ಕೆರೆ ತುಂಬಿಸುವ ಯೋಜನೆ ವರದಾನ


Team Udayavani, Jul 13, 2021, 8:03 PM IST

12 bgk-2a

ಮಲ್ಲಿಕಾರ್ಜುನ ಕಲಕೇರಿ

ಗುಳೇದಗುಡ್ಡ: ಹೊಸ ತಾಲೂಕು ಘೋಷಣೆಯಾದ ಬಳಿಕ ಈ ಮಹತ್ವದ ಕೆರೆಗಳಾಗಿರುವ ಗಂಜಿ ಕೆರೆ, ಪವರ್ತಿ ಕೆರೆಗಳಿಗೆ ನೀರು ತುಂಬಿಸುವ ರೈತರಿಗೆ ವರದಾನವಾಗುವ ಯೋಜನೆ ಜಾರಿಯಾಗುತ್ತಿದೆ.

ಕ್ಷೇತ್ರದ ಶಾಸಕರೂ ಆಗಿರುವ ಮಾಜಿ ಸಿಎಂ, ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರ ಪ್ರಯತ್ನದ ಫಲ, ಬಿಜೆಪಿ ಸರಕಾರದ ಕಾಳಜಿಯಿಂದ 184 ಹೆಕ್ಟೇರ್‌ ಪ್ರದೇಶಗಳ ಭೂಮಿ ವ್ಯಾಪ್ತಿಗೆ ನೀರು ನೀಡುವ ಕೆರೆಗಳಿಗೆ ನೀರು ಹರಿಯುವ ಸಮಯ ಒದಗಿ ಬಂದಿದೆ. ಈ ಕಾರ್ಯ ಸಫಲವಾಗುವಲ್ಲಿ ಸಿದ್ದರಾಮಯ್ಯ ಅವರು ಸರಕಾರದ ಮೇಲೆ ಒತ್ತಡ ಹಾಕುವ ಮೂಲಕ ತಾಲೂಕಿನ ಜನರ ಪಾಲಿಗೆ ಭಗೀರಥನಂತಾಗಿದ್ದಾರೆ ಎಂಬ ಮಾತು ರೈತ ವಲಯದಲ್ಲಿ ಕೇಳಿ ಬಂದಿದೆ.

ತಾಲೂಕಿನ ಪರ್ವತಿ ಹಾಗೂ ಗಂಜಿ ಕೆರೆಗೆ ನೀರು ತುಂಬಿಸಲು ಅಂದಾಜು 12 ಕೋಟಿ ವೆಚ್ಚದ ಯೋಜನೆ ಮಂಜೂರಿ ಮಾಡಿಸಿದ್ದು, ಅದರಲ್ಲಿ ಈಗಾಗಲೇ 10.77 ಕೋಟಿ ರೂ. ವೆಚ್ಚದ ಟೆಂಡರ್‌ ಆಗಿದ್ದು, ವಿಜಾಪುರ ಸಣ್ಣ ನೀರಾವರಿ ಮತ್ತು ಅಂತರಜಲ ಅಭಿವೃದ್ಧಿ ಇಲಾಖೆಯ ಗುಳೇದಗುಡ್ಡ ತಾಲೂಕಿನ ಪರ್ವತಿ ಹಿರೇಕೆರೆ, ಗಂಜಿಕೆರೆಗಳಿಗೆ ಆಸಂಗಿ ಹತ್ತಿರದ ಮಲಪ್ರಭಾ ನದಿಯ ಬ್ಯಾರೇಜ್‌ ನಿಂದ ನೀರು ತುಂಬಿಸುವ ಯೋಜನೆ ಜಾರಿಗೊಳ್ಳುತ್ತಿದೆ. ಸರಕಾರದ ಮೇಲೆ ಒತ್ತಡ ಹಾಕಿ ಸಿದ್ದರಾಮಯ್ಯನವರು ಯೋಜನೆ ಮಂಜೂರಿ ಮಾಡಿಸಿದ್ದು, ಇಂದು ಆ ಯೋಜನೆಗೆ ಶಂಕುಸ್ಥಾಪನೆ ಸಿಗಲಿದೆ. ಇದರಿಂದ ಹಲವು ವರ್ಷಗಳ ರೈತರ ಕನಸು ಈಗ ನನಸಾಗುವ ಹಂತ ಬಂದಿದೆ.

ನೀರಿನ ಸಂಗ್ರಹಣಾ ಸಾಮರ್ಥ್ಯ: ಪರ್ವತಿ ಕೆರೆಯು ಸುಮಾರು 30 ಎಂಸಿಎಫ್‌ಟಿ ಮತ್ತು ಗಂಜಿಗೆರೆಗೆ 20 ಎಂಸಿಎಫ್‌ಟಿ ನೀರು ಸಂಗ್ರಹ ಮಾಡಬಹುದಾದ ಸಾಮರ್ಥ್ಯವಿದೆ. ಈ ಎರಡು ಕೆರೆಗಳಿಗೆ ನೀರು ತುಂಬಿಸುವ ಯೋಜನೆ ಪೂರ್ಣಗೊಂಡರೇ ಮುಂಗಾರಿ ಮತ್ತು ಹಿಂಗಾರಿ ಬೆಳೆಗೆ ಪರ್ವತಿ(ಹಿರೆಕೆರೆ)ಯ 102 ಹೆಕ್ಟೇರು ನೀರು ಮತ್ತು ಗಂಜಿಕೆರೆಗೆ 82 ಹೆಕ್ಟೇರ್‌ ಸೇರಿ ಒಟ್ಟು 184 ಹೆಕ್ಟೇರ್‌ ಭೂಮಿಗೆ ನೀರು ಹರಿಸಬಹುದಾಗಿದೆ.

