ದೇವದಾಸಿ ಪದ್ಧತಿ ನಿರ್ಮೂಲನೆಗೆ ಪ್ಯಾಕೇಜ್‌


Team Udayavani, Mar 13, 2020, 4:35 PM IST

ದೇವದಾಸಿ ಪದ್ಧತಿ ನಿರ್ಮೂಲನೆಗೆ ಪ್ಯಾಕೇಜ್‌

ಬಾಗಲಕೋಟೆ: ದೇವದಾಸಿ ಪದ್ಧತಿ ಸಂಪೂರ್ಣವಾಗಿ ನಿರ್ಮೂಲನೆ ಮಾಡಲು, ಅವರು ಸ್ವಾವಲಂಬಿಗಳಾಗಿ ಜೀವನ ನಡೆಸುವಂತೆ ಮಾಡಲು ಒಂದು ಸಮಗ್ರ ಪ್ಯಾಕೇಜ್‌ ಅಗತ್ಯವಾಗಿದ್ದು, ಈ ಕುರಿತು ಸರಕಾದ ಗಮನಕ್ಕೆ ತರುವುದಾಗಿ ಎಂದು ಕರ್ನಾಟಕ ಕೌಶಲ್ಯ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷೆ ಕೆ.ರತ್ನಪ್ರಭಾ ಹೇಳಿದರು.

ಜಿಲ್ಲಾಡಳಿತ, ಜಿಪಂ ಹಾಗೂ ದೇವದಾಸಿ ಪುನರ್ವಸತಿ ಯೋಜನೆ ಸಂಯುಕ್ತಾಶ್ರಯದಲ್ಲಿ ನವನಗರದ ಕಲಾಭವನದಲ್ಲಿ ಮಾಜಿ ದೇವದಾಸಿ ಮಹಿಳೆಯರಿಗೆ ಗುರುವಾರ ಹಮ್ಮಿಕೊಂಡಿದ್ದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಹಾಗೂ ಇತರೆ ಇಲಾಖೆ ಕಾರ್ಯಕ್ರಮಗಳ ಮಾಹಿತಿ ಕಾರ್ಯಾಗಾರ ಹಾಗೂ ಮಾಜಿ ದೇವದಾಸಿ ಮಕ್ಕಳ ವಿವಾಹ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ದೇವದಾಸಿ ಮಕ್ಕಳು ಎಲ್ಲರಂತೆ ಶಿಕ್ಷಣ ಕಲಿತು ಉತ್ತಮ ಸ್ಥಾನ ಅಲಂಕರಿಸುವಂತಾಗಬೇಕು. ಸರಕಾರ ದೇವದಾಸಿ ಮಹಿಳೆಯರಿಗೆ ಸ್ವಯಂ ಉದ್ಯೋಗ ಕೈಗೊಳ್ಳಲು ಸಹಾಯಧನ, ಪ್ರೋತ್ಸಾಹ, ಮಕ್ಕಳಿಗೆ ಮದುವೆ ಕಾರ್ಯಕ್ರಮಗಳಿದ್ದು, ಅನಿಷ್ಠ ಪದ್ಧತಿಯಿಂದ ಹೊರ ಬಂದು ಒಳ್ಳೆಯ ಜೀವನ ನಡೆಸಬೇಕೆಂದರು. ದೇವದಾಸಿಯರಿಗೆ ಸರಕಾರದಿಂದ ಭೂಮಿ ನೀಡುವ ಕೆಲಸವಾಗಬೇಕು. ಇದರಿಂದ ಭೂಮಾಲಿಕರಾಗಿ ಗೌರವದಿಂದ ಬದುಕಲು ಸಾಧ್ಯವಾಗುತ್ತದೆ ಎಂದು ಡಿಸಿ-ಜಿಪಂ ಸಿಇಒ ಅವರಲ್ಲಿ ಮನವಿ ಮಾಡಿದರು.

ಅಥಣಿಯ ದೇವದಾಸಿ ವಿಮೋಚನಾ ಸಂಸ್ಥೆ ಅಧ್ಯಕ್ಷ ಬಿ.ಎಲ್‌.ಪಾಟೀಲ ಮಾತನಾಡಿದರು. ಜಿಪಂ ಸಿಇಒ ಗಂಗೂಬಾಯಿ ಮಾನಕರ ಪ್ರಾಸ್ತಾವಿಕ ಮಾತನಾಡಿ, ದೇವದಾಸಿ ಮಹಿಳೆಯರು ಎಲ್ಲರಂತೆ ಸಮಾಜದಲ್ಲಿ ಬದುಕಲೆಂಬ ದೃಷ್ಟಿಯಿಂದ ಅವರ ಮಕ್ಕಳಿಗೆ ಮುದುವೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಅವರು ಸ್ವತಂತ್ರವಾಗಿ ಬದುಕಲು ಎಲ್ಲ ರೀತಿಯ ಸೌಲಭ್ಯ ಒದಗಿಸಿ ಮುಖ್ಯವಾಹಿನಿಗೆ ತರುವ ಪ್ರಯತ್ನ ಮಾಡಲಾಗುತ್ತಿದೆ ಎಂದರು.

