಅಭಾವ ಉಂಟಾಗಿದ್ದು, ಈ ಹಿನ್ನೆಲೆಯಲ್ಲಿ ದಿನಾಂಕ: 19 ರಿಂದ ಹಿಡಕಲ್ ಜಲಾಶಯದಿಂದ ಘಟಪ್ರಭಾ ನದಿಗೆ ಕುಡಿಯುವ ಉದ್ದೇಶಕ್ಕಾಗಿ ಬಾಗಲಕೋಟ ಮತ್ತು ಮಾರ್ಗ ಮಧ್ಯದ ಹಳ್ಳಿಗಳಿಗೆ ಸರ್ಕಾರದ ಆದೇಶದನ್ವಯ ಕಾಯ್ದಿರಿಸಿದ 5.00 ಟಿ.ಎಂ.ಸಿಯಲ್ಲಿ 2.00 ಟಿ.ಎಂ.ಸಿ ನೀರನ್ನು ಹರಿಸಲು ಸಚಿವ ಸತೀಶ್ ಜಾರಕಿಹೊಳಿ ನಿರ್ದೇಶನ ನೀಡಿದ್ದಾರೆ.
ಬಾಗಲಕೋಟೆ ಮತ್ತು ಮಾರ್ಗ ಮಧ್ಯದ ಹಳ್ಳಿಗಳಿಗೆ ನದಿ ಪಾತ್ರದ ಮೂಲಕ ಹರಿಬಿಡುವ ಪರಿಮಾಣದಲ್ಲಿ ಇನ್ನು 3.00 ಟಿ.ಎಂ.ಸಿ ನೀರು ಹರಿಬಿಡುವುದು ಬಾಕಿ ಉಳಿದಿದೆ.
ಶ್ರೀ ರಾಮೇಶ್ವರ ಏತ ನೀರಾವರಿ ಯೋಜನೆ ಮೂಲಕ ಕುಡಿಯುವ ಉದ್ದೇಶಕ್ಕಾಗಿ ಕೆರೆ ತುಂಬಿಸಲು 0.07 ಟಿ.ಎಂ.ಸಿ ನೀರನ್ನು ಸೇರಿಸಿ ಒಟ್ಟು 2.07 ಟಿ.ಎಂ.ಸಿ ನೀರನ್ನು ಘಟಪ್ರಭಾ ನದಿಗೆ ನೀರು ಹರಿಸುವ ಕುರಿತು ಸಚಿವ ಜಾರಕಿಹೊಳಿ ಆದೇಶ ಹೊರಡಿಸಿದ್ದಾರೆ.
ಬಾಗಲಕೋಟೆ ಜಿಲ್ಲೆಯ ರೈತರು ಹಾಗೂ ಸಾರ್ವಜನಿಕರು ನೀರನ್ನು ಪೋಲಾಗದಂತೆ ಸದುಪಯೋಗ ಪಡೆದುಕೊಳ್ಳಬೇಕು ಎಂದು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ
Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ
Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