ಎಷ್ಟು ಗ್ರಾಮಗಳಿಗೆ ನೀರು?: ಅಂದಾಜು 12 ಕೋಟಿ ಯೋಜನೆ ಇದಾಗಿದ್ದು, ಈಗಾಗಲೇ 10ಕೋಟಿ 77 ಲಕ್ಷ ಟೆಂಡರ್‌ ಆಗಿದೆ. ಈ ಕೆರೆ ತುಂಬಿಸುವ ಯೋಜನೆಯಿಂದ ಗುಳೇದಗುಡ್ಡ ಭಾಗದ ಪರ್ವತಿ, ಕೆರೆಖಾನಾಪುರ, ಹುಲ್ಲಿಕೇರಿ, ಮುರುಡಿ ಭಾಗದಲ್ಲಿ ಅಂತರ್ಜಲ ಮಟ್ಟ ಹೆಚ್ಚಳವಾಗಲು ಸಹ ಅನುಕೂಲ ವಾಗಲಿದೆ. ಕೆರೆಗಳಿಗೆ ನೀರು ತುಂಬಿಸ ಬೇಕೆಂಬುದು ಬಹಳ ದಿನಗಳಿಂದ ಕೇಳಿ ಬರುತ್ತಿತ್ತು. ಆದರೆ, ಆ ಕಾರ್ಯವನ್ನು ವಿಪಕ್ಷ ನಾಯಕ ಸಿದ್ಧರಾಮಯ್ಯನವರು ಕೊನೆಗೂ ಕೆರೆ ತುಂಬಿಸುವ ಯೋಜನೆ ಜಾರಿಗೊಳಿಸಿದ್ದಾರೆ.

ರೇಸಿಂಗ್‌ ಮೇನ್‌: 7550 ಮೀಟರ್‌ ಎಂಎಸ್‌ ಪೈಪ್‌ಗ್ಳನ್ನು 500 ಎಂ.ಎಂ ವ್ಯಾಸ್‌ ಇರುವ ಪೈಪ್‌ ಗಳನ್ನು ಅಳವಡಿಸಲಾಗುತ್ತಿದೆ. 900 ಮೀಟರ್‌, 600 ಮೀಟರ್‌ ವ್ಯಾಸ ಇರುವ ಪೈಪ್‌ಗ್ಳನ್ನು ಆರ್‌ಸಿಸಿ ಪೈಪ್‌ ಗಳನ್ನು ಹತ್ತಿರ ಇರುವ ಗಂಜಿಕೆರೆಗೆ ಅಳವಡಿಸಲಾಗುವುದು. ಎರಡು ಪಂಪ್‌ ಗಳನ್ನು ಅಳವಡಿಸಲಾಗುವುದು 150 ಎಚ್‌ಪಿ ಸಾಮರ್ಥ್ಯ ಇರುವುದು. 150 ಎಚ್‌ಪಿಯ ಸಾಮರ್ಥ್ಯ ಇರುವ ಒಂದು ಪಂಪ್‌ ಹೆಚ್ಚುವರಿಯಾಗಿ ಅಳವಡಿಸಲು ಯೋಜನೆಯಡಿ ಹಾಕಿಕೊಳ್ಳಲಾಗಿದೆ. ಗಂಜಿಕೆರೆ 40ಎಕರೆ ವಿಸ್ತೀರ್ಣ ಹೊಂದಿದ್ದು, ಈ ಕೆರೆಯು ಮಳೆಗಾಲದಲ್ಲಿ 40ಎಕರೆಯಲ್ಲಿನ ಕೆರೆಗೆ ತನ್ನ ವ್ಯಾಪ್ತಿಯಲ್ಲಿ ಅಷ್ಟೇ ನೀರು ಹರಿದು ಬರದೇ ಇನ್ನೂ 10-20 ಎಕರೆಯಷ್ಟು ಭೂಮಿ ಮುಳುಗು ವಷ್ಟು ಈ ಕೆರೆಗೆ ನೀರು ಬರುತ್ತದೆ. ಬೇಸಿಗೆ ಸಮಯದಲ್ಲಿ ನೀರಿಲ್ಲದೇ ಒಣಗುತ್ತಿದ್ದ ಕೆರೆಗಳಿಗೆ ನೀರು ಹರಿಸುತ್ತಿರುವುದು ರೈತರಲ್ಲಿ ಸಂತಸ ಮೂಡಿದೆ.

ಟಾಪ್ ನ್ಯೂಸ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

ತಾಕತ್ತಿದ್ದರೆ ಯತ್ನಾಳ್‌ ನನ್ನ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಲಿ: ಪಾಟೀಲ್‌

ತಾಕತ್ತಿದ್ದರೆ ಯತ್ನಾಳ್‌ ನನ್ನ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಲಿ: ಪಾಟೀಲ್‌

ಯತ್ನಾಳ್ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿ…: ಶಿವಾನಂದ ಪಾಟೀಲ್ ಸವಾಲು

Bagalkote; ಯತ್ನಾಳ್ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿ…: ಶಿವಾನಂದ ಪಾಟೀಲ್ ಸವಾಲು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Mangaluru; ಪೆಟ್ರೋಲ್‌ ಬದಲು ಡೀಸೆಲ್‌ ತುಂಬಿಸಿದ ಆರೋಪ: ಕೋರ್ಟ್‌ಗೆ ಮೊರೆ

Mangaluru; ಪೆಟ್ರೋಲ್‌ ಬದಲು ಡೀಸೆಲ್‌ ತುಂಬಿಸಿದ ಆರೋಪ: ಕೋರ್ಟ್‌ಗೆ ಮೊರೆ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.