ನರೇಗಾ ಯೋಜನೆಯಡಿ ಎಲ್ಲರಿಗೂ ಉದ್ಯೋಗ ಕೊಡಲು ಸಾಧ್ಯವಾಗುತ್ತಿಲ್ಲ. ಕೆಲ ಕಂಪನಿಗಳ ಜತೆ ಮಾತನಾಡಿ ಉದ್ಯೋಗ ಸೃಷ್ಟಿಸುವ ಕೆಲಸ ಆಗಬೇಕಿದೆ ಎಂದರು. ಜಿ.ಪಂ ಉಪಾಧ್ಯಕ್ಷ ಮುತ್ತಪ್ಪ ಕೋಮಾರ, ತಾಪಂ ಅಧ್ಯಕ್ಷ ಚನ್ನನಗೌಡ ಪರನಗೌಡರ, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕಿ ಉಮಾ ಸಾಲಿಮಠ, ಜಿಲ್ಲಾ ಧಿಕಾರಿ ಕ್ಯಾಪ್ಟನ್‌ ಡಾ|ಕೆ.ರಾಜೇಂದ್ರ, ಪ್ರೋಬೇಷನರಿ ಐಎಎಸ್‌ ಅಧಿಕಾರಿ ಗರಿಮಾ ಪನ್ವಾರ, ಜಿಪಂ ಉಪ ಕಾರ್ಯದರ್ಶಿ ಎ.ಜಿ.ತೋಟದ ಸೇರಿದಂತೆ ವಿವಿಧ ಇಲಾಖೆ ಅಧಿ ಕಾರಿಗಳು ಉಪಸ್ಥಿತರಿದ್ದರು. ಶಿಕ್ಷಣ ಇಲಾಖೆಯ ಜಾಸ್ಮಿನ್‌ ಕಿಲ್ಲೆದಾರ ನಿರೂಪಿಸಿದರು.

ಕಂಕಣಭಾಗ್ಯ ಪಡೆದ 10 ಜನ ದೇವದಾಸಿ ಮಕ್ಕಳು :  ಸಂಗೊಂದೆಪ್ಪ ಯಲ್ಲವ್ವ ಮಾದರ-ಮುದಕ್ಕವ್ವಾ ಯಲಗುರ್ದಪ್ಪಾ ಬಂಡಿವಡ್ಡರ, ಚಂದ್ರಶೇಖರ ಯಲ್ಲವ್ವ ಚಲವಾದಿ-ಶಶಿಕಲಾ ವಿಠuಲ ಚಲವಾದಿ, ರೇವಣಸಿದ್ಧ ಚಂದ್ರಾಮ ವಾಲಿಕಾರ-ಕಾವೇರಿ ಕೆಂಚವ್ವ ಹಾದಿಮನಿ, ಕಿಶೋರಕುಮಾರ ಎಸ್‌. ಅಮೀನ್‌-ಶೀಮಾರೇಣುಕಾ ಮಾದರ,ದುರಗಪ್ಪ ಭೀಮಪ್ಪ ದೊಡಮನಿ-ಹುಚ್ಚವ್ವ ಶಿವಕ್ಕ ಮಲ್ಲಪೂರ,

ರವೀಂದ್ರ ಮುತ್ತಪ್ಪ ಮಾದರ-ಚೆನ್ನಮ್ಮ ಹೆಬ್ಬಳ್ಳೆವ್ವ ಮಾದರ, ಲಕ್ಷ್ಮೀಶ ಹರಿದಾಸ ಭಟ್‌ -ಹೀರಾ ಶಶಿಕಲಾ ನೀಲನಾಯಕ್‌, ರಾಜಪ್ಪ ಸೋಮಪ್ಪ ನಡಗೇರಿ-ರೇಣುಕಾ ಮರಗವ್ವ ಕೆಳಗಡೆ, ಲಕ್ಷ್ಮಣ ಮಾದೇವ ದೊಡಮನಿ-ಸೌಮ್ಯ ರೇಖಾ ದೊಡಮನಿ, ವಿನಾಯಕ ನಡೋಣಿ-ಲಕ್ಷ್ಮೀ ಹಮ್ಮಿನವರ.

