![modi (4)](https://www.udayavani.com/wp-content/uploads/2024/07/modi-4-4-415x256.jpg)
ಕಬ್ಬಿನ ಬಿಲ್ ಪಾವತಿ ವಿಳಂಬಕ್ಕೆ ಆಕ್ರೋಶ
Team Udayavani, Jun 1, 2020, 9:03 AM IST
![ಕಬ್ಬಿನ ಬಿಲ್ ಪಾವತಿ ವಿಳಂಬಕ್ಕೆ ಆಕ್ರೋಶ](https://www.udayavani.com/wp-content/uploads/2020/06/BK-TDY-3-620x372.jpg)
ಸಾಂದರ್ಭಿಕ ಚಿತ್ರ
ಮಹಾಲಿಂಗಪುರ: ಕಾರ್ಖಾನೆಗೆ ಕಬ್ಬು ಪೂರೈಸಿದ 15 ದಿನಗಳೊಳಗಾಗಿ ಕಬ್ಬಿನ ಬಿಲ್ ಕೊಡುತ್ತೇನೆ ಎಂದು ಒಪ್ಪಿಕೊಂಡ ಗೋದಾವರಿ ಸಕ್ಕರೆ ಕಾರ್ಖಾನೆ ಆಡಳಿತ ಮಂಡಳಿ ಸುಮಾರು ನಾಲ್ಕು ತಿಂಗಳ ನಂತರ ಬಿಲ್ ಕೊಡುತ್ತಿದ್ದು ಖಂಡನೀಯ ಎಂದು ಕಬ್ಬು ಬೆಳೆಗಾರರ ಸಂಘದ ಪ್ರಧಾನ ಕಾರ್ಯದರ್ಶಿ ರಂಗನಗೌಡ ಪಾಟೀಲ ಆಕ್ರೋಶ ವ್ಯಕ್ತಪಡಿಸಿದರು.
ಪಟ್ಟಣದ ಜಿಎಲ್ಬಿಸಿ ಅತಿಥಿ ಗೃಹದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಾಲ್ಕು ತಿಂಗಳ ಹಿಂದೆ ಬಾಗಲಕೋಟೆ ಡಿಸಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಎಫ್ ಆರ್ಪಿ ಮತ್ತು ಶುಗರ್ ಕಂಟ್ರೋಲ್ ಕಾಯ್ದೆ ಪ್ರಕಾರ ರೈತರು ಕಬ್ಬು ಪೂರೈಸಿದ 15 ದಿನದೊಳಗಾಗಿ ಕಬ್ಬಿನ ಬಿಲ್ ಕೊಡುತ್ತೇನೆ ಮತ್ತು ಎಫ್ಆರ್ಪಿ ಪ್ರಕಾರ 2700 ರೂ. ಬದಲಾಗಿ 2500 ರೂ. ಕೊಡುತ್ತೇವೆ. ಏಕೆಂದರೆ 2700 ರೂ ಕೊಡುವುದಾದರೆ ತಡವಾಗುತ್ತದೆ. 2500 ರೂ. ಆದರೆ 15 ದಿನಗಳೊಳಗಾಗಿ ಕೊಡುತ್ತೇವೆ. ತಡವಾದರೆ ಅದಕ್ಕೆ ಬಡ್ಡಿ ಸೇರಿಸಿ ಕೊಡುತ್ತೇವೆ ಎಂದು ಆಡಳಿತ ಮಂಡಳಿಯವರು ಒಪ್ಪಿಕೊಂಡಿದ್ದರು.
