ಢಾಣಕಶಿರೂರ ಗ್ರಾಮದ ಜನ ಸದ್ಯ ನಿರಾಳ


Team Udayavani, May 9, 2020, 11:28 AM IST

ಢಾಣಕಶಿರೂರ ಗ್ರಾಮದ ಜನ ಸದ್ಯ ನಿರಾಳ

ಬಾಗಲಕೋಟೆ: ಒಂದೇ ಗ್ರಾಮದಲ್ಲಿ ಬರೋಬ್ಬರಿ 16 ಜನರಿಗೆ ಕೋವಿಡ್ ವೈರಸ್‌ ದೃಢಪಟ್ಟ ಢಾಣಕಶಿರೂರ ಗ್ರಾಮಸ್ಥರು ಸದ್ಯ ನಿರಾಳರಾಗಿದ್ದು, ಈ ಗ್ರಾಮದಿಂದ ಕಳುಹಿಸಿದ್ದ ಒಟ್ಟು 266 ಸ್ಯಾಂಪಲ್‌ಗ‌ಳೂ ನೆಗೆಟಿಟ್‌ ಬಂದಿವೆ.

ಗ್ರಾಮದ 23 ವರ್ಷದ ಐದು ತಿಂಗಳ ಗರ್ಭಿಣಿ ಮಹಿಳೆ ಪಿ-607ಗೆ ಮೇ 3ರಂದು ಸೋಂಕು ಖಚಿತಪಟ್ಟಿತ್ತು. ಅದಾದ ಬಳಿಕ ಗ್ರಾಮದಲ್ಲಿ ಬರೋಬ್ಬರಿ 16 ಜನರಿಗೆ ಸೋಂಕು ವಿಸ್ತರಿಸಿದೆ. ಮಹಿಳೆಯೊಂದಿಗೆ ಪ್ರಾಥಮಿಕ ಮತ್ತು ದ್ವಿತೀಯ ಹಂತದ ಸಂಪರ್ಕ ಹೊಂದಿದ್ದ ಒಟ್ಟು 184 ಜನ ಹಾಗೂ ಬಾದಾಮಿ ಪಟ್ಟಣದ 18 ವರ್ಷದ ಎಂಜಿನಿಯರಿಂಗ್‌ ವಿದ್ಯಾರ್ಥಿನಿ ಜತೆ‌ಗೆ ಸಂಪರ್ಕ ಹೊಂದಿದ್ದ 40 ಜನರು ಒಳಗೊಂಡ ಒಟ್ಟು ಜಿಲ್ಲೆಯಿಂದ ಕಳುಹಿಸಿದ್ದ 269 ಸ್ಯಾಂಪಲ್‌ಗ‌ಳಲ್ಲಿ 266 ಸ್ಯಾಂಪಗಳು ನೆಗೆಟಿವ್‌ ಬಂದಿವೆ.

47 ಸ್ಯಾಂಪಲ್‌ ಪರೀಕ್ಷೆಗೆ: ಜಿಲ್ಲೆಯಿಂದ ಕಳುಹಿಸಿದ್ದ 269 ಸ್ಯಾಂಪಲ್‌ಗ‌ಳಲ್ಲಿ 266 ವರದಿ ನೆಗೆಟಿವ್‌ ಬಂದಿದ್ದು, ಬಾಕಿ ಇರುವ 3 ಹಾಗೂ ಗುರುವಾರ ಮತ್ತೆ 47 ಸೇರಿದಂತೆ ಒಟ್ಟು 50 ಸ್ಯಾಂಪಲ್‌ಗ‌ಳ ವರದಿ ಬರಬೇಕಿದೆ. ಜಿಲ್ಲೆಯಿಂದ ಈ ವರೆಗೆ 4068 ಜನರ ಸ್ಯಾಂಪಲ್‌ ಕಳುಹಿಸಿದ್ದು, ಅದರಲ್ಲಿ 3962 ಸ್ಯಾಂಪಲ್‌ ನೆಗೆಟಿವ್‌, 51 ಪಾಜಿಟಿವ್‌ ಬಂದಿವೆ. 1876 ಜನರು ಪ್ರತ್ಯೇಕವಾಗಿ ನಿಗಾದಲ್ಲಿದ್ದು, 18 ಜನರು ಕೋವಿಡ್ ಮುಕ್ತರಾಗಿ ಬಿಡುಗಡೆಗೊಂಡಿದ್ದಾರೆ. ಅಲ್ಲದೇ 198 ಜನರು 28 ದಿನಗಳ ಹೋಂ ಕ್ವಾರಂಟೈನ್‌ ಅವಧಿ  ಪೂರ್ಣಗೊಳಿಸಿದ್ದಾರೆ ಎಂದು ಜಿಲ್ಲಾಧಿಕಾರಿ ಕ್ಯಾಪ್ಟನ್‌ ಡಾ| ರಾಜೇಂದ್ರ ತಿಳಿಸಿದ್ದಾರೆ.

