ಅಧಿಕಾರಿಗಳ ಕ್ರಮಕ್ಕೆ ಆಕ್ರೋಶ
•ನೀರೆತ್ತುವ ಮುಖ್ಯ ಸ್ಥಾವರ ಎದುರು ಗ್ರಾಮಸ್ಥರ ದಿಢೀರ್ ಪ್ರತಿಭಟನೆ
Team Udayavani, Jul 16, 2019, 9:33 AM IST
ಕಲಾದಗಿ: ಪ್ರತಿಭಟನೆ ನಡೆಸಿದ ರೈತರೊಂದಿಗೆ ಪಿಎಸ್ಐ ಅಶೋಕ ಚವಾಣ ಚರ್ಚೆ ನಡೆಸಿದರು.
ಕಲಾದಗಿ: ಕೃಷ್ಣಾ ಭಾಗ್ಯ ಜಲ ನಿಗಮ ಹೇರಕಲ್ ದಕ್ಷಿಣ ಏತ ನೀರಾವರಿ ಯೋಜನೆಯಲ್ಲಿ ಕಳಸಕೊಪ್ಪ ಕೆರೆ ಸೇರಿದಂತೆ ಬಾದಾಮಿ ತಾಲೂಕಿನ ಹಲವು ಕೆರೆಗೆ ನೀರು ತುಂಬಿಸುವ ಉದ್ದೇಶಕ್ಕಾಗಿ ಭೂಮಿಯ ಅಲ್ಪಭಾಗವನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ. ಆದರೆ, ಇಡೀ ಭೂಮಿಗೆ ಭೂಸ್ವಾಧೀನ ಪ್ರಕ್ರಿಯೆ ಎಂದು ರೈತರ ಪಹಣಿ ಪತ್ರದಲ್ಲಿ ತೋರಿಸಲಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿ ಗೋವಿಂದಕೊಪ್ಪ ಗ್ರಾಮಸ್ಥರು ನೀರೆತ್ತುವ ಮುಖ್ಯ ಸ್ಥಾವರದ ಎದುರು ದಿಢೀರ್ ಪ್ರತಿಭಟನೆ ನಡೆಸಿದರು.
ಸೋಮವಾರ ಬೆಳಗ್ಗೆ ಜಾಕ್ವೆಲ್ನಿಂದ ಕೆರೆಗೆ ನೀರೆತ್ತಲು ಪ್ರಾರಂಭ ಮಾಡಲಿದ್ದಾರೆ ಎಂದು ಭಾವಿಸಿ ಜಾಕ್ವೆಲ್ ಪಂಪ್ ಹೌಸ್ ಎದುರು ಗೋವಿಂದಕೊಪ್ಪ ಗ್ರಾಮದ 50ಕ್ಕೂ ಅಧಿಕ ರೈತರು ಜಮಾಯಿಸಿದರು. ಕೆರೆ ತುಂಬಿಸುವ ಯೋಜನೆಗೆ ಗ್ರಾಮದ ನೂರಾರು ರೈತರ ಭೂಮಿ ಸ್ವಾಧಿಧೀನಮಾಡಿಕೊಂಡು ಪೈಪ್ಲೈನ್ ಹಾಯಿಸಲಾಗಿದೆ. ರೈತನ 10 ಎಕರೆ ಭೂಮಿಯಲ್ಲಿ 1 ಎಕರೆ, ಅರ್ಧ ಎಕರೆ, 20 ಗುಂಟೆ, 10 ಗುಂಟೆ ಪೈಪ್ಲೈನ್ ಮಾರ್ಗಕ್ಕೆ ಭೂ ಬಳಕೆ ಸ್ವಾಧೀನಗೊಂಡರೆ ಇಡೀ 10 ಎಕರೆ ಭೂಮಿಗೆ ಸರಕಾರದ ಭೂಸ್ವಾಧೀನ ಎಂದು ಉತಾರ್ನಲ್ಲಿ ನಮೂದಿಸಲಾಗಿದೆ. ಇದರಿಂದ ರೈತರಿಗೆ ಸರಕಾರ ಸಹಾಯ ಸಬ್ಸಿಡಿ, ಬ್ಯಾಂಕ್ ಸಾಲ ಸಿಗುತ್ತಿಲ್ಲ ಎಂದು ಕೃಷ್ಣಾ ಮೇಲ್ದಂಡೆ ಯೋಜನಾ ಬಾಗಲಕೋಟೆ ನವನಗರ ಹೆಚ್ಚುವರಿ ವಿಶೇಷ ಭೂಸ್ವಾಧೀನ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಕಳೆದ ವರ್ಷವೂ ಇದೇ ತಿಂಗಳಲ್ಲಿ ಕಳಸಕೊಪ್ಪ ಕೆರೆಗೆ ನೀರು ತುಂಬಿಸಲು ಚಾಲನೆ ನೀಡಲು ಆಗಮಿಸಿದ್ದ ವಿಧಾನ ಪರಿಷತ್ ಸದಸ್ಯ ಹನಮಂತ್ ಆರ್. ನಿರಾಣಿಯವರ ಮುಂದೆಯೂ ಈ ಸಮಸ್ಯೆ ಹೇಳಿಕೊಂಡಾಗ ಅಧಿಕಾರಿಗಳ ಶೀಘ್ರ ಸಮಸ್ಯೆ ಇತ್ಯರ್ಥ ಮಾಡುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು. ಆ ವೇಳೆ ಅಧಿಕಾರಿಗಳು ಸರಿಪಡಿಸುವುದಾಗಿ ಭರವಸೆ ನೀಡಿ ವರ್ಷ ಕಳೆದರೂ ರೈತರ ಸಮಸ್ಯೆ ಬಗೆಹರಿಸುತ್ತಿಲ್ಲ. ಕಳೆದ ನಾಲ್ಕು ವರ್ಷದಿಂದ ಈ ಸಮಸ್ಯೆ ಹೇಳಿಕೊಳ್ಳುತ್ತಿದ್ದರೂ ಅಧಿಕಾರಿಗಳು ಸರಿಪಡಿಸುತ್ತಿಲ್ಲ ಎಂದು ರೈತರು ತಮ್ಮ ನೋವನ್ನು ತೋಡಿಕೊಂಡರು.
ಪ್ರತಿಭಟನೆ ಸುದ್ದಿ ತಿಳಿದ ಸ್ಥಳೀಯ ಪೊಲೀಸ್ ಠಾಣಾಧಿಕಾರಿ ಅಶೋಕ ಚವಾಣ್ ಸ್ಥಳದಲ್ಲಿದ್ದು, ರೈತರ ಸಮಸ್ಯೆ ಆಲಿಸಿ ರೈತರೊಂದಿಗೆ ಮಾತನಾಡಿದರು. ಅನ್ಯಾಯ ಸರಿಪಡಿಸದಿದ್ದಲ್ಲಿ ಬಾಗಲಕೋಟೆಯ ಕೆಬಿಜೆಎನ್ ಅಧಿಕಾರಿಗಳ ಕಚೇರಿ, ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಲಾಗುವುದು ಎಂದು ಎಚ್ಚರಿಕೆ ನೀಡಿದರು.
ಶಿವಣ್ಣಾ ವಾಘ, ಹಸನಅಹದ ರೋಣ, ಅಲ್ಲಾಭಕ್ಷ ರೋಣ, ಮುತ್ತಪ್ಪ ಬೀಡಕಿ, ವಿಠಲದೇಶಮುಖ, ಅಬ್ದುಲ್ಖಾದರ ತಾಂಬೊಳೆ, ಮುನ್ನಾ ರೋಣ, ಬಸಪ್ಪ ಬೀಡಕಿ ಮುಂತಾದವರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್
Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ
Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು
ತಾಕತ್ತಿದ್ದರೆ ಯತ್ನಾಳ್ ನನ್ನ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಲಿ: ಪಾಟೀಲ್
Bagalkote; ಯತ್ನಾಳ್ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿ…: ಶಿವಾನಂದ ಪಾಟೀಲ್ ಸವಾಲು
MUST WATCH
ಹೊಸ ಸೇರ್ಪಡೆ
Daily Horoscope: ಕೊಟ್ಟ ಮಾತಿಗೆ ತಪ್ಪದಂತೆ ಎಚ್ಚರಿಕೆ ಇರಲಿ,ಅನವಶ್ಯ ವಿವಾದಗಳಿಂದ ದೂರವಿರಿ
Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ
IPL; ಪಂಜಾಬ್ ಕಿಂಗ್ಸ್-ಮುಂಬೈ ಇಂಡಿಯನ್ಸ್ : ಒಂದೇ ದೋಣಿಯ ಪಯಣಿಗರು
Lok Sabha Polls 2024; ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ
ಭಾರತದ ಜಿಡಿಪಿ ಶೇ.6.8 ದರದಲ್ಲಿ ಪ್ರಗತಿ: ಐಎಂಎಫ್ ಅಂದಾಜು