Power problem; ಹಿಂದಿನ ಸರ್ಕಾರವೇ ಕಾರಣ ಎಂದ ಸಚಿವ ಆರ್.ಬಿ.ತಿಮ್ಮಾಪುರ
ಎಷ್ಟೇ ಕಷ್ಟವಾದರೂ ರೈತರಿಗೆ ಗುಣಮಟ್ಟದ ವಿದ್ಯುತ್
Team Udayavani, Aug 31, 2023, 8:09 PM IST
ಮುಧೋಳ : ಹಿಂದಿನ ಸರ್ಕಾರದ ಅವಧಿಯಲ್ಲಿ ವಿದ್ಯುತ್ ಸಮಸ್ಯೆಗೆ ಸೂಕ್ತ ಪರಿಹಾರ ಕಂಡುಕೊಳ್ಳದ ಕಾರಣ ಇಂದು ನಮಗೆ ಹೆಚ್ಚಿನ ಸಮಸ್ಯೆಯಾಗುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ. ತಿಮ್ಮಾಪುರ ಹೇಳಿದರು.
ಸಮೀಪದ ಶಿರೋಳ ಗ್ರಾಮದಲ್ಲಿ ಸಾರ್ವಜನಿಕ ಸಂಪರ್ಕ ಸಭೆಯಲ್ಲಿ ಮಾತನಾಡಿದ ಅವರು, ಅನೇಕ ಕಡೆಗಳಲ್ಲಿ ಸಮಪರ್ಕ ವಿದ್ಯುತ್ ಪೂರೈಕೆಗಾಗ ರೈತರು ಪ್ರತಿಭಟನೆ ಮಾಡುತ್ತಿದ್ದಾರೆ. ಆದರೆ ಬರಗಾಲದ ಮುನ್ಸೂಚನೆ ಕಾರಣ ಅನೇಕ ಜಲಾಶಯದಲ್ಲಿ ನೀರಿನ ಪ್ರಮಾಣ ತಗ್ಗಿ ವಿದ್ಯುತ್ ಉತ್ಪಾದನೆ ಕುಂಠಿತಗೊಂಡಿದೆ. ಸಮಪರ್ಕ ವಿದ್ಯುತ್ ಪೂರೈಕೆಗಾಗಿ ನಾವು ಪ್ರತಿ ಯೂನಿಟ್ ಗೆ 10 ರೂ. ವ್ಯಯಿಸಿ ವಿದ್ಯುತ್ ಖರೀದಿಸುವ ಅನಿವಾರ್ಯತೆ ಸೃಷ್ಟಿಯಾಗಿದೆ ಎಂದರು.
ಎಷ್ಟೇ ಕಷ್ಟವಾದರೂ ರೈತರಿಗೆ ಗುಣಮಟ್ಟದ ವಿದ್ಯುತ್ ನೀಡುವುದು ನಮ್ಮ ಗುರಿ. ರೈತರು ಸಹ ಸರ್ಕಾರದೊಂದಿಗೆ ಸಹಕಾರದಿಂದ ನಡದುಕೊಳ್ಳಬೇಕು ಎಂದು ಮನವಿ ಮಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Home Minister ಅಮಿತ್ ಶಾಗೆ ವಕೀಲ ದೇವರಾಜೇಗೌಡ ಪತ್ರ: ವೈರಲ್
Karnataka Govt ಎಸ್ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ
D. K. Shivakumar ಪೆನ್ಡ್ರೈವ್ನಂತಹ ಚಿಲ್ಲರೆ ಕೆಲಸ ನಾನು ಮಾಡಲ್ಲ
Prajwal Revanna Case ರಾಷ್ಟ್ರೀಯ ಮಹಿಳಾ ಆಯೋಗದಿಂದ ಸುಮೋಟೋ ಕೇಸ್ ದಾಖಲು
Hassan Pen Drive Case; ಕಾರ್ತಿಕ್ ಪೆನ್ಡ್ರೈವ್ ಕೊಟ್ಟಿದ್ದು ನಿಜ: ದೇವರಾಜೇಗೌಡ