ಹೋಮ್ ಕ್ವಾರಂಟೈನ್ ಉಲ್ಲಂಘಿಸಿದ ವ್ಯಕ್ತಿಗೆ ತಹಶೀಲ್ದಾರ್, ಪೊಲೀಸರಿಂದ ಎಚ್ಚರಿಕೆ
Team Udayavani, Mar 26, 2020, 1:55 PM IST
ಬಾಗಲಕೋಟೆ: ಹೋಮ್ ಕ್ವಾರಂಟೈನ್ ಉಲ್ಲಂಘಿಸಿ ಬೇಕಾಬಿಟ್ಟಿ ಅಲೆದಾಡುತ್ತಿದ್ದ ವ್ಯಕ್ತಿಯನ್ನು ಪೊಲೀಸ್ ಠಾಣೆಗೆ ಕರೆತಂದು ಎಚ್ಚರಿಕೆ ನೀಡಿದ ಪ್ರಸಂಗ ಬಾದಾಮಿಯಲ್ಲಿ ಗುರುವಾರ ನಡೆದಿದೆ.
ಕೋಲ್ಕತ್ತದಿಂದ ಬಂದಿದ್ದ ವ್ಯಕ್ತಿಯ ಆರೋಗ್ಯ ತಪಾಸಣೆ ಮಾಡಿ, 14 ದಿನ ಮನೆಯಲ್ಲಿ ಇರುವಂತೆ ಸೂಚಿಸಲಾಗಿತ್ತು. ಆದರೆ ಈತ ವೈದ್ಯರ ಸಲಹೆ ಮೀರಿ ಪಟ್ಟಣದಲ್ಲಿ ಓಡಾಡುತ್ತಿದ್ದ. ಹೋಮ್ ಕ್ಯಾರಂಟೈನ್ ನಲ್ಲಿರಬೇಕಾದ ವ್ಯಕ್ತಿಗೆ ಕೈಯಲ್ಲಿ ಸೀಲು ಹಾಕಿದ್ದರೂ ಸಾರ್ವಜನಿಕ ಸ್ಥಳದಲ್ಲಿ ಓಡಾಡುತ್ತಿದ್ದರಿಂದ ಜನರಲ್ಲಿ ಆತಂಕ ಮೂಡಿಸಿತ್ತು.
ಅಷ್ಟೇ ಅಲ್ಲದೆ ಈತ ಹೋಮ್ ಕ್ಯಾರಂಟೈನ್ ನಲ್ಲಿ ಇರುವಂತೆ ಹೇಳಿದ ವೈದ್ಯರ ವಿರುದ್ದವೇ ಎತ್ತರದ ದನಿಯಲ್ಲಿ ಮಾತನಾಡಿದ್ದ ಎನ್ನಲಾಗಿದೆ.
ಇಂದು ಅಧಿಕಾರಿಗಳು ಆತನ ಮನೆ ತೆರಳಿ ಪೊಲೀಸ್ ಠಾಣೆಗೆ ಕರೆದುಕೊಂಡು ಬಂದಿದ್ದಾರೆ. ತಹಶೀಲ್ದಾರ್ ಸುಭಾಸ್ ಇಂಗಳೆ ನೇತೃತ್ವದಲ್ಲಿ ತೆರಳಿದ್ದ ಕಂದಾಯ ಮತ್ತು ಪೊಲೀಸ್ ಅಧಿಕಾರಿಗಳು ಠಾಣೆಗೆ ಕರೆತಂದು ಎಚ್ಚರಿಕೆ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