ಮಾರಕ ರೋಗಗಳ ತಡೆಗಟ್ಟಲು ಸಮುದಾಯದ ಸಹಕಾರ ಅವಶ್ಯ – ಶಾಸಕ ಸಿದ್ದು ಸವದಿ
Team Udayavani, Feb 27, 2022, 1:22 PM IST
ರಬಕವಿ-ಬನಹಟ್ಟಿ: ಮಾರಕ ರೋಗಗಳ ತಡೆಗಟ್ಟಲು ಸಮುದಾಯದ ಸಹಕಾರ ಅವಶ್ಯವಾಗಿದೆ ಎಂದು ಕರ್ನಾಟಕ ಕೈಮಗ್ಗ ಅಭಿವೃದ್ದಿ ನಿಗಮದ ಅಧ್ಯಕ್ಷ, ಶಾಸಕ ಸಿದ್ದು ಸವದಿ ತಿಳಿಸಿದರು.
ಅವರು ಭಾನುವಾರ ಸ್ಥಳೀಯ ಶಂಕರಲಿಂಗ ದೇವಸ್ಥಾನ ಆವರಣದಲ್ಲಿ ಹಮ್ಮಿಕೊಳ್ಳಲಾ ಪೋಲಿಯೊ ಲಸಿಕಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ಪೋಲಿಯೊ ಲಸಿಕೆಯಿಂದ ಯಾವುದೆ ದುಷ್ಪರಿಣಾಮಗಳು ಇಲ್ಲ. ಆದ್ದರಿಂದ ಪೋಲಿಯೊ ಲಸಿಕೆಯನ್ನು ಪಡೆದುಕೊಳ್ಳುವ ಸಂದರ್ಭದಲ್ಲಿ ಯಾವುದೆ ಮೂಢ ನಂಬಿಕೆಗಳು ಬೇಡ. ಸುಭದ್ರ ಮತ್ತು ಆರೋಗ್ಯ ಭಾರತಕ್ಕಾಗಿ ಐದು ವರ್ಷ ಒಳಗಿನ ಮಕ್ಕಳಿಗೆ ಕಡ್ಡಾಯವಾಗಿ ಪೋಲಿಯೊ ಲಸಿಕೆಯನ್ನು ಹಾಕಿಸಬೇಕು ಎಂದು ಸವದಿ ಹೇಳಿದರು.
ಇದೇ ಸಂದರ್ಭದಲ್ಲಿ ಜಮಖಂಡಿ ಹಿರಿಯ ಆರೋಗ್ಯ ನಿರೀಕ್ಷಕ ಉಮೇಶ ಜೋಶಿ ಮಾತನಾಡಿ, ರಬಕವಿ ಬನಹಟ್ಟಿ ತಾಲ್ಲೂಕಿನಲ್ಲಿ 40114 ಮಕ್ಕಳಿಗೆ ಪೋಲಿಯೊ ನೀಡುವ ಗುರಿಯನ್ನು ಹೊಂದಲಾಗಿದೆ. ಅದಕ್ಕಾಗಿ 161 ಬೂತ್, 11 ಸಂಚಾರಿ ತಂಡಗಳನ್ನು ಹಾಗೂ ನಾಲ್ಕು ಕೇಂದ್ರಗಳನ್ನು ಬಸ್ ನಿಲ್ದಾಣಗಳನ್ನು ತೆರೆಯಲಾಗಿದೆ. 352 ಆರೋಗ್ಯ ಕಾರ್ಯಕರ್ತರು ಲಸಿಕಾ ಕಾರ್ಯಕ್ರಮದಲ್ಲಿ ಕಾರ್ಯ ನಿರ್ವಹಿಸಲಿದ್ಧಾರೆ. ಉಳಿದ ಮಕ್ಕಳಿಗೆ ಸಿಬ್ಬಂದಿ ವರ್ಗದವರು ಮನೆ ಮನೆಗೆ ತೆರಳಿ ಸೋಮವಾರದಿಂದ ಬುಧವಾರದವರೆಗೆ ಪೋಲಿಯೊ ಲಸಿಕೆಯನ್ನು ನೀಡುತ್ತಾರೆ. ಯಾವುದೆ ಮಕ್ಕಳು ಲಸಿಕೆಯಿಂದ ದೂರ ಉಳಿಯದಂತೆ ಅಧಿಕಾರಿಗಳು ಗಮನ ನೀಡಬೇಕು ಎಂದರು.
ಈ ಸಂದರ್ಭದಲ್ಲಿ ತಹಶೀಲ್ದಾರ್ ಎಸ್.ಬಿ.ಇಂಗಳೆ, ನಗರಸಭೆಯ ಅಧ್ಯಕ್ಷ ಶ್ರೀಶೈಲ ಬೀಳಗಿ, ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಬಸಪ್ರಭು ಹಟ್ಟಿ, ಡಾ. ಎನ್.ಎಂ.ನದಾಫ್, ಡಾ.ವೀರೇಶ ಹುಡೇದಮನಿ, ಡಾ.ಕಾವೇರಿ ಹಳ್ಯಾಳ, ಪೌರಾಯುಕ್ತ ಶ್ರೀನಿವಾಸ ಜಾಧವ, ಕಚೇರಿ ಅಧೀಕ್ಷಕಿ ಸ್ಮೀತಾ ಕಾಳಗಿ, ಧರೆಪ್ಪ ಉಳ್ಳಾಗಡ್ಡಿ, ಅಪ್ಪಾಜಿ ಹೂಗಾರ, ಎಂ.ಕೆ.ಮುಲ್ಲಾ, ರವಿ ಅರವಡಿ, ನಂದಾ ಕೊಕಟನೂರ, ಬಿ.ಎಸ್.ಪಟ್ಟಣಶೆಟ್ಟಿ, ಸಂಜಯ ತೆಗ್ಗಿ, ಯಲ್ಲಪ್ಪ ಕಟಗಿ, ಬಿ. ಎಂ. ಡಾಂಗೆ, ಎಮ್. ಎಮ್. ಮುಘಳಖೋಡ, ಶೋಭಾ ಹೊಸಮನಿ, ರಾಜಕುಮಾರ ಹೊಸೂರ ಸೇರಿದಂತೆ ಅನೇಕರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ
Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