ಆದರೆ ಸುಮಾರು ನಾಲ್ಕು ತಿಂಗಳ ನಂತರ ಈಗ ಕಬ್ಬಿನ ಬಿಲ್ ಪಾವತಿಸುತ್ತಿದ್ದಾರೆ. ಆದರೆ ಅದಕ್ಕೆ ಬಡ್ಡಿ ಕೂಡ ನೀಡುತ್ತಿಲ್ಲ. ಬಿಲ್ ಪಾವತಿಗೆ ತಡ ಮಾಡುತ್ತಿರುವುದಕ್ಕಾಗಿ ನಾವು ಕಾರ್ಖಾನೆಯವರಿಗೆ ನೋಟೀಸ್ ನೀಡುತ್ತ ಬಂದಿದ್ದೇವೆ. ಒಟ್ಟು 4 ಬಾರಿ ನೋಟೀಸ್ ನೀಡಿದ್ದೇವೆ. ಜಿಲ್ಲೆಯಲ್ಲಿ ಇಐಡಿ ಪ್ಯಾರಿ ಹೊರತು ಪಡಿಸಿ ಯಾವ ಕಾರ್ಖಾನೆಯವರೂ 15 ದಿನದೊಳಗಾಗಿ ಬಿಲ್ ನೀಡಿಲ್ಲ ಎಂದರು.
ಕಾರ್ಖಾನೆ ಆಡಳಿತ ಮಂಡಳಿ ರೈತರ ಹಣೆ ಬರಹದೊಂದಿಗೆ ಚೆಲ್ಲಾಟವಾಡುತ್ತಿದ್ದು ಅದನ್ನು ಸಹಿಸಲು ಸಾಧ್ಯವಿಲ್ಲ. ಕಳೆದ ಹಂಗಾಮಿನ ಬಾಕಿ 111 ರೂ. ಮತ್ತು ಈ ಹಂಗಾಮಿಗೆ ನೀಡುತ್ತಿರುವ 2500 ರೂ. ಗಳಿಗೆ ಬಡ್ಡಿ ಹಾಕಬೇಕು. ಬಾಕಿ ಉಳಿದ 200 ರೂ. ಕೂಡಲೇ ಪಾವತಿಸಬೇಕೆಂದು ಒತ್ತಾಯಿಸಿದರು. ಬೆಳೆಸಾಲ ಮನ್ನಾಗೆ ಆಗ್ರಹ: ಕೊರೊನಾ ರೈತರ ಬದುಕಿಗೆ ಹೊಡೆತ ನೀಡಿದ್ದು ಈಗ ಬಿತ್ತಲು ಬೀಜ, ಗೊಬ್ಬರ ಮತ್ತು ಮಕ್ಕಳ ಶಾಲೆ ಫೀಜ್ ಗಳಿಗಾಗಿ ಪರದಾಡುತ್ತಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ರೈತರು ಬ್ಯಾಂಕ್ ಸಾಲ ತುಂಬುವ ಪರಿಸ್ಥಿತಿಯಲ್ಲಿ ಇಲ್ಲ. ಕಾರಣ ರಾಷ್ಟ್ರೀಕೃತ ಮತ್ತು ಸಹಕಾರಿ ಬ್ಯಾಂಕ್ಗಳಲ್ಲಿಯ ರೈತರ ಕಬ್ಬಿನ ಬೆಳೆ ಸಾಲ ಮನ್ನಾ ಮಾಡಬೇಕೆಂದು ಸರ್ಕಾರಕ್ಕೆ ಒತ್ತಾಯಿಸಿದರು.
ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಆರ್.ಬಿ. ಪಾಟೀಲ, ಬಿ.ಜಿ. ಹೊಸೂರ, ಈರಣ್ಣ ಕನಕರಡ್ಡಿ, ಎಲ್.ಟಿ. ಹುಚರಡ್ಡಿ, ಎಂ.ಬಿ. ನಾಡಗೌಡ, ರಾಮಕೃಷ್ಣ ಬುದ್ನಿ. ಕೆ.ಟಿ ಸಾರವಾಡ, ಕಲ್ಲಪ್ಪ ಕಂಕಣವಾಡಿ, ಶೇಖರ ಮುತ್ತಪ್ಪಗೋಳ, ಸದಾಶಿವ ಕಂಬಳಿ ಇದ್ದರು.
