ಬಾಗಲಕೋಟೆ :ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಭಾರಿ ಸ್ಪೋಟಕ ವಶ
Team Udayavani, Jan 20, 2022, 4:42 PM IST
ಬಾಗಲಕೋಟೆ : ಜಿಲ್ಲೆಯ ವಿವಿಧೆಡೆ ಕಲ್ಲು ಗಣಿಗಾರಿಕೆಗೆ ಪೂರೈಸಲು ಬಳಸುವ ಭಾರಿ ಸ್ಪೋಟಕ ವಸ್ತುಗಳನ್ನು ತಾಲೂಕಿನ ಹೊನ್ನಾಕಟ್ಟಿಯ ತೋಟದ ಮನೆಯ ಶೆಡ್ ವೊಂದರಲ್ಲಿ ಸಂಗ್ರಹಿಸಿಟ್ಟಿದ್ದು, ಗುರುವಾರ ಪೊಲೀಸರು ಹಠಾತ್ ದಾಳಿ ನಡೆಸಿ ವಶಪಡಿಸಿಕೊಂಡಿದ್ದಾರೆ.
ತಾಲೂಕಿನ ಸಂಗಮ ಕ್ರಾಸ್ ಬಳಿಯ ಹೊನ್ನಾಕಟ್ಟಿ ಗ್ರಾಮದ ಗುರುನಾಥ ಹಾದಿಮನಿ ಎಂಬುವವರ ತೋಟದ ಮನೆಯ ಶೆಡ್ನಲ್ಲಿ ಈ ಭಾರಿ ಸ್ಪೋಟಕ ವಸ್ತುಗಳು ಪತ್ತೆಯಾಗಿದ್ದು, ಮಂಜುನಾಥ ಕಂಕಣಮೇಲಿ, ವಿಜಯ ನಾರಾ ಎಂಬುವವರು ಈ ಅಕ್ರಮ ಸ್ಟೋಟಕ ವಸ್ತುಗಳನ್ನು ಸಂಗ್ರಹಿಸಿದ್ದರು ಎಂದು ಪೊಲೀಸರ ಪ್ರಾಥಮಿಕ ತನಿಖೆಯಿಂದ ಪತ್ತೆಯಾಗಿದೆ.
1.50 ಕೆ.ಜಿ. ಸೋಡಿಯಂ ನೈಟ್ರೇಟ್, 50 ಕೆ.ಜಿ. ಚಾರಕೋಲ್ ಪೌಡರ್ ಸೇರಿದಂತೆ 250 ಕೆ.ಜಿ. ಲಘು ಸ್ಪೋಟಕ ವಸ್ತುಗಳು, 250 ಕೆ.ಜಿ. ಕಚ್ಚಾ ಸ್ಪೋಟಕ ವಸ್ತುಗಳಾದ ಗಂಧಕ, ಸಲ್ಪರ್ ಮುಂತಾದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.
ಮಂಜುನಾಥ ಕಂಕಣಮೇಲಿ ಮತ್ತು ವಿಜಯ ನಾರಾ ಎಂಬುವವರು ಈ ಸ್ಪೋಟಕ ವಸ್ತುಗಳನ್ನು ಮುಂಬೈನಿಂದ ತರಿಸಿ, ಅಕ್ರಮವಾಗಿ ಸಂಗ್ರಹಿಸಿ ಇಟ್ಟು, ಜಿಲ್ಲೆಯ ವಿವಿಧ ಕಲ್ಲು ಗಣಿಗಾರಿಕೆ ಪ್ರದೇಶಗಳಿಗೆ ಪೂರೈಸಲಾಗುತ್ತಿತ್ತು. ಈ ಅಕ್ರಮ ಸಂಗ್ರಹದಲ್ಲಿ ಇನ್ನೂ ಹಲವರು ಭಾಗಿಯಾಗಿದ್ದಾರೆ ಎನ್ನಲಾಗಿದೆ. ಬಾಗಲಕೋಟೆ ಗ್ರಾಮೀಣ ಪೊಲೀಸರು ಈ ದಾಳಿ ನಡೆಸಿದ್ದು, ತನಿಖೆ ಮುಂದುವರೆಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್
R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್
Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್
Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್
Politics: ಡಿ.ಕೆ.ಶಿವಕುಮಾರ್ ಸಿಎಂ ಆಗುತ್ತಾರೆ: ಎಚ್.ವಿಶ್ವನಾಥ್
MUST WATCH
ಹೊಸ ಸೇರ್ಪಡೆ
LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್
R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್
Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್
CN Ashwath Narayan: ಕಾಂಗ್ರೆಸ್ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ
Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್