ಕಾರ್ಮಿಕರಿಗೆ ಕ್ವಾರಂಟೈನ್‌ ಕಡ್ಡಾಯ: ಮಹಾರಾಷ್ಟ್ರದ ಪುಣೆ, ಮುಂಬೈನಿಂದ ಕಾರ್ಮಿಕರು ಮರಳಿ ಬರುತ್ತಿದ್ದು, ಅವರನ್ನು ಕಡ್ಡಾಯವಾಗಿ ಆರೋಗ್ಯ ತಪಾಸಣೆ ನಡೆಸಿ, ಹೋಂ ಕ್ವಾರಂಟೈನ್‌ ನಡೆಸಲಾಗುತ್ತಿದೆ ಎಂದು ಜಿಪಂ ಸಿಇಒ ಗಂಗೂಬಾಯಿ ಮಾನಕರ ತಿಳಿಸಿದರು.

ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಹಾರಾಷ್ಟ್ರದ ಪುಣೆ ಮತ್ತು ಮುಂಬಯಿ ನಂತಹ ನಗರಗಳಲ್ಲಿ ಹೆಚ್ಚಾಗಿ ಕೋವಿಡ್‌ ಪ್ರಕರಣಗಳು ಕಂಡುಬಂದಿದ್ದು, ಈ ನಗರಗಳಿಂದ ಆಗಮಿಸಿದ 90 ಜನರನ್ನು ಪ್ರತ್ಯೇಕ ವಸತಿ ನಿಲಯಗಳಲ್ಲಿ ಕ್ವಾರಂಟೈನ್‌ ಮಾಡಲಾಗಿದೆ ಎಂದರು.

ಕಾಮಗಾರಿ ಆರಂಭಿಸಲ್ಲ: ಜಿಲ್ಲೆಯ ವಿವಿಧ ಟೆಂಡರ್‌ಗಳಿಗೆ ವರ್ಕ್‌ ಆರ್ಡರ್‌ ನೀಡಿದರೂ ಸಹ ಆರಂಭಿಸದಿರಲು ಹಣಕಾಸು ಇಲಾಖೆಯಿಂದ ಆದೇಶ ಬಂದಿರುತ್ತದೆ. ಕೇವಲ ಉದ್ಯೋಗ ಖಾತ್ರಿ ಯೋಜನೆಯ ಕಾಮಗಾರಿಗಳನ್ನು ಮಾತ್ರ ಕೈಗೊಳ್ಳಲಾಗುತ್ತಿದ್ದು, ಇದರ ಮೂಲಕ ಕಾರ್ಮಿಕರಿಗೆ ಕೂಲಿ ನೀಡಲಾಗುತ್ತದೆ. ಕಡುಬಡವರಿಗೆ ಪಡಿತರ ಹಾಗೂ ಸಂಘ ಸಂಸ್ಥೆಗಳಿಂದ ಸಹಾಯಧನ ನೀಡಲಾಗುತ್ತಿದೆ ಎಂದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.