ಟಾಪ್ ನ್ಯೂಸ್
![modi (4)](https://www.udayavani.com/wp-content/uploads/2024/07/modi-4-4-415x256.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Rain: ಬಾಗಲಕೋಟೆಯ ಜಿಲ್ಲೆಯ ನಾಲ್ಕು ತಾಲೂಕಿನ ಶಾಲೆಗಳಿಗೆ ಇಂದು (ಜುಲೈ 26) ರಜೆ](https://www.udayavani.com/wp-content/uploads/2024/07/bagalakote-150x90.jpg)
Heavy Rain: ಬಾಗಲಕೋಟೆ ಜಿಲ್ಲೆಯ ನಾಲ್ಕು ತಾಲೂಕಿನ ಶಾಲೆಗಳಿಗೆ ಇಂದು (ಜುಲೈ 26) ರಜೆ
![ರಬಕವಿ-ಬನಹಟ್ಟಿ: ಭೋರ್ಗರೆಯುತ್ತಿರುವ ಕೃಷ್ಣೆ… ಪ್ರವಾಹ ಭೀತಿಯಲ್ಲಿ ಜನತೆ](https://www.udayavani.com/wp-content/uploads/2024/07/rabakavi-1-150x84.jpg)
ರಬಕವಿ-ಬನಹಟ್ಟಿ: ಭೋರ್ಗರೆಯುತ್ತಿರುವ ಕೃಷ್ಣೆ… ಪ್ರವಾಹ ಭೀತಿಯಲ್ಲಿ ಜನತೆ
![Fetoside](https://www.udayavani.com/wp-content/uploads/2024/07/Fetoside-150x90.jpg)
Bagalakote: ಸರಕಾರಿ ವೈದ್ಯೆಯಿಂದಲೇ ಭ್ರೂಣಹತ್ಯೆ!
![Mudhol ಸಾವಿರ ಶ್ರೀಗಂಧ ಸಸಿಗಳ ಸರದಾರ; ಅರಣ್ಯ ಕೃಷಿಯಲ್ಲಿ ಖುಷಿ ಜೀವನ ಕಂಡ ನಾಗಪ್ಪ](https://www.udayavani.com/wp-content/uploads/2024/07/sandalwood-150x77.jpg)
Mudhol ಸಾವಿರ ಶ್ರೀಗಂಧ ಸಸಿಗಳ ಸರದಾರ; ಅರಣ್ಯ ಕೃಷಿಯಲ್ಲಿ ಖುಷಿ ಜೀವನ ಕಂಡ ನಾಗಪ್ಪ
![4-](https://www.udayavani.com/wp-content/uploads/2024/07/4--150x90.jpg)
Mahalingpur: ಘಟಪ್ರಭಾ ನದಿಗೆ ಹೆಚ್ಚಿದ ನೀರು: ಮೂರು ಸೇತುವೆಗಳು ಜಲಾವೃತ
MUST WATCH
ಹೊಸ ಸೇರ್ಪಡೆ
![modi (4)](https://www.udayavani.com/wp-content/uploads/2024/07/modi-4-4-150x92.jpg)
NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!
![Exam](https://www.udayavani.com/wp-content/uploads/2024/07/Exam-8-150x84.jpg)
NEET ಟಾಪರ್ಗಳ ಸಂಖ್ಯೆ 67ರಿಂದ ಈಗ 17ಕ್ಕೆ ಇಳಿಕೆ!
![1-assam](https://www.udayavani.com/wp-content/uploads/2024/07/1-assam-150x84.jpg)
UNESCO ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ‘ದಿಬ್ಬ ಸಮಾಧಿಗಳು’: ಏನಿದು ಮೊಯಿಡಮ್ಸ್?
![New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್ ಗ್ಯಾಂಗ್’](https://www.udayavani.com/wp-content/uploads/2024/07/POLICE-5-12-150x79.jpg)
New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್ ಗ್ಯಾಂಗ್’
![1-kanwar-msid](https://www.udayavani.com/wp-content/uploads/2024/07/1-kanwar-msid-150x84.jpg)
Uttara Khand; ಕನ್ವರ್ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.