ವಿವಿಧ ಸೌಲಭ್ಯ ವಿತರಣೆ :  ದೀನ್‌ ದಯಾಳ ಅಂತ್ಯೋದಯ ರಾಷ್ಟ್ರೀಯ ಗ್ರಾಮೀಣ ಜೀವನೋಪಾಯದಡಿ ಅತ್ಯುತ್ತಮವಾಗಿ ಕಾರ್ಯ ನಿರ್ವಹಿಸಿದ ಗ್ರಾಪಂ ಮಹಿಳಾ ಒಕ್ಕೂಟಗಳಾದ ಗಲಗಲಿಯ ಭಾರತಾಂಬೆ ಸಂಜೀವನಿ ಒಕ್ಕೂಟ (ಪ್ರಥಮ, 2 ಲಕ್ಷ ಪುರಸ್ಕಾರ), ಕಟಗೇರಿಯ ಚಾಮುಂಡೇಶ್ವರಿ ಸಂಜೀವಿನಿ ಒಕ್ಕೂಟಕ್ಕೆ (ದ್ವಿತೀಯ, 1ಲಕ್ಷ ಪುರಸ್ಕಾರ), ಅಮರಾವತಿ ಅವರಜ್ಯೋತಿ ಸಂಜೀವಿನಿ ಒಕ್ಕೂಟಕ್ಕೆ (ತೃತೀಯ, 50 ಸಾವಿರ ಪುರಸ್ಕಾರ). ದೇವದಾಸಿ ಮಹಿಳೆಯರಿಗೆ ಜಿಪಂ ಎನ್‌.ಆರ್‌.ಎಲ್‌.ಎಮ್‌ ದಡಿ 5 ಜನರಿಗೆ, ಗ್ರಾಪಂ ಎಸ್‌ಸಿ-ಎಸ್ಟಿ ಅನುದಾನದಡಿಯಲ್ಲಿ 8 ಜನ ಮಾಜಿ ದೇವದಾಸಿ ಮಹಿಳೆಯರಿಗೆ ಟೇಲರಿಂಗ್ ಮಸೀನ್‌, ಉದ್ಯೋಗ ಖಾತ್ರಿ ಯೋಜನೆಯಡಿ ಹೆ„ನುಗಾರಿಕೆ ಸ್ವ-ಉದ್ಯೋಗ ಚಟುವಟಿಕೆ ಕೈಗೊಳ್ಳುತ್ತಿರುವ 132 ಮಾಜಿ ದೇವದಾಸಿ ಫಲಾನುಭವಿಗಳಿಗೆ ಕಾಮಗಾರಿ ಮಂಜೂರಾತಿ ಆದೇಶ ಪ್ರಮಾಣ ಪತ್ರ ವಿತರಣೆ, ಜಿಲ್ಲಾ ವಿಶೇಷ ಚೇತನರ ಇಲಾಖೆ ಅಡಿಯಲ್ಲಿ 10 ಜನ ವಿಶೇಷ ಚೇತನ ಮಾಜಿ ದೇವದಾಸಿ ಮಹಿಳೆಯರಿಗೆ ಸ್ವ-ಉದ್ಯೋಗ ಚಟುವಟಿಕೆ ಅಡಿಯಲ್ಲಿ ಸಾಲ ಮತ್ತು ಸಹಾಯಧನ ಪ್ರಮಾಣ ಪತ್ರ ವಿತರಿಸಲಾಯಿತು. ವಸತಿ ಯೋಜನೆಯಡಿ 80 ಜನ ಮಾಜಿ ದೇವದಾಸಿ ಮಹಿಳೆಯರಿಗೆ ಮನೆ ಮಂಜೂರಾತಿ ಪ್ರಮಾಣ ಪತ್ರ, ದೇವದಾಸಿ ಪುನರ್ವಸತಿ ಯೋಜನೆ ಇಲಾಖೆಯಡಿ ಆದಾಯ ಉತ್ಪನ್ನಕರ ಚಟುವಟಿಕೆಗಳಿಗೆ ಸಾಲ ಮತ್ತು ಸಹಾಯಧನ ಪ್ರಮಾಣ ಪತ್ರ ವಿತರಿಸಲಾಯಿತು.

ಟಾಪ್ ನ್ಯೂಸ್

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.