ಸಸ್ಯ ರಕ್ಷಣೆಗೆ ಬೀದಿಗೆ ಬಿದ್ದ ವಸ್ತುಗಳೇ ಆಸರೆ!

ವಸ್ತುಗಳೇ ಆಸರೆ! •ಅರಣ್ಯ ರಕ್ಷಕ ವಿನೋದ ಹೊಸ ಪ್ರಯತ್ನ•400ಕ್ಕೂ ಹೆಚ್ಚು ಸಸಿಗಳಿಗೆ ನಿತ್ಯ ನೀರು

Team Udayavani, Jul 7, 2019, 9:48 AM IST

bk-tdy-2..

ಅಮೀನಗಡ: ನಿರುಪಯುಕ್ತ ವಸ್ತು ಬಳಸಿ ಗಿಡಗಳಿಗೆ ನೀರುಣಿಸುತ್ತಿರುವ ಅರಣ್ಯ ರಕ್ಷಕ ವಿನೋದ ಬೊಂಬ್ಲೇಕರ.

ಅಮೀನಗಡ: ನಿರುಪಯುಕ್ತ ಪ್ಲಾಸ್ಟಿಕ್‌ ವಸ್ತುಗಳನ್ನೇ ಬಳಸಿಕೊಂಡು, ನೂರಾರು ಸಸಿ ಸಂರಕ್ಷಣೆ ಮಾಡುವ ಮೂಲಕ ಅರಣ್ಯ ಇಲಾಖೆ ಸಿಬ್ಬಂದಿ ಎಲ್ಲರ ಮೆಚ್ಚುಗೆ ಪಾತ್ರರಾಗಿದ್ದಾರೆ.

ಹೌದು, ಅಮೀನಗಡ ಹೋಬಳಿ ವ್ಯಾಪ್ತಿಯ ಅರಣ್ಯ ರಕ್ಷಕ ವಿನೋದ ಬೊಂಬ್ಲೇಕರ ಬಳಕೆಯಾದ ನಿರುಪಯುಕ್ತ ಎರಡು ಲೀಟರ್‌ ಪ್ಲಾಸ್ಟಿಕ್‌ ಬಾಟಲ್, ಸಿರಿಂಜ್‌ ಪೈಪ್‌ ಬಳಕೆ ಮಾಡಿಕೊಂಡು ಗಿಡಗಳಿಗೆ ನೀರುಣಿಸುವ ಕೆಲಸ ಮಾಡುತ್ತಿದ್ದಾರೆ. ಇದರಿಂದ ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳ ಮೆಚ್ಚುಗೆಯೂ ಪಡೆದಿದ್ದಾರೆ.

ಸಮೀಪದ ರಾಮಥಾಳ, ಕಳ್ಳಿಗಡ್ಡ ಸೇರಿದಂತೆ ವಿವಿಧೆಡೆ ಹೆದ್ದಾರಿಯ ಪಕ್ಕದಲ್ಲಿರುವ ನೂರಾರು ಗಿಡಗಳಿಗೆ ಬಳಕೆಯಾದ ನಿರುಪಯುಕ್ತ ನೀರಿನ ಖಾಲಿ ಬಾಟಲ್ಗಳನ್ನು ಬಳಕೆ ಮಾಡಿ ಗಿಡಗಳಿಗೆ ಕಟ್ಟಿ ಹನಿ ಹನಿಯಾಗಿ ನೀರು ಪೂರೈಸುವ ಕಾರ್ಯ ಮಾಡಲಾಗುತ್ತಿದೆ. ಇದು ಸಾರ್ವಜನಿಕರ ಗಮನ ಸೆಳೆಯುತ್ತಿದೆ.

