ಸಲೂನ್‌-ಪಾರ್ಲರ್‌ಗೆ ಅನುಮತಿ: ಷರತ್ತು ಕಡ್ಡಾಯ


Team Udayavani, May 21, 2020, 10:22 AM IST

ಸಲೂನ್‌-ಪಾರ್ಲರ್‌ಗೆ ಅನುಮತಿ: ಷರತ್ತು ಕಡ್ಡಾಯ

ಬಾಗಲಕೋಟೆ: ಕೋವಿಡ್‌-19 ಸಾಂಕ್ರಾಮಿಕ ರೋಗ ಹರಡುತ್ತಿರುವ ಹಿನ್ನಲೆಯಲ್ಲಿ ಜಿಲ್ಲೆಯಲ್ಲಿರುವ ಸಲೂನ್‌ ಮತ್ತು ಪಾರ್ಲರ್‌ಗಳಿಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಆಯುಕ್ತಾಲಯದಿಂದ ನೀಡಿದ ಸಲಹೆಗಳನ್ನು ತಪ್ಪದೇ ಪಾಲಿಸುವಂತೆ ಜಿಲ್ಲಾಧಿಕಾರಿ ಕ್ಯಾಪ್ಟನ್‌ ಡಾ|ಕೆ. ರಾಜೇಂದ್ರ ತಿಳಿಸಿದ್ದಾರೆ.

ಜ್ವರ, ಶೀತ, ಕೆಮ್ಮು ಮತ್ತು ಗಂಟಲು ನೋವು ಇರುವ ವ್ಯಕ್ತಿಗಳಿಗೆ ಒಳಗೆ ಪ್ರವೇಶ ನೀಡುವಂತಿಲ್ಲ. ಮಾಸ್ಕ ಇಲ್ಲದ ವ್ಯಕ್ತಿಗಳಿಗೆ ಪ್ರವೇಶ ನೀಡಬಾರದು. ಪ್ರವೇಶ ದ್ವಾರದಲ್ಲಿ ಹ್ಯಾಂಡ್‌ ಸ್ಯಾನಿಟೈಸರ್‌ ವ್ಯವಸ್ಥೆ ಮಾಡಬೇಕು. ಶಾಪ್‌ಗ್ಳ ಎಲ್ಲ ಸಿಬ್ಬಂದಿಯೂ ಕಡ್ಡಾಯವಾಗಿ ಮಾಸ್ಕ್ ತಲೆಗೆ ಟೋಪಿ ಮತ್ತು ಏಪ್ರನ್‌ ಧರಿಸತಕ್ಕದ್ದು. ಪ್ರತಿಯೊಬ್ಬ ಗ್ರಾಹಕನಿಗೂ ಪ್ರತ್ಯೇಕವಾಗಿ ಬಳಸಿ ಎಸೆಯಬಹುದಾದ ಟವೆಲ್, ಪೇಪರ್‌ ಶೀಟ್‌ ಬಳಕೆ ಮಾಡಬೇಕು ಎಂದು ಹೇಳಿದ್ದಾರೆ.

ಪ್ರತಿಯೊಬ್ಬ ಗ್ರಾಹಕನಿಗೆ ಬಳಕೆ ಮಾಡಿದ ಬಳಿಕ ಎಲ್ಲ ಸಾಧನೆಗಳನ್ನು 30 ನಿಮಿಷಗಳ ಕಾಲ ಶೇ.7ರ ಲೈಸೋಲ್‌ ಬಳಸಿ ಸೋಂಕು ನಿವಾರಣೆ ಮಾಡಬೇಕು. ಈ ಹಿನ್ನಲೆಯಲ್ಲಿ ಹೆಚ್ಚುವರಿ ಸಾಧನ ಬಳಸಬೇಕು. ಒಂದು ಸೆಟ್‌ ಸಾಧನಗಳನ್ನು ಬಳಕೆಯಲ್ಲಿದ್ದಾಗ ಇನ್ನೊಂದು ಸೆಟ್‌ ಅನ್ನು ಸೋಂಕು ನಿವಾರಣೆ ಮಾಡಲು ಇಡಬೇಕು. ಪ್ರತಿ ಹೇರ್‌ ಕಟಿಂಗ್‌ ಮಾಡಿದ ಬಳಿಕ ಸಿಬ್ಬಂದಿ ತಮ್ಮ ಕೈಗಳನ್ನು ಸ್ಯಾನಿಟೈಸ್‌ ಮಾಡಿಕೊಳ್ಳಬೇಕು. ಒಂದೇ ಸಮಯದಲ್ಲಿ ಹೆಚ್ಚಿನ ಗ್ರಾಹಕರು ಪ್ರವೇಶಿಸುವದನ್ನು ತಡೆಯಲು ಗ್ರಾಹಕರ ಸಮಯವನ್ನು ಕಾಯ್ದಿರಿಸುವ ಅಥವಾ ಟೋಕನ್‌ ವ್ಯವಸ್ಥೆ ಮೂಲಕ ಹೆಚ್ಚಿನ ಜನ ಸಾಂದ್ರತೆ ಉಂಟಾಗದಂತೆ ನಿಯಂತ್ರಿಸಬೇಕು ಎಂದು ತಿಳಿಸಿದ್ದಾರೆ.

ಆಸನಗಳ ನಡುವೆ ಕನಿಷ್ಠ 1 ಮೀಟರ್‌ ಅಂತರ ವಿರುವಂತೆ ನಿರ್ವಹಣೆ ಮಾಡಬೇಕು. ನೆಲ, ಲಿಪ್ಟ್, ಲಾಂಜ್‌, ಸುತ್ತಲಿನ ಪ್ರದೇಶ, ಮೆಟ್ಟಿಲು ಮತ್ತು ಕೈಹಿಡಿಕೆಗಳು ಸೇರಿದಂತೆ ಎಲ್ಲ ಜಾಗಗಳನ್ನು ದಿನಕ್ಕೆ ಕನಿಷ್ಠ ಎರಡು ಬಾರಿ ಶೇ.1ರ ಸೋಡಿಯಂ ಹೈಪೋಕ್ಲೋರೈಟ್‌ ದ್ರಾವಣದ ಮೂಲಕ ಸೋಂಕು ನಿವಾರಣೆ ಮಾಡಿಕೊಳ್ಳಬೇಕು. ಕಾರ್ಪೆಟ್‌ಗಳು ಮತ್ತು ಕೊಠಡಿಯ ನೆಲ ಭಾಗಗಳನ್ನು ಆಗಾಗ ಸ್ವತ್ಛಗೊಳಿಸಬೇಕು. ಬ್ಲೇಡ್‌ ಎಸೆಯಬಹುದಾದ ರೇಜರ್‌ ಸೇರಿದಂತೆ ಇತ್ಯಾದಿ ಚೂಪಾದ ತ್ಯಾಜ್ಯಗಳನ್ನು ಶೇ.1ರ ಸೋಡಿಯಂ ಹೈಪ್ಲೋಕ್ಲೋರೈಟ್‌ ದ್ರಾವಣದೊಂದಿಗೆ ಒಡೆದು ಹೋಗದ, ಸೋರಿಕೆಯಾಗದ ಬಿಳಿ ಕಂಟೈನರ್‌ನಲ್ಲಿ ಸಂಗ್ರಹಿಸಬೇಕು. ಕಂಟೈನರ್‌ ರಷ್ಟು ಭಾಗ ತುಂಬಿದ ಬಳಿಕ ಬಯೋಮೆಡಿಕಲ್‌ ತ್ಯಾಜ್ಯ ವಿಲೇವಾರಿ ಏಜೆನ್ಸಿಗೆ ಒಪ್ಪಿಸಬೇಕು ಎಂದು ಹೇಳಿದ್ದಾರೆ.

ಪ್ರವೇಶ ದ್ವಾರದಲ್ಲಿ ಕೆಮ್ಮು ಮತ್ತು ಸಾಮಾಜಿಕ ಅಂತರದ ಬಗೆಗಿನ ಶಿಷ್ಟಾಚಾರಗಳಿಗೆ ಸಂಬಂಧಿಸಿದ ಪೋಸ್ಟರ್‌ ಲಗತ್ತಿಸಬೇಕು. ಹೆಚ್ಚಿನ ವಿವರಗಳಿಗಾಗಿ ವೆಬ್‌ಸೈಟ್‌ ಭೇಟಿ ನೀಡಬಹುದಾಗಿದೆ. ಮಾಸ್ಕ್ ಮತ್ತು ಕೆಮ್ಮಿಗೆ ಸಂಬಂ ಧಿಸಿದ ಶಿಷ್ಟಾಚಾರದ ಬಗ್ಗೆ ಎಲ್ಲ ಸಿಬ್ಬಂದಿ ಮತ್ತು ಸಹಾಯಕರಿಗೆ ಮಾರ್ಗದರ್ಶನ ನೀಡಬೇಕು. ಕೋವಿಡ್‌ಗೆ ಸಂಬಂಧಿಸಿದ ರೋಗ ಲಕ್ಷಣಗಳು ಕಂಡುಬಂದರೆ ತಕ್ಷಣ ಕ್ಲಿನಿಕ್‌ ಗೆ ಕಳುಹಿಸಬೇಕು. ಅಥವಾ ಆಪ್ತಮಿತ್ರ ಸಹಾಯವಾಣಿ 14410 ಸಂಖ್ಯೆಗೆ ಕರೆ ಮಾಡಬೇಕು. ಅವರು ಸಂಪೂರ್ಣ ಗುಣಮುಖರಾಗುವ ತನಕ ಅವರನ್ನು ಮತ್ತೆ ಆವರಣ ಪ್ರವೇಶಕ್ಕೆ ಅವಕಾಶ ನೀಡಬಾರದು. ಈ ಎಲ್ಲ ಸಲಹೆಗಳನ್ನು ತಪ್ಪದೇ ಪಾಲಿಸುವಂತೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.