ಮಲಪ್ರಭಾ ನದಿ ಮಧ್ಯೆ ಸಿಲುಕಿದ್ದ ವ್ಯಕ್ತಿ ರಕ್ಷಣೆ
Team Udayavani, Sep 16, 2021, 6:25 PM IST
ಬಾಗಲಕೋಟೆ : ಕುಳಗೇರಿ ಕ್ರಾಸ್ ನ ಗೋವನಕೊಪ್ಪ ಬಳಿ ಮಲಪ್ರಭಾ ನದಿ ಮಧ್ಯೆ 2 ಗಂಟೆಗಳ ಕಾಲ ಮುಳ್ಳಿನಕಂಟಿಯಲ್ಲಿ ಆಶ್ರಯ ಪಡೆದ ವ್ಯಕ್ತಿಯನ್ನು ಅಗ್ನಿಶಾಮಕ ದಳದ ಸಿಬ್ಬಂದಿ ರಕ್ಷಣೆ ಮಾಡಿದ್ದಾರೆ.
ನದಿಯಲ್ಲಿ ಸ್ನಾನಕ್ಕೆಂದು ತೆರಳಿ ಕಾಲುಜಾರಿ ಬಿದ್ದಿದ್ದ ಕೊಣ್ಣೂರ ಗ್ರಾಮದ ನಿವಾಸಿ ಬಸಪ್ಪ ಫಕ್ಕೀರಪ್ಪ ತಳವಾರ, ನೀರಿನಲ್ಲಿ ಕೊಚ್ಚಿ ಹೋಗಿ ನದಿಯಲ್ಲಿದ್ದ ಮುಳ್ಳಿನ ಕಂಟಿಯನ್ನೇ ಆಶ್ರಯಿಸಿ ನಿಂತಿದ್ದ. ಈ ಕುರಿತು ಸ್ಥಳೀಯರಿಂದ ಅಗ್ನಿಶಾಮಕ ದಳ ತಂಡಕ್ಕೆ ಮಾಹಿತಿ ನೀಡಲಾಗಿತ್ತು.
ಬಾದಾಮಿಯಿಂದ ಗೋವನಕೊಪ್ಪ ಗ್ರಾಮಕ್ಕೆ ಆಗಮಿಸಿದ ಅಗ್ನಿಶಾಮಕ ದಳ. ಕಾರ್ಯಾಚರಣೆ ನಡೆಸಿ ಬಸಪ್ಪನನ್ನು ರಕ್ಷಿಸಿದೆ.
ಇನ್ನು ನಿನ್ನೆಯಿಂದ ಮಲಪ್ರಭಾ ನದಿಗೆ 5 ಸಾವಿರ ಕ್ಯೂಸೆಕ್ಸ್ ನೀರಿನ ಹರಿವು ಹಿನ್ನೆಲೆ ಹೆಚ್ಚಳವಾಗಿದ್ದ ನೀರಿನ ಪ್ರಮಾಣ ಹೆಚ್ಚಾಗಿತ್ತು. ಪ್ರವಾಹದ ನೀರು ಬರುತ್ತಿದ್ದಂತೆ ಬಾದಾಮಿ ತಹಶೀಲ್ದಾರ ಸುಹಾಸ ಇಂಗಳೆ, ಕಂದಾಯ ನಿರೀಕ್ಷಕ ಎ ಡಿ ಸಾರವಾಡ, ಗ್ರಾಮ ಲೇಕ್ಕಾಧಿಕಾರಿ ಎಸ್ ಜಿ ದ್ಯಾಪೂರ, ತೌಶೀಫ್ ಧಾರವಾಡ ಸೇರಿದಂತೆ ಪೊಲೀಸ್ ಅಧಿಕಾರಿಗಳು ಸಹ ಸ್ಥಳಕ್ಕೆ ಭೇಟಿಕೊಟ್ಟಿದ್ದು, ನದಿ ದಡದಲ್ಲಿ ಸಂಚರಿಸಿ ಜನರಲ್ಲಿ ಜಾಗೃತಿ ಮೂಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