400 ಸಸ್ಯಗಳ ಸಂರಕ್ಷಣೆ: ಐಹೊಳೆ ಮಾರ್ಗವಾಗಿ ಹಾದು ಹೋಗಿರುವ ರಾಜ್ಯ ಹೆದ್ದಾರಿ ಪಕ್ಕದಲ್ಲಿ ಅಮೀನಗಡ ಹೋಬಳಿ ವ್ಯಾಪ್ತಿಯಲ್ಲಿ ಸುಮಾರು 400ಕ್ಕೂ ಹೆಚ್ಚು ಸಸಿ ನೆಡಲಾಗಿದೆ. ಅರಣ್ಯ ಇಲಾಖೆಯಿಂದ ನಿತ್ಯವೂ ಸಸಿಗಳಿಗೆ ನೀರು ಹಾಕಲು ನಿಯಮಾನುಸಾರ ಅವಕಾಶವಿಲ್ಲ. ಹೀಗಾಗಿ ಹಿಂದೆ ಸಾಮಾಜಿಕ ಜಾಲತಾಣದಲ್ಲಿ ನೋಡಿದ್ದ ವಿನೋದ ಅವರು, ಉಪಾಯ ಮಾಡಿ, ರಸ್ತೆಯ ಇಕ್ಕೆಲಗಳಲ್ಲಿ ಬಿದ್ದ ಎರಡು ಲೀಟರ್‌ನ ನೀರಿನ ಬಾಟಲ್, ಆಸ್ಪತ್ರೆಗಳಲ್ಲಿ ರೋಗಿಗಳಿಗೆ ಬಳಸಿ, ಎಸೆಯುವ ಸಲೈನ್‌ ಬಾಟಲ್ಗಳ ಚಿಕ್ಕ ಪೈಪ್‌ ಬಳಸಿಕೊಂಡು, ಅವುಗಳನ್ನು ಎಲ್ಲ ಗಿಡಗಳಿಗೆ ಕಟ್ಟಿದ್ದಾರೆ. ಬಳಿಕ ಬಾಟಲ್ಗಳಿಗೆ ನೀರು ತುಂಬಿಸುತ್ತಿದ್ದು, ಇದಕ್ಕೆ ಆಯಾ ವ್ಯಾಪ್ತಿಯ ರೈತರು, ಸಾರ್ವಜನಿಕರೂ ಸಹಕಾರ ಕೊಡುತ್ತಿದ್ದಾರೆ. ಹೀಗಾಗಿ 400ಕ್ಕೂ ಹೆಚ್ಚು ಸಸಿಗಳು ಇಂದು ಬೆಳೆದು ಮರವಾಗುತ್ತಿವೆ.

ಎರಡು ವರ್ಷಗಳ ಹಿಂದೆ ಮೊಬೈಲ್ಗಳಲ್ಲಿ ಇಂಟರ್‌ನೆಟ್ ಬಳಸಿಕೊಂಡು ಗಿಡಗಳಿಗೆ ಯಾವ ರೀತಿ ನೀರು ಪೂರೈಸಬೇಕು ಎಂಬುದನ್ನು ಸಹಜವಾಗಿ ಗಮನಿಸಿದ್ದೆ. ಅದರಂತೆ ಅಮೀನಗಡ ಹೋಬಳಿ ವ್ಯಾಪ್ತಿಯ ಬಾಂತಿಕೊಳ್ಳದ ಹತ್ತಿರದಲ್ಲಿರುವ ಎರಡು ನೂರು ಗಿಡಗಳಿಗೆ ನಿರುಪಯುಕ್ತ ನೀರಿನ ಬಾಟಲ್ಗೆ ಸಿರಿಂಜ್‌ ಪೈಪ್‌ ಅಳವಡಿಸಿ ಬೆಂಡಿಂಗ್‌ ವೈಯರ್‌ನಿಂದ ಗಿಡಗಳಿಗೆ ಕಟ್ಟಿ ಹನಿ ಹನಿಯಾಗಿ ನೀರು ಪೂರೈಸಿದ್ದೇವೆ. ಅದು ಯಶ್ವಸಿಯಾಗಿದೆ ಎಂದು ವಲಯ ಅರಣ್ಯ ರಕ್ಷಕ ವಿನೋದ ಬೊಂಬ್ಲೇಕರ ಉದಯವಾಣಿಗೆ ತಿಳಿಸಿದರು.

ಈ ಯಶಸ್ವಿ ಪ್ರಯೋಗ ಕಂಡ ನಮ್ಮ ಇಲಾಖೆಯ ಹಿರಿಯ ಅಧಿಕಾರಿಗಳು, ಗಿಡಗಳಿಗೆ ನಿರುಪಯುಕ್ತ ನೀರಿನ ಬಾಟಲ್ ಬಳಸಿ ನೀರು ಪೂರೈಸುವಂತೆ ಸೂಚನೆ ನೀಡಿದ್ದರು. ಈ ಬಾರಿ ಕಳ್ಳಿಗುಡ್ಡ, ರಾಮಥಾಳ ಹತ್ತಿರ ಸುಮಾರು 405 ಗಿಡಗಳಿಗೆ ನಿರುಪಯುಕ್ತ ಪ್ಲಾಸ್ಟಿಕ್‌ ವಸ್ತುಗಳನ್ನು ಬಳಸಿಕೊಂಡು ಹನಿ ಹನಿಯಾಗಿ ನೀರು ಪೂರೈಸುವ ಸಂಕಲ್ಪ ಮಾಡಲಾಗಿದೆ ಎಂದು ಖುಷಿಯಿಂದ ಸಂತಸ ಹಂಚಿಕೊಂಡರು.

ಒಟ್ಟಾರೆ ನಿರುಪಯುಕ್ತ ಪ್ಲಾಸ್ಟಿಕ್‌ ವಸ್ತು ಎಸೆಯುವ ಬದಲು ಅದನ್ನು ಬಳಸಿಕೊಂಡು ಗಿಡಗಳಿಗೆ ನೀರು ಪೂರೈಸುತ್ತಿರುವ ಅರಣ್ಯ ರಕ್ಷಕ ವಿನೋಧ ಬೊಂಬ್ಲೆಕರ ಕಾರ್ಯ ಕಂಡು ಹಿರಿಯ ಅಧಿಕಾರಿಗಳು ಹಾಗೂ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಪ್ಲಾಸ್ಟಿಕ್‌ ಬಾಟಲ್, ಆಸ್ಪತ್ರೆಯ ಸಲೈನ್‌ ಬಾಟಲ್ಗಳ ಚಿಕ್ಕ ಪೈಪ್‌ ಬಳಸಿ, ಸಸಿಗಳಿಗೆ ನೀರುಣಿಸಲಾಗುತ್ತಿದೆ. ಎರಡು ಲೀಟರ್‌ ನೀರು ಒಮ್ಮೆ ತುಂಬಿದರೆ, ಅದು 24 ಗಂಟೆಯವರೆಗೂ ಹನಿ ಹನಿಯಾಗಿ ಸಸಿಗಳಿಗೆ ಬೀಳುತ್ತದೆ. ಹೀಗಾಗಿ ಸಸಿಗಳು ಸಮೃದ್ಧವಾಗಿ ಬೆಳೆಯುತ್ತಿವೆ. ಜನರು, ನಿರುಪಯುಕ್ತ ಬಾಟಲ್ಗಳನ್ನು ಎಲ್ಲೆಂದರಲ್ಲೆ ಎಸೆಯದೇ ಇಂತಹ ಕಾರ್ಯಕ್ಕೆ ಬಳಸಿಕೊಳ್ಳಬೇಕು.

• ವಿನೋದ ಬೊಂಬ್ಲೇಕರ,ವಲಯ ಅರಣ್ಯ ರಕ್ಷಕ, ಅಮೀನಗಡ

 

•ಎಚ್.ಎಚ್. ಬೇಪಾರಿ

ಟಾಪ್ ನ್ಯೂಸ್

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

ತಾಕತ್ತಿದ್ದರೆ ಯತ್ನಾಳ್‌ ನನ್ನ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಲಿ: ಪಾಟೀಲ್‌

ತಾಕತ್ತಿದ್ದರೆ ಯತ್ನಾಳ್‌ ನನ್ನ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಲಿ: ಪಾಟೀಲ್‌

ಯತ್ನಾಳ್ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿ…: ಶಿವಾನಂದ ಪಾಟೀಲ್ ಸವಾಲು

Bagalkote; ಯತ್ನಾಳ್ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿ…: ಶಿವಾನಂದ ಪಾಟೀಲ್ ಸವಾಲು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.