ವಿದ್ಯುತ್‌ ಅದಾಲತ್‌ ಜನರಿಗೆ ಸಹಕಾರಿ: ಭಾರತಿ

ಸರ್ಕಾರಿ ಯೋಜನೆಗಳು ಜನರಿಗೆ ತ್ವರಿತವಾಗಿ ತಲುಪಲಿ ; ಗ್ರಾಮೀಣ ವಿದ್ಯುತ್‌ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಲು ಕ್ರಮ

Team Udayavani, Jun 24, 2022, 11:23 AM IST

8

ಲೋಕಾಪುರ: ಗ್ರಾಮೀಣ ಭಾಗದ ಜನರ ಸಮಸ್ಯೆಗಳಿಗೆ ಸ್ಪಂದಿಸಿ ತಕ್ಷಣ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವಾಕಾಂಕ್ಷೆ ಯೋಜನೆ ಜಾರಿಗೆ ತಂದಿರುವ ವಿದ್ಯುತ್‌ ಅದಾಲತ್‌ ಸಹಕಾರಿಯಾಗಲಿದೆ ಎಂದು ಹುಬ್ಬಳ್ಳಿ ವಿದ್ಯುತ್‌ ಸರಬರಾಜು ಕಂಪನಿ ವ್ಯವಸ್ಥಾಪಕ ನಿರ್ದೇಶಕಿ ಡಿ. ಭಾರತಿ ಹೇಳಿದರು.

ಭಂಟನೂರಲ್ಲಿ ವಿದ್ಯುತ್‌ ಅದಾಲತ್‌ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸರ್ಕಾರಿ ಯೋಜನೆಗಳು ಜನರಿಗೆ ತ್ವರಿತವಾಗಿ ತಲುಪಬೇಕು. ಹಾಗೂ ಜನರ ಸಮಸ್ಯೆಗಳಿಗೆ ಅಧಿಕಾರಿಗಳು ತಕ್ಷಣ ಸ್ಪಂದಿಸಬೇಕೆಂಬ ಉದ್ದೇಶದಿಂದ ಇಂಧನ ಇಲಾಖೆ ಅಡಿಯಲ್ಲಿ ಪ್ರತಿ ತಿಂಗಳು ಮೂರನೇ ಶನಿವಾರ ಎಲ್ಲ ಹೆಸ್ಕಾಂ ವ್ಯಾಪ್ತಿಯಲ್ಲಿ ವಿದ್ಯುತ್‌ ಅದಾಲತ್‌ ನಡೆಯಲಿದೆ. ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು. ವಿದ್ಯುತ್‌ ಅದಾಲತ್‌ ಮೂಲಕ ಗ್ರಾಮೀಣ ವಿದ್ಯುತ್‌ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಲು ವ್ಯವಸ್ಥೆ ಕಲ್ಪಿಸಲಾಗುತ್ತಿದೆ ಎಂದು ಹೇಳಿದರು.

ಭಂಟನೂರ ಗ್ರಾಪಂ ವ್ಯಾಪ್ತಿಯ ಭಂಟನೂರ, ಬದ್ನೂರ, ಜುನ್ನೂರ ಹಾಗೂ ಚಿಕ್ಕೂರ ಗ್ರಾಮಗಳ ವಿದ್ಯುತ್‌ ಸಮಸ್ಯೆ ಕುರಿತು ಮನವಿ ಸಲ್ಲಿಸಲಾಯಿತು.

ಭಂಟನೂರ ಗ್ರಾಪಂ ಅಧ್ಯಕ್ಷ ಪ್ರಕಾಶ ಚಿತ್ತರಗಿ, ಉಪಾಧ್ಯಕ್ಷೆ ಕಲ್ಲವ್ವ ತಳವಾರ, ಸದಸ್ಯರಾದ ಲಕ್ಷ್ಮಣ ರಗನ್ನವರ, ಭರಮಪ್ಪ ಹಿರಕನ್ನವರ, ಪ್ರಕಾಶ ಸಿಂಗರಡ್ಡಿ, ಪಾಂಡು ಬಿದರಿ, ಸುನಂದಾ ಪಚ್ಚನ್ನವರ, ವಿಠuಲ ಜೀರಗಾಳ ಗ್ರಾಮಸ್ಥರಾದ ರಾಜುಗೌಡ ಪಾಟೀಲ, ಕೆ.ಆರ್‌. ಸಿಂಗರಡ್ಡಿ, ವಿಠuಲ ತುಮ್ಮರಮಟ್ಟಿ, ಲಕ್ಷ್ಮಣ ಮಾಲಗಿ, ಭಂಟನೂರ, ಬದ್ನೂರ, ಜುನ್ನೂರ ಹಾಗೂ ಚಿಕ್ಕೂರ ಗ್ರಾಮಗಳು ರೈತರು, ಸಾರ್ವಜನಿಕರು ಭಾಗವಹಿಸಿದ್ದರು.

ಗ್ರಾಮೀಣ ಪ್ರದೇಶಗಳಲ್ಲಿನ ವಿದ್ಯುತ್‌ ಸಮಸ್ಯೆಗಳ ಬಗ್ಗೆ ಅರಿತು, ತಕ್ಷಣ ಪರಿಹಾರ ಮಾಡುವ ನಿಟ್ಟಿನಲ್ಲಿ ಹೆಸ್ಕಾಂ ಅ ಧಿಕಾರಿಗಳು ಹಳ್ಳಿಗಳಿಗೆ ಭೇಟಿ ನೀಡಿ ವಿದ್ಯುತ್‌ ಅದಾಲತ್‌ ಮಾಡಿ ಸಮಸ್ಯೆಗಳಿಗೆ ಪರಿಹಾರ ಒದಗಿಸಬೇಕು. –ಡಿ. ಭಾರತಿ, ವ್ಯವಸ್ಥಾಪಕ ನಿರ್ದೇಶಕರು, ಹುಬ್ಬಳ್ಳಿ ವಿದ್ಯುತ್‌ ಸರಬರಾಜು ಕಂಪನಿ

ಭಂಟನೂರ ಗ್ರಾಮದ ವ್ಯಾಪ್ತಿಯಲ್ಲಿ ಸ್ಟೇಷನ್‌ಗೆ ಹೆಚ್ಚಿನ ಲೋಡ ಇದ್ದು, ಫೀಡರ್‌ ಹಾಗೂ ಹೊಸ ಟಿಸಿ ಅವಶ್ಯಕತೆಯಿದೆ. ನವಗ್ರಾಮದಲ್ಲಿ ಉಳಿದ ಮನೆಗೆ ವಿದ್ಯುತ್‌ ಸಂಪರ್ಕ ಕಲ್ಪಿಸಿ, ತೋಟದ ಮನೆಗಳಿಗೆ ನಿರಂತರ ಜ್ಯೋತಿ ಕಲ್ಪಿಸಬೇಕು. ರೈತರಿಗೆ, ಸಾರ್ವಜನಿಕರಿಗೆ ವಿದ್ಯುತ್‌ ಸಮಸ್ಯೆಯಾಗದಂತೆ ಸೂಕ್ತ ಕ್ರಮ ಕೈಗೊಳ್ಳಬೇಕು. –ಪ್ರಕಾಶ ಚಿತ್ತರಗಿ, ಅಧ್ಯಕ್ಷರು, ಗ್ರಾಪಂ ಭಂಟನೂರ

ಟಾಪ್ ನ್ಯೂಸ್